Homeಮುಖಪುಟಈರುಳ್ಳಿ ಬೆಳೆಗಾರರ ಪ್ರತಿಭಟನೆಗೆ ಬಿಜೆಪಿಯ ಮಿತ್ರ ಪಕ್ಷಗಳ ಬೆಂಬಲ: ಸರಕಾರದಿಂದ ಡ್ಯಾಮೇಜ್ ಕಂಟ್ರೋಲ್ ಗೆ ಯತ್ನ

ಈರುಳ್ಳಿ ಬೆಳೆಗಾರರ ಪ್ರತಿಭಟನೆಗೆ ಬಿಜೆಪಿಯ ಮಿತ್ರ ಪಕ್ಷಗಳ ಬೆಂಬಲ: ಸರಕಾರದಿಂದ ಡ್ಯಾಮೇಜ್ ಕಂಟ್ರೋಲ್ ಗೆ ಯತ್ನ

- Advertisement -
- Advertisement -

ಈರುಳ್ಳಿಯ ಮೇಲೆ 40% ರಫ್ತು ತೆರಿಗೆ ವಿಧಿಸಿದ ಕೇಂದ್ರದ ನಿರ್ಧಾರದ ವಿರುದ್ಧದ  ಪ್ರತಿಭಟನೆಯಲ್ಲಿ ಬಿಜೆಪಿಯ ಮಿತ್ರ ಪಕ್ಷಗಳು ಈರುಳ್ಳಿ ಬೆಳೆಯುವ ರೈತರಿಗೆ ಬೆಂಬಲಿಸಿದ್ದು, ಸರ್ಕಾರವು ಹಾನಿ ನಿಯಂತ್ರಣಕ್ಕೆ ಪ್ರಯತ್ನಿಸುತ್ತಿದೆ.

ಭಾರತದಲ್ಲಿ ಈರುಳ್ಳಿ ಬೆಲೆ ಏರಿಕೆಯು ನರೇಂದ್ರ ಮೋದಿಯವರ ಸರ್ಕಾರಕ್ಕೆ ಹೆಚ್ಚಿನ ಅಪಾಯವನ್ನುಂಟುಮಾಡುವ ಲಕ್ಷಣ ಕಂಡು ಬರುತ್ತಿದೆ. ಅದಕ್ಕಾಗಿ ಹಾನಿ ನಿಯಂತ್ರಣಕ್ಕೆ ಸರಕಾರ ಯತ್ನಿಸುತ್ತಿದೆ.

ಈರುಳ್ಳಿ ರಫ್ತಿನ ಮೇಲೆ ಶೇ 40 ರಫ್ತು ಸುಂಕ ವಿಧಿಸಿದ ಕೇಂದ್ರ ಸರ್ಕಾರದ ನಿರ್ಧಾರದ ವಿರುದ್ಧ ರೈತರು ಮತ್ತು ವ್ಯಾಪಾರಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ.

ಮಹಾರಾಷ್ಟ್ರದಲ್ಲಿ ಈ ನಿರ್ಧಾರ ವಿರೋಧಿಸಿ ರೈತರು ಪ್ರತಿಭಟನೆಗಿಳಿಯುವಂತೆ ಮಾಡಿದ್ದು,  ದೆಹಲಿ ಮತ್ತು ಮುಂಬೈ ಎರಡೂ ಕಡೆಗಳಲ್ಲೂ  ಮೈತ್ರಿ ಸರಕಾರ ಹಾನಿ ನಿಯಂತ್ರಣಕ್ಕಾಗಿ ಹರಸಾಹಸ ಪಡುತ್ತಿದೆ.

ಈ ಹಿನ್ನೆಲೆಯಲ್ಲಿ ಮಂಗಳವಾರದಿಂದ ಈರುಳ್ಳಿ ಸಂಗ್ರಹಣೆಯನ್ನು ಪುನರಾರಂಭಿಸುವುದಾಗಿ NAFED (ರಾಷ್ಟ್ರೀಯ ಸಹಕಾರಿ ಕೃಷಿ ಮಾರುಕಟ್ಟೆ ಒಕ್ಕೂಟ) ಘೋಷಣೆ ಮಾಡಿದೆ ಎನ್ನಲಾಗಿದೆ.

ಈರುಳ್ಳಿ ರಫ್ತಿನ ಮೇಲೆ ಶೇ 40ರಷ್ಟು ಸುಂಕ ವಿಧಿಸಿದ ನಂತರ ರೈತರ ಪ್ರತಿಭಟನೆ ಕುರಿತು ಡಿಸಿಎಂ ದೇವೇಂದ್ರ ಫಡ್ನವಿಸ್ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಕೇಂದ್ರ ವಾಣಿಜ್ಯ ಸಚಿವ ಪಿಯೂಷ್ ಗೋಯಲ್ ಅವರೊಂದಿಗೆ ಮಾತುಕತೆ ನಡೆಸಿದ್ದಾರೆ.

ರೈತರಿಗೆ ಪರಿಹಾರ ನೀಡಲು ಮತ್ತು ಅವರ ಸಮಸ್ಯೆಗಳನ್ನು ಪರಿಹರಿಸಲು ಸರ್ಕಾರವು ರೈತರಿಂದ ಈರುಳ್ಳಿ ಖರೀದಿಸಲು ನಿರ್ಧರಿಸಿದೆ. ಇದಕ್ಕಾಗಿ ನಾಸಿಕ್ ಮತ್ತು ಅಹಮದ್‌ನಗರದಲ್ಲಿ ಖರೀದಿ ಕೇಂದ್ರಗಳನ್ನು ತೆರೆಯಲಾಗುತ್ತದೆ ಎಂದು ಹೇಳಿದೆ. ರಾಜ್ಯದ ರೈತರಿಂದ ಎರಡು ಲಕ್ಷ ಮೆಟ್ರಿಕ್ ಟನ್ ಈರುಳ್ಳಿಯನ್ನು ಕ್ವಿಂಟಲ್‌ಗೆ 2,410 ರೂಪಾಯಿ ದರದಲ್ಲಿ ಸರ್ಕಾರ ಖರೀದಿಸಲಿದೆ ಎಂದು ಸರಕಾರ ಹೇಳಿದೆ.

ಮಹಾರಾಷ್ಟ್ರದ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಛಗನ್ ಭುಜಬಲ್ ಅವರು ದಿ ಇಂಡಿಯನ್ ಎಕ್ಸ್‌ಪ್ರೆಸ್‌ ಜೊತೆ ಮಾತನಾಡಿ, ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರನ್ನು ಭೇಟಿಯಾಗಿ  ಈ ಕುರಿತು ಚರ್ಚಿಸುವುದಾಗಿ ತಿಳಿಸಿದ್ದಾರೆ. ಶಿಂಧೆ ನೇತೃತ್ವದ ಸರ್ಕಾರಕ್ಕೆ ಸೇರಲು ಅಜಿತ್ ಪವಾರ್ ಅವರೊಂದಿಗೆ ಎನ್‌ಸಿಪಿ ತೊರೆದ ಎಂಟು ಶಾಸಕರಲ್ಲಿ ಒಬ್ಬರಾದ ಭುಜಬಲ್ ನಾಸಿಕ್ ಜಿಲ್ಲೆಯ ಯೋಲಾ ಕ್ಷೇತ್ರದ ಶಾಸಕರಾಗಿದ್ದಾರೆ. ಇದು ಈರುಳ್ಳಿ ಬೆಳೆಯುವ ಪ್ರಮುಖ ವಲಯವಾಗಿದೆ.

ನಾಸಿಕ್‌ನಿಂದ ಬಂದಿರುವ ಕೇಂದ್ರ ಸರಕಾರದ  ರಾಜ್ಯ ಖಾತೆ ಸಚಿವ ಭಾರತಿ ಪವಾರ್, ರೈತರು ಆತಂಕಪಡಬೇಡಿ ಎಂದು ಹೇಳುತ್ತಿದ್ದಾರೆ.

ಈರುಳ್ಳಿ ರಫ್ತಿನ ಮೇಲೆ ಶೇ 40 ರಫ್ತು ಸುಂಕ ವಿಧಿಸಿದ ಕೇಂದ್ರ ಸರ್ಕಾರದ ನಿರ್ಧಾರದ ವಿರುದ್ಧ ಬಿಜೆಪಿಯ ಮಿತ್ರಪಕ್ಷ ಮಾಜಿ ಸಚಿವ ಸದಾಭಾವು ಖೋಟ್ ನೇತೃತ್ವದ  ರೈತ ಕ್ರಾಂತಿ ಸಂಘಟನೆ ರೈತರ ಪ್ರತಿಭಟನೆಗೆ ಬೆಂಬಲವನ್ನು ವ್ಯಕ್ತಪಡಿಸಿದೆ. ಇನ್ನೆರಡು ದಿನಗಳಲ್ಲಿ ಸರ್ಕಾರ ಈ ನಿರ್ಧಾರವನ್ನು ಹಿಂಪಡೆಯದಿದ್ದರೆ ಮುಂಬೈಗೆ ಟ್ರ್ಯಾಕ್ಟರ್ ರ್ಯಾಲಿಯನ್ನು ಪ್ರಾರಂಭಿಸುವುದಾಗಿ ಸಂಘಟನೆಯ ನಾಸಿಕ್ ಮುಖ್ಯಸ್ಥ ದೀಪಕ್ ಪಗಾರ್ ಎಚ್ಚರಿಕೆ ನೀಡಿದ್ದಾರೆ.

ಇದನ್ನು ಓದಿ:ಮಧ್ಯಪ್ರದೇಶ: ಜಾತಿ ಗಣತಿ ಸೇರಿ 6 ಭರವಸೆ ಘೋಷಿಸಿದ ಮಲ್ಲಿಕಾರ್ಜುನ ಖರ್ಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...

ಮಾನವೀಯತೆ ಮರೆತ ಪಂಚಾಯಿತಿ: 3 ವರ್ಷದ ಮಗುವಿನ ಮೇಲಿನ ಅತ್ಯಾಚಾರ ಪ್ರಕರಣ ಮುಚ್ಚಿಹಾಕಲು 1 ಲಕ್ಷ ರೂ.ದಂಡ, ಆ ಹಣದಲ್ಲೇ ಮದ್ಯದ ಪಾರ್ಟಿ!

ರಾಂಚಿ: ಜಾರ್ಖಂಡ್‌ನ ಗುಮ್ಲಾ ಜಿಲ್ಲೆಯ ಘಾಗ್ರಾ ಪೊಲೀಸ್ ಠಾಣಾ ವ್ಯಾಪ್ತಿಯ ಪಾಲ್ಮಾ ಗ್ರಾಮದಲ್ಲಿ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ವಿಕೃತ ಘಟನೆಯೊಂದು ಬೆಳಕಿಗೆ ಬಂದಿದೆ. ಮೂರು ವರ್ಷದ ಮಗುವಿನ ಮೇಲೆ ನಡೆದ ಭೀಕರ...

ಪೆಟ್ರೋಲ್ – ಎಥೆನಾಲ್ ಕುರಿತ ಮಾಹಿತಿ ಒದಗಿಸುವಂತೆ ತೈಲ ಸಚಿವಾಲಯಕ್ಕೆ ಕೇಂದ್ರ ಮಾಹಿತಿ ಆಯೋಗ ಆದೇಶ

ಪೆಟ್ರೋಲ್ ಉತ್ಪಾದನೆ ಮತ್ತು ಆಮದು, ಎಥೆನಾಲ್ ಸಂಗ್ರಹಣೆ, ಮಿಶ್ರಣ ಮತ್ತು ಪೆಟ್ರೋಲಿಯಂ ವಲಯದ ಲಾಭದ ಕುರಿತ ಹಿಂದಿನ ಡೇಟಾವನ್ನು ಬಹಿರಂಗಪಡಿಸುವಂತೆ ತೈಲ ಸಚಿವಾಲಯದ ಯೋಜನಾ ವಿಭಾಗವಾದ ಪೆಟ್ರೋಲಿಯಂ ಯೋಜನೆ ಮತ್ತು ವಿಶ್ಲೇಷಣಾ ಕೋಶ...

ಭೋಜಶಾಲಾ-ಕಮಲ್ ಮೌಲಾ ಪ್ರಕರಣ : ಮುಸ್ಲಿಮರ ಮೇಲ್ಮನವಿ ವಿಚಾರಣೆಗೆ ಸುಪ್ರೀಂ ಸಮ್ಮತಿ; ಮಧ್ಯಂತರ ನಮಾಝ್‌ಗೆ ನಿರಾಕರಣೆ

ಮಧ್ಯಪ್ರದೇಶದ ಧಾರ್‌ನಲ್ಲಿರುವ ಐತಿಹಾಸಿಕ ಭೋಜ್‌ಶಾಲಾ-ಕಮಲ್ ಮೌಲಾ ಸಂಕೀರ್ಣವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು ಘೋಷಿಸಿ, ಅಲ್ಲಿ ನಮಾಝ್ ಮಾಡುವುದನ್ನು ನಿಷೇಧಿಸಿರುವ ಮಧ್ಯಪ್ರದೇಶ ಹೈಕೋರ್ಟ್‌ನ ತೀರ್ಪನ್ನು ಪ್ರಶ್ನಿಸಿ, ವಿವಿಧ ಮುಸ್ಲಿಂ ಸಂಘಟನೆಗಳು ಸಲ್ಲಿಸಿರುವ...

ತೀವ್ರ ಹದಗೆಟ್ಟ ಸೋನಮ್ ವಾಂಗ್ಚುಕ್ ಆರೋಗ್ಯ : ಉಪವಾಸ ಕೈ ಬಿಡುವಂತೆ ವಿಪಕ್ಷ ನಾಯಕರಿಂದ ಮನವಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಶಿಕ್ಷಣ ತಜ್ಞ ಹಾಗೂ ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರಿಗೆ ತಮ್ಮ ಪ್ರತಿಭಟನೆಯನ್ನು ಕೊನೆಗೊಳಿಸುವಂತೆ ವಿರೋಧ ಪಕ್ಷಗಳ ನಾಯಕರು ಮಂಗಳವಾರ (ಜು.14) ಮನವಿ...

ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇ ಸಮೀಪವೇ ರಸ್ತೆಯಿಲ್ಲ; ಬಟ್ಟೆ ಜೋಲಿಯಲ್ಲಿ ಗರ್ಭಿಣಿಯನ್ನು ಆಸ್ಪತ್ರೆಗೆ ಸಾಗಿಸಿದ ಉಂಬರಾನೆ ವಾಡಿಯ ಜನ

ಖಲಾಪುರ (ರಾಯಗಢ): ಗರ್ಭಿಣಿಯನ್ನು ಯೋಗ್ಯವಾದ ರಸ್ತೆ, ಆಂಬ್ಯುಲೆನ್ಸ್ ಇಲ್ಲದ ಕಾರಣ ಬಟ್ಟೆಯ ಜೋಳಿಗೆಯಲ್ಲಿ ಆಸ್ಪತ್ರೆಗೆ ಸಾಗಿಸಿದ ಹೃದಯ ವಿದ್ರಾವಕ ಘಟನೆ ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಖಲಾಪುರ ತಾಲ್ಲೂಕಿಗೆ ಸೇರಿದ ಉಂಬರಾನೆ ವಾಡಿಯಲ್ಲಿ ನಡೆದಿದೆ.  ದೇಶದಲ್ಲೇ...

ಕಾಜಿರಂಗ ಹೋಟೆಲ್ ಯೋಜನೆ ವಿರುದ್ಧ ಪ್ರತಿಭಟನೆ: ಅಸ್ಸಾಂ ಹೋರಾಟಗಾರ ಪ್ರಣಬ್ ಡೋಲೆ ಅಕ್ರಮ ಬಂಧನ: ಜಿಕೆಎಲ್‌ಎಚ್‌ಆರ್‌ಪಿಸಿ ಗಂಭೀರ ಆರೋಪ

ಗುವಾಹಟಿ: ವಿಶ್ವಪ್ರಸಿದ್ಧ ಕಾಜಿರಂಗ ರಾಷ್ಟ್ರೀಯ ಉದ್ಯಾನವನದ ಸಮೀಪ ಪ್ರಸ್ತಾವಿತ ಐಷಾರಾಮಿ ಪಂಚತಾರಾ ಹೋಟೆಲ್ ಯೋಜನೆಗಾಗಿ ಆದಿವಾಸಿಗಳ ಕೃಷಿ ಹಾಗೂ ಗೋಮಾಳ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವುದನ್ನು ವಿರೋಧಿಸಿ ನಡೆದ ಪ್ರತಿಭಟನೆಗಳ ಹಿನ್ನೆಲೆಯಲ್ಲಿ, ಅಸ್ಸಾಂನ ಸಾಮಾಜಿಕ ಕಾರ್ಯಕರ್ತ...

ಬಿಡದಿ ಟೌನ್‌ಶಿಪ್: ಸರ್ಕಾರದ ಸರ್ವಾಧಿಕಾರಿ ಧೋರಣೆಗೆ ‘ಸಂಯುಕ್ತ ಹೋರಾಟ ಸಮಿತಿ’ ತೀವ್ರ ಖಂಡನೆ

"ಬಿಡದಿ ಟೌನ್‌ಶಿಪ್ ಯೋಜನೆಯು ತೀವ್ರ ವಿವಾದದಲ್ಲಿರುವಾಗಲೇ ರೈತರೊಂದಿಗೆ ಯಾವುದೇ ಮಾತುಕತೆ ನಡೆಸದೆ, ಪೊಲೀಸ್ ಬಲಪ್ರಯೋಗದ ಮೂಲಕ ಸರ್ವಾಧಿಕಾರಿ ರೀತಿಯಲ್ಲಿ ಜಂಟಿ ಸರ್ವೆ (JMC) ನಡೆಸಲು ಮುಂದಾಗಿರುವ ಸರ್ಕಾರದ ಕ್ರಮ ಅತ್ಯಂತ ಖಂಡನೀಯ" ಎಂದು...

ಜ್ಞಾನವಾಪಿ, ಮಥುರಾ, ಸಂಭಾಲ್ ದೇವಾಲಯ-ಮಸೀದಿಗಳ ವಿವಾದ : ಸುಪ್ರೀಂ ಕೋರ್ಟ್‌ನ ಮಧ್ಯಸ್ಥಿಕೆ ಪ್ರಸ್ತಾಪ ತಿರಸ್ಕರಿಸಿದ ಹಿಂದೂ-ಮುಸ್ಲಿಂ ಪಕ್ಷಗಳು

ಧಾರ್ಮಿಕ ಸ್ಥಳಗಳ ವಿವಾದಗಳಿಗೆ ಸೌಹಾರ್ದಯುತ ಪರಿಹಾರವನ್ನು ಕಂಡುಕೊಳ್ಳುವ ನಿಟ್ಟಿನಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ಹೆಜ್ಜೆಯನ್ನಿಟ್ಟಿದೆ. ವಾರಣಾಸಿಯ ಜ್ಞಾನವಾಪಿ ಮಸೀದಿ ವಿವಾದ, ಮಥುರಾದ ಕೃಷ್ಣ ಜನ್ಮಭೂಮಿ-ಶಾಹಿ ಇದ್ಗಾ ವಿವಾದ ಮತ್ತು ಸಂಭಾಲ್ ಜಮಾ ಮಸೀದಿ...