Homeಮುಖಪುಟವಕ್ಫ್‌ ಮಸೂದೆಯಲ್ಲಿ ಬಿಜೆಪಿ ಮಿತ್ರಪಕ್ಷ ಟಿಡಿಪಿ ಪ್ರಮುಖ ಬದಲಾವಣೆ ಕೋರುವ ಸಾಧ್ಯತೆ.. ಏನದು?

ವಕ್ಫ್‌ ಮಸೂದೆಯಲ್ಲಿ ಬಿಜೆಪಿ ಮಿತ್ರಪಕ್ಷ ಟಿಡಿಪಿ ಪ್ರಮುಖ ಬದಲಾವಣೆ ಕೋರುವ ಸಾಧ್ಯತೆ.. ಏನದು?

- Advertisement -
- Advertisement -

ವಿವಾದಾತ್ಮಕ ವಕ್ಫ್‌ (ತಿದ್ದುಪಡಿ) ಮಸೂದೆ-2024 ಇಂದು (ಏಪ್ರಿಲ್ 2) ಲೋಕಸಭೆಯಲ್ಲಿ ಮಂಡನೆಯಾಗಲಿದೆ. ಬಿಜೆಪಿ ನೇತೃತ್ವದ ಎನ್‌ಡಿಎ ಮತ್ತು ಕಾಂಗ್ರೆಸ್‌ ನೇತೃತ್ವದ ಇಂಡಿಯಾ ಒಕ್ಕೂಟಗಳು ಮಸೂದೆಯ ಪರ-ವಿರೋಧ ಚರ್ಚೆಗೆ ಸಜ್ಜಾಗಿದೆ. ಇಡೀ ದೇಶದ ಚಿತ್ತ ಸಂಸತ್ತಿನತ್ತ ನೆಟ್ಟಿದೆ.

ಈ ನಡುವೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರದ ಪ್ರಮುಖ ಮಿತ್ರ ಪಕ್ಷವಾಗಿರುವ ತೆಲುಗು ದೇಶಂ ಪಕ್ಷ (ಟಿಡಿಪಿ), ವಕ್ಫ್ ಮಸೂದೆಯಲ್ಲಿ ಒಂದು ಪ್ರಮುಖ ತಿದ್ದುಪಡಿ ಕೋರುವ ಸಾಧ್ಯತೆ ಇದೆ.

ಮಂಗಳವಾರ (ಏಪ್ರಿಲ್ 1) ತನ್ನ 16 ಸಂಸದರಿಗೆ ಲೋಕಸಭೆಯಲ್ಲಿ ಹಾಜರಿರಬೇಕು ಮತ್ತು ಸರ್ಕಾರವನ್ನು ಬೆಂಬಲಿಸಬೇಕೆಂದು ವಿಪ್ ಜಾರಿ ಮಾಡಿರುವ ಟಿಡಿಪಿ, ರಾಜ್ಯ ವಕ್ಫ್ ಮಂಡಳಿಗಳಲ್ಲಿ ಮುಸ್ಲಿಮೇತರರಿಗೆ ಅವಕಾಶ ನೀಡುವ ಮಸೂದೆಯ ವಿವಾದಾತ್ಮಕ ಅಂಶದ ಕುರಿತು ಬದಲಾವಣೆ ಕೋರುವ ನಿರೀಕ್ಷೆಯಿದೆ ಎಂದು ಇಂಡಿಯನ್‌ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ರಾಜ್ಯ ವಕ್ಫ್‌ ಮಂಡಳಿಗಳಲ್ಲಿ ಮುಸ್ಲಿಮೇತರರ ಪ್ರಾತಿನಿಧ್ಯದ ವಿಷಯವನ್ನು ಆಯಾ ರಾಜ್ಯಗಳ ವಿವೇಚನೆಗೆ ಬಿಡಬೇಕೆಂದು ಟಿಡಿಪಿ ಕೇಂದ್ರ ಸರ್ಕಾರತವನ್ನು ಸರ್ವಾನುಮತದಿಂದ ಒತ್ತಾಯಿಸಲಿದೆ ಎಂದು ಅದರ ಮೂಲವೊಂದನ್ನು ಉಲ್ಲೇಖಿಸಿ ಇಂಡಿಯನ್‌ ಎಕ್ಸ್‌ಪ್ರೆಸ್‌ ಹೇಳಿದೆ.

ವಕ್ಫ್ ಮಂಡಳಿಗಳಲ್ಲಿ ಮಹಿಳೆಯರ ಸೇರ್ಪಡೆ ಸೇರಿದಂತೆ ಮಸೂದೆಯ ಇತರ ಎಲ್ಲಾ ತಿದ್ದುಪಡಿಗಳನ್ನು ಟಿಡಿಪಿ ಬೆಂಬಲಿಸಲಿದೆ. ಮಹಿಳೆಯರ ಪ್ರಾತಿನಿಧ್ಯ ಪ್ರಗತಿಪರ ಬದಲಾವಣೆ ಎಂಬುವುದು ಪಕ್ಷದ ಅಭಿಪ್ರಾಯ ಎಂದು ವರದಿ ವಿವರಿಸಿದೆ.

ಆಂಧ್ರ ಪ್ರದೇಶದ ಮುಖ್ಯಮಂತ್ರಿ ಮತ್ತು ಟಿಡಿಪಿ ಮುಖ್ಯಸ್ಥ ಎನ್. ಚಂದ್ರಬಾಬು ನಾಯ್ಡು ಸೇರಿದಂತೆ ಟಿಡಿಪಿ ನಾಯಕರು ಮಂಗಳವಾರ ಮಧ್ಯರಾತ್ರಿಯವರೆಗೂ ವಕ್ಫ್‌ ತಿದ್ದುಪಡಿ ಮಸೂದೆ ಕುರಿತು ಚರ್ಚೆ ನಡೆಸಿದ್ದಾರೆ. ಮಸೂದೆಯ ನಿಬಂಧನೆಗಳು ಮತ್ತು ಅದರ ಪರಿಣಾಮಗಳ ಕುರಿತು ಕಾನೂನು ತಜ್ಞರೊಂದಿಗೆ ಸಮಾಲೋಚಿಸಿದ್ದಾರೆ. ನಾಯ್ಡು ಅವರು ಮುಸ್ಲಿಂ ಗುಂಪುಗಳೊಂದಿಗೆ ತಮಗೆ ಯಾವುದು ಸ್ವೀಕಾರಾರ್ಹ ಮತ್ತು ಯಾವುದು ಸ್ವೀಕಾರಾರ್ಹವಲ್ಲ ಎಂಬುದನ್ನು ನೋಡಲು ಮಾತುಕತೆ ನಡೆಸಿದ್ದಾರೆ.

ವಕ್ಫ್ ಮಂಡಳಿಗಳಲ್ಲಿ ಮುಸ್ಲಿಮೇತರರನ್ನು ಸೇರಿಸುವುದಕ್ಕೆ ಟಿಡಿಪಿಯ ವಿರೋಧವು, ‘ವಕ್ಫ್ ಕಾಯ್ದೆಯಲ್ಲಿನ ಬದಲಾವಣೆಗಳು ಆಂಧ್ರ ಪ್ರದೇಶದ ಮುಸ್ಲಿಂ ಸಮುದಾಯದ ಮೇಲೆ ಪರಿಣಾಮ ಬೀರುವುದಿಲ್ಲ’ ಎಂದು ಪಕ್ಷವು ನೀಡಿದ ಭರವಸೆ ಎಂದು ಪರಿಗಣಿಸಬೇಕು. ನಾವು ಬೆಂಬಲಿಸುತ್ತಿರುವುದು ಮುಸ್ಲಿಂ ಸಮುದಾಯಕ್ಕೆ ಪ್ರಯೋಜನಕಾರಿಯಾದ ಪ್ರಗತಿಪರ ಬದಲಾವಣೆಗಳು ಮಾತ್ರ ಟಿಡಿಪಿ ಮೂಲಗಳು ಹೇಳಿರುವುದಾಗಿ ವರದಿ ತಿಳಿಸಿದೆ.

ಕಳೆದ ಮಾರ್ಚ್‌ನಲ್ಲಿ ನಡೆದ ಇಫ್ತಾರ್‌ ಸಂಗಮದಲ್ಲಿ ಟಿಡಿಪಿ ಮುಸ್ಲಿಂ ಸಮುದಾಯದ ಹಿತದೃಷ್ಟಿಯಿಂದ ಕೆಲಸ ಮಾಡುತ್ತದೆ ಎಂದು ಸಿಎಂ ಚಂದ್ರಬಾಬು ನಾಯ್ಡು ಭರವಸೆ ನೀಡಿದ್ದರು. ತಮ್ಮ ಸರ್ಕಾರ ವಕ್ಫ್ ಆಸ್ತಿಗಳನ್ನು ರಕ್ಷಿಸಲು ಬದ್ಧವಾಗಿದೆ ಎಂದು ನಾಯ್ಡು ಹೇಳಿದ್ದರು. ಟಿಡಿಪಿ ಆಡಳಿತದಲ್ಲಿ ಮುಸ್ಲಿಂ ಸಮುದಾಯಕ್ಕೆ ನ್ಯಾಯ ದೊರಕಿದೆ. ಎನ್‌ಡಿಎ ಅಧಿಕಾರದಲ್ಲಿದ್ದರೆ ಮುಸ್ಲಿಮರು ಅಭಿವೃದ್ದಿಯಾಗುತ್ತಾರೆ ಎಂದಿದ್ದರು.

ಆಂಧ್ರದಲ್ಲಿ ಟಿಡಿಪಿಗೆ ಮುಸ್ಲಿಮರು ನಿರ್ಣಾಯಕ ಮತಬ್ಯಾಂಕ್ ಆಗಿದ್ದಾರೆ.

ವಕ್ಫ್ (ತಿದ್ದುಪಡಿ) ಮಸೂದೆಯ ಪ್ರಕಾರ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಮತ್ತು ವಿವಿಧ ವಕ್ಫ್ ಮಂಡಳಿಗಳಿಗೆ ಸಲಹೆ ನೀಡುವ ಕೇಂದ್ರ ವಕ್ಫ್ ಕೌನ್ಸಿಲ್ ಮುಸ್ಲಿಮೇತರ ಸದಸ್ಯರನ್ನು ಹೊಂದಬಹುದು.
ವಕ್ಫ್‌ ಇಲಾಖೆಯ ಉಸ್ತುವಾರಿ ವಹಿಸುವ ಕೇಂದ್ರ ಸಚಿವರು ಕೌನ್ಸಿಲ್‌ನ ಪದನಿಮಿತ್ತ ಅಧ್ಯಕ್ಷರಾಗಿರುತ್ತಾರೆ.

ಪ್ರಸ್ತುತ ವಕ್ಫ್‌ ಕಾಯ್ದೆಯ ಪ್ರಕಾರ ಎಲ್ಲಾ ಕೌನ್ಸಿಲ್ ಸದಸ್ಯರು ಮುಸ್ಲಿಮರಾಗಿರಬೇಕು ಮತ್ತು ಕನಿಷ್ಠ ಇಬ್ಬರು ಮಹಿಳಾ ಸದಸ್ಯರು ಇರಬೇಕು. ಆದರೆ, ತಿದ್ದುಪಡಿ ಮಸೂದೆಯು ಸಂಸದರು, ಮಾಜಿ ನ್ಯಾಯಾಧೀಶರು ಮತ್ತು ಕಾಯ್ದೆಯ ಪ್ರಕಾರ ಪರಿಷತ್ತಿಗೆ ನೇಮಕಗೊಂಡ ಗಣ್ಯ ವ್ಯಕ್ತಿಗಳು ಮುಸ್ಲಿಮರಾಗಿರಬೇಕಾಗಿಲ್ಲ ಎಂದು ಹೇಳುತ್ತದೆ.

ತಿದ್ದುಪಡಿ ಮಸೂದೆಯಲ್ಲಿ ಸೂಚಿಸಲಾದ ಇತರ ಬದಲಾವಣೆಗಳಲ್ಲಿ ವಕ್ಫ್‌ ಕಾಯ್ದೆಯ ಹೆಸರನ್ನು “ಏಕೀಕೃತ ವಕ್ಫ್ ನಿರ್ವಹಣೆ, ಸಬಲೀಕರಣ, ದಕ್ಷತೆ ಮತ್ತು ಅಭಿವೃದ್ಧಿ ಕಾಯ್ದೆ-1995″ ಎಂದು ಮರುನಾಮಕರಣ ಮಾಡುವುದು ಸೇರಿದೆ.

ವಕ್ಫ್ ಮಂಡಳಿಗಳು, ಆಸ್ತಿಗಳ ನಿರ್ವಹಣೆ ಮತ್ತು ದಕ್ಷತೆಯನ್ನು ಸುಧಾರಿಸುವ, ಪರಿಣಾಮಕಾರಿ ಆಡಳಿತದ ಜೊತೆಗೆ ಸಬಲೀಕರಣ ಮತ್ತು ಅಭಿವೃದ್ಧಿಯನ್ನು ಒತ್ತಿಹೇಳುವ ವಿಶಾಲ ಉದ್ದೇಶ ಇದರ ಹಿಂದೆ ಇದೆ ಎಂದು ಸರ್ಕಾರ ಸಮರ್ಥಿಸಿಕೊಂಡಿದೆ.

ಇದಲ್ಲದೆ, ಯಾವುದಾದರು ಆಸ್ತಿಯನ್ನು ‘ವಕ್ಫ್‌’ ಆಸ್ತಿ ಎಂದು ಪ್ರತಿಪಾದಿಸಿದರೆ, ಜಿಲ್ಲಾಧಿಕಾರಿ ಅದರ ಮಾಲೀಕತ್ವವನ್ನು ನಿರ್ಧರಿಸಿ ರಾಜ್ಯ ಸರ್ಕಾರಕ್ಕೆ ವರದಿ ಸಲ್ಲಿಸುತ್ತಾರೆ. ಜಿಲ್ಲಾಧಿಕಾರಿ ಒಂದು ವೇಳೆ ವಕ್ಫ್ ಎಂದು ಹೇಳಲಾದ ಆಸ್ತಿಯನ್ನು ಸರ್ಕಾರಿ ಆಸ್ತಿ ಎಂದು ಹೇಳಿದರೆ, ಅದನ್ನು ಸರ್ಕಾರ ಕಂದಾಯ ಇಲಾಖೆಯ ಅಡಿಯಲ್ಲಿ ನೋಂದಾಯಿಸುತ್ತದೆ” ಎಂದು ತಿದ್ದುಪಡಿ ಮಸೂದೆ ಹೇಳುತ್ತದೆ. ಮಾಲೀಕತ್ವ ನಿರ್ಣಯದ ಪ್ರಕ್ರಿಯೆ ಪ್ರಸ್ತುತ ವಕ್ಫ್‌ ಟ್ರಿಬ್ಯೂನಲ್‌ನಲ್ಲಿ ನಡೆಯುತ್ತಿದೆ.

ಲೋಕಸಭೆಯಲ್ಲಿ ವಕ್ಫ್ ಮಸೂದೆ ಇಂದು ಮಂಡನೆ | ತೀವ್ರ ವಿರೋಧಕ್ಕೆ ಇಂಡಿಯಾ ಮೈತ್ರಿಕೂಟ ಸಿದ್ದತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...