Homeಮುಖಪುಟಈ ದೇಶ ಎಲ್ಲಾ ಧರ್ಮೀಯರಿಗೆ ಸೇರಿದ್ದು: ಆದಿತ್ಯನಾಥ್‌ರವರ 'ಅಬ್ಬ ಜಾನ್' ಹೇಳಿಕೆಗೆ ಬಿಜೆಪಿ ಮಿತ್ರ ಪಕ್ಷದ...

ಈ ದೇಶ ಎಲ್ಲಾ ಧರ್ಮೀಯರಿಗೆ ಸೇರಿದ್ದು: ಆದಿತ್ಯನಾಥ್‌ರವರ ‘ಅಬ್ಬ ಜಾನ್’ ಹೇಳಿಕೆಗೆ ಬಿಜೆಪಿ ಮಿತ್ರ ಪಕ್ಷದ ಆಕ್ಷೇಪ

- Advertisement -
- Advertisement -

2017ಕ್ಕೆ ಮೊದಲು ‘ಅಬ್ಬ ಜಾನ್’ ಎನ್ನುವವರಿಗೆ ಮಾತ್ರ ರೇಷನ್ ಸಿಗುತ್ತಿತ್ತು ಎಂಬ ಯುಪಿ ಸಿಎಂ ಯೋಗಿ ಆದಿತ್ಯನಾಥ್‌ರವರ ಕೋಮು ಪ್ರಚೋದನಾ ಹೇಳಿಕೆಗೆ ಬಿಜೆಪಿ ಮಿತ್ರ ಪಕ್ಷ ಆಕ್ಷೇಪ ವ್ಯಕ್ತಪಡಿಸಿದೆ. ರಾಜಕೀಯ ಪಕ್ಷಗಳು ತಮ್ಮ ಪ್ರತಿಕ್ರಿಯೆಯಲ್ಲಿ ಸಂಯಮ ಕಾಪಾಡಿಕೊಳ್ಳಬೇಕು ಎಂದಿರುವ ಜೆಡಿಯು ಅಧ್ಯಕ್ಷ ಲಲನ್ ಸಿಂಗ್, ದೇಶವು ಹಿಂದೂ, ಮುಸ್ಲಿಂ, ಕ್ರಿಶ್ಚಿಯನ್ ಅಥವಾ ಇತರ ಎಲ್ಲಾ ಸಮುದಾಯಕ್ಕೆ ಸೇರಿದ್ದು ಎಂದು ಪ್ರತಿಪಾದಿಸಿದ್ದಾರೆ.

“ವೈವಿಧ್ಯತೆಯಲ್ಲಿ ಏಕತೆ ಎಂಬ ಪದಗಳನ್ನು ನಮ್ಮ ದೇಶದಲ್ಲಿ ಬಳಸಲಾಗುತ್ತಿದೆ. ದೇಶ ಎಲ್ಲರಿಗೂ ಸೇರಿದ್ದು. ದೇಶಕ್ಕೆ ಹಾನಿಯುಂಟುಮಾಡುವ ಯಾವುದೇ ಟೀಕೆಗಳನ್ನು ಮಾಡಬಾರದು” ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಆಪ್ತರಾದ ಲಲನ್ ಸಿಂಗ್ ಪ್ರತಿಕ್ರಿಯಿಸಿದ್ದಾರೆ.

ಉತ್ತರ ಪ್ರದೇಶದ ಖುಷಿ ನಗರದಲ್ಲಿ ಆಯೋಜಿಸಿದ್ದ ಸಾರ್ವಜನಿಕ ರ್ಯಾಲಿಯಲ್ಲಿ ಮಾತನಾಡಿದ ಯೋಗಿ ಆದಿತ್ಯನಾಥ್ “2017ಕ್ಕೆ ಮುಂಚೆ ನಿಮಗೆ ರೇಷನ್ ಸಿಗುತ್ತಿತ್ತೆ? ಆಗ ಕೇವಲ ಅಬ್ಬ ಜಾನ್ (ಸಾಮಾನ್ಯವಾಗಿ ಮುಸ್ಲಿಂ ಸಮುದಾಯದಲ್ಲಿ ಉರ್ದು ಭಾಷೆಯಲ್ಲಿ ತಂದೆಯನ್ನು ಕರೆಯುವ ಪರಿ) ಎಂದು ಕರೆಯುವವರು ಎಲ್ಲಾ ರೇಷನ್ ತಿಂದುಹಾಕುತ್ತಿದ್ದರು. ಆಗ ಶ್ರೀನಗರಕ್ಕೆ ನೀಡಲಾಗುವ ಪಡಿತರವು ನೇಪಾಳ ಮತ್ತು ಬಾಂಗ್ಲಾದೇಶಕ್ಕೆ ಹೋಗಿತ್ತು” ಎಂದಿದ್ದರು.

ಯೋಗಿ ಆದಿತ್ಯನಾಥ್‌ರವರ ಈ ಹೇಳಿಕೆ ಭಾರೀ ಕೋಲಾಹಲಕ್ಕೆ ಕಾರಣವಾಗಿದೆ. ಅಬ್ಬ ಜಾನ್ ಹೇಳಿಕೆಯ ಮೂಲಕ ಯೋಗಿ ಆದಿತ್ಯನಾಥ್ ಮುಸ್ಲಿಂ ಸಮುದಾಯವನ್ನು ಹೀಯಾಳಿದ್ದಾರೆ ಎಂದು ಆರೋಪಿಸಿ ಬಿಹಾರದ ಮುಜಾಫರ್‌ಪುರ ಜಿಲ್ಲಾ ನ್ಯಾಯಾಲಯದಲ್ಲಿ ತಮನ್ನಾ ಹಶ್ಮಿ ಎಂಬ ಸಾಮಾಜಿಕ ಕಾರ್ಯಕರ್ತರು ದೂರು ದಾಖಲಿಸಿದ್ದಾರೆ.

ಟ್ವಿಟರ್‌ನಲ್ಲಿಯೂ ಯೋಗಿ ಆದಿತ್ಯನಾಥ್ ಹೇಳಿಕೆ ಖಂಡಿಸಿ “ನಾನು ನನ್ನ ತಂದೆಯನ್ನು ಅಬ್ಬ ಜಾನ್ ಎಂದೇ ಕರೆಯುತ್ತೇನೆ” ಎಂಬ ಅಭಿಯಾನ ಆರಂಭವಾಗಿದೆ. ಎಲ್ಲಾ ಸಮುದಾಯದ ಬಹಳಷ್ಟು ಜನರು ತಮ್ಮ ತಂದೆಯ ಫೋಟೊವನ್ನು ಟ್ವಿಟರ್‌ನಲ್ಲಿ ಅಪ್‌ಲೋಡ್ ಮಾಡಿ ನಮ್ಮ ತಂದೆಯನ್ನು ಅಬ್ಬ ಜಾನ್ ಎಂದೇ ಕರೆಯುತ್ತೇವೆ ಎಂದು ಬರೆಯುವ ಮೂಲಕ ಯೋಗಿಗೆ ಸೆಡ್ಡು ಹೊಡೆದಿದ್ದಾರೆ. ಚಿತ್ರ ನಿರ್ದೇಶಕ ಹನ್ಸಲ್ ಮೆಹ್ತಾ ನಾನು ನನ್ನ ಅಬ್ಬ ಜಾನ್‌ ರನ್ನು ಮಿಸ್ ಮಾಡಿಕೊಳ್ಳುತ್ತಿದ್ದೇನೆ ಎಂದು ಪೋಸ್ಟ್ ಮಾಡಿದ್ದಾರೆ.

ಇದೇ ಸಂದರ್ಭದಲ್ಲಿ ಲಲನ್ ಸಿಂಗ್ ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರ ಭೋಜ್‌ಪುರಿ ಮತ್ತು ಮಾಗಾಹಿ ಮಾತನಾಡುವ ಜನರನ್ನು ಗುರಿಯಾಗಿಸಿಕೊಂಡು ಮಾಡಿದ ಹೇಳಿಕೆಯನ್ನು ಟೀಕಿಸಿದರು. ಪ್ರತಿಯೊಬ್ಬರೂ ದೇಶದ ಯಾವ ಭಾಗದಲ್ಲಿ ಬೇಕಾದರೂ ನೆಲೆಸುವ ಹಕ್ಕನ್ನು ಹೊಂದಿದ್ದಾರೆ ಎಂದರು.


ಇದನ್ನೂ ಓದಿ: ಮುಂಚೆ ‘ಅಬ್ಬ ಜಾನ್’ ಎನ್ನುವವರಿಗೆ ಮಾತ್ರ ರೇಷನ್ ಸಿಗುತ್ತಿತ್ತು: ಯುಪಿ ಸಿಎಂ ಆದಿತ್ಯನಾಥ್ ಹೇಳಿಕೆಗೆ ಭಾರೀ ವಿರೋಧ –…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...