Homeಮುಖಪುಟವಿರೋಧ ಪಕ್ಷಗಳ ಜಾತಿ ಗಣತಿ ಆಗ್ರಹಕ್ಕೆ ದನಿಗೂಡಿಸಿದ ಕೇಂದ್ರ ಸಚಿವ ಚಿರಾಗ್ ಪಾಸ್ವಾನ್

ವಿರೋಧ ಪಕ್ಷಗಳ ಜಾತಿ ಗಣತಿ ಆಗ್ರಹಕ್ಕೆ ದನಿಗೂಡಿಸಿದ ಕೇಂದ್ರ ಸಚಿವ ಚಿರಾಗ್ ಪಾಸ್ವಾನ್

- Advertisement -
- Advertisement -

‘ಲ್ಯಾಟರಲ್ ಎಂಟ್ರಿ’ ಮೂಲಕ ಸರ್ಕಾರಿ ನೌಕರರನ್ನು ನೇಮಿಸಿಕೊಳ್ಳುವ ನಿರ್ಧಾರವನ್ನು ವಿರೋಧಿಸಿದ ಬಳಿಕ, ಕೇಂದ್ರ ಸಚಿವ ಚಿರಾಗ್ ಪಾಸ್ವಾನ್ ಅವರು ವಿರೋಧ ಪಕ್ಷಗಳ ‘ಜಾತಿ ಜನಗಣತಿ’ ಆಗ್ರಹಕ್ಕೆ ದನಿಗೂಡಿಸಿದ್ದಾರೆ.

ಇಂಡಿಯಾ ಟುಡೇ ವರದಿ ಮಾಡಿರುವಂತೆ ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು “ನನ್ನ ಪಕ್ಷ (ಎಲ್‌ಜೆಪಿ) ಯಾವಾಗಲೂ ಜಾತಿ ಗಣತಿಯ ಪರವಾಗಿದೆ” ಎಂದು ತನ್ನ ನಿಲುವನ್ನು ಸ್ಪಷ್ಟವಾಗಿ ಹೇಳಿದ್ದಾರೆ.

ತಮ್ಮ ನಿಲುವಿನ ಕುರಿತು ವಿವರಿಸಿದ ಅವರು, ”ಅನೇಕ ಬಾರಿ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಫಲಾನುಭವಿಗಳ ಜಾತಿಯನ್ನು ಗಮನದಲ್ಲಿಟ್ಟುಕೊಂಡು ಹಲವು ಯೋಜನೆಗಳನ್ನು ರೂಪಿಸುತ್ತವೆ. ಆ ಯೋಜನೆಗಳು ಹಿಂದುಳಿದ ವರ್ಗದವರನ್ನು ಮುಖ್ಯವಾಹಿನಿಯೊಂದಿಗೆ ಸಂಪರ್ಕಿಸುವ ಚಿಂತನೆಯೊಂದಿಗೆ ಸಿದ್ಧಪಡಿಸಲಾಗಿರುತ್ತದೆ. ಆದ್ದರಿಂದ ನಾನು ಜಾತಿ ಜನಗಣತಿಯನ್ನು ಬೆಂಬಲಿಸುತ್ತೇನೆ” ಎಂದಿದ್ದಾರೆ.

ಕೇಂದ್ರ ಸರ್ಕಾರ ಜಾತಿವಾರು ಜನಸಂಖ್ಯೆಯ ಬಗ್ಗೆ ತಿಳಿದಾಗ ಮಾತ್ರ ಸಂಪನ್ಮೂಲಗಳ ಸರಿಯಾದ ವಿತರಣೆ ಮತ್ತು ಯೋಜನೆಯ ಪ್ರಯೋಜನಗಳನ್ನು ಲೆಕ್ಕಾಚಾರ ಮಾಡಬಹುದು ಎಂದು ಚಿರಾಗ್ ಪಾಸ್ವಾನ್ ಪ್ರತಿಪಾದಿಸಿದ್ದಾರೆ.

ಕೇಂದ್ರ ಆಹಾರ ಸಂಸ್ಕರಣಾ ಕೈಗಾರಿಕೆಗಳ ಸಚಿವರಾಗಿರುವ ಪಾಸ್ವಾನ್ ಅವರು, ಈ ಹಿಂದೆ ಸರ್ಕಾರಿ ಉದ್ಯೋಗಗಳಲ್ಲಿ ಲ್ಯಾಟರಲ್ ಎಂಟ್ರಿ ನೇಮಕಾತಿಗಳ ವಿರುದ್ಧ ಮಾತನಾಡಿದ್ದರು, ನಾಗರಿಕ ಸೇವೆಗಳಲ್ಲಿ ಅಂತಹ ವ್ಯವಸ್ಥೆ ‘ಸಂಪೂರ್ಣ ತಪ್ಪು’ ಎಂದಿದ್ದರು. ಉತ್ತರ ಪ್ರದೇಶ ಮತ್ತು ಮಧ್ಯ ಪ್ರದೇಶ ಸರ್ಕಾರಗಳು ಕನ್ವರ್ ಯಾತ್ರೆ ಮಾರ್ಗದ ಅಂಗಡಿಗಳಲ್ಲಿ ಮಾಲೀಕರು ಮತ್ತು ಸಿಬ್ಬಂದಿ ಹೆಸರು ಪ್ರದರ್ಶಿಸುವಂತೆ ಸೂಚಿಸಿದ್ದ ಆದೇಶವನ್ನು ವಿರೋಧಿಸಿದ್ದರು.

ಪಾಸ್ವಾನ್ ಅವರ ಹೇಳಿಕೆಗಳು ಅವರು ಮೈತ್ರಿ ಮಾಡಿಕೊಂಡಿರುವ ಬಿಜೆಪಿಯ ವಿರುದ್ಧವಾಗಿದೆ. ಸಂಸತ್ತಿನಲ್ಲಿ, ರಾಷ್ಟ್ರವ್ಯಾಪಿ ಜಾತಿ ಗಣತಿಯನ್ನು ಪರಿಚಯಿಸುವ ಪ್ರತಿಪಕ್ಷಗಳ ಪ್ರಯತ್ನಗಳನ್ನು ಬಿಜೆಪಿ ಹಿಂದಿನಿಂದಲೂ ವಿರೋಧಿಸುತ್ತಿದೆ.

ಪ್ರತಿಪಕ್ಷಗಳು ಜಾತಿ ಜನಗಣತಿಯ ಅಗತ್ಯೆಯನ್ನು ಸಮರ್ಥಿಸಿಕೊಂಡಿವೆ. ಕಾಂಗ್ರೆಸ್ ಪಕ್ಷ ತನ್ನ ಪ್ರಣಾಳಿಕೆಯಲ್ಲೇ ಜಾತಿ ಜನಗಣತಿಯ ಭರವಸೆ ನೀಡಿತ್ತು. ಪ್ರಸ್ತುತ ಲೋಕಸಭೆಯ ಪ್ರತಿಪಕ್ಷ ನಾಯಕರಾಗಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಚುನಾವಣಾ ಭಾಷಣಗಳಲ್ಲಿ ಪದೇ ಪದೇ ಜಾತಿ ಜನಗಣತಿಯ ವಿಷಯ ಉಲ್ಲೇಖಿಸಿದ್ದರು.

ಇದನ್ನೂ ಓದಿ : ಒಡಿಶಾ: ಜಗಳದ ವೇಳೆ ಗಂಡನಿಗೆ ಥಳಿಸಿದ ಮಹಿಳೆ; ಸ್ಥಳೀಯರ ಪಂಚಾಯಿತಿ ಆದೇಶ ನಂತರ ತಲೆ ಬೋಳಿಸಿ ಬಹಿಷ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...