Homeಮುಖಪುಟಈ ದೇಶ ಎಲ್ಲಾ ಧರ್ಮೀಯರಿಗೆ ಸೇರಿದ್ದು: ಆದಿತ್ಯನಾಥ್‌ರವರ 'ಅಬ್ಬ ಜಾನ್' ಹೇಳಿಕೆಗೆ ಬಿಜೆಪಿ ಮಿತ್ರ ಪಕ್ಷದ...

ಈ ದೇಶ ಎಲ್ಲಾ ಧರ್ಮೀಯರಿಗೆ ಸೇರಿದ್ದು: ಆದಿತ್ಯನಾಥ್‌ರವರ ‘ಅಬ್ಬ ಜಾನ್’ ಹೇಳಿಕೆಗೆ ಬಿಜೆಪಿ ಮಿತ್ರ ಪಕ್ಷದ ಆಕ್ಷೇಪ

- Advertisement -
- Advertisement -

2017ಕ್ಕೆ ಮೊದಲು ‘ಅಬ್ಬ ಜಾನ್’ ಎನ್ನುವವರಿಗೆ ಮಾತ್ರ ರೇಷನ್ ಸಿಗುತ್ತಿತ್ತು ಎಂಬ ಯುಪಿ ಸಿಎಂ ಯೋಗಿ ಆದಿತ್ಯನಾಥ್‌ರವರ ಕೋಮು ಪ್ರಚೋದನಾ ಹೇಳಿಕೆಗೆ ಬಿಜೆಪಿ ಮಿತ್ರ ಪಕ್ಷ ಆಕ್ಷೇಪ ವ್ಯಕ್ತಪಡಿಸಿದೆ. ರಾಜಕೀಯ ಪಕ್ಷಗಳು ತಮ್ಮ ಪ್ರತಿಕ್ರಿಯೆಯಲ್ಲಿ ಸಂಯಮ ಕಾಪಾಡಿಕೊಳ್ಳಬೇಕು ಎಂದಿರುವ ಜೆಡಿಯು ಅಧ್ಯಕ್ಷ ಲಲನ್ ಸಿಂಗ್, ದೇಶವು ಹಿಂದೂ, ಮುಸ್ಲಿಂ, ಕ್ರಿಶ್ಚಿಯನ್ ಅಥವಾ ಇತರ ಎಲ್ಲಾ ಸಮುದಾಯಕ್ಕೆ ಸೇರಿದ್ದು ಎಂದು ಪ್ರತಿಪಾದಿಸಿದ್ದಾರೆ.

“ವೈವಿಧ್ಯತೆಯಲ್ಲಿ ಏಕತೆ ಎಂಬ ಪದಗಳನ್ನು ನಮ್ಮ ದೇಶದಲ್ಲಿ ಬಳಸಲಾಗುತ್ತಿದೆ. ದೇಶ ಎಲ್ಲರಿಗೂ ಸೇರಿದ್ದು. ದೇಶಕ್ಕೆ ಹಾನಿಯುಂಟುಮಾಡುವ ಯಾವುದೇ ಟೀಕೆಗಳನ್ನು ಮಾಡಬಾರದು” ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಆಪ್ತರಾದ ಲಲನ್ ಸಿಂಗ್ ಪ್ರತಿಕ್ರಿಯಿಸಿದ್ದಾರೆ.

ಉತ್ತರ ಪ್ರದೇಶದ ಖುಷಿ ನಗರದಲ್ಲಿ ಆಯೋಜಿಸಿದ್ದ ಸಾರ್ವಜನಿಕ ರ್ಯಾಲಿಯಲ್ಲಿ ಮಾತನಾಡಿದ ಯೋಗಿ ಆದಿತ್ಯನಾಥ್ “2017ಕ್ಕೆ ಮುಂಚೆ ನಿಮಗೆ ರೇಷನ್ ಸಿಗುತ್ತಿತ್ತೆ? ಆಗ ಕೇವಲ ಅಬ್ಬ ಜಾನ್ (ಸಾಮಾನ್ಯವಾಗಿ ಮುಸ್ಲಿಂ ಸಮುದಾಯದಲ್ಲಿ ಉರ್ದು ಭಾಷೆಯಲ್ಲಿ ತಂದೆಯನ್ನು ಕರೆಯುವ ಪರಿ) ಎಂದು ಕರೆಯುವವರು ಎಲ್ಲಾ ರೇಷನ್ ತಿಂದುಹಾಕುತ್ತಿದ್ದರು. ಆಗ ಶ್ರೀನಗರಕ್ಕೆ ನೀಡಲಾಗುವ ಪಡಿತರವು ನೇಪಾಳ ಮತ್ತು ಬಾಂಗ್ಲಾದೇಶಕ್ಕೆ ಹೋಗಿತ್ತು” ಎಂದಿದ್ದರು.

ಯೋಗಿ ಆದಿತ್ಯನಾಥ್‌ರವರ ಈ ಹೇಳಿಕೆ ಭಾರೀ ಕೋಲಾಹಲಕ್ಕೆ ಕಾರಣವಾಗಿದೆ. ಅಬ್ಬ ಜಾನ್ ಹೇಳಿಕೆಯ ಮೂಲಕ ಯೋಗಿ ಆದಿತ್ಯನಾಥ್ ಮುಸ್ಲಿಂ ಸಮುದಾಯವನ್ನು ಹೀಯಾಳಿದ್ದಾರೆ ಎಂದು ಆರೋಪಿಸಿ ಬಿಹಾರದ ಮುಜಾಫರ್‌ಪುರ ಜಿಲ್ಲಾ ನ್ಯಾಯಾಲಯದಲ್ಲಿ ತಮನ್ನಾ ಹಶ್ಮಿ ಎಂಬ ಸಾಮಾಜಿಕ ಕಾರ್ಯಕರ್ತರು ದೂರು ದಾಖಲಿಸಿದ್ದಾರೆ.

ಟ್ವಿಟರ್‌ನಲ್ಲಿಯೂ ಯೋಗಿ ಆದಿತ್ಯನಾಥ್ ಹೇಳಿಕೆ ಖಂಡಿಸಿ “ನಾನು ನನ್ನ ತಂದೆಯನ್ನು ಅಬ್ಬ ಜಾನ್ ಎಂದೇ ಕರೆಯುತ್ತೇನೆ” ಎಂಬ ಅಭಿಯಾನ ಆರಂಭವಾಗಿದೆ. ಎಲ್ಲಾ ಸಮುದಾಯದ ಬಹಳಷ್ಟು ಜನರು ತಮ್ಮ ತಂದೆಯ ಫೋಟೊವನ್ನು ಟ್ವಿಟರ್‌ನಲ್ಲಿ ಅಪ್‌ಲೋಡ್ ಮಾಡಿ ನಮ್ಮ ತಂದೆಯನ್ನು ಅಬ್ಬ ಜಾನ್ ಎಂದೇ ಕರೆಯುತ್ತೇವೆ ಎಂದು ಬರೆಯುವ ಮೂಲಕ ಯೋಗಿಗೆ ಸೆಡ್ಡು ಹೊಡೆದಿದ್ದಾರೆ. ಚಿತ್ರ ನಿರ್ದೇಶಕ ಹನ್ಸಲ್ ಮೆಹ್ತಾ ನಾನು ನನ್ನ ಅಬ್ಬ ಜಾನ್‌ ರನ್ನು ಮಿಸ್ ಮಾಡಿಕೊಳ್ಳುತ್ತಿದ್ದೇನೆ ಎಂದು ಪೋಸ್ಟ್ ಮಾಡಿದ್ದಾರೆ.

ಇದೇ ಸಂದರ್ಭದಲ್ಲಿ ಲಲನ್ ಸಿಂಗ್ ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರ ಭೋಜ್‌ಪುರಿ ಮತ್ತು ಮಾಗಾಹಿ ಮಾತನಾಡುವ ಜನರನ್ನು ಗುರಿಯಾಗಿಸಿಕೊಂಡು ಮಾಡಿದ ಹೇಳಿಕೆಯನ್ನು ಟೀಕಿಸಿದರು. ಪ್ರತಿಯೊಬ್ಬರೂ ದೇಶದ ಯಾವ ಭಾಗದಲ್ಲಿ ಬೇಕಾದರೂ ನೆಲೆಸುವ ಹಕ್ಕನ್ನು ಹೊಂದಿದ್ದಾರೆ ಎಂದರು.


ಇದನ್ನೂ ಓದಿ: ಮುಂಚೆ ‘ಅಬ್ಬ ಜಾನ್’ ಎನ್ನುವವರಿಗೆ ಮಾತ್ರ ರೇಷನ್ ಸಿಗುತ್ತಿತ್ತು: ಯುಪಿ ಸಿಎಂ ಆದಿತ್ಯನಾಥ್ ಹೇಳಿಕೆಗೆ ಭಾರೀ ವಿರೋಧ –…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದೊಂದಿಗೆ ಮಾತುಕತೆಗೆ ಇರಾನ್ ಸಹಮತ: ಶರಣಾಗತಿಗೆ ನಿರಾಕರಿಸಿದ ಅಧ್ಯಕ್ಷ ಪೆಝೇಷ್ಕಿಯಾನ್

ತನ್ನ ಹಕ್ಕುಗಳನ್ನು ರಕ್ಷಿಸಿಕೊಳ್ಳಲು ಮಾತುಕತೆಯ ಮಾರ್ಗವನ್ನು ಮುಂದುವರಿಸಲು ಇರಾನ್ ಬದ್ಧವಾಗಿದೆ ಎಂದು ದೇಶದ ಅಧ್ಯಕ್ಷ ಮಸೂದ್ ಪೆಝೇಷ್ಕಿಯಾನ್ ಪುನರುಚ್ಚರಿಸಿದ್ದು, ಯಾವುದೇ ಕಾರಣಕ್ಕೂ ಟೆಹ್ರಾನ್ ಶರಣಾಗತಿಗೆ ಒಪ್ಪುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಶುಕ್ರವಾರ (ಆಗಸ್ಟ್ 7) ತಮ್ಮ...

ಐಎಎಸ್‌ ಅಧಿಕಾರಿ ಫೌಝಿಯಾ ತರನ್ನುಮ್‌ ಅವರನ್ನು ಪಾಕಿಸ್ತಾನಿ ಎಂದ ಪ್ರಕರಣ : ಬಿಜೆಪಿ ಎಂಎಲ್‌ಸಿ ರವಿಕುಮಾರ್‌ಗೆ ಹೈಕೋರ್ಟ್‌ ತರಾಟೆ

ಕಲಬುರಗಿಯಲ್ಲಿ ನಡೆದಿದ್ದ ಪ್ರತಿಭಟನೆಯ ವೇಳೆ ಐಎಎಸ್‌ ಅಧಿಕಾರಿ ಫೌಝಿಯಾ ತರನ್ನುಮ್‌ ಅವರನ್ನು ಭಾರತೀಯರೋ ಅಥವಾ ಪಾಕಿಸ್ತಾನಿಯೋ ಎಂದಿದ್ದ ವಿಧಾನ ಪರಿಷತ್‌ನ ಬಿಜೆಪಿ ಸದಸ್ಯ ಎನ್‌. ರವಿಕುಮಾರ್‌ ವಿರುದ್ಧ ಶುಕ್ರವಾರ (ಆ.7) ಕರ್ನಾಟಕ ಹೈಕೋರ್ಟ್‌...

ಸಿಲಿಕಾನ್ ಸಿಟಿಯ ಐಷಾರಾಮಿ ಹೋಟೆಲ್‌ಗಳ ಮೇಲೆ ದಾಳಿ: ಅಡುಗೆ ಮನೆಯಲ್ಲಿ ಸಿಕ್ತು 250.KG ಕೊಳೆತ ಮಾಂಸ ಮತ್ತು ತರಕಾರಿ

ಶಾಲಾ-ಕಾಲೇಜುಗಳ ಸುತ್ತಮುತ್ತ ಜಂಕ್ ಫುಡ್ ಮಾರಾಟದ ವಿರುದ್ಧ ಸಮರ ಸಾರಿದ್ದ ಆಹಾರ ಸುರಕ್ಷತೆ ಮತ್ತು ಔಷಧ ನಿಯಂತ್ರಣ (FSDA) ಇಲಾಖೆ, ಶುಕ್ರವಾರ ಬೆಂಗಳೂರಿನ ಫೈವ್-ಸ್ಟಾರ್ ಹೋಟೆಲ್‌ಗಳ ಮೇಲೆ ದಿಢೀರ್ ದಾಳಿ ನಡೆಸಿ...

‘ರಷ್ಯಾ ನಿರ್ಬಂಧ ಮಸೂದೆ’ ಅಂಗೀಕರಿಸಿದ ಅಮೆರಿಕ ಸೆನೆಟ್: ಭಾರತದ ಮೇಲೆ ಶೇ. 100ರಷ್ಟು ಸುಂಕ ವಿಧಿಸುವ ಎಚ್ಚರಿಕೆ

ಉಕ್ರೇನ್ ವಿರುದ್ಧದ ಯುದ್ಧಕ್ಕೆ ಆರ್ಥಿಕ ನೆರವು ಸಿಗದಂತೆ ಮಾಡಲು, ರಷ್ಯಾದಿಂದ ಪೆಟ್ರೋಲಿಯಂ ಉತ್ಪನ್ನಗಳನ್ನು ಹೆಚ್ಚಾಗಿ ಖರೀದಿಸುವ ಭಾರತ ಮತ್ತು ಚೀನಾದಂತಹ ಪ್ರಮುಖ ದೇಶಗಳನ್ನು ಗುರಿಯಾಗಿಸಿಕೊಂಡು ಅಮೆರಿಕದ ಸೆನೆಟ್‌ ಬೃಹತ್‌ ಬೆಂಬಲದೊಂದಿಗೆ ಹೊಸ ಮಸೂದೆಯನ್ನು...

ಆರ್‌ಎಸ್‌ಎಸ್‌ ಗೂಂಡಾಗಳಿಗೆ ಶಾಯಿ ಇರುವುದು ಬರೆಯಲು, ಎರಚಲು ಅಲ್ಲ ಎಂಬುವುದು ಗೊತ್ತಿಲ್ಲ, ನಮ್ಮ ಸಂಕಲ್ಪಕ್ಕೆ ಮಿತಿಯಿಲ್ಲ : ನೇಹಾ ಬೋರಾ

ಜಾರ್ಖಂಡ್ ವಿದ್ಯಾರ್ಥಿ ಹೋರಾಟವನ್ನು ಬೆಂಬಲಿಸಲು ಹೋಗಿದ್ದ ವೇಳೆ ತನ್ನ ಮೇಲೆ ಶಾಯಿ ಎರಚಿರುವುದಕ್ಕೆ ಅಖಿಲ ಭಾರತ ವಿದ್ಯಾರ್ಥಿ ಸಂಘದ (AISA) ರಾಷ್ಟ್ರೀಯ ಅಧ್ಯಕ್ಷೆ ನೇಹಾ ಬೋರಾ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ...

ಮನೆಗೆ ಬರುವ ಸಂದರ್ಶಕರೊಂದಿಗೆ ಪಿಎಸ್‌ಐ ‘ಅಸಭ್ಯ’ ವರ್ತನೆ; ಆಕ್ರೋಶ ವ್ಯಕ್ತಪಡಿಸಿದ ಅಭಿಜೀತ್ ದಿಪ್ಕೆ

ಛತ್ರಪತಿ ಸಂಭಾಜಿನಗರದಲ್ಲಿರುವ ತಮ್ಮ ಮನೆಯಲ್ಲಿ ಭದ್ರತಾ ಪಡೆಯ ಭಾಗವಾಗಿ ನಿಯೋಜಿಸಲಾದ ಪೊಲೀಸ್ ಸಬ್-ಇನ್ಸ್‌ಪೆಕ್ಟರ್ (ಪಿಎಸ್‌ಐ) ಅವರು, ಜನರು ನಮ್ಮನ್ನು ಭೇಟಿಯಾಗದಂತೆ ತಡೆಯುತ್ತಿದ್ದಾರೆ ಎಂದು ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಂಚಾಲಕ ಅಭಿಜೀತ್ ದಿಪ್ಕೆ...

ಮೋಹನ್ ಭಾಗವತ್‌ ದೇಶಪ್ರವೇಶ ನಿಷೇಧಿಸುವಂತೆ ಕೆನಡಾದ 40ಕ್ಕೂ ಹೆಚ್ಚು ಸಂಘಟನೆಗಳಿಂದ ಸರ್ಕಾರಕ್ಕೆ ಒತ್ತಾಯ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್‌) ಮುಖ್ಯಸ್ಥ ಮೋಹನ್ ಭಾಗವತ್‌ ದೇಶದೊಳಗೆ ಪ್ರವೇಶಿಸುವುದನ್ನು ತಡೆಯುವಂತೆ ಕೆನಡಾದ 40ಕ್ಕೂ ಹೆಚ್ಚು ನಾಗರಿಕ, ಮಾನವ ಹಕ್ಕುಗಳು, ಕಾರ್ಮಿಕ ಮತ್ತು ಧಾರ್ಮಿಕ ಸಂಘಟನೆಗಳು ಅಲ್ಲಿನ ಸಾರ್ವಜನಿಕ ಸುರಕ್ಷತಾ ಸಚಿವರಿಗೆ...

SIR: BLO ಮನೆ-ಮನೆ ಭೇಟಿ ಗಡುವು ಆಗಸ್ಟ್‌ 17ರವರೆಗೆ ವಿಸ್ತರಣೆ!

ರಾಜ್ಯದಲ್ಲಿ ನಡೆಯುತ್ತಿರುವ ‘ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ’ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ಕೇಂದ್ರ ಚುನಾವಣಾ ಆಯೋಗವು (ECI) ಪರಿಷ್ಕೃತ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಮನೆ-ಮನೆ ಗಣತಿ ಪ್ರಕ್ರಿಯೆಯ ಗಡುವನ್ನು ಆಗಸ್ಟ್ 17ರವರೆಗೆ ವಿಸ್ತರಿಸಲಾಗಿದ್ದು,...

ಕಾವೇರಿ ವಿಚಾರದಲ್ಲಿ ಅಗ್ಗದ ರಾಜಕೀಯ ಮಾಡಲ್ಲ: ತಮಿಳುನಾಡು ಸಿಎಂ ವಿಜಯ್

ಕರ್ನಾಟಕ ಸರ್ಕಾರ ಮೇಕೆದಾಟು ಅಣೆಕಟ್ಟು ನಿರ್ಮಾಣಕ್ಕೆ ಮುಂದಾಗಿರುವ ವಿಚಾರವಾಗಿ ತಮಿಳುನಾಡಿನಲ್ಲಿ ರಾಜಕೀಯ ಕಾವು ಏರುತ್ತಿರುವ ಬೆನ್ನಲ್ಲೇ, ಈ ಕುರಿತು ತಕ್ಷಣವೇ ಸರ್ವಪಕ್ಷಗಳ ಸಭೆಯನ್ನು ಆಯೋಜಿಸುವ ಯಾವುದೇ ಅಗತ್ಯವಿಲ್ಲ ಎಂದು ತಮಿಳುನಾಡು ಮುಖ್ಯಮಂತ್ರಿ ಸಿ....

ಬೆಂಗಳೂರಿನ ಜಕ್ಕೂರಿನಲ್ಲಿ 22-23 ವರ್ಷದ ಇಬ್ಬರು ನೇಪಾಳಿ ಯುವತಿಯರ ಶವಗಳು ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಬೆಂಗಳೂರು: ಜಕ್ಕೂರು ಮುಖ್ಯ ರಸ್ತೆಯ ನಿರ್ಜನ ಪ್ರದೇಶವೊಂದರಲ್ಲಿ ನೇಪಾಳ ಮೂಲದ ಇಬ್ಬರು ಯುವತಿಯರು ಒಂದೇ ಸೀರೆಯಿಂದ ಮರಕ್ಕೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿರುವ ಆಘಾತಕಾರಿ ಘಟನೆ ಗುರುವಾರ ಮುಂಜಾನೆ ಬೆಳಕಿಗೆ ಬಂದಿದೆ. ಮೃತರನ್ನು ನೇಪಾಳ...