Homeಮುಖಪುಟಈರುಳ್ಳಿ ಬೆಳೆಗಾರರ ಪ್ರತಿಭಟನೆಗೆ ಬಿಜೆಪಿಯ ಮಿತ್ರ ಪಕ್ಷಗಳ ಬೆಂಬಲ: ಸರಕಾರದಿಂದ ಡ್ಯಾಮೇಜ್ ಕಂಟ್ರೋಲ್ ಗೆ ಯತ್ನ

ಈರುಳ್ಳಿ ಬೆಳೆಗಾರರ ಪ್ರತಿಭಟನೆಗೆ ಬಿಜೆಪಿಯ ಮಿತ್ರ ಪಕ್ಷಗಳ ಬೆಂಬಲ: ಸರಕಾರದಿಂದ ಡ್ಯಾಮೇಜ್ ಕಂಟ್ರೋಲ್ ಗೆ ಯತ್ನ

- Advertisement -
- Advertisement -

ಈರುಳ್ಳಿಯ ಮೇಲೆ 40% ರಫ್ತು ತೆರಿಗೆ ವಿಧಿಸಿದ ಕೇಂದ್ರದ ನಿರ್ಧಾರದ ವಿರುದ್ಧದ  ಪ್ರತಿಭಟನೆಯಲ್ಲಿ ಬಿಜೆಪಿಯ ಮಿತ್ರ ಪಕ್ಷಗಳು ಈರುಳ್ಳಿ ಬೆಳೆಯುವ ರೈತರಿಗೆ ಬೆಂಬಲಿಸಿದ್ದು, ಸರ್ಕಾರವು ಹಾನಿ ನಿಯಂತ್ರಣಕ್ಕೆ ಪ್ರಯತ್ನಿಸುತ್ತಿದೆ.

ಭಾರತದಲ್ಲಿ ಈರುಳ್ಳಿ ಬೆಲೆ ಏರಿಕೆಯು ನರೇಂದ್ರ ಮೋದಿಯವರ ಸರ್ಕಾರಕ್ಕೆ ಹೆಚ್ಚಿನ ಅಪಾಯವನ್ನುಂಟುಮಾಡುವ ಲಕ್ಷಣ ಕಂಡು ಬರುತ್ತಿದೆ. ಅದಕ್ಕಾಗಿ ಹಾನಿ ನಿಯಂತ್ರಣಕ್ಕೆ ಸರಕಾರ ಯತ್ನಿಸುತ್ತಿದೆ.

ಈರುಳ್ಳಿ ರಫ್ತಿನ ಮೇಲೆ ಶೇ 40 ರಫ್ತು ಸುಂಕ ವಿಧಿಸಿದ ಕೇಂದ್ರ ಸರ್ಕಾರದ ನಿರ್ಧಾರದ ವಿರುದ್ಧ ರೈತರು ಮತ್ತು ವ್ಯಾಪಾರಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ.

ಮಹಾರಾಷ್ಟ್ರದಲ್ಲಿ ಈ ನಿರ್ಧಾರ ವಿರೋಧಿಸಿ ರೈತರು ಪ್ರತಿಭಟನೆಗಿಳಿಯುವಂತೆ ಮಾಡಿದ್ದು,  ದೆಹಲಿ ಮತ್ತು ಮುಂಬೈ ಎರಡೂ ಕಡೆಗಳಲ್ಲೂ  ಮೈತ್ರಿ ಸರಕಾರ ಹಾನಿ ನಿಯಂತ್ರಣಕ್ಕಾಗಿ ಹರಸಾಹಸ ಪಡುತ್ತಿದೆ.

ಈ ಹಿನ್ನೆಲೆಯಲ್ಲಿ ಮಂಗಳವಾರದಿಂದ ಈರುಳ್ಳಿ ಸಂಗ್ರಹಣೆಯನ್ನು ಪುನರಾರಂಭಿಸುವುದಾಗಿ NAFED (ರಾಷ್ಟ್ರೀಯ ಸಹಕಾರಿ ಕೃಷಿ ಮಾರುಕಟ್ಟೆ ಒಕ್ಕೂಟ) ಘೋಷಣೆ ಮಾಡಿದೆ ಎನ್ನಲಾಗಿದೆ.

ಈರುಳ್ಳಿ ರಫ್ತಿನ ಮೇಲೆ ಶೇ 40ರಷ್ಟು ಸುಂಕ ವಿಧಿಸಿದ ನಂತರ ರೈತರ ಪ್ರತಿಭಟನೆ ಕುರಿತು ಡಿಸಿಎಂ ದೇವೇಂದ್ರ ಫಡ್ನವಿಸ್ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಕೇಂದ್ರ ವಾಣಿಜ್ಯ ಸಚಿವ ಪಿಯೂಷ್ ಗೋಯಲ್ ಅವರೊಂದಿಗೆ ಮಾತುಕತೆ ನಡೆಸಿದ್ದಾರೆ.

ರೈತರಿಗೆ ಪರಿಹಾರ ನೀಡಲು ಮತ್ತು ಅವರ ಸಮಸ್ಯೆಗಳನ್ನು ಪರಿಹರಿಸಲು ಸರ್ಕಾರವು ರೈತರಿಂದ ಈರುಳ್ಳಿ ಖರೀದಿಸಲು ನಿರ್ಧರಿಸಿದೆ. ಇದಕ್ಕಾಗಿ ನಾಸಿಕ್ ಮತ್ತು ಅಹಮದ್‌ನಗರದಲ್ಲಿ ಖರೀದಿ ಕೇಂದ್ರಗಳನ್ನು ತೆರೆಯಲಾಗುತ್ತದೆ ಎಂದು ಹೇಳಿದೆ. ರಾಜ್ಯದ ರೈತರಿಂದ ಎರಡು ಲಕ್ಷ ಮೆಟ್ರಿಕ್ ಟನ್ ಈರುಳ್ಳಿಯನ್ನು ಕ್ವಿಂಟಲ್‌ಗೆ 2,410 ರೂಪಾಯಿ ದರದಲ್ಲಿ ಸರ್ಕಾರ ಖರೀದಿಸಲಿದೆ ಎಂದು ಸರಕಾರ ಹೇಳಿದೆ.

ಮಹಾರಾಷ್ಟ್ರದ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಛಗನ್ ಭುಜಬಲ್ ಅವರು ದಿ ಇಂಡಿಯನ್ ಎಕ್ಸ್‌ಪ್ರೆಸ್‌ ಜೊತೆ ಮಾತನಾಡಿ, ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರನ್ನು ಭೇಟಿಯಾಗಿ  ಈ ಕುರಿತು ಚರ್ಚಿಸುವುದಾಗಿ ತಿಳಿಸಿದ್ದಾರೆ. ಶಿಂಧೆ ನೇತೃತ್ವದ ಸರ್ಕಾರಕ್ಕೆ ಸೇರಲು ಅಜಿತ್ ಪವಾರ್ ಅವರೊಂದಿಗೆ ಎನ್‌ಸಿಪಿ ತೊರೆದ ಎಂಟು ಶಾಸಕರಲ್ಲಿ ಒಬ್ಬರಾದ ಭುಜಬಲ್ ನಾಸಿಕ್ ಜಿಲ್ಲೆಯ ಯೋಲಾ ಕ್ಷೇತ್ರದ ಶಾಸಕರಾಗಿದ್ದಾರೆ. ಇದು ಈರುಳ್ಳಿ ಬೆಳೆಯುವ ಪ್ರಮುಖ ವಲಯವಾಗಿದೆ.

ನಾಸಿಕ್‌ನಿಂದ ಬಂದಿರುವ ಕೇಂದ್ರ ಸರಕಾರದ  ರಾಜ್ಯ ಖಾತೆ ಸಚಿವ ಭಾರತಿ ಪವಾರ್, ರೈತರು ಆತಂಕಪಡಬೇಡಿ ಎಂದು ಹೇಳುತ್ತಿದ್ದಾರೆ.

ಈರುಳ್ಳಿ ರಫ್ತಿನ ಮೇಲೆ ಶೇ 40 ರಫ್ತು ಸುಂಕ ವಿಧಿಸಿದ ಕೇಂದ್ರ ಸರ್ಕಾರದ ನಿರ್ಧಾರದ ವಿರುದ್ಧ ಬಿಜೆಪಿಯ ಮಿತ್ರಪಕ್ಷ ಮಾಜಿ ಸಚಿವ ಸದಾಭಾವು ಖೋಟ್ ನೇತೃತ್ವದ  ರೈತ ಕ್ರಾಂತಿ ಸಂಘಟನೆ ರೈತರ ಪ್ರತಿಭಟನೆಗೆ ಬೆಂಬಲವನ್ನು ವ್ಯಕ್ತಪಡಿಸಿದೆ. ಇನ್ನೆರಡು ದಿನಗಳಲ್ಲಿ ಸರ್ಕಾರ ಈ ನಿರ್ಧಾರವನ್ನು ಹಿಂಪಡೆಯದಿದ್ದರೆ ಮುಂಬೈಗೆ ಟ್ರ್ಯಾಕ್ಟರ್ ರ್ಯಾಲಿಯನ್ನು ಪ್ರಾರಂಭಿಸುವುದಾಗಿ ಸಂಘಟನೆಯ ನಾಸಿಕ್ ಮುಖ್ಯಸ್ಥ ದೀಪಕ್ ಪಗಾರ್ ಎಚ್ಚರಿಕೆ ನೀಡಿದ್ದಾರೆ.

ಇದನ್ನು ಓದಿ:ಮಧ್ಯಪ್ರದೇಶ: ಜಾತಿ ಗಣತಿ ಸೇರಿ 6 ಭರವಸೆ ಘೋಷಿಸಿದ ಮಲ್ಲಿಕಾರ್ಜುನ ಖರ್ಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...

“ಆರೆಸ್ಸೆಸ್‌ ದೇಶಕ್ಕೆ ವಂಚಿಸುತ್ತಿದೆ” -ಪ್ರಿಯಾಂಕ್‌ ಖರ್ಗೆ ಪ್ರಶ್ನೆ

ಆರೆಸ್ಸೆಸ್‌ ಕುರಿತು ನಿರಂತರವಾಗಿ ಪ್ರಶ್ನೆಗಳನ್ನು ಕೇಳುತ್ತಿರುವ ಗ್ರಾಮೀಣಾಭಿವೃದ್ದಿ ಪಂಚಾಯತ್‌ ರಾಜ್‌ ಇಲಾಖೆ ಸಚಿವ ಪ್ರಿಯಾಂಕ್‌ ಖರ್ಗೆ ಮತ್ತೊಮ್ಮೆ ಆರೆಸ್ಸೆಸ್‌ ದೇಶದ ಆರ್ಥಿಕತೆಗೆ ವಂಚಿಸುತ್ತಿದೆ ಎಂದು ಆರೋಪಿಸಿ ಟ್ವೀಟ್‌ ಮಾಡಿದ್ದಾರೆ. ಪ್ರಿಯಾಂಕ್‌ ಖರ್ಗೆ ಟ್ವೀಟ್‌...

‘ನರೇಗಾ’ ಹೆಸರು ಬದಲಾವಣೆ, ಕೆಲಸದ ದಿನಗಳು ಹೆಚ್ಚಳಕ್ಕೆ ಕೇಂದ್ರ ಸಂಪುಟ ಅನುಮೋದನೆ

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ-ನರೇಗಾ)ಯನ್ನು 'ಪೂಜ್ಯ ಬಾಪು ಗ್ರಾಮೀಣ ರೋಜ್‌ಗಾರ್ ಯೋಜನೆ' ಎಂದು ಮರುನಾಮಕರಣ ಮಾಡಲು ಕೇಂದ್ರ ಸಚಿವ ಸಂಪುಟ ಶುಕ್ರವಾರ (ಡಿಸೆಂಬರ್ 12) ಅನುಮೋದನೆ ನೀಡಿದೆ. ಸರ್ಕಾರ...

ಅಖ್ಲಾಕ್‌ ಗುಂಪು ಹತ್ಯೆ ಪ್ರಕರಣ: ಬಿಜೆಪಿ ಸರ್ಕಾರದಿಂದ ಆರೋಪಿಗಳ ಆರೋಪ ಹಿಂಪಡೆಯಲು ಅರ್ಜಿ ಸಲ್ಲಿಕೆ

2015ರಲ್ಲಿ ಮಹಮ್ಮದ್‌ ಅಖ್ಲಾಕ್‌ ತನ್ನ ಮನೆಯಲ್ಲಿ ದನ ಮಾಂಸ ಶೇಖರಿಸಿದ್ದಾರೆ ಎಂದು ಆರೋಪಿಸಿ ಅವರನ್ನು ಗುಂಪು ಹಲ್ಲೆ ನಡೆಸಿ ಕೊಲೆ ಮಾಡಲಾಗಿತ್ತು. ಈ ಪ್ರಕರಣ ದೇಶದೆಲ್ಲೆಡೆ ಗುಂಪು ಹಲ್ಲೆಗಳ ವಿರುದ್ದ (ಮಾಬ್‌ ಲಿಂಚಿಂಗ್‌)...