Homeಮುಖಪುಟಈರುಳ್ಳಿ ಬೆಳೆಗಾರರ ಪ್ರತಿಭಟನೆಗೆ ಬಿಜೆಪಿಯ ಮಿತ್ರ ಪಕ್ಷಗಳ ಬೆಂಬಲ: ಸರಕಾರದಿಂದ ಡ್ಯಾಮೇಜ್ ಕಂಟ್ರೋಲ್ ಗೆ ಯತ್ನ

ಈರುಳ್ಳಿ ಬೆಳೆಗಾರರ ಪ್ರತಿಭಟನೆಗೆ ಬಿಜೆಪಿಯ ಮಿತ್ರ ಪಕ್ಷಗಳ ಬೆಂಬಲ: ಸರಕಾರದಿಂದ ಡ್ಯಾಮೇಜ್ ಕಂಟ್ರೋಲ್ ಗೆ ಯತ್ನ

- Advertisement -
- Advertisement -

ಈರುಳ್ಳಿಯ ಮೇಲೆ 40% ರಫ್ತು ತೆರಿಗೆ ವಿಧಿಸಿದ ಕೇಂದ್ರದ ನಿರ್ಧಾರದ ವಿರುದ್ಧದ  ಪ್ರತಿಭಟನೆಯಲ್ಲಿ ಬಿಜೆಪಿಯ ಮಿತ್ರ ಪಕ್ಷಗಳು ಈರುಳ್ಳಿ ಬೆಳೆಯುವ ರೈತರಿಗೆ ಬೆಂಬಲಿಸಿದ್ದು, ಸರ್ಕಾರವು ಹಾನಿ ನಿಯಂತ್ರಣಕ್ಕೆ ಪ್ರಯತ್ನಿಸುತ್ತಿದೆ.

ಭಾರತದಲ್ಲಿ ಈರುಳ್ಳಿ ಬೆಲೆ ಏರಿಕೆಯು ನರೇಂದ್ರ ಮೋದಿಯವರ ಸರ್ಕಾರಕ್ಕೆ ಹೆಚ್ಚಿನ ಅಪಾಯವನ್ನುಂಟುಮಾಡುವ ಲಕ್ಷಣ ಕಂಡು ಬರುತ್ತಿದೆ. ಅದಕ್ಕಾಗಿ ಹಾನಿ ನಿಯಂತ್ರಣಕ್ಕೆ ಸರಕಾರ ಯತ್ನಿಸುತ್ತಿದೆ.

ಈರುಳ್ಳಿ ರಫ್ತಿನ ಮೇಲೆ ಶೇ 40 ರಫ್ತು ಸುಂಕ ವಿಧಿಸಿದ ಕೇಂದ್ರ ಸರ್ಕಾರದ ನಿರ್ಧಾರದ ವಿರುದ್ಧ ರೈತರು ಮತ್ತು ವ್ಯಾಪಾರಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ.

ಮಹಾರಾಷ್ಟ್ರದಲ್ಲಿ ಈ ನಿರ್ಧಾರ ವಿರೋಧಿಸಿ ರೈತರು ಪ್ರತಿಭಟನೆಗಿಳಿಯುವಂತೆ ಮಾಡಿದ್ದು,  ದೆಹಲಿ ಮತ್ತು ಮುಂಬೈ ಎರಡೂ ಕಡೆಗಳಲ್ಲೂ  ಮೈತ್ರಿ ಸರಕಾರ ಹಾನಿ ನಿಯಂತ್ರಣಕ್ಕಾಗಿ ಹರಸಾಹಸ ಪಡುತ್ತಿದೆ.

ಈ ಹಿನ್ನೆಲೆಯಲ್ಲಿ ಮಂಗಳವಾರದಿಂದ ಈರುಳ್ಳಿ ಸಂಗ್ರಹಣೆಯನ್ನು ಪುನರಾರಂಭಿಸುವುದಾಗಿ NAFED (ರಾಷ್ಟ್ರೀಯ ಸಹಕಾರಿ ಕೃಷಿ ಮಾರುಕಟ್ಟೆ ಒಕ್ಕೂಟ) ಘೋಷಣೆ ಮಾಡಿದೆ ಎನ್ನಲಾಗಿದೆ.

ಈರುಳ್ಳಿ ರಫ್ತಿನ ಮೇಲೆ ಶೇ 40ರಷ್ಟು ಸುಂಕ ವಿಧಿಸಿದ ನಂತರ ರೈತರ ಪ್ರತಿಭಟನೆ ಕುರಿತು ಡಿಸಿಎಂ ದೇವೇಂದ್ರ ಫಡ್ನವಿಸ್ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಕೇಂದ್ರ ವಾಣಿಜ್ಯ ಸಚಿವ ಪಿಯೂಷ್ ಗೋಯಲ್ ಅವರೊಂದಿಗೆ ಮಾತುಕತೆ ನಡೆಸಿದ್ದಾರೆ.

ರೈತರಿಗೆ ಪರಿಹಾರ ನೀಡಲು ಮತ್ತು ಅವರ ಸಮಸ್ಯೆಗಳನ್ನು ಪರಿಹರಿಸಲು ಸರ್ಕಾರವು ರೈತರಿಂದ ಈರುಳ್ಳಿ ಖರೀದಿಸಲು ನಿರ್ಧರಿಸಿದೆ. ಇದಕ್ಕಾಗಿ ನಾಸಿಕ್ ಮತ್ತು ಅಹಮದ್‌ನಗರದಲ್ಲಿ ಖರೀದಿ ಕೇಂದ್ರಗಳನ್ನು ತೆರೆಯಲಾಗುತ್ತದೆ ಎಂದು ಹೇಳಿದೆ. ರಾಜ್ಯದ ರೈತರಿಂದ ಎರಡು ಲಕ್ಷ ಮೆಟ್ರಿಕ್ ಟನ್ ಈರುಳ್ಳಿಯನ್ನು ಕ್ವಿಂಟಲ್‌ಗೆ 2,410 ರೂಪಾಯಿ ದರದಲ್ಲಿ ಸರ್ಕಾರ ಖರೀದಿಸಲಿದೆ ಎಂದು ಸರಕಾರ ಹೇಳಿದೆ.

ಮಹಾರಾಷ್ಟ್ರದ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಛಗನ್ ಭುಜಬಲ್ ಅವರು ದಿ ಇಂಡಿಯನ್ ಎಕ್ಸ್‌ಪ್ರೆಸ್‌ ಜೊತೆ ಮಾತನಾಡಿ, ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರನ್ನು ಭೇಟಿಯಾಗಿ  ಈ ಕುರಿತು ಚರ್ಚಿಸುವುದಾಗಿ ತಿಳಿಸಿದ್ದಾರೆ. ಶಿಂಧೆ ನೇತೃತ್ವದ ಸರ್ಕಾರಕ್ಕೆ ಸೇರಲು ಅಜಿತ್ ಪವಾರ್ ಅವರೊಂದಿಗೆ ಎನ್‌ಸಿಪಿ ತೊರೆದ ಎಂಟು ಶಾಸಕರಲ್ಲಿ ಒಬ್ಬರಾದ ಭುಜಬಲ್ ನಾಸಿಕ್ ಜಿಲ್ಲೆಯ ಯೋಲಾ ಕ್ಷೇತ್ರದ ಶಾಸಕರಾಗಿದ್ದಾರೆ. ಇದು ಈರುಳ್ಳಿ ಬೆಳೆಯುವ ಪ್ರಮುಖ ವಲಯವಾಗಿದೆ.

ನಾಸಿಕ್‌ನಿಂದ ಬಂದಿರುವ ಕೇಂದ್ರ ಸರಕಾರದ  ರಾಜ್ಯ ಖಾತೆ ಸಚಿವ ಭಾರತಿ ಪವಾರ್, ರೈತರು ಆತಂಕಪಡಬೇಡಿ ಎಂದು ಹೇಳುತ್ತಿದ್ದಾರೆ.

ಈರುಳ್ಳಿ ರಫ್ತಿನ ಮೇಲೆ ಶೇ 40 ರಫ್ತು ಸುಂಕ ವಿಧಿಸಿದ ಕೇಂದ್ರ ಸರ್ಕಾರದ ನಿರ್ಧಾರದ ವಿರುದ್ಧ ಬಿಜೆಪಿಯ ಮಿತ್ರಪಕ್ಷ ಮಾಜಿ ಸಚಿವ ಸದಾಭಾವು ಖೋಟ್ ನೇತೃತ್ವದ  ರೈತ ಕ್ರಾಂತಿ ಸಂಘಟನೆ ರೈತರ ಪ್ರತಿಭಟನೆಗೆ ಬೆಂಬಲವನ್ನು ವ್ಯಕ್ತಪಡಿಸಿದೆ. ಇನ್ನೆರಡು ದಿನಗಳಲ್ಲಿ ಸರ್ಕಾರ ಈ ನಿರ್ಧಾರವನ್ನು ಹಿಂಪಡೆಯದಿದ್ದರೆ ಮುಂಬೈಗೆ ಟ್ರ್ಯಾಕ್ಟರ್ ರ್ಯಾಲಿಯನ್ನು ಪ್ರಾರಂಭಿಸುವುದಾಗಿ ಸಂಘಟನೆಯ ನಾಸಿಕ್ ಮುಖ್ಯಸ್ಥ ದೀಪಕ್ ಪಗಾರ್ ಎಚ್ಚರಿಕೆ ನೀಡಿದ್ದಾರೆ.

ಇದನ್ನು ಓದಿ:ಮಧ್ಯಪ್ರದೇಶ: ಜಾತಿ ಗಣತಿ ಸೇರಿ 6 ಭರವಸೆ ಘೋಷಿಸಿದ ಮಲ್ಲಿಕಾರ್ಜುನ ಖರ್ಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...

NICE ನಲ್ಲಿ ಯೋಜನೆಯಲ್ಲಿ ‘ನೈಸ್’ ಎನ್ನುವಂತಹದ್ದು ಏನೂ ಇಲ್ಲ: ರಾಜ್ಯದ ಅತಿದೊಡ್ಡ ಹಗರಣ ಎಂದ ಹೈಕೋರ್ಟ್

ಬೆಂಗಳೂರು-ಮೈಸೂರು ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್ ಯೋಜನೆ (ಬಿಎಂಐಸಿಪಿ) ಅಥವಾ 'ನೈಸ್' ಯೋಜನೆ ಕರ್ನಾಟಕದ ಇತಿಹಾಸದಲ್ಲೇ ಅತ್ಯಂತ ದೊಡ್ಡ ಹಗರಣಗಳಲ್ಲಿ ಒಂದಾಗಿ ಕಾಣಿಸುತ್ತಿದೆ ಎಂದು ಕರ್ನಾಟಕ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ನಂದಿ ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್...

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...