Homeಮುಖಪುಟಹರಿಯಾಣದಲ್ಲಿ ‘ಲವ್ ಜಿಹಾದ್’ ಕಾನೂನಿಗೆ ಮೈತ್ರಿಪಕ್ಷದ ವಿರೋಧ: ಬಿಜೆಪಿಗೆ ಇರುಸುಮುರಿಸು

ಹರಿಯಾಣದಲ್ಲಿ ‘ಲವ್ ಜಿಹಾದ್’ ಕಾನೂನಿಗೆ ಮೈತ್ರಿಪಕ್ಷದ ವಿರೋಧ: ಬಿಜೆಪಿಗೆ ಇರುಸುಮುರಿಸು

ರೈತರ ಪ್ರತಿಭಟನೆಯ ಬಗ್ಗೆ ದುಶ್ಯಂತ್ ಚೌತಾಲಾ ಅವರ ಜೆಜೆಪಿಯು ಬಿಜೆಪಿಯೊಂದಿಗೆ ಭಿನ್ನಾಭಿಪ್ರಾಯ ಹೊಂದಿರುವ ಈ ಸಮಯದಲ್ಲಿ ಈ ಹೇಳಿಕೆಗಳು ಬಂದಿವೆ.

- Advertisement -
- Advertisement -

ಹರಿಯಾಣದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು “ಲವ್ ಜಿಹಾದ್” ಶಾಸನ ತರಲು ಸಿದ್ಧವಾಗುತ್ತಿರುವ ಸಂದರ್ಭದಲ್ಲಿ ಅದನ್ನು ಪ್ರಮುಖ ಮೈತ್ರಿ ಪಕ್ಷದ ನಾಯಕ ಮತ್ತು ಉಪಮುಖ್ಯಮಂತ್ರಿ ದುಶ್ಯಂತ್ ಚೌತಾಲಾ ಅವರು ವಿರೋಧ ವ್ಯಕ್ತಪಡಿಸಿದ್ದಾರೆ.

ಎನ್‌ಡಿಟಿವಿಗೆ ನೀಡಿದ ಸಂದರ್ಶನದಲ್ಲಿ ಅವರು, ಮುಸ್ಲಿಂ ಪುರುಷರು ಹಿಂದೂ ಮಹಿಳೆಯರನ್ನು ಮತಾಂತರಗೊಳ್ಳುವಂತೆ ಒತ್ತಾಯಿಸಲು ಮದವೆಯ ನಾಟಕ ಆಡುತ್ತಾರೆ ಎಂದು ಬಲಪಂಥಿಯರು ಬಳಸುವ “ಲವ್ ಜಿಹಾದ್” ಎಂಬ ಪದವನ್ನು ಒಪ್ಪುವುದಿಲ್ಲ ಎಂದು ಹೇಳಿದ್ದಾರೆ.

“ಲವ್ ಜಿಹಾದ್” ಎಂಬ ಈ ಪದವನ್ನು ನಾನು ಒಪ್ಪುವುದಿಲ್ಲ. ಬಲವಂತದ ಧಾರ್ಮಿಕ ಮತಾಂತರವನ್ನು ಪರೀಕ್ಷಿಸಲು ನಾವು ನಿರ್ದಿಷ್ಟವಾಗಿ ಕಾನೂನನ್ನು ರಚಿಸೋಣ. ನಾವು ಅದನ್ನು ಬೆಂಬಲಿಸುತ್ತೇವೆ. ಯಾರಾದರೂ ಸ್ವಇಚ್ಛೆಯಿಂದ ಮತಾಂತರಗೊಂಡರೆ ಅಥವಾ ಇನ್ನೊಂದು ನಂಬಿಕೆಯ ಪಾಲುದಾರನನ್ನು ಮದುವೆಯಾದರೆ, ಯಾವುದೇ ನಿರ್ಬಂಧವಿಲ್ಲ, ಇರಲೂ ಬಾರದು” ಎಂದು ದುಶ್ಯಂತ್ ಚೌತಾಲಾ ಎನ್‌ಡಿಟಿವಿಗೆ ತಿಳಿಸಿದರು.

ಇದನ್ನೂ ಓದಿ: ಲವ್ ಜಿಹಾದ್ ಎಂಬ ಕಪೋಲಕಲ್ಪಿತ: ಮತಾಂತರ ವಿರೋಧ ಕಾಯ್ದೆಯ ಅವಾಂತರ..

ರೈತರ ಪ್ರತಿಭಟನೆಯ ಬಗ್ಗೆ ದುಶ್ಯಂತ್ ಚೌತಾಲಾ ಮತ್ತು ಅವರ ಜನ್‌ನಾಯಕ್ ಜನತಾ ಪಕ್ಷ (ಜೆಜೆಪಿ) ಬಿಜೆಪಿಯೊಂದಿಗೆ ಭಿನ್ನಾಭಿಪ್ರಾಯ ಹೊಂದಿರುವ ಈ ಸಮಯದಲ್ಲಿ ಈ ಹೇಳಿಕೆಗಳು ಬಂದಿವೆ. ತಮ್ಮ ಪಕ್ಷದ ಆಧಾರಸ್ತಂಭವಾದ ರೈತರು ವಿರೋಧಿಸುತ್ತಿರುವ ಕೇಂದ್ರ ಕಾನೂನುಗಳನ್ನು ಪರಿಶೀಲಿಸುವ ಬೇಡಿಕೆಯನ್ನು ಚೌತಾಲಾ ಬೆಂಬಲಿಸಿದ್ದಾರೆ. ಕೇಂದ್ರ ಸರ್ಕಾರ ರೈತರ ಮಾತು ಕೇಳದಿದ್ದರೆ ರಾಜೀನಾಮೆ ನೀಡುವುದಾಗಿಯೂ ಬೆದರಿಕೆ ಹಾಕಿದ್ದರು.

ಉತ್ತರ ಪ್ರದೇಶ, ಮಧ್ಯಪ್ರದೇಶ ಮತ್ತು ಕರ್ನಾಟಕ ಸೇರಿದಂತೆ ಹಲವಾರು ಬಿಜೆಪಿ ಆಡಳಿತದ ರಾಜ್ಯಗಳು ಈಗಾಗಲೇ ‘ಲವ್ ಜಿಹಾದ್’ ಎಂಬ ಜನಪ್ರಿಯ ಹೆಸರಿನ ಶಾಸನಗಳನ್ನು ಜಾರಿಗೆ ತಂದಿವೆ. ಮುಸ್ಲಿಮರು ಹೆಚ್ಚಿನ ಸಂಖ್ಯೆಯಲ್ಲಿರುವ ಹರಿಯಾಣದ ನುಹ್ ಜಿಲ್ಲೆಯಲ್ಲಿ ಜೆಜೆಪಿ ಈ ಕುರಿತಾಗಿ ಪ್ರಶ್ನೆಗಳನ್ನು ಮತ್ತು ಆತಂಕವನ್ನು ಎದುರಿಸುತ್ತಿದೆ.

ಚೌತಾಲಾ ಅವರು ಬುಧವಾರ ಚಂಡೀಗಢದಲ್ಲಿ ಸಮುದಾಯದ ಸದಸ್ಯರೊಂದಿಗೆ ಸಭೆ ನಡೆಸಿದರು. “ನಾವು ನಮ್ಮ ನಾಯಕ ದುಶ್ಯಂತ್ ಚೌತಾಲಾ ಅವರೊಂದಿಗೆ ಮೇವತ್‌ನ ಜನರ ಸಭೆಯನ್ನು ಏರ್ಪಡಿಸಿದ್ದೇವೆ. ವಿಧಾನಸಭೆಯಲ್ಲಿ ಪರಿಚಯಿಸಬೇಕಾದ ಹೊಸ ಕಾನೂನಿನ ಬಗ್ಗೆ ಅವರು ನಮ್ಮ ಕಾಳಜಿಯನ್ನು ತಿಳಿಸಿದರು” ಎಂದು ಜೆಜೆಪಿಯ ಅಲ್ಪಸಂಖ್ಯಾತ ಕೋಶದ ಮುಖ್ಯಸ್ಥ ಮೊಹ್ಸಿನ್ ಚೌಧರಿ ಹೇಳಿದರು.

ಕಳೆದ ಮೂರು ವರ್ಷಗಳಲ್ಲಿ ಹರಿಯಾಣದಲ್ಲಿ ಅಂತರ್ ಧರ್ಮಿಯ ಸಂಬಂಧಗಳ ನಾಲ್ಕು ಪ್ರಕರಣಗಳು ದಾಖಲಾಗಿವೆ ಎಂದು ಆರ್‌ಟಿಐ ಉತ್ತರವು ಬಹಿರಂಗಪಡಿಸಿದೆ. ಎರಡು ಪ್ರಕರಣಗಳಲ್ಲಿ ಎಫ್‌ಐಆರ್‌ಗಳನ್ನು ರದ್ದುಗೊಳಿಸಲು ಪೊಲೀಸರು ಮುಂದಾಗಿದ್ದಾರೆ ಮತ್ತು ಮೂರನೆಯದು ಖುಲಾಸೆಯಲ್ಲಿ ಕೊನೆಗೊಂಡಿದೆ. ನಾಲ್ಕನೇ ಪ್ರಕರಣ ನ್ಯಾಯಾಲಯದಲ್ಲಿದೆ.
ಆರ್‌ಟಿಐ ಅರ್ಜಿಯನ್ನು ಪಾಣಿಪತ್ ನಿವಾಸಿ ಪಿ.ಪಿ ಕಪೂರ್ ಸಲ್ಲಿಸಿದ್ದರು. ಅಂಬಾಲಾ, ನುಹ್ ಮತ್ತು ಪಾಣಿಪತ್ ಜಿಲ್ಲೆಗಳಲ್ಲಿ ಒಟ್ಟು ನಾಲ್ಕು ಲವ್ ಜಿಹಾದ್ ಪ್ರಕರಣಗಳು ದಾಖಲಾಗಿವೆ.


ಇದನ್ನೂ ಓದಿ: ತೈಲ ಬೆಲೆ 100 ರ ಗಡಿ ದಾಟಿದೆ; ಆದರೆ ಬಿಜೆಪಿ ‘ಲವ್ ಜಿಹಾದ್’ ಹಿಂದೆ ಬಿದ್ದಿದೆ: ವಿಜಯರಾಘವನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...