Homeಮುಖಪುಟವಿರೋಧ ಪಕ್ಷಗಳ ಜಾತಿ ಗಣತಿ ಆಗ್ರಹಕ್ಕೆ ದನಿಗೂಡಿಸಿದ ಕೇಂದ್ರ ಸಚಿವ ಚಿರಾಗ್ ಪಾಸ್ವಾನ್

ವಿರೋಧ ಪಕ್ಷಗಳ ಜಾತಿ ಗಣತಿ ಆಗ್ರಹಕ್ಕೆ ದನಿಗೂಡಿಸಿದ ಕೇಂದ್ರ ಸಚಿವ ಚಿರಾಗ್ ಪಾಸ್ವಾನ್

- Advertisement -
- Advertisement -

‘ಲ್ಯಾಟರಲ್ ಎಂಟ್ರಿ’ ಮೂಲಕ ಸರ್ಕಾರಿ ನೌಕರರನ್ನು ನೇಮಿಸಿಕೊಳ್ಳುವ ನಿರ್ಧಾರವನ್ನು ವಿರೋಧಿಸಿದ ಬಳಿಕ, ಕೇಂದ್ರ ಸಚಿವ ಚಿರಾಗ್ ಪಾಸ್ವಾನ್ ಅವರು ವಿರೋಧ ಪಕ್ಷಗಳ ‘ಜಾತಿ ಜನಗಣತಿ’ ಆಗ್ರಹಕ್ಕೆ ದನಿಗೂಡಿಸಿದ್ದಾರೆ.

ಇಂಡಿಯಾ ಟುಡೇ ವರದಿ ಮಾಡಿರುವಂತೆ ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು “ನನ್ನ ಪಕ್ಷ (ಎಲ್‌ಜೆಪಿ) ಯಾವಾಗಲೂ ಜಾತಿ ಗಣತಿಯ ಪರವಾಗಿದೆ” ಎಂದು ತನ್ನ ನಿಲುವನ್ನು ಸ್ಪಷ್ಟವಾಗಿ ಹೇಳಿದ್ದಾರೆ.

ತಮ್ಮ ನಿಲುವಿನ ಕುರಿತು ವಿವರಿಸಿದ ಅವರು, ”ಅನೇಕ ಬಾರಿ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಫಲಾನುಭವಿಗಳ ಜಾತಿಯನ್ನು ಗಮನದಲ್ಲಿಟ್ಟುಕೊಂಡು ಹಲವು ಯೋಜನೆಗಳನ್ನು ರೂಪಿಸುತ್ತವೆ. ಆ ಯೋಜನೆಗಳು ಹಿಂದುಳಿದ ವರ್ಗದವರನ್ನು ಮುಖ್ಯವಾಹಿನಿಯೊಂದಿಗೆ ಸಂಪರ್ಕಿಸುವ ಚಿಂತನೆಯೊಂದಿಗೆ ಸಿದ್ಧಪಡಿಸಲಾಗಿರುತ್ತದೆ. ಆದ್ದರಿಂದ ನಾನು ಜಾತಿ ಜನಗಣತಿಯನ್ನು ಬೆಂಬಲಿಸುತ್ತೇನೆ” ಎಂದಿದ್ದಾರೆ.

ಕೇಂದ್ರ ಸರ್ಕಾರ ಜಾತಿವಾರು ಜನಸಂಖ್ಯೆಯ ಬಗ್ಗೆ ತಿಳಿದಾಗ ಮಾತ್ರ ಸಂಪನ್ಮೂಲಗಳ ಸರಿಯಾದ ವಿತರಣೆ ಮತ್ತು ಯೋಜನೆಯ ಪ್ರಯೋಜನಗಳನ್ನು ಲೆಕ್ಕಾಚಾರ ಮಾಡಬಹುದು ಎಂದು ಚಿರಾಗ್ ಪಾಸ್ವಾನ್ ಪ್ರತಿಪಾದಿಸಿದ್ದಾರೆ.

ಕೇಂದ್ರ ಆಹಾರ ಸಂಸ್ಕರಣಾ ಕೈಗಾರಿಕೆಗಳ ಸಚಿವರಾಗಿರುವ ಪಾಸ್ವಾನ್ ಅವರು, ಈ ಹಿಂದೆ ಸರ್ಕಾರಿ ಉದ್ಯೋಗಗಳಲ್ಲಿ ಲ್ಯಾಟರಲ್ ಎಂಟ್ರಿ ನೇಮಕಾತಿಗಳ ವಿರುದ್ಧ ಮಾತನಾಡಿದ್ದರು, ನಾಗರಿಕ ಸೇವೆಗಳಲ್ಲಿ ಅಂತಹ ವ್ಯವಸ್ಥೆ ‘ಸಂಪೂರ್ಣ ತಪ್ಪು’ ಎಂದಿದ್ದರು. ಉತ್ತರ ಪ್ರದೇಶ ಮತ್ತು ಮಧ್ಯ ಪ್ರದೇಶ ಸರ್ಕಾರಗಳು ಕನ್ವರ್ ಯಾತ್ರೆ ಮಾರ್ಗದ ಅಂಗಡಿಗಳಲ್ಲಿ ಮಾಲೀಕರು ಮತ್ತು ಸಿಬ್ಬಂದಿ ಹೆಸರು ಪ್ರದರ್ಶಿಸುವಂತೆ ಸೂಚಿಸಿದ್ದ ಆದೇಶವನ್ನು ವಿರೋಧಿಸಿದ್ದರು.

ಪಾಸ್ವಾನ್ ಅವರ ಹೇಳಿಕೆಗಳು ಅವರು ಮೈತ್ರಿ ಮಾಡಿಕೊಂಡಿರುವ ಬಿಜೆಪಿಯ ವಿರುದ್ಧವಾಗಿದೆ. ಸಂಸತ್ತಿನಲ್ಲಿ, ರಾಷ್ಟ್ರವ್ಯಾಪಿ ಜಾತಿ ಗಣತಿಯನ್ನು ಪರಿಚಯಿಸುವ ಪ್ರತಿಪಕ್ಷಗಳ ಪ್ರಯತ್ನಗಳನ್ನು ಬಿಜೆಪಿ ಹಿಂದಿನಿಂದಲೂ ವಿರೋಧಿಸುತ್ತಿದೆ.

ಪ್ರತಿಪಕ್ಷಗಳು ಜಾತಿ ಜನಗಣತಿಯ ಅಗತ್ಯೆಯನ್ನು ಸಮರ್ಥಿಸಿಕೊಂಡಿವೆ. ಕಾಂಗ್ರೆಸ್ ಪಕ್ಷ ತನ್ನ ಪ್ರಣಾಳಿಕೆಯಲ್ಲೇ ಜಾತಿ ಜನಗಣತಿಯ ಭರವಸೆ ನೀಡಿತ್ತು. ಪ್ರಸ್ತುತ ಲೋಕಸಭೆಯ ಪ್ರತಿಪಕ್ಷ ನಾಯಕರಾಗಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಚುನಾವಣಾ ಭಾಷಣಗಳಲ್ಲಿ ಪದೇ ಪದೇ ಜಾತಿ ಜನಗಣತಿಯ ವಿಷಯ ಉಲ್ಲೇಖಿಸಿದ್ದರು.

ಇದನ್ನೂ ಓದಿ : ಒಡಿಶಾ: ಜಗಳದ ವೇಳೆ ಗಂಡನಿಗೆ ಥಳಿಸಿದ ಮಹಿಳೆ; ಸ್ಥಳೀಯರ ಪಂಚಾಯಿತಿ ಆದೇಶ ನಂತರ ತಲೆ ಬೋಳಿಸಿ ಬಹಿಷ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೈರಮುತ್ತುಗೆ ಜ್ಞಾನಪೀಠ ಪ್ರಶಸ್ತಿ : ಚಿನ್ಮಯಿ ಶ್ರೀಪಾದ, ಟಿಎಂ ಕೃಷ್ಣ ಸೇರಿ ಹಲವರಿಂದ ಟೀಕೆ

ಲಿಂಗತಾರತಮ್ಯ ಮತ್ತು ಲೈಂಗಿಕ ಕಿರುಕುಳದಂತಹ ಗಂಭೀರ ಆರೋಪಗಳನ್ನು ಎದುರಿಸುತ್ತಿರುವ ತಮಿಳು ಸಾಹಿತಿ ವೈರಮುತ್ತು ಅವರಿಗೆ 2025ನೇ ಸಾಲಿನ ಪ್ರತಿಷ್ಠಿತ ಜ್ಞಾನಪೀಠ ಪ್ರಶಸ್ತಿ ಘೋಷಿಸಿರುವುದು ವ್ಯಾಪಕ ಟೀಕೆಗೆ ಗುರಿಯಾಗಿದೆ.  ಸಾಹಿತ್ಯ ಕ್ಷೇತ್ರದಲ್ಲಿನ ಅವರ ಕೊಡುಗೆಯನ್ನು ಪರಿಗಣಿಸಿ...

ಡ್ರೋನ್ ದಾಳಿಯ ನಂತರ ದುಬೈ ವಿಮಾನ ನಿಲ್ದಾಣದ ಬಳಿ ಬೆಂಕಿ ಅವಘಡ; ವಿಮಾನ ಕಾರ್ಯಾಚರಣೆ ತಾತ್ಕಾಲಿಕವಾಗಿ ಸ್ಥಗಿತ

ದುಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಡ್ರೋನ್ ದಾಳಿಯಿಂದಾಗಿ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಆದರೆ, ದುಬೈ ಅಧಿಕಾರಿಗಳ ಪ್ರಕಾರ, ವಿಮಾನಗಳ ಹಾರಾಟವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ."ದುಬೈ ಅಂತರಾಷ್ಟ್ರೀಯ ವಿಮಾನ...

ಕಾನ್ಶಿ ರಾಮ್‌ಗೆ ಭಾರತ ರತ್ನ ನೀಡುವಂತೆ ಆಗ್ರಹಿಸಿ ಪ್ರಧಾನಿಗೆ ಪತ್ರ ಬರೆದ ರಾಹುಲ್ ಗಾಂಧಿ

ಬಹುಜನ ಸಮಾಜ ಪಕ್ಷ (ಬಿಎಸ್‌ಪಿ) ಸ್ಥಾಪಿಸಿದ ದಲಿತ ಐಕಾನ್ ಕಾನ್ಶಿ ರಾಮ್‌ ಅವರಿಗೆ ಭಾರತದ ಅತ್ಯುನ್ನತ ನಾಗರಿಕ ಗೌರವವಾದ ಭಾರತ ರತ್ನವನ್ನು ನೀಡುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾನುವಾರ ಪ್ರಧಾನಿ ನರೇಂದ್ರ...

ರಾಜ್ಯಸಭೆಯ 37 ಸ್ಥಾನಗಳಿಗೆ ಚುನಾವಣೆ; 26 ಅಭ್ಯರ್ಥಿಗಳು ಅವಿರೋಧ ಆಯ್ಕೆ

ಹತ್ತು ರಾಜ್ಯಗಳ 37 ಸ್ಥಾನಗಳನ್ನು ಒಳಗೊಂಡ ದ್ವೈವಾರ್ಷಿಕ ರಾಜ್ಯಸಭಾ ಚುನಾವಣೆಗೆ ಸೋಮವಾರ (ಮಾ.16) ಮತದಾನ ನಡೆಯುತ್ತಿದೆ. ಬಿಹಾರ, ಒಡಿಶಾ ಮತ್ತು ಹರಿಯಾಣದಲ್ಲಿ ತೀವ್ರ ಪೈಪೋಟಿ ಏರ್ಪಡುವ ಸಾಧ್ಯತೆ ಇದ್ದು, 26 ಅಭ್ಯರ್ಥಿಗಳು ಈಗಾಗಲೇ...

ಒಡಿಶಾ | ಆಸ್ಪತ್ರೆಯಲ್ಲಿ ಬೆಂಕಿ ಅವಘಡ : 10 ಮಂದಿ ಸಾವು

ಒಡಿಶಾದ ಕಟಕ್‌ನಲ್ಲಿರುವ ಎಸ್‌ಸಿಬಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಟ್ರಾಮಾ ಕೇರ್ ಐಸಿಯುನಲ್ಲಿ ಸೋಮವಾರ (ಮಾರ್ಚ್ 16) ಬೆಂಕಿ ಅವಘಡ ಸಂಭವಿಸಿದ್ದು, ಕನಿಷ್ಠ 10 ರೋಗಿಗಳು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ ಎಂದು...

ಆಸ್ಕರ್‌ 2026 : ಮೈಕೆಲ್ ಬಿ. ಜೋರ್ಡಾನ್ ಅತ್ಯುತ್ತಮ ನಟ, ಜೆಸ್ಸಿ ಬಕ್ಲಿ ಅತ್ಯುತ್ತಮ ನಟಿ, ಒನ್ ಬ್ಯಾಟಲ್ ಆಫ್ಟರ್ ಅನದರ್‌ಗೆ ಅತ್ಯುತ್ತಮ ಚಿತ್ರ ಪ್ರಶಸ್ತಿ

ಪ್ರತಿಷ್ಠಿತ 98ನೇ ಅಕಾಡೆಮಿ ಪ್ರಶಸ್ತಿ (ಆಸ್ಕರ್ 2026) ಸಮಾರಂಭ ಲಾಸ್ ಏಂಜಲೀಸ್‌ನ ಡಾಲ್ಬಿ ಥಿಯೇಟರ್‌ನಲ್ಲಿ ಮಾರ್ಚ್ 15ರಂದು (ಭಾರತೀಯ ಕಾಲಮಾನ ಮಾರ್ಚ್ 16) ನಡೆಯಿತು. ಖ್ಯಾತ ಹಾಸ್ಯನಟ ಕೋನನ್ ಒಬ್ರೇನ್ ಅವರು ಈ ಕಾರ್ಯಕ್ರಮವನ್ನು ನಡೆಸಿಕೊಟ್ಟರು....

ಐದು ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ; ಬಂಗಾಳದಲ್ಲಿ ಮಾತ್ರ ಎರಡು ಹಂತದ ಮತದಾನ

ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗದ (ಇಸಿಐ) ಮುಖ್ಯಸ್ಥರಾದ ಜ್ಞಾನೇಶ್ ಕುಮಾರ್ ಪ್ರಕಟಿಸಿದರು. ದೆಹಲಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ...

ಫ್ಲಿಪ್‌ಕಾರ್ಟ್‌ನಿಂದ 1 ರೂ.ಗೆ ಹಾಲು ಮಾರಾಟ; ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಬಮುಲ್‌ ಆಗ್ರಹ

ಫ್ಲಿಪ್‌ಕಾರ್ಟ್‌ ಸಂಸ್ಥೆಯು ಆನ್‌ಲೈನ್‌ ಮೂಲಕ 1 ರೂ.ಗೆ ಲೀಟರ್‌ ಹಾಲನ್ನು ಮಾರಾಟ ಮಾಡಿರುವುದು ಭಾರಿ ಜನಾಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ, ಬೆಂಗಳೂರು ನಗರ, ಗ್ರಾಮೀಣ ಮತ್ತು ರಾಮನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ...

“ಮಕ್ಕಳ ಹಂತಕನನ್ನು ಹುಡುಕಿ ಹತ್ಯೆ ಮಾಡುತ್ತೇವೆ” : ನೆತನ್ಯಾಹು ಸುರಕ್ಷಿತವಾಗಿದ್ದಾರೆ ಎಂಬ ಇಸ್ರೇಲ್ ಸ್ಪಷ್ಟನೆ ಬೆನ್ನಲ್ಲೆ ಐಆರ್‌ಜಿಸಿ ಹೇಳಿಕೆ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಹುಡುಕಿ ಹತ್ಯೆ ಮಾಡುತ್ತೇವೆ ಎಂದು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಹೇಳಿರುವುದಾಗಿ ವರದಿಯಾಗಿದೆ. ನೆತನ್ಯಾಹು ಅವರ ಹತ್ಯೆಯ ವದಂತಿಗಳನ್ನು ಇಸ್ರೇಲ್ ನಿರಾಕರಿಸಿದ ಬೆನ್ನಲ್ಲೇ, ಐಆರ್‌ಜಿಸಿ ಈ...

ಮಹಾರಾಷ್ಟ್ರ| ಇಫ್ತಾರ್ ಕೂಟಕ್ಕೆ ಸೇರಿದ್ದ ಮುಸ್ಲಿಮರ ಮೇಲೆ ಹಿಂದುತ್ವವಾದಿ ಗುಂಪಿನಿಂದ ದಾಳಿ

ರಂಜಾನ್‌ ಮಾಸದ ಉಪವಾಸ ಮುರಿಯಲು ನೆರೆದಿದ್ದ ಜನರ ಮೇಲೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಫ್ತಾರ್ ಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗ, ಸುಮಾರು 100 ಕ್ಕೂ ಹೆಚ್ಚು...