HomeUncategorizedಪುದುಚೇರಿಯಲ್ಲಿ ಹೊಸ ಇತಿಹಾಸ ಬರೆದ ಬಿಜೆಪಿ ಮೈತ್ರಿ

ಪುದುಚೇರಿಯಲ್ಲಿ ಹೊಸ ಇತಿಹಾಸ ಬರೆದ ಬಿಜೆಪಿ ಮೈತ್ರಿ

- Advertisement -
- Advertisement -

ಪಂಚರಾಜ್ಯ ಚುನಾವಣೆಗಳ ಪೈಕಿ ಪುದುಚೇರಿ ಚುನಾವಣೆ ಸಹ ತನ್ನದೇ ಆದ ಕಾರಣಕ್ಕಾಗಿ ಸಾಕಷ್ಟು ಮಹತ್ವ ಪಡೆದುಕೊಂಡಿತ್ತು. ಪಂಚರಾಜ್ಯಗಳ ಪೈಕಿ ಕೋಲ್ಕತ್ತಾ, ಕೇರಳ, ಅಸ್ಸಾಂ ಹಾಗೂ ತಮಿಳುನಾಡಿಗೆ ೫ ವರ್ಷದ ನಂತರ ಎಂದಿನಂತೆ ವಿಧಾನಸಭೆ ಚುನಾವಣೆ ಎದುರಾಗಿದ್ದರೆ, ಪುದುಚೇರಿಗೆ ಮಾತ್ರ ಆಪರೇಷನ್ ಕಮಲದ ಕಾರಣಕ್ಕೆ ಚುನಾವಣೆ ಎದುರಾಗಿತ್ತು. ಹೀಗಾಗಿ ಪುದುಚೇರಿಯಲ್ಲಿ ಚುನಾವಣೆ ನಂತರ ಮತ್ತೆ ಯಾವ ಸರ್ಕಾರ ಅದಿಕಾರಕ್ಕೆ ಬರಲಿದೆ ಎಂಬ ಬಗ್ಗೆ ರಾಜಕೀಯ ವಠಾರಗಳಲ್ಲಿ ಸಾಮಾನ್ಯ ಕುತೂಹಲವೊಂದು ಮನೆ ಮಾಡಿತ್ತು.

ಅನೇಕ ರಾಜ್ಯಗಳಲ್ಲಿ ಅನೇಕ ಬಾರಿ ಬಿಜೆಪಿ ಚುನಾವಣೆ ಎದುರಿಸಿ ಅಧಿಕಾರ ಹಿಡಿದದ್ದಕ್ಕಿಂತ ಆಪರೇಷನ್ ಕಮಲದ ಸಹಾಯದಿಂದ ಹಿಂಬಾಗಿಲ ಮೂಲಕ ಅಧಿಕಾರವನ್ನು ಹಿಡಿದದ್ದೆ ಹೆಚ್ಚು. ಬಿಜೆಪಿ ಪಕ್ಷದ ಈ ಸಾಂಪ್ರದಾಯಿಕ ಸೂತ್ರಕ್ಕೆ ಈಗ ಪುದುಚೇರಿಯೂ ಬಲಿಯಾಗಿದೆ. ಏಕೆಂದರೆ ಬಿಜೆಪಿ ಪಾಲಿಗೆ ದಕ್ಷಿಣ ಭಾರತದಲ್ಲಿ ಕರ್ನಾಟಕದ ಹೊರತು ಬೇರೆ ಎಲ್ಲೂ ಭದ್ರ ನೆಲೆ ಇಲ್ಲ. ಹೀಗಾಗಿ ಮತ್ತೊಂದು ಆವಾಸ ಸ್ಥಾನಕ್ಕೆ ಕಾಯ್ದಿದ್ದ ಬಿಜೆಪಿ ಕಣ್ಣಿಗೆ ಬಿದ್ದದ್ದು ತಮಿಳುನಾಡು ಮತ್ತು ಪುದುಚೇರಿ.

224 ವಿಧಾನಸಭಾ ಕ್ಷೇತ್ರಗಳನ್ನು ಹೊಂದಿರುವ ಮತ್ತು ಪೆರಿಯಾರ್ ಚಿಂತನೆಗಳಿಗೆ ಗಟ್ಟಿಯಾಗಿಯೇ ಅಂಟಿಕೊಂಡಿರುವ ದ್ರಾವಿಡ ನಾಡಿನಲ್ಲಿ ಬಿಜೆಪಿಯ ಕೇಸರಿ ರಾಜಕಾರಣದ ಆಟ ನಡೆಯದು ಎಂಬ ವಿಚಾರ ಕಮಲ ಪಾಳಯಕ್ಕೆ ತಿಳಿಯದ ವಿಚಾರ ಏನಲ್ಲ. ಇದೇ ಕಾರಣಕ್ಕೆ ೩೦ ಕ್ಷೇತ್ರಗಳಿರುವ ಪಕ್ಕದ ಪುದುಚೇರಿಯನ್ನು ಹಿಡಿದರೆ, ಹಂತ ಹಂತವಾಗಿ ಹಿಂದುತ್ವದ ಹೆಸರಿನಲ್ಲಿ ತಮಿಳುನಾಡಿನಲ್ಲೂ ಅಧಿಕಾರ ಸಾಧ್ಯ ಎಂಬುದು ಬಿಜೆಪಿಯ ಲೆಕ್ಕಾಚಾರ. ಇದೇ ಕಾರಣಕ್ಕೆ ಕಳೆದ ಜನವರಿಯಲ್ಲಿ ಬಿಜೆಪಿ ನಾಯಕರು ವಿ. ನಾರಾಯಣ ಸ್ವಾಮಿ ನೇತೃತ್ವದ ಕಾಂಗ್ರೆಸ್ ಸರ್ಕಾರವನ್ನು ಆಪರೇಷನ್ ಕಮಲದ ಮೂಲಕ ಬೀಳಿಸಿ ಇದೀಗ ತಮ್ಮ ಜಂಡಾ ಹಾರಿಸಲು ಮುಂದಾಗಿದೆ ಬಿಜೆಪಿ.

ಹಿಂಬಾಗಿಲಲ್ಲಿ ಪುದುಚೇರಿ ಹಿಡಿದ ಬಿಜೆಪಿ
ಪುದುಚೇರಿ ಕೇಂದ್ರಾಡಳಿತ ಪ್ರದೇಶವಾದರೂ ಸಹ ತಮಿಳುನಾಡಿನಿಂದ ಕೂಗಳತೆ ದೂರದಲ್ಲಿರುವ ಈ ಪ್ರದೇಶಕ್ಕೆ ಸಾಂಸ್ಕೃತಿಕ ರೀತಿನೀತಿಗಳಲ್ಲಿ ಹೆಚ್ಚೇನು ವ್ಯತ್ಯಾಸ ಇಲ್ಲ. ಸಾಂಸ್ಕೃತಿಕವಾಗಿ ಮತ್ತು ಸಾಮಾಜಿಕವಾಗಿ ಈ ಎರಡೂ ನಾಡುಗಳಿಗೆ ಸಾಕಷ್ಟು ಹೋಲಿಕೆಗಳಿವೆ. ಈ ಎರಡೂ ಭೂ ಪ್ರದೇಶವನ್ನು ತಮಿಳು ಭಾಷೆ ಬೆಸೆಯುವುದಲ್ಲದೆ, ಪೆರಿಯಾರ್ ಸಿದ್ದಾಂತಗಳ ಪ್ರಭಾವವೂ ಈ ಭಾಗದಲ್ಲಿ ಸಾಕಷ್ಟಿದೆ. ಹೀಗಾಗಿ ತಮಿಳುನಾಡಿನಂತೆಯೇ ಇಲ್ಲಿಯೂ ಬಿಜೆಪಿ ನೆಲೆಯೂರುವುದು ಅಷ್ಟು ಸುಲಭದ ವಿಚಾರವಾಗಿರಲಿಲ್ಲ. ಇದಕ್ಕೆ ಈ ಹಿಂದಿನ ಚುನಾವಣೆಗಳು ಸಾಕಷ್ಟು ಸಾಕ್ಷಿ ಒದಗಿಸುತ್ತವೆ.

ವಿ. ನಾರಾಯಣ ಸ್ವಾಮಿ ಅವರ ಕಾಂಗ್ರೆಸ್ ಸರ್ಕಾರಕ್ಕೆ ಇಕ್ಕಟ್ಟಾದ ಪರಿಸ್ಥಿತಿ ನಿರ್ಮಾಣ ಮಾಡುವ ಸಲುವಾಗಿಯೇ ತಮಿಳುನಾಡಿನ ಬಿಜೆಪಿ ನಾಯಕಿ ತಮಿಳಿಸೈ ಸೌಂದರ್ ರಾಜನ್ ಅವರನ್ನು ಪುದುಚೇರಿಯ ಹೊಸ ಗೌರ್ನರ್ ಆಗಿ ನೇಮಕ ಮಾಡಲಾಗಿತ್ತು. ತಮಿಳಿಸೈ ಸೌಂದರ್ ರಾಜನ್ ಒಂದೆಡೆ ತಮ್ಮ ಅಧಿಕಾರವನ್ನು ಬಳಸಿಕೊಂಡು ವಿ. ನಾರಾಯಣ ಸ್ವಾಮಿ ಸರ್ಕಾರವನ್ನು ಇನ್ನಿಲ್ಲದಂತೆ ಕಾಡಿದರೆ, ಮತ್ತೊಂದೆಡೆ ಬಿಜೆಪಿ ಸದ್ದಿಲ್ಲದೆ ತಮ್ಮ ಎಂದಿನ ಸಾಂಪ್ರದಾಯಿಕ ಆಪರೇಷನ್ ಕಮಲವನ್ನು ಜಾರಿಗೆ ತಂದಿತ್ತು. (ಇದಕ್ಕೂ ಮೊದಲು ರಾಜ್ಯಪಾಲರಾಗಿದ್ದ ಕಿರಣ ಬೇಡಿ ಮತ್ತು ನಾರಾಯಣಸ್ವಾಮಿಯವರ ಸರ್ಕಾರಕ್ಕೂ ಹಲವು ಜಟಾಪಟಿಗಳಾಗಿದ್ದವು). 6ಕ್ಕೂ ಹೆಚ್ಚು ಕಾಂಗ್ರೆಸ್ ಶಾಸಕರನ್ನು ಕೊಂಡುಕೊಳ್ಳುವಲ್ಲಿ ಬಿಜೆಪಿ ಯಶಸ್ವಿಯಾಗಿತ್ತು. ಪರಿಣಾಮ ಸರ್ಕಾರ ಬಹುಮತ ಕಳೆದುಕೊಂಡಿತ್ತು. ಇದೀಗ ಬಿಜೆಪಿ ಮೊದಲ ಬಾರಿಗೆ ಪುದುಚೇರಿಯಲ್ಲಿ ಅಧಿಕಾರದ ರುಚಿ ಅನುಭವಿಸಲು ಮುಂದಾಗಿದೆ. ಆದರೆ, ಇದಕ್ಕೂ ಸಹ ಕಾಂಗ್ರೆಸ್ ಪಕ್ಷದ ಎಡವಟ್ಟಿನ ನಿರ್ಣಯಗಳೇ ಕಾರಣ ಎಂದರೆ ತಪ್ಪಾಗಲಾರದು.

ಬಿಜೆಪಿ ವರದಾನವಾದ ಕಾಂಗ್ರೆಸ್ ಎಡವಟ್ಟು
30 ವಿಧಾನಸಭಾ ಕ್ಷೇತ್ರಗಳನ್ನು ಹೊಂದಿರುವ ಪುದುಚೇರಿಯಲ್ಲಿ ಸರ್ಕಾರ ರಚಿಸಲು ಬೇಕಾಗಿರುವ ಮ್ಯಾಜಿಕ್ ನಂಬರ್ 16. ಈ ಪೈಕಿ ಬಿಜೆಪಿ 6 ಕ್ಷೇತ್ರದಲ್ಲಿ ಗೆಲುವು ಸಾಧಿಸಿದ್ದರೆ ಬಿಜೆಪಿ ಮೈತ್ರಿ ಪಕ್ಷವಾದ ಆಲ್ ಇಂಡಿಯಾ ಎನ್ ಆರ್ ಕಾಂಗ್ರೆಸ್ 10ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ. ಈ ಮೂಲಕ ಬಿಜೆಪಿ ಮೈತ್ರಿ ಮೊದಲ ಬಾರಿಗೆ ಪುದುಚೇರಿಯಲ್ಲಿ ಅಧಿಕಾರದ ಗದ್ದುಗೆ ಏರಿದೆ. ಆದರೆ, ಸ್ಥಳೀಯ ಪಕ್ಷವಾದ ಆಲ್ ಇಂಡಿಯಾ ಎನ್ ಆರ್ ಕಾಂಗ್ರೆಸ್ ಅಧಿಕಾರಕ್ಕೆ ಏರುತ್ತಿರುವುದು ಇದೇ ಮೊದಲೇನಲ್ಲ. ಎನ್. ರಂಗಸ್ವಾಮಿ ಕಾಂಗ್ರೆಸ್‌ನಿಂದ ಹೊರಬಂದು 2011ರಲ್ಲೇ ಆಲ್ ಇಂಡಿಯಾ ಎನ್ ಆರ್ ಕಾಂಗ್ರೆಸ್ ಪಕ್ಷ ಕಟ್ಟಿ, ಮೊದಲ ಚುನಾವಣೆಯಲ್ಲೇ ಬಹುಮತಗಳಿಸಿ ಅಧಿಕಾರಕ್ಕೆ ಬಂದಿದ್ದರು. ಇದೀಗ ಐದನೇ ಬಾರಿ ಸಿಎಂ ಪಟ್ಟಕ್ಕೆ ಏರಿದ್ದಾರೆ. ಅವರು ಎನ್‌ಡಿಎ ಮೈತ್ರಿಯ ಭಾಗವಾಗಿರುವ ಕಾರಣವಷ್ಟೆ ಇಲ್ಲಿ ಬಿಜೆಪಿಗೆ ಅಧಿಕಾರ ಸಿಕ್ಕಿದಂತಾಗಿದೆ. ಆಲ್ ಇಂಡಿಯಾ ಎನ್ ಆರ್ ಕಾಂಗ್ರೆಸ್ ಹೆಸರಿನಲ್ಲಿ ಬಿಜೆಪಿಗೆ ಮತ ಲಭಿಸಿದೆ ಎಂದರೂ ತಪ್ಪಾಗಲಾರದು.

ಅಸಲಿಗೆ ಎನ್. ರಂಗಸ್ವಾಮಿ ಕಾಂಗ್ರೆಸ್ ಪಕ್ಷದ ನಿಷ್ಠಾವಂತ ನಾಯಕ. ಹಲವು ದಶಕಗಳಿಂದ ಅಧಿಕಾರ ಡಿಎಂಕೆ ಮತ್ತು ಎಡಿಎಂಕೆ ಕೈಲಿದ್ದ ಪುದುಚೇರಿಯಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಎನ್. ರಂಗಸ್ವಾಮಿ ಪ್ರಮುಖ ಕಾರಣಕರ್ತರಾಗಿದ್ದರು. 2001ರಿಂದ 2008ರವರೆಗೆ ಎರಡು ಅವಧಿಗೆ ಸಿಎಂ ಆಗಿದ್ದ ಅವರು ಹಲವು ಜನಪ್ರಿಯ ಯೋಜನೆಗಳ ಮೂಲಕ ಮನೆಮಾತಾಗಿದ್ದರು. ಒಂದು ಹಂತದಲ್ಲಿ ಪುದುಚೇರಿಯ ಕಾಮರಾಜ್, ಜನರ ಸಿಎಂ ಎಂಬ ಹೆಗ್ಗಳಿಕೆಗೂ ಅವರು ಪಾತ್ರರಾಗಿದ್ದರು. ಪುದುಚೇರಿ ಮಟ್ಟಿಗೆ ಅವರನ್ನು ಅಜಾತಶತ್ರು ಎಂದೇ ಕರೆಯಲಾಗಿತ್ತು.

ಆದರೆ, 2008ರಲ್ಲಿ ಪಕ್ಷದ ಆಂತರಿಕ ರಾಜಕಾರಣದ ನೆಪ ಹೇಳಿ ಅವರನ್ನು ಸಿಎಂ ಸ್ಥಾನದಿಂದ ಕೆಳಗೆ ಇಳಿಸಲಾಗಿತ್ತು. ಇದರಿಂದ ಕುಪಿತಗೊಂಡ ರಂಗಸ್ವಾಮಿಯವರು ಆಲ್ ಇಂಡಿಯಾ ಎನ್. ಆರ್ ಕಾಂಗ್ರೆಸ್ ಪಕ್ಷವನ್ನು ಸ್ಥಾಪಿಸಿ ಮೊದಲ ಚುನಾವಣೆಯಲ್ಲೇ ಗೆಲುವು ಸಾಧಿಸಿ ಅಧಿಕಾರ ಹಿಡಿದಿದ್ದು ಇಂದು ಇತಿಹಾಸ. ಈ ಘಟನೆಯ ನಂತರ ಕಾಂಗ್ರೆಸ್‌ನಿಂದ ಶಾಶ್ವತವಾಗಿ ದೂರವಾದ ಎನ್. ರಂಗಸ್ವಾಮಿ ಎನ್‌ಡಿಎ ಜೊತೆ ಮೈತ್ರಿ ಸಾಧಿಸಿದ್ದರು. ಇಂದು ಅವರ ಮೂಲಕವೇ ಕೋಮುವಾದಿ ಬಿಜೆಪಿ ದ್ರಾವಿಡ ನಾಡಿನ ಪಕ್ಕದಲ್ಲೇ ಜಂಡಾ ಹಾರಿಸುವಂತಾದದ್ದು ಮಾತ್ರ ವಿಪರ್ಯಾಸ.


ಇದನ್ನೂ ಓದಿ: ಟಿಎಂಸಿಯಿಂದ ಹಾರಿದ 148 ಜನರಿಗೆ BJP ಟಿಕೆಟ್, ಗೆದ್ದವರು 6 ಜನ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...