Homeಮುಖಪುಟವಿರೋಧ ಪಕ್ಷಗಳ ಜಾತಿ ಗಣತಿ ಆಗ್ರಹಕ್ಕೆ ದನಿಗೂಡಿಸಿದ ಕೇಂದ್ರ ಸಚಿವ ಚಿರಾಗ್ ಪಾಸ್ವಾನ್

ವಿರೋಧ ಪಕ್ಷಗಳ ಜಾತಿ ಗಣತಿ ಆಗ್ರಹಕ್ಕೆ ದನಿಗೂಡಿಸಿದ ಕೇಂದ್ರ ಸಚಿವ ಚಿರಾಗ್ ಪಾಸ್ವಾನ್

- Advertisement -
- Advertisement -

‘ಲ್ಯಾಟರಲ್ ಎಂಟ್ರಿ’ ಮೂಲಕ ಸರ್ಕಾರಿ ನೌಕರರನ್ನು ನೇಮಿಸಿಕೊಳ್ಳುವ ನಿರ್ಧಾರವನ್ನು ವಿರೋಧಿಸಿದ ಬಳಿಕ, ಕೇಂದ್ರ ಸಚಿವ ಚಿರಾಗ್ ಪಾಸ್ವಾನ್ ಅವರು ವಿರೋಧ ಪಕ್ಷಗಳ ‘ಜಾತಿ ಜನಗಣತಿ’ ಆಗ್ರಹಕ್ಕೆ ದನಿಗೂಡಿಸಿದ್ದಾರೆ.

ಇಂಡಿಯಾ ಟುಡೇ ವರದಿ ಮಾಡಿರುವಂತೆ ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು “ನನ್ನ ಪಕ್ಷ (ಎಲ್‌ಜೆಪಿ) ಯಾವಾಗಲೂ ಜಾತಿ ಗಣತಿಯ ಪರವಾಗಿದೆ” ಎಂದು ತನ್ನ ನಿಲುವನ್ನು ಸ್ಪಷ್ಟವಾಗಿ ಹೇಳಿದ್ದಾರೆ.

ತಮ್ಮ ನಿಲುವಿನ ಕುರಿತು ವಿವರಿಸಿದ ಅವರು, ”ಅನೇಕ ಬಾರಿ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಫಲಾನುಭವಿಗಳ ಜಾತಿಯನ್ನು ಗಮನದಲ್ಲಿಟ್ಟುಕೊಂಡು ಹಲವು ಯೋಜನೆಗಳನ್ನು ರೂಪಿಸುತ್ತವೆ. ಆ ಯೋಜನೆಗಳು ಹಿಂದುಳಿದ ವರ್ಗದವರನ್ನು ಮುಖ್ಯವಾಹಿನಿಯೊಂದಿಗೆ ಸಂಪರ್ಕಿಸುವ ಚಿಂತನೆಯೊಂದಿಗೆ ಸಿದ್ಧಪಡಿಸಲಾಗಿರುತ್ತದೆ. ಆದ್ದರಿಂದ ನಾನು ಜಾತಿ ಜನಗಣತಿಯನ್ನು ಬೆಂಬಲಿಸುತ್ತೇನೆ” ಎಂದಿದ್ದಾರೆ.

ಕೇಂದ್ರ ಸರ್ಕಾರ ಜಾತಿವಾರು ಜನಸಂಖ್ಯೆಯ ಬಗ್ಗೆ ತಿಳಿದಾಗ ಮಾತ್ರ ಸಂಪನ್ಮೂಲಗಳ ಸರಿಯಾದ ವಿತರಣೆ ಮತ್ತು ಯೋಜನೆಯ ಪ್ರಯೋಜನಗಳನ್ನು ಲೆಕ್ಕಾಚಾರ ಮಾಡಬಹುದು ಎಂದು ಚಿರಾಗ್ ಪಾಸ್ವಾನ್ ಪ್ರತಿಪಾದಿಸಿದ್ದಾರೆ.

ಕೇಂದ್ರ ಆಹಾರ ಸಂಸ್ಕರಣಾ ಕೈಗಾರಿಕೆಗಳ ಸಚಿವರಾಗಿರುವ ಪಾಸ್ವಾನ್ ಅವರು, ಈ ಹಿಂದೆ ಸರ್ಕಾರಿ ಉದ್ಯೋಗಗಳಲ್ಲಿ ಲ್ಯಾಟರಲ್ ಎಂಟ್ರಿ ನೇಮಕಾತಿಗಳ ವಿರುದ್ಧ ಮಾತನಾಡಿದ್ದರು, ನಾಗರಿಕ ಸೇವೆಗಳಲ್ಲಿ ಅಂತಹ ವ್ಯವಸ್ಥೆ ‘ಸಂಪೂರ್ಣ ತಪ್ಪು’ ಎಂದಿದ್ದರು. ಉತ್ತರ ಪ್ರದೇಶ ಮತ್ತು ಮಧ್ಯ ಪ್ರದೇಶ ಸರ್ಕಾರಗಳು ಕನ್ವರ್ ಯಾತ್ರೆ ಮಾರ್ಗದ ಅಂಗಡಿಗಳಲ್ಲಿ ಮಾಲೀಕರು ಮತ್ತು ಸಿಬ್ಬಂದಿ ಹೆಸರು ಪ್ರದರ್ಶಿಸುವಂತೆ ಸೂಚಿಸಿದ್ದ ಆದೇಶವನ್ನು ವಿರೋಧಿಸಿದ್ದರು.

ಪಾಸ್ವಾನ್ ಅವರ ಹೇಳಿಕೆಗಳು ಅವರು ಮೈತ್ರಿ ಮಾಡಿಕೊಂಡಿರುವ ಬಿಜೆಪಿಯ ವಿರುದ್ಧವಾಗಿದೆ. ಸಂಸತ್ತಿನಲ್ಲಿ, ರಾಷ್ಟ್ರವ್ಯಾಪಿ ಜಾತಿ ಗಣತಿಯನ್ನು ಪರಿಚಯಿಸುವ ಪ್ರತಿಪಕ್ಷಗಳ ಪ್ರಯತ್ನಗಳನ್ನು ಬಿಜೆಪಿ ಹಿಂದಿನಿಂದಲೂ ವಿರೋಧಿಸುತ್ತಿದೆ.

ಪ್ರತಿಪಕ್ಷಗಳು ಜಾತಿ ಜನಗಣತಿಯ ಅಗತ್ಯೆಯನ್ನು ಸಮರ್ಥಿಸಿಕೊಂಡಿವೆ. ಕಾಂಗ್ರೆಸ್ ಪಕ್ಷ ತನ್ನ ಪ್ರಣಾಳಿಕೆಯಲ್ಲೇ ಜಾತಿ ಜನಗಣತಿಯ ಭರವಸೆ ನೀಡಿತ್ತು. ಪ್ರಸ್ತುತ ಲೋಕಸಭೆಯ ಪ್ರತಿಪಕ್ಷ ನಾಯಕರಾಗಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಚುನಾವಣಾ ಭಾಷಣಗಳಲ್ಲಿ ಪದೇ ಪದೇ ಜಾತಿ ಜನಗಣತಿಯ ವಿಷಯ ಉಲ್ಲೇಖಿಸಿದ್ದರು.

ಇದನ್ನೂ ಓದಿ : ಒಡಿಶಾ: ಜಗಳದ ವೇಳೆ ಗಂಡನಿಗೆ ಥಳಿಸಿದ ಮಹಿಳೆ; ಸ್ಥಳೀಯರ ಪಂಚಾಯಿತಿ ಆದೇಶ ನಂತರ ತಲೆ ಬೋಳಿಸಿ ಬಹಿಷ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...