HomeUncategorizedಪುದುಚೇರಿಯಲ್ಲಿ ಹೊಸ ಇತಿಹಾಸ ಬರೆದ ಬಿಜೆಪಿ ಮೈತ್ರಿ

ಪುದುಚೇರಿಯಲ್ಲಿ ಹೊಸ ಇತಿಹಾಸ ಬರೆದ ಬಿಜೆಪಿ ಮೈತ್ರಿ

- Advertisement -
- Advertisement -

ಪಂಚರಾಜ್ಯ ಚುನಾವಣೆಗಳ ಪೈಕಿ ಪುದುಚೇರಿ ಚುನಾವಣೆ ಸಹ ತನ್ನದೇ ಆದ ಕಾರಣಕ್ಕಾಗಿ ಸಾಕಷ್ಟು ಮಹತ್ವ ಪಡೆದುಕೊಂಡಿತ್ತು. ಪಂಚರಾಜ್ಯಗಳ ಪೈಕಿ ಕೋಲ್ಕತ್ತಾ, ಕೇರಳ, ಅಸ್ಸಾಂ ಹಾಗೂ ತಮಿಳುನಾಡಿಗೆ ೫ ವರ್ಷದ ನಂತರ ಎಂದಿನಂತೆ ವಿಧಾನಸಭೆ ಚುನಾವಣೆ ಎದುರಾಗಿದ್ದರೆ, ಪುದುಚೇರಿಗೆ ಮಾತ್ರ ಆಪರೇಷನ್ ಕಮಲದ ಕಾರಣಕ್ಕೆ ಚುನಾವಣೆ ಎದುರಾಗಿತ್ತು. ಹೀಗಾಗಿ ಪುದುಚೇರಿಯಲ್ಲಿ ಚುನಾವಣೆ ನಂತರ ಮತ್ತೆ ಯಾವ ಸರ್ಕಾರ ಅದಿಕಾರಕ್ಕೆ ಬರಲಿದೆ ಎಂಬ ಬಗ್ಗೆ ರಾಜಕೀಯ ವಠಾರಗಳಲ್ಲಿ ಸಾಮಾನ್ಯ ಕುತೂಹಲವೊಂದು ಮನೆ ಮಾಡಿತ್ತು.

ಅನೇಕ ರಾಜ್ಯಗಳಲ್ಲಿ ಅನೇಕ ಬಾರಿ ಬಿಜೆಪಿ ಚುನಾವಣೆ ಎದುರಿಸಿ ಅಧಿಕಾರ ಹಿಡಿದದ್ದಕ್ಕಿಂತ ಆಪರೇಷನ್ ಕಮಲದ ಸಹಾಯದಿಂದ ಹಿಂಬಾಗಿಲ ಮೂಲಕ ಅಧಿಕಾರವನ್ನು ಹಿಡಿದದ್ದೆ ಹೆಚ್ಚು. ಬಿಜೆಪಿ ಪಕ್ಷದ ಈ ಸಾಂಪ್ರದಾಯಿಕ ಸೂತ್ರಕ್ಕೆ ಈಗ ಪುದುಚೇರಿಯೂ ಬಲಿಯಾಗಿದೆ. ಏಕೆಂದರೆ ಬಿಜೆಪಿ ಪಾಲಿಗೆ ದಕ್ಷಿಣ ಭಾರತದಲ್ಲಿ ಕರ್ನಾಟಕದ ಹೊರತು ಬೇರೆ ಎಲ್ಲೂ ಭದ್ರ ನೆಲೆ ಇಲ್ಲ. ಹೀಗಾಗಿ ಮತ್ತೊಂದು ಆವಾಸ ಸ್ಥಾನಕ್ಕೆ ಕಾಯ್ದಿದ್ದ ಬಿಜೆಪಿ ಕಣ್ಣಿಗೆ ಬಿದ್ದದ್ದು ತಮಿಳುನಾಡು ಮತ್ತು ಪುದುಚೇರಿ.

224 ವಿಧಾನಸಭಾ ಕ್ಷೇತ್ರಗಳನ್ನು ಹೊಂದಿರುವ ಮತ್ತು ಪೆರಿಯಾರ್ ಚಿಂತನೆಗಳಿಗೆ ಗಟ್ಟಿಯಾಗಿಯೇ ಅಂಟಿಕೊಂಡಿರುವ ದ್ರಾವಿಡ ನಾಡಿನಲ್ಲಿ ಬಿಜೆಪಿಯ ಕೇಸರಿ ರಾಜಕಾರಣದ ಆಟ ನಡೆಯದು ಎಂಬ ವಿಚಾರ ಕಮಲ ಪಾಳಯಕ್ಕೆ ತಿಳಿಯದ ವಿಚಾರ ಏನಲ್ಲ. ಇದೇ ಕಾರಣಕ್ಕೆ ೩೦ ಕ್ಷೇತ್ರಗಳಿರುವ ಪಕ್ಕದ ಪುದುಚೇರಿಯನ್ನು ಹಿಡಿದರೆ, ಹಂತ ಹಂತವಾಗಿ ಹಿಂದುತ್ವದ ಹೆಸರಿನಲ್ಲಿ ತಮಿಳುನಾಡಿನಲ್ಲೂ ಅಧಿಕಾರ ಸಾಧ್ಯ ಎಂಬುದು ಬಿಜೆಪಿಯ ಲೆಕ್ಕಾಚಾರ. ಇದೇ ಕಾರಣಕ್ಕೆ ಕಳೆದ ಜನವರಿಯಲ್ಲಿ ಬಿಜೆಪಿ ನಾಯಕರು ವಿ. ನಾರಾಯಣ ಸ್ವಾಮಿ ನೇತೃತ್ವದ ಕಾಂಗ್ರೆಸ್ ಸರ್ಕಾರವನ್ನು ಆಪರೇಷನ್ ಕಮಲದ ಮೂಲಕ ಬೀಳಿಸಿ ಇದೀಗ ತಮ್ಮ ಜಂಡಾ ಹಾರಿಸಲು ಮುಂದಾಗಿದೆ ಬಿಜೆಪಿ.

ಹಿಂಬಾಗಿಲಲ್ಲಿ ಪುದುಚೇರಿ ಹಿಡಿದ ಬಿಜೆಪಿ
ಪುದುಚೇರಿ ಕೇಂದ್ರಾಡಳಿತ ಪ್ರದೇಶವಾದರೂ ಸಹ ತಮಿಳುನಾಡಿನಿಂದ ಕೂಗಳತೆ ದೂರದಲ್ಲಿರುವ ಈ ಪ್ರದೇಶಕ್ಕೆ ಸಾಂಸ್ಕೃತಿಕ ರೀತಿನೀತಿಗಳಲ್ಲಿ ಹೆಚ್ಚೇನು ವ್ಯತ್ಯಾಸ ಇಲ್ಲ. ಸಾಂಸ್ಕೃತಿಕವಾಗಿ ಮತ್ತು ಸಾಮಾಜಿಕವಾಗಿ ಈ ಎರಡೂ ನಾಡುಗಳಿಗೆ ಸಾಕಷ್ಟು ಹೋಲಿಕೆಗಳಿವೆ. ಈ ಎರಡೂ ಭೂ ಪ್ರದೇಶವನ್ನು ತಮಿಳು ಭಾಷೆ ಬೆಸೆಯುವುದಲ್ಲದೆ, ಪೆರಿಯಾರ್ ಸಿದ್ದಾಂತಗಳ ಪ್ರಭಾವವೂ ಈ ಭಾಗದಲ್ಲಿ ಸಾಕಷ್ಟಿದೆ. ಹೀಗಾಗಿ ತಮಿಳುನಾಡಿನಂತೆಯೇ ಇಲ್ಲಿಯೂ ಬಿಜೆಪಿ ನೆಲೆಯೂರುವುದು ಅಷ್ಟು ಸುಲಭದ ವಿಚಾರವಾಗಿರಲಿಲ್ಲ. ಇದಕ್ಕೆ ಈ ಹಿಂದಿನ ಚುನಾವಣೆಗಳು ಸಾಕಷ್ಟು ಸಾಕ್ಷಿ ಒದಗಿಸುತ್ತವೆ.

ವಿ. ನಾರಾಯಣ ಸ್ವಾಮಿ ಅವರ ಕಾಂಗ್ರೆಸ್ ಸರ್ಕಾರಕ್ಕೆ ಇಕ್ಕಟ್ಟಾದ ಪರಿಸ್ಥಿತಿ ನಿರ್ಮಾಣ ಮಾಡುವ ಸಲುವಾಗಿಯೇ ತಮಿಳುನಾಡಿನ ಬಿಜೆಪಿ ನಾಯಕಿ ತಮಿಳಿಸೈ ಸೌಂದರ್ ರಾಜನ್ ಅವರನ್ನು ಪುದುಚೇರಿಯ ಹೊಸ ಗೌರ್ನರ್ ಆಗಿ ನೇಮಕ ಮಾಡಲಾಗಿತ್ತು. ತಮಿಳಿಸೈ ಸೌಂದರ್ ರಾಜನ್ ಒಂದೆಡೆ ತಮ್ಮ ಅಧಿಕಾರವನ್ನು ಬಳಸಿಕೊಂಡು ವಿ. ನಾರಾಯಣ ಸ್ವಾಮಿ ಸರ್ಕಾರವನ್ನು ಇನ್ನಿಲ್ಲದಂತೆ ಕಾಡಿದರೆ, ಮತ್ತೊಂದೆಡೆ ಬಿಜೆಪಿ ಸದ್ದಿಲ್ಲದೆ ತಮ್ಮ ಎಂದಿನ ಸಾಂಪ್ರದಾಯಿಕ ಆಪರೇಷನ್ ಕಮಲವನ್ನು ಜಾರಿಗೆ ತಂದಿತ್ತು. (ಇದಕ್ಕೂ ಮೊದಲು ರಾಜ್ಯಪಾಲರಾಗಿದ್ದ ಕಿರಣ ಬೇಡಿ ಮತ್ತು ನಾರಾಯಣಸ್ವಾಮಿಯವರ ಸರ್ಕಾರಕ್ಕೂ ಹಲವು ಜಟಾಪಟಿಗಳಾಗಿದ್ದವು). 6ಕ್ಕೂ ಹೆಚ್ಚು ಕಾಂಗ್ರೆಸ್ ಶಾಸಕರನ್ನು ಕೊಂಡುಕೊಳ್ಳುವಲ್ಲಿ ಬಿಜೆಪಿ ಯಶಸ್ವಿಯಾಗಿತ್ತು. ಪರಿಣಾಮ ಸರ್ಕಾರ ಬಹುಮತ ಕಳೆದುಕೊಂಡಿತ್ತು. ಇದೀಗ ಬಿಜೆಪಿ ಮೊದಲ ಬಾರಿಗೆ ಪುದುಚೇರಿಯಲ್ಲಿ ಅಧಿಕಾರದ ರುಚಿ ಅನುಭವಿಸಲು ಮುಂದಾಗಿದೆ. ಆದರೆ, ಇದಕ್ಕೂ ಸಹ ಕಾಂಗ್ರೆಸ್ ಪಕ್ಷದ ಎಡವಟ್ಟಿನ ನಿರ್ಣಯಗಳೇ ಕಾರಣ ಎಂದರೆ ತಪ್ಪಾಗಲಾರದು.

ಬಿಜೆಪಿ ವರದಾನವಾದ ಕಾಂಗ್ರೆಸ್ ಎಡವಟ್ಟು
30 ವಿಧಾನಸಭಾ ಕ್ಷೇತ್ರಗಳನ್ನು ಹೊಂದಿರುವ ಪುದುಚೇರಿಯಲ್ಲಿ ಸರ್ಕಾರ ರಚಿಸಲು ಬೇಕಾಗಿರುವ ಮ್ಯಾಜಿಕ್ ನಂಬರ್ 16. ಈ ಪೈಕಿ ಬಿಜೆಪಿ 6 ಕ್ಷೇತ್ರದಲ್ಲಿ ಗೆಲುವು ಸಾಧಿಸಿದ್ದರೆ ಬಿಜೆಪಿ ಮೈತ್ರಿ ಪಕ್ಷವಾದ ಆಲ್ ಇಂಡಿಯಾ ಎನ್ ಆರ್ ಕಾಂಗ್ರೆಸ್ 10ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ. ಈ ಮೂಲಕ ಬಿಜೆಪಿ ಮೈತ್ರಿ ಮೊದಲ ಬಾರಿಗೆ ಪುದುಚೇರಿಯಲ್ಲಿ ಅಧಿಕಾರದ ಗದ್ದುಗೆ ಏರಿದೆ. ಆದರೆ, ಸ್ಥಳೀಯ ಪಕ್ಷವಾದ ಆಲ್ ಇಂಡಿಯಾ ಎನ್ ಆರ್ ಕಾಂಗ್ರೆಸ್ ಅಧಿಕಾರಕ್ಕೆ ಏರುತ್ತಿರುವುದು ಇದೇ ಮೊದಲೇನಲ್ಲ. ಎನ್. ರಂಗಸ್ವಾಮಿ ಕಾಂಗ್ರೆಸ್‌ನಿಂದ ಹೊರಬಂದು 2011ರಲ್ಲೇ ಆಲ್ ಇಂಡಿಯಾ ಎನ್ ಆರ್ ಕಾಂಗ್ರೆಸ್ ಪಕ್ಷ ಕಟ್ಟಿ, ಮೊದಲ ಚುನಾವಣೆಯಲ್ಲೇ ಬಹುಮತಗಳಿಸಿ ಅಧಿಕಾರಕ್ಕೆ ಬಂದಿದ್ದರು. ಇದೀಗ ಐದನೇ ಬಾರಿ ಸಿಎಂ ಪಟ್ಟಕ್ಕೆ ಏರಿದ್ದಾರೆ. ಅವರು ಎನ್‌ಡಿಎ ಮೈತ್ರಿಯ ಭಾಗವಾಗಿರುವ ಕಾರಣವಷ್ಟೆ ಇಲ್ಲಿ ಬಿಜೆಪಿಗೆ ಅಧಿಕಾರ ಸಿಕ್ಕಿದಂತಾಗಿದೆ. ಆಲ್ ಇಂಡಿಯಾ ಎನ್ ಆರ್ ಕಾಂಗ್ರೆಸ್ ಹೆಸರಿನಲ್ಲಿ ಬಿಜೆಪಿಗೆ ಮತ ಲಭಿಸಿದೆ ಎಂದರೂ ತಪ್ಪಾಗಲಾರದು.

ಅಸಲಿಗೆ ಎನ್. ರಂಗಸ್ವಾಮಿ ಕಾಂಗ್ರೆಸ್ ಪಕ್ಷದ ನಿಷ್ಠಾವಂತ ನಾಯಕ. ಹಲವು ದಶಕಗಳಿಂದ ಅಧಿಕಾರ ಡಿಎಂಕೆ ಮತ್ತು ಎಡಿಎಂಕೆ ಕೈಲಿದ್ದ ಪುದುಚೇರಿಯಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಎನ್. ರಂಗಸ್ವಾಮಿ ಪ್ರಮುಖ ಕಾರಣಕರ್ತರಾಗಿದ್ದರು. 2001ರಿಂದ 2008ರವರೆಗೆ ಎರಡು ಅವಧಿಗೆ ಸಿಎಂ ಆಗಿದ್ದ ಅವರು ಹಲವು ಜನಪ್ರಿಯ ಯೋಜನೆಗಳ ಮೂಲಕ ಮನೆಮಾತಾಗಿದ್ದರು. ಒಂದು ಹಂತದಲ್ಲಿ ಪುದುಚೇರಿಯ ಕಾಮರಾಜ್, ಜನರ ಸಿಎಂ ಎಂಬ ಹೆಗ್ಗಳಿಕೆಗೂ ಅವರು ಪಾತ್ರರಾಗಿದ್ದರು. ಪುದುಚೇರಿ ಮಟ್ಟಿಗೆ ಅವರನ್ನು ಅಜಾತಶತ್ರು ಎಂದೇ ಕರೆಯಲಾಗಿತ್ತು.

ಆದರೆ, 2008ರಲ್ಲಿ ಪಕ್ಷದ ಆಂತರಿಕ ರಾಜಕಾರಣದ ನೆಪ ಹೇಳಿ ಅವರನ್ನು ಸಿಎಂ ಸ್ಥಾನದಿಂದ ಕೆಳಗೆ ಇಳಿಸಲಾಗಿತ್ತು. ಇದರಿಂದ ಕುಪಿತಗೊಂಡ ರಂಗಸ್ವಾಮಿಯವರು ಆಲ್ ಇಂಡಿಯಾ ಎನ್. ಆರ್ ಕಾಂಗ್ರೆಸ್ ಪಕ್ಷವನ್ನು ಸ್ಥಾಪಿಸಿ ಮೊದಲ ಚುನಾವಣೆಯಲ್ಲೇ ಗೆಲುವು ಸಾಧಿಸಿ ಅಧಿಕಾರ ಹಿಡಿದಿದ್ದು ಇಂದು ಇತಿಹಾಸ. ಈ ಘಟನೆಯ ನಂತರ ಕಾಂಗ್ರೆಸ್‌ನಿಂದ ಶಾಶ್ವತವಾಗಿ ದೂರವಾದ ಎನ್. ರಂಗಸ್ವಾಮಿ ಎನ್‌ಡಿಎ ಜೊತೆ ಮೈತ್ರಿ ಸಾಧಿಸಿದ್ದರು. ಇಂದು ಅವರ ಮೂಲಕವೇ ಕೋಮುವಾದಿ ಬಿಜೆಪಿ ದ್ರಾವಿಡ ನಾಡಿನ ಪಕ್ಕದಲ್ಲೇ ಜಂಡಾ ಹಾರಿಸುವಂತಾದದ್ದು ಮಾತ್ರ ವಿಪರ್ಯಾಸ.


ಇದನ್ನೂ ಓದಿ: ಟಿಎಂಸಿಯಿಂದ ಹಾರಿದ 148 ಜನರಿಗೆ BJP ಟಿಕೆಟ್, ಗೆದ್ದವರು 6 ಜನ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...