Homeಮುಖಪುಟಈರುಳ್ಳಿ ಬೆಳೆಗಾರರ ಪ್ರತಿಭಟನೆಗೆ ಬಿಜೆಪಿಯ ಮಿತ್ರ ಪಕ್ಷಗಳ ಬೆಂಬಲ: ಸರಕಾರದಿಂದ ಡ್ಯಾಮೇಜ್ ಕಂಟ್ರೋಲ್ ಗೆ ಯತ್ನ

ಈರುಳ್ಳಿ ಬೆಳೆಗಾರರ ಪ್ರತಿಭಟನೆಗೆ ಬಿಜೆಪಿಯ ಮಿತ್ರ ಪಕ್ಷಗಳ ಬೆಂಬಲ: ಸರಕಾರದಿಂದ ಡ್ಯಾಮೇಜ್ ಕಂಟ್ರೋಲ್ ಗೆ ಯತ್ನ

- Advertisement -
- Advertisement -

ಈರುಳ್ಳಿಯ ಮೇಲೆ 40% ರಫ್ತು ತೆರಿಗೆ ವಿಧಿಸಿದ ಕೇಂದ್ರದ ನಿರ್ಧಾರದ ವಿರುದ್ಧದ  ಪ್ರತಿಭಟನೆಯಲ್ಲಿ ಬಿಜೆಪಿಯ ಮಿತ್ರ ಪಕ್ಷಗಳು ಈರುಳ್ಳಿ ಬೆಳೆಯುವ ರೈತರಿಗೆ ಬೆಂಬಲಿಸಿದ್ದು, ಸರ್ಕಾರವು ಹಾನಿ ನಿಯಂತ್ರಣಕ್ಕೆ ಪ್ರಯತ್ನಿಸುತ್ತಿದೆ.

ಭಾರತದಲ್ಲಿ ಈರುಳ್ಳಿ ಬೆಲೆ ಏರಿಕೆಯು ನರೇಂದ್ರ ಮೋದಿಯವರ ಸರ್ಕಾರಕ್ಕೆ ಹೆಚ್ಚಿನ ಅಪಾಯವನ್ನುಂಟುಮಾಡುವ ಲಕ್ಷಣ ಕಂಡು ಬರುತ್ತಿದೆ. ಅದಕ್ಕಾಗಿ ಹಾನಿ ನಿಯಂತ್ರಣಕ್ಕೆ ಸರಕಾರ ಯತ್ನಿಸುತ್ತಿದೆ.

ಈರುಳ್ಳಿ ರಫ್ತಿನ ಮೇಲೆ ಶೇ 40 ರಫ್ತು ಸುಂಕ ವಿಧಿಸಿದ ಕೇಂದ್ರ ಸರ್ಕಾರದ ನಿರ್ಧಾರದ ವಿರುದ್ಧ ರೈತರು ಮತ್ತು ವ್ಯಾಪಾರಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ.

ಮಹಾರಾಷ್ಟ್ರದಲ್ಲಿ ಈ ನಿರ್ಧಾರ ವಿರೋಧಿಸಿ ರೈತರು ಪ್ರತಿಭಟನೆಗಿಳಿಯುವಂತೆ ಮಾಡಿದ್ದು,  ದೆಹಲಿ ಮತ್ತು ಮುಂಬೈ ಎರಡೂ ಕಡೆಗಳಲ್ಲೂ  ಮೈತ್ರಿ ಸರಕಾರ ಹಾನಿ ನಿಯಂತ್ರಣಕ್ಕಾಗಿ ಹರಸಾಹಸ ಪಡುತ್ತಿದೆ.

ಈ ಹಿನ್ನೆಲೆಯಲ್ಲಿ ಮಂಗಳವಾರದಿಂದ ಈರುಳ್ಳಿ ಸಂಗ್ರಹಣೆಯನ್ನು ಪುನರಾರಂಭಿಸುವುದಾಗಿ NAFED (ರಾಷ್ಟ್ರೀಯ ಸಹಕಾರಿ ಕೃಷಿ ಮಾರುಕಟ್ಟೆ ಒಕ್ಕೂಟ) ಘೋಷಣೆ ಮಾಡಿದೆ ಎನ್ನಲಾಗಿದೆ.

ಈರುಳ್ಳಿ ರಫ್ತಿನ ಮೇಲೆ ಶೇ 40ರಷ್ಟು ಸುಂಕ ವಿಧಿಸಿದ ನಂತರ ರೈತರ ಪ್ರತಿಭಟನೆ ಕುರಿತು ಡಿಸಿಎಂ ದೇವೇಂದ್ರ ಫಡ್ನವಿಸ್ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಕೇಂದ್ರ ವಾಣಿಜ್ಯ ಸಚಿವ ಪಿಯೂಷ್ ಗೋಯಲ್ ಅವರೊಂದಿಗೆ ಮಾತುಕತೆ ನಡೆಸಿದ್ದಾರೆ.

ರೈತರಿಗೆ ಪರಿಹಾರ ನೀಡಲು ಮತ್ತು ಅವರ ಸಮಸ್ಯೆಗಳನ್ನು ಪರಿಹರಿಸಲು ಸರ್ಕಾರವು ರೈತರಿಂದ ಈರುಳ್ಳಿ ಖರೀದಿಸಲು ನಿರ್ಧರಿಸಿದೆ. ಇದಕ್ಕಾಗಿ ನಾಸಿಕ್ ಮತ್ತು ಅಹಮದ್‌ನಗರದಲ್ಲಿ ಖರೀದಿ ಕೇಂದ್ರಗಳನ್ನು ತೆರೆಯಲಾಗುತ್ತದೆ ಎಂದು ಹೇಳಿದೆ. ರಾಜ್ಯದ ರೈತರಿಂದ ಎರಡು ಲಕ್ಷ ಮೆಟ್ರಿಕ್ ಟನ್ ಈರುಳ್ಳಿಯನ್ನು ಕ್ವಿಂಟಲ್‌ಗೆ 2,410 ರೂಪಾಯಿ ದರದಲ್ಲಿ ಸರ್ಕಾರ ಖರೀದಿಸಲಿದೆ ಎಂದು ಸರಕಾರ ಹೇಳಿದೆ.

ಮಹಾರಾಷ್ಟ್ರದ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಛಗನ್ ಭುಜಬಲ್ ಅವರು ದಿ ಇಂಡಿಯನ್ ಎಕ್ಸ್‌ಪ್ರೆಸ್‌ ಜೊತೆ ಮಾತನಾಡಿ, ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರನ್ನು ಭೇಟಿಯಾಗಿ  ಈ ಕುರಿತು ಚರ್ಚಿಸುವುದಾಗಿ ತಿಳಿಸಿದ್ದಾರೆ. ಶಿಂಧೆ ನೇತೃತ್ವದ ಸರ್ಕಾರಕ್ಕೆ ಸೇರಲು ಅಜಿತ್ ಪವಾರ್ ಅವರೊಂದಿಗೆ ಎನ್‌ಸಿಪಿ ತೊರೆದ ಎಂಟು ಶಾಸಕರಲ್ಲಿ ಒಬ್ಬರಾದ ಭುಜಬಲ್ ನಾಸಿಕ್ ಜಿಲ್ಲೆಯ ಯೋಲಾ ಕ್ಷೇತ್ರದ ಶಾಸಕರಾಗಿದ್ದಾರೆ. ಇದು ಈರುಳ್ಳಿ ಬೆಳೆಯುವ ಪ್ರಮುಖ ವಲಯವಾಗಿದೆ.

ನಾಸಿಕ್‌ನಿಂದ ಬಂದಿರುವ ಕೇಂದ್ರ ಸರಕಾರದ  ರಾಜ್ಯ ಖಾತೆ ಸಚಿವ ಭಾರತಿ ಪವಾರ್, ರೈತರು ಆತಂಕಪಡಬೇಡಿ ಎಂದು ಹೇಳುತ್ತಿದ್ದಾರೆ.

ಈರುಳ್ಳಿ ರಫ್ತಿನ ಮೇಲೆ ಶೇ 40 ರಫ್ತು ಸುಂಕ ವಿಧಿಸಿದ ಕೇಂದ್ರ ಸರ್ಕಾರದ ನಿರ್ಧಾರದ ವಿರುದ್ಧ ಬಿಜೆಪಿಯ ಮಿತ್ರಪಕ್ಷ ಮಾಜಿ ಸಚಿವ ಸದಾಭಾವು ಖೋಟ್ ನೇತೃತ್ವದ  ರೈತ ಕ್ರಾಂತಿ ಸಂಘಟನೆ ರೈತರ ಪ್ರತಿಭಟನೆಗೆ ಬೆಂಬಲವನ್ನು ವ್ಯಕ್ತಪಡಿಸಿದೆ. ಇನ್ನೆರಡು ದಿನಗಳಲ್ಲಿ ಸರ್ಕಾರ ಈ ನಿರ್ಧಾರವನ್ನು ಹಿಂಪಡೆಯದಿದ್ದರೆ ಮುಂಬೈಗೆ ಟ್ರ್ಯಾಕ್ಟರ್ ರ್ಯಾಲಿಯನ್ನು ಪ್ರಾರಂಭಿಸುವುದಾಗಿ ಸಂಘಟನೆಯ ನಾಸಿಕ್ ಮುಖ್ಯಸ್ಥ ದೀಪಕ್ ಪಗಾರ್ ಎಚ್ಚರಿಕೆ ನೀಡಿದ್ದಾರೆ.

ಇದನ್ನು ಓದಿ:ಮಧ್ಯಪ್ರದೇಶ: ಜಾತಿ ಗಣತಿ ಸೇರಿ 6 ಭರವಸೆ ಘೋಷಿಸಿದ ಮಲ್ಲಿಕಾರ್ಜುನ ಖರ್ಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಹಲ್ಗಾಮ್ ದಾಳಿ ಕುರಿತ ಪೋಸ್ಟ್‌: ಜಾನಪದ ಗಾಯಕಿ ನೇಹಾ ಸಿಂಗ್ ರಾಥೋಡ್‌ಗೆ ನಿರೀಕ್ಷಣಾ ಜಾಮೀನು ನೀಡಿದ ಸುಪ್ರೀಂ ಕೋರ್ಟ್

ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ಕುರಿತು ಸಾಮಾಜಿಕ ಮಾಧ್ಯಮ ಪೋಸ್ಟ್‌ಗೆ ಸಂಬಂಧಿಸಿದಂತೆ ಜಾನಪದ ಗಾಯಕಿ ನೇಹಾ ಸಿಂಗ್ ರಾಥೋಡ್ ಅವರ ವಿರುದ್ಧ ದಾಖಲಾಗಿದ್ದ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಂಗಳವಾರ ಅವರಿಗೆ ನಿರೀಕ್ಷಣಾ ಜಾಮೀನು...

ಮಧ್ಯಪ್ರಾಚ್ಯ ಉದ್ವಿಗ್ನತೆ: ಎಲ್‌ಪಿಜಿ ಕೊರತೆಗೆ ಮುಂಬೈನಲ್ಲಿ ಶೇ. 20 ರಷ್ಟು ಹೋಟೆಲ್‌, ರೆಸ್ಟೋರೆಂಟ್‌ ಬಂದ್: ಬೆಂಗಳೂರು, ಚೆನ್ನೈನಲ್ಲೂ ಸಮಸ್ಯೆ

ಪಶ್ಚಿಮ ಏಷ್ಯಾ ಸಂಘರ್ಷ ಹತ್ತು ದಿನಗಳಿಗೂ ಹೆಚ್ಚು ಕಾಲ ಮುಂದುವರಿದಿರುವುದರಿಂದ, ಭಾರತದ ಹೋಟೆಲ್‌ಗಳು ಮತ್ತು ಇತರ ಉಧ್ಯಮಗಳು ಎಲ್‌ಪಿಜಿ ಪೂರೈಕೆ ಬಿಕ್ಕಟ್ಟನ್ನು ಎದುರಿಸುತ್ತಿವೆ. ಬೆಂಗಳೂರಿನ ನಂತರ, ಚೆನ್ನೈ ಮತ್ತು ಮುಂಬೈನಂತಹ ಇತರ ನಗರಗಳು ಸಹ...

‘ಕೋವಿಡ್ ಲಸಿಕೆ ಪೀಡಿತರಿಗಾಗಿ ಪರಿಹಾರ ನೀತಿ ಅಳವಡಿಸಿಕೊಳ್ಳಿ..’; ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕೋವಿಡ್ ವಿರುದ್ಧ ರೋಗನಿರೋಧಕ ಶಕ್ತಿಯಾಗಿ ಲಸಿಕೆ ನೀಡಿದ ನಂತರ ಉಂಟಾಗುವ ಪ್ರತಿಕೂಲ ಪರಿಣಾಮಗಳ ವೈಜ್ಞಾನಿಕ ಮೌಲ್ಯಮಾಪನಕ್ಕಾಗಿ ಅಸ್ತಿತ್ವದಲ್ಲಿರುವ ಕಾರ್ಯವಿಧಾನವನ್ನು ಮುಂದುವರಿಸಬೇಕೆಂದು ಸುಪ್ರೀಂ ಕೋರ್ಟ್ ಮಂಗಳವಾರ ಆದೇಶಿಸಿದೆ. ಅದೇ ಸಮಯದಲ್ಲಿ, ಕೋವಿಡ್ -19 ವ್ಯಾಕ್ಸಿನೇಷನ್ ನಂತರದ...

ಮೇಘಾಲಯ|ಜಿಲ್ಲಾ ಪರಿಷತ್ ಚುನಾವಣೆಯಲ್ಲಿ ವಿವಾದಾತ್ಮಕ ಅಧಿಸೂಚನೆ: ಪಶ್ಚಿಮ ಗಾರೋ ಬೆಟ್ಟಗಳಲ್ಲಿ ಭುಗಿಲೆದ್ದ ಹಿಂಸಾಚಾರ; ಇಬ್ಬರ ಸಾವು

ಗುವಾಹಟಿ: ಏಪ್ರಿಲ್ 10 ರಂದು ನಡೆಯಲಿರುವ ಗಾರೋ ಹಿಲ್ಸ್ ಸ್ವಾಯತ್ತ ಜಿಲ್ಲಾ ಮಂಡಳಿ (ಜಿಎಚ್‌ಎಡಿಸಿ) ಚುನಾವಣೆಯಲ್ಲಿ ಬುಡಕಟ್ಟು ಜನಾಂಗದವರಲ್ಲದವರು ಸ್ಪರ್ಧಿಸುವುದನ್ನು ನಿಷೇಧಿಸುವ ವಿವಾದಾತ್ಮಕ ಅಧಿಸೂಚನೆಯನ್ನು ವಿರೋಧಿಸಿ ಮೇಘಾಲಯದ ಪಶ್ಚಿಮ ಗಾರೋ ಹಿಲ್ಸ್ ಜಿಲ್ಲೆಯಲ್ಲಿ...

ಸಂವಿಧಾನ, ಸದನದ ಘನತೆ ಉಳಿಸಲು ಲೋಕಸಭಾ ಸ್ಪೀಕರ್ ವಿರುದ್ಧ ನಿರ್ಣಯ: ಕಾಂಗ್ರೆಸ್ ಸಂಸದ ಗೊಗೊಯ್

ಸ್ಪೀಕರ್ ಓಂ ಬಿರ್ಲಾ ಪಕ್ಷಪಾತಿ ವರ್ತನೆ ಹೊಂದಿದ್ದಾರೆ. ಹಾಗಾಗಿ, ಸಂವಿಧಾನ ಉಳಿಸಲು ವಿರೋಧ ಪಕ್ಷವು ಅವರನ್ನು ಪದಚ್ಯುತಗೊಳಿಸುವ ನಿರ್ಣಯ ತರಬೇಕಾಯಿತು ಎಂದು ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಮಂಗಳವಾರ (ಮಾ.10) ಲೋಕಸಭೆಯಲ್ಲಿ ಹೇಳಿದರು....

ನಿರಂತರ ಎಲ್‌ಪಿಜಿ ಪೂರೈಕೆ ಖಚಿತಪಡಿಸಿಕೊಳ್ಳಲು ‘ಅಗತ್ಯ ಸರಕು ಕಾಯ್ದೆ’ ಜಾರಿಗೆ ತಂದ ಕೇಂದ್ರ

ಹೋಟೆಲ್‌ ಮತ್ತು ರೆಸ್ಟೋರೆಂಟ್‌ಗಳು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆ ಕುರಿತು ದೂರು ನೀಡಿದ ನಂತರ, ದೇಶೀಯ ಅಡುಗೆ ಅನಿಲದ ನಿರಂತರ ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ಸರ್ಕಾರವು 'ಅಗತ್ಯ ಸರಕು ಕಾಯ್ದೆ'ಯನ್ನು ಜಾರಿಗೆ ತಂದಿದೆ ಎಂದು...

‘ಯುದ್ಧ ಯಾವಾಗ ಕೊನೆಗೊಳ್ಳುತ್ತದೆ ಎಂಬುದನ್ನು ಇರಾನ್ ನಿರ್ಧರಿಸುತ್ತದೆ’: ಟ್ರಂಪ್ ‘ಅಲ್ಪಾವಧಿಯ ಸಂಘರ್ಷ’ ಹೇಳಿಕೆಗೆ ಇರಾನ್ ತಿರುಗೇಟು 

ಟೆಹ್ರಾನ್: ಇರಾನ್‌ನಲ್ಲಿ ಯುದ್ಧವನ್ನು ಕೊನೆಗೊಳಿಸುವ ಬಗ್ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಟೆಹ್ರಾನ್ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದು, ಅಮೆರಿಕ ಮತ್ತು ಇಸ್ರೇಲಿ ಗುರಿಗಳ ವಿರುದ್ಧದ ಮಿಲಿಟರಿ ಕ್ರಮಗಳು ಯಾವಾಗ ನಿಂತವು ಎಂಬುದನ್ನು...

ಮಹಿಳಾ ಮೀಸಲಾತಿ ಮಸೂದೆ; ತ್ವರಿತ ಅನುಷ್ಠಾನಕ್ಕೆ ವಿಪಕ್ಷಗಳ ಅಭಿಪ್ರಾಯ ಕೇಳಿದ ಕೇಂದ್ರ ಸರ್ಕಾರ

ನವದೆಹಲಿ: ಮಹಿಳಾ ಮೀಸಲಾತಿ ಕಾನೂನಿನ ಅನುಷ್ಠಾನವನ್ನು ತ್ವರಿತಗೊಳಿಸುವ ಪ್ರಯತ್ನದಲ್ಲಿ, ಲೋಕಸಭೆ ಮತ್ತು ರಾಜ್ಯ ಶಾಸಕಾಂಗ ಸಭೆಗಳಲ್ಲಿ ಮಹಿಳೆಯರಿಗೆ ಶೇ 33 ರಷ್ಟು ಮೀಸಲಾತಿ ನೀಡುವ ಶಾಸನವನ್ನು ತಿದ್ದುಪಡಿ ಮಾಡುವ ಪ್ರಸ್ತಾಪದ ಕುರಿತು ಅಭಿಪ್ರಾಯಗಳನ್ನು...

ಕೋಲ್ಕತ್ತಾ : ಕಾಳಿಘಾಟ್ ಬಳಿಕ ದಕ್ಷಿಣೇಶ್ವರದಲ್ಲೂ ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ‘ಗೋ ಬ್ಯಾಕ್ ಘೋಷಣೆ’

ಕಾಳಿಘಾಟ್ ಬಳಿಕ ಕೋಲ್ಕತ್ತಾದ ದಕ್ಷಿಣೇಶ್ವರ ದೇವಸ್ಥಾನದಲ್ಲೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ದ 'ಗೋ ಬ್ಯಾಕ್ ಘೋಷಣೆಗಳು' ಕೇಳಿ ಬಂದಿವೆ. ಮಂಗಳವಾರ (ಮಾ.10) ಬೆಳಿಗ್ಗೆ ಜ್ಞಾನೇಶ್ ಕುಮಾರ್ ದಕ್ಷಿಣೇಶ್ವರ ಕಾಳಿ ದೇವಸ್ಥಾನಕ್ಕೆ ಭೇಟಿ...

ಉತ್ತರ ಪ್ರದೇಶ| ಹೋಳಿ ಹಬ್ಬದ ಶುಭ ಕೋರಿದ ದಲಿತ ಯುವಕನನ್ನು ಕೊಂದ ಪ್ರಬಲಜಾತಿ ಕುಟುಂಬ

ಉತ್ತರ ಪ್ರದೇಶದ ಲಕ್ನೋದ ದುಬಗ್ಗಾ ಪ್ರದೇಶದಲ್ಲಿ, ಹೋಳಿ ಹಬ್ಬದ ಸಂದರ್ಭದಲ್ಲಿ ಶುಭಕೋರಿದ 22 ವರ್ಷದ ದಲಿತ ವ್ಯಕ್ತಿಯನ್ನು ಬ್ರಾಹ್ಮಣ ಕುಟುಂಬದ ಸದಸ್ಯರು ಇರಿದು ಕೊಂದಿದ್ದಾರೆ ಎಂದು ಆರೋಪಿಸಲಾಗಿದೆ. ಈ ಘಟನೆ ಮಾರ್ಚ್ 4...