Homeಮುಖಪುಟವಕ್ಫ್‌ ಮಸೂದೆಯಲ್ಲಿ ಬಿಜೆಪಿ ಮಿತ್ರಪಕ್ಷ ಟಿಡಿಪಿ ಪ್ರಮುಖ ಬದಲಾವಣೆ ಕೋರುವ ಸಾಧ್ಯತೆ.. ಏನದು?

ವಕ್ಫ್‌ ಮಸೂದೆಯಲ್ಲಿ ಬಿಜೆಪಿ ಮಿತ್ರಪಕ್ಷ ಟಿಡಿಪಿ ಪ್ರಮುಖ ಬದಲಾವಣೆ ಕೋರುವ ಸಾಧ್ಯತೆ.. ಏನದು?

- Advertisement -
- Advertisement -

ವಿವಾದಾತ್ಮಕ ವಕ್ಫ್‌ (ತಿದ್ದುಪಡಿ) ಮಸೂದೆ-2024 ಇಂದು (ಏಪ್ರಿಲ್ 2) ಲೋಕಸಭೆಯಲ್ಲಿ ಮಂಡನೆಯಾಗಲಿದೆ. ಬಿಜೆಪಿ ನೇತೃತ್ವದ ಎನ್‌ಡಿಎ ಮತ್ತು ಕಾಂಗ್ರೆಸ್‌ ನೇತೃತ್ವದ ಇಂಡಿಯಾ ಒಕ್ಕೂಟಗಳು ಮಸೂದೆಯ ಪರ-ವಿರೋಧ ಚರ್ಚೆಗೆ ಸಜ್ಜಾಗಿದೆ. ಇಡೀ ದೇಶದ ಚಿತ್ತ ಸಂಸತ್ತಿನತ್ತ ನೆಟ್ಟಿದೆ.

ಈ ನಡುವೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರದ ಪ್ರಮುಖ ಮಿತ್ರ ಪಕ್ಷವಾಗಿರುವ ತೆಲುಗು ದೇಶಂ ಪಕ್ಷ (ಟಿಡಿಪಿ), ವಕ್ಫ್ ಮಸೂದೆಯಲ್ಲಿ ಒಂದು ಪ್ರಮುಖ ತಿದ್ದುಪಡಿ ಕೋರುವ ಸಾಧ್ಯತೆ ಇದೆ.

ಮಂಗಳವಾರ (ಏಪ್ರಿಲ್ 1) ತನ್ನ 16 ಸಂಸದರಿಗೆ ಲೋಕಸಭೆಯಲ್ಲಿ ಹಾಜರಿರಬೇಕು ಮತ್ತು ಸರ್ಕಾರವನ್ನು ಬೆಂಬಲಿಸಬೇಕೆಂದು ವಿಪ್ ಜಾರಿ ಮಾಡಿರುವ ಟಿಡಿಪಿ, ರಾಜ್ಯ ವಕ್ಫ್ ಮಂಡಳಿಗಳಲ್ಲಿ ಮುಸ್ಲಿಮೇತರರಿಗೆ ಅವಕಾಶ ನೀಡುವ ಮಸೂದೆಯ ವಿವಾದಾತ್ಮಕ ಅಂಶದ ಕುರಿತು ಬದಲಾವಣೆ ಕೋರುವ ನಿರೀಕ್ಷೆಯಿದೆ ಎಂದು ಇಂಡಿಯನ್‌ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ರಾಜ್ಯ ವಕ್ಫ್‌ ಮಂಡಳಿಗಳಲ್ಲಿ ಮುಸ್ಲಿಮೇತರರ ಪ್ರಾತಿನಿಧ್ಯದ ವಿಷಯವನ್ನು ಆಯಾ ರಾಜ್ಯಗಳ ವಿವೇಚನೆಗೆ ಬಿಡಬೇಕೆಂದು ಟಿಡಿಪಿ ಕೇಂದ್ರ ಸರ್ಕಾರತವನ್ನು ಸರ್ವಾನುಮತದಿಂದ ಒತ್ತಾಯಿಸಲಿದೆ ಎಂದು ಅದರ ಮೂಲವೊಂದನ್ನು ಉಲ್ಲೇಖಿಸಿ ಇಂಡಿಯನ್‌ ಎಕ್ಸ್‌ಪ್ರೆಸ್‌ ಹೇಳಿದೆ.

ವಕ್ಫ್ ಮಂಡಳಿಗಳಲ್ಲಿ ಮಹಿಳೆಯರ ಸೇರ್ಪಡೆ ಸೇರಿದಂತೆ ಮಸೂದೆಯ ಇತರ ಎಲ್ಲಾ ತಿದ್ದುಪಡಿಗಳನ್ನು ಟಿಡಿಪಿ ಬೆಂಬಲಿಸಲಿದೆ. ಮಹಿಳೆಯರ ಪ್ರಾತಿನಿಧ್ಯ ಪ್ರಗತಿಪರ ಬದಲಾವಣೆ ಎಂಬುವುದು ಪಕ್ಷದ ಅಭಿಪ್ರಾಯ ಎಂದು ವರದಿ ವಿವರಿಸಿದೆ.

ಆಂಧ್ರ ಪ್ರದೇಶದ ಮುಖ್ಯಮಂತ್ರಿ ಮತ್ತು ಟಿಡಿಪಿ ಮುಖ್ಯಸ್ಥ ಎನ್. ಚಂದ್ರಬಾಬು ನಾಯ್ಡು ಸೇರಿದಂತೆ ಟಿಡಿಪಿ ನಾಯಕರು ಮಂಗಳವಾರ ಮಧ್ಯರಾತ್ರಿಯವರೆಗೂ ವಕ್ಫ್‌ ತಿದ್ದುಪಡಿ ಮಸೂದೆ ಕುರಿತು ಚರ್ಚೆ ನಡೆಸಿದ್ದಾರೆ. ಮಸೂದೆಯ ನಿಬಂಧನೆಗಳು ಮತ್ತು ಅದರ ಪರಿಣಾಮಗಳ ಕುರಿತು ಕಾನೂನು ತಜ್ಞರೊಂದಿಗೆ ಸಮಾಲೋಚಿಸಿದ್ದಾರೆ. ನಾಯ್ಡು ಅವರು ಮುಸ್ಲಿಂ ಗುಂಪುಗಳೊಂದಿಗೆ ತಮಗೆ ಯಾವುದು ಸ್ವೀಕಾರಾರ್ಹ ಮತ್ತು ಯಾವುದು ಸ್ವೀಕಾರಾರ್ಹವಲ್ಲ ಎಂಬುದನ್ನು ನೋಡಲು ಮಾತುಕತೆ ನಡೆಸಿದ್ದಾರೆ.

ವಕ್ಫ್ ಮಂಡಳಿಗಳಲ್ಲಿ ಮುಸ್ಲಿಮೇತರರನ್ನು ಸೇರಿಸುವುದಕ್ಕೆ ಟಿಡಿಪಿಯ ವಿರೋಧವು, ‘ವಕ್ಫ್ ಕಾಯ್ದೆಯಲ್ಲಿನ ಬದಲಾವಣೆಗಳು ಆಂಧ್ರ ಪ್ರದೇಶದ ಮುಸ್ಲಿಂ ಸಮುದಾಯದ ಮೇಲೆ ಪರಿಣಾಮ ಬೀರುವುದಿಲ್ಲ’ ಎಂದು ಪಕ್ಷವು ನೀಡಿದ ಭರವಸೆ ಎಂದು ಪರಿಗಣಿಸಬೇಕು. ನಾವು ಬೆಂಬಲಿಸುತ್ತಿರುವುದು ಮುಸ್ಲಿಂ ಸಮುದಾಯಕ್ಕೆ ಪ್ರಯೋಜನಕಾರಿಯಾದ ಪ್ರಗತಿಪರ ಬದಲಾವಣೆಗಳು ಮಾತ್ರ ಟಿಡಿಪಿ ಮೂಲಗಳು ಹೇಳಿರುವುದಾಗಿ ವರದಿ ತಿಳಿಸಿದೆ.

ಕಳೆದ ಮಾರ್ಚ್‌ನಲ್ಲಿ ನಡೆದ ಇಫ್ತಾರ್‌ ಸಂಗಮದಲ್ಲಿ ಟಿಡಿಪಿ ಮುಸ್ಲಿಂ ಸಮುದಾಯದ ಹಿತದೃಷ್ಟಿಯಿಂದ ಕೆಲಸ ಮಾಡುತ್ತದೆ ಎಂದು ಸಿಎಂ ಚಂದ್ರಬಾಬು ನಾಯ್ಡು ಭರವಸೆ ನೀಡಿದ್ದರು. ತಮ್ಮ ಸರ್ಕಾರ ವಕ್ಫ್ ಆಸ್ತಿಗಳನ್ನು ರಕ್ಷಿಸಲು ಬದ್ಧವಾಗಿದೆ ಎಂದು ನಾಯ್ಡು ಹೇಳಿದ್ದರು. ಟಿಡಿಪಿ ಆಡಳಿತದಲ್ಲಿ ಮುಸ್ಲಿಂ ಸಮುದಾಯಕ್ಕೆ ನ್ಯಾಯ ದೊರಕಿದೆ. ಎನ್‌ಡಿಎ ಅಧಿಕಾರದಲ್ಲಿದ್ದರೆ ಮುಸ್ಲಿಮರು ಅಭಿವೃದ್ದಿಯಾಗುತ್ತಾರೆ ಎಂದಿದ್ದರು.

ಆಂಧ್ರದಲ್ಲಿ ಟಿಡಿಪಿಗೆ ಮುಸ್ಲಿಮರು ನಿರ್ಣಾಯಕ ಮತಬ್ಯಾಂಕ್ ಆಗಿದ್ದಾರೆ.

ವಕ್ಫ್ (ತಿದ್ದುಪಡಿ) ಮಸೂದೆಯ ಪ್ರಕಾರ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಮತ್ತು ವಿವಿಧ ವಕ್ಫ್ ಮಂಡಳಿಗಳಿಗೆ ಸಲಹೆ ನೀಡುವ ಕೇಂದ್ರ ವಕ್ಫ್ ಕೌನ್ಸಿಲ್ ಮುಸ್ಲಿಮೇತರ ಸದಸ್ಯರನ್ನು ಹೊಂದಬಹುದು.
ವಕ್ಫ್‌ ಇಲಾಖೆಯ ಉಸ್ತುವಾರಿ ವಹಿಸುವ ಕೇಂದ್ರ ಸಚಿವರು ಕೌನ್ಸಿಲ್‌ನ ಪದನಿಮಿತ್ತ ಅಧ್ಯಕ್ಷರಾಗಿರುತ್ತಾರೆ.

ಪ್ರಸ್ತುತ ವಕ್ಫ್‌ ಕಾಯ್ದೆಯ ಪ್ರಕಾರ ಎಲ್ಲಾ ಕೌನ್ಸಿಲ್ ಸದಸ್ಯರು ಮುಸ್ಲಿಮರಾಗಿರಬೇಕು ಮತ್ತು ಕನಿಷ್ಠ ಇಬ್ಬರು ಮಹಿಳಾ ಸದಸ್ಯರು ಇರಬೇಕು. ಆದರೆ, ತಿದ್ದುಪಡಿ ಮಸೂದೆಯು ಸಂಸದರು, ಮಾಜಿ ನ್ಯಾಯಾಧೀಶರು ಮತ್ತು ಕಾಯ್ದೆಯ ಪ್ರಕಾರ ಪರಿಷತ್ತಿಗೆ ನೇಮಕಗೊಂಡ ಗಣ್ಯ ವ್ಯಕ್ತಿಗಳು ಮುಸ್ಲಿಮರಾಗಿರಬೇಕಾಗಿಲ್ಲ ಎಂದು ಹೇಳುತ್ತದೆ.

ತಿದ್ದುಪಡಿ ಮಸೂದೆಯಲ್ಲಿ ಸೂಚಿಸಲಾದ ಇತರ ಬದಲಾವಣೆಗಳಲ್ಲಿ ವಕ್ಫ್‌ ಕಾಯ್ದೆಯ ಹೆಸರನ್ನು “ಏಕೀಕೃತ ವಕ್ಫ್ ನಿರ್ವಹಣೆ, ಸಬಲೀಕರಣ, ದಕ್ಷತೆ ಮತ್ತು ಅಭಿವೃದ್ಧಿ ಕಾಯ್ದೆ-1995″ ಎಂದು ಮರುನಾಮಕರಣ ಮಾಡುವುದು ಸೇರಿದೆ.

ವಕ್ಫ್ ಮಂಡಳಿಗಳು, ಆಸ್ತಿಗಳ ನಿರ್ವಹಣೆ ಮತ್ತು ದಕ್ಷತೆಯನ್ನು ಸುಧಾರಿಸುವ, ಪರಿಣಾಮಕಾರಿ ಆಡಳಿತದ ಜೊತೆಗೆ ಸಬಲೀಕರಣ ಮತ್ತು ಅಭಿವೃದ್ಧಿಯನ್ನು ಒತ್ತಿಹೇಳುವ ವಿಶಾಲ ಉದ್ದೇಶ ಇದರ ಹಿಂದೆ ಇದೆ ಎಂದು ಸರ್ಕಾರ ಸಮರ್ಥಿಸಿಕೊಂಡಿದೆ.

ಇದಲ್ಲದೆ, ಯಾವುದಾದರು ಆಸ್ತಿಯನ್ನು ‘ವಕ್ಫ್‌’ ಆಸ್ತಿ ಎಂದು ಪ್ರತಿಪಾದಿಸಿದರೆ, ಜಿಲ್ಲಾಧಿಕಾರಿ ಅದರ ಮಾಲೀಕತ್ವವನ್ನು ನಿರ್ಧರಿಸಿ ರಾಜ್ಯ ಸರ್ಕಾರಕ್ಕೆ ವರದಿ ಸಲ್ಲಿಸುತ್ತಾರೆ. ಜಿಲ್ಲಾಧಿಕಾರಿ ಒಂದು ವೇಳೆ ವಕ್ಫ್ ಎಂದು ಹೇಳಲಾದ ಆಸ್ತಿಯನ್ನು ಸರ್ಕಾರಿ ಆಸ್ತಿ ಎಂದು ಹೇಳಿದರೆ, ಅದನ್ನು ಸರ್ಕಾರ ಕಂದಾಯ ಇಲಾಖೆಯ ಅಡಿಯಲ್ಲಿ ನೋಂದಾಯಿಸುತ್ತದೆ” ಎಂದು ತಿದ್ದುಪಡಿ ಮಸೂದೆ ಹೇಳುತ್ತದೆ. ಮಾಲೀಕತ್ವ ನಿರ್ಣಯದ ಪ್ರಕ್ರಿಯೆ ಪ್ರಸ್ತುತ ವಕ್ಫ್‌ ಟ್ರಿಬ್ಯೂನಲ್‌ನಲ್ಲಿ ನಡೆಯುತ್ತಿದೆ.

ಲೋಕಸಭೆಯಲ್ಲಿ ವಕ್ಫ್ ಮಸೂದೆ ಇಂದು ಮಂಡನೆ | ತೀವ್ರ ವಿರೋಧಕ್ಕೆ ಇಂಡಿಯಾ ಮೈತ್ರಿಕೂಟ ಸಿದ್ದತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...