Homeಮುಖಪುಟಈ ದೇಶ ಎಲ್ಲಾ ಧರ್ಮೀಯರಿಗೆ ಸೇರಿದ್ದು: ಆದಿತ್ಯನಾಥ್‌ರವರ 'ಅಬ್ಬ ಜಾನ್' ಹೇಳಿಕೆಗೆ ಬಿಜೆಪಿ ಮಿತ್ರ ಪಕ್ಷದ...

ಈ ದೇಶ ಎಲ್ಲಾ ಧರ್ಮೀಯರಿಗೆ ಸೇರಿದ್ದು: ಆದಿತ್ಯನಾಥ್‌ರವರ ‘ಅಬ್ಬ ಜಾನ್’ ಹೇಳಿಕೆಗೆ ಬಿಜೆಪಿ ಮಿತ್ರ ಪಕ್ಷದ ಆಕ್ಷೇಪ

- Advertisement -
- Advertisement -

2017ಕ್ಕೆ ಮೊದಲು ‘ಅಬ್ಬ ಜಾನ್’ ಎನ್ನುವವರಿಗೆ ಮಾತ್ರ ರೇಷನ್ ಸಿಗುತ್ತಿತ್ತು ಎಂಬ ಯುಪಿ ಸಿಎಂ ಯೋಗಿ ಆದಿತ್ಯನಾಥ್‌ರವರ ಕೋಮು ಪ್ರಚೋದನಾ ಹೇಳಿಕೆಗೆ ಬಿಜೆಪಿ ಮಿತ್ರ ಪಕ್ಷ ಆಕ್ಷೇಪ ವ್ಯಕ್ತಪಡಿಸಿದೆ. ರಾಜಕೀಯ ಪಕ್ಷಗಳು ತಮ್ಮ ಪ್ರತಿಕ್ರಿಯೆಯಲ್ಲಿ ಸಂಯಮ ಕಾಪಾಡಿಕೊಳ್ಳಬೇಕು ಎಂದಿರುವ ಜೆಡಿಯು ಅಧ್ಯಕ್ಷ ಲಲನ್ ಸಿಂಗ್, ದೇಶವು ಹಿಂದೂ, ಮುಸ್ಲಿಂ, ಕ್ರಿಶ್ಚಿಯನ್ ಅಥವಾ ಇತರ ಎಲ್ಲಾ ಸಮುದಾಯಕ್ಕೆ ಸೇರಿದ್ದು ಎಂದು ಪ್ರತಿಪಾದಿಸಿದ್ದಾರೆ.

“ವೈವಿಧ್ಯತೆಯಲ್ಲಿ ಏಕತೆ ಎಂಬ ಪದಗಳನ್ನು ನಮ್ಮ ದೇಶದಲ್ಲಿ ಬಳಸಲಾಗುತ್ತಿದೆ. ದೇಶ ಎಲ್ಲರಿಗೂ ಸೇರಿದ್ದು. ದೇಶಕ್ಕೆ ಹಾನಿಯುಂಟುಮಾಡುವ ಯಾವುದೇ ಟೀಕೆಗಳನ್ನು ಮಾಡಬಾರದು” ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಆಪ್ತರಾದ ಲಲನ್ ಸಿಂಗ್ ಪ್ರತಿಕ್ರಿಯಿಸಿದ್ದಾರೆ.

ಉತ್ತರ ಪ್ರದೇಶದ ಖುಷಿ ನಗರದಲ್ಲಿ ಆಯೋಜಿಸಿದ್ದ ಸಾರ್ವಜನಿಕ ರ್ಯಾಲಿಯಲ್ಲಿ ಮಾತನಾಡಿದ ಯೋಗಿ ಆದಿತ್ಯನಾಥ್ “2017ಕ್ಕೆ ಮುಂಚೆ ನಿಮಗೆ ರೇಷನ್ ಸಿಗುತ್ತಿತ್ತೆ? ಆಗ ಕೇವಲ ಅಬ್ಬ ಜಾನ್ (ಸಾಮಾನ್ಯವಾಗಿ ಮುಸ್ಲಿಂ ಸಮುದಾಯದಲ್ಲಿ ಉರ್ದು ಭಾಷೆಯಲ್ಲಿ ತಂದೆಯನ್ನು ಕರೆಯುವ ಪರಿ) ಎಂದು ಕರೆಯುವವರು ಎಲ್ಲಾ ರೇಷನ್ ತಿಂದುಹಾಕುತ್ತಿದ್ದರು. ಆಗ ಶ್ರೀನಗರಕ್ಕೆ ನೀಡಲಾಗುವ ಪಡಿತರವು ನೇಪಾಳ ಮತ್ತು ಬಾಂಗ್ಲಾದೇಶಕ್ಕೆ ಹೋಗಿತ್ತು” ಎಂದಿದ್ದರು.

ಯೋಗಿ ಆದಿತ್ಯನಾಥ್‌ರವರ ಈ ಹೇಳಿಕೆ ಭಾರೀ ಕೋಲಾಹಲಕ್ಕೆ ಕಾರಣವಾಗಿದೆ. ಅಬ್ಬ ಜಾನ್ ಹೇಳಿಕೆಯ ಮೂಲಕ ಯೋಗಿ ಆದಿತ್ಯನಾಥ್ ಮುಸ್ಲಿಂ ಸಮುದಾಯವನ್ನು ಹೀಯಾಳಿದ್ದಾರೆ ಎಂದು ಆರೋಪಿಸಿ ಬಿಹಾರದ ಮುಜಾಫರ್‌ಪುರ ಜಿಲ್ಲಾ ನ್ಯಾಯಾಲಯದಲ್ಲಿ ತಮನ್ನಾ ಹಶ್ಮಿ ಎಂಬ ಸಾಮಾಜಿಕ ಕಾರ್ಯಕರ್ತರು ದೂರು ದಾಖಲಿಸಿದ್ದಾರೆ.

ಟ್ವಿಟರ್‌ನಲ್ಲಿಯೂ ಯೋಗಿ ಆದಿತ್ಯನಾಥ್ ಹೇಳಿಕೆ ಖಂಡಿಸಿ “ನಾನು ನನ್ನ ತಂದೆಯನ್ನು ಅಬ್ಬ ಜಾನ್ ಎಂದೇ ಕರೆಯುತ್ತೇನೆ” ಎಂಬ ಅಭಿಯಾನ ಆರಂಭವಾಗಿದೆ. ಎಲ್ಲಾ ಸಮುದಾಯದ ಬಹಳಷ್ಟು ಜನರು ತಮ್ಮ ತಂದೆಯ ಫೋಟೊವನ್ನು ಟ್ವಿಟರ್‌ನಲ್ಲಿ ಅಪ್‌ಲೋಡ್ ಮಾಡಿ ನಮ್ಮ ತಂದೆಯನ್ನು ಅಬ್ಬ ಜಾನ್ ಎಂದೇ ಕರೆಯುತ್ತೇವೆ ಎಂದು ಬರೆಯುವ ಮೂಲಕ ಯೋಗಿಗೆ ಸೆಡ್ಡು ಹೊಡೆದಿದ್ದಾರೆ. ಚಿತ್ರ ನಿರ್ದೇಶಕ ಹನ್ಸಲ್ ಮೆಹ್ತಾ ನಾನು ನನ್ನ ಅಬ್ಬ ಜಾನ್‌ ರನ್ನು ಮಿಸ್ ಮಾಡಿಕೊಳ್ಳುತ್ತಿದ್ದೇನೆ ಎಂದು ಪೋಸ್ಟ್ ಮಾಡಿದ್ದಾರೆ.

ಇದೇ ಸಂದರ್ಭದಲ್ಲಿ ಲಲನ್ ಸಿಂಗ್ ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರ ಭೋಜ್‌ಪುರಿ ಮತ್ತು ಮಾಗಾಹಿ ಮಾತನಾಡುವ ಜನರನ್ನು ಗುರಿಯಾಗಿಸಿಕೊಂಡು ಮಾಡಿದ ಹೇಳಿಕೆಯನ್ನು ಟೀಕಿಸಿದರು. ಪ್ರತಿಯೊಬ್ಬರೂ ದೇಶದ ಯಾವ ಭಾಗದಲ್ಲಿ ಬೇಕಾದರೂ ನೆಲೆಸುವ ಹಕ್ಕನ್ನು ಹೊಂದಿದ್ದಾರೆ ಎಂದರು.


ಇದನ್ನೂ ಓದಿ: ಮುಂಚೆ ‘ಅಬ್ಬ ಜಾನ್’ ಎನ್ನುವವರಿಗೆ ಮಾತ್ರ ರೇಷನ್ ಸಿಗುತ್ತಿತ್ತು: ಯುಪಿ ಸಿಎಂ ಆದಿತ್ಯನಾಥ್ ಹೇಳಿಕೆಗೆ ಭಾರೀ ವಿರೋಧ –…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...