Homeಮುಖಪುಟ‘ಕಾಂಗ್ರೆಸ್ ಆಟ’ ಆಡುತ್ತಾ ಸೋಲುತ್ತಿರುವ ಬಿಜೆಪಿ...

‘ಕಾಂಗ್ರೆಸ್ ಆಟ’ ಆಡುತ್ತಾ ಸೋಲುತ್ತಿರುವ ಬಿಜೆಪಿ…

- Advertisement -
- Advertisement -

ಕಳೆದ ವಾರ ಮೋದಿಯವರು ಆಡಿದರೆನ್ನಲಾದ ಒಂದು ಮಾತು ಗಮನ ಸೆಳೆದಿತ್ತು. ಮಹಾರಾಷ್ಟ್ರದಲ್ಲಿ ಕಳೆದ ಬಾರಿಗಿಂತ ಕಡಿಮೆ ಸೀಟುಗಳನ್ನು ಪಡೆದರೂ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದ ಬಿಜೆಪಿಯು ಸರ್ಕಾರ ರಚಿಸಿರಲಿಲ್ಲ. ಏಕೆಂದರೆ ಶಿವಸೇನಾದ ಜೊತೆಗೆ ಡೀಲ್ ಕುದುರಲಿಲ್ಲ. ರಾಜ್ಯಪಾಲರ ಬಳಿ ಹೋದ ಬಿಜೆಪಿಯು ಅಧಿಕೃತವಾಗಿ ತಾನು ಸರ್ಕಾರ ರಚಿಸುವುದಿಲ್ಲ ಎಂದು ಹೇಳಿತ್ತು. ಸಂಸತ್ತಿನ ಅಧಿವೇಶನ ಆ ನಂತರ ಆರಂಭವಾಗುವುದರಲ್ಲಿತ್ತು. ಅದಕ್ಕೆ ಮುಂಚೆ ನಡೆದ ಬಿಜೆಪಿ ಸಂಸತ್‌ ಸದಸ್ಯರ ಸಭೆಯಲ್ಲಿ ಪ್ರಧಾನಿ ಮೋದಿಯವರು ಆ ಮಾತನ್ನು ಹೇಳಿದರು. ‘ಮಹಾರಾಷ್ಟ್ರದಲ್ಲಿ ನೋಡಿ, ಸರ್ಕಾರ ರಚಿಸದಿದ್ದರೂ ಪರವಾಗಿಲ್ಲ. ನಾವಾಗಲೇ ಗೆದ್ದಿದ್ದೇವೆ. ಏಕೆಂದರೆ ನಮ್ಮವರು ಯಾರೂ ಬೇಕಾದ್ದನ್ನು ಮಾತಾಡಲಿಲ್ಲ’.

ಅಂದರೆ, ಕಾಂಗ್ರೆಸ್ ಮತ್ತಿತರ ಬಿಜೆಪಿಯೇತರ ಪಕ್ಷಗಳು ಅಧಿಕಾರಕ್ಕಾಗಿ ಅನೈತಿಕ ಮೈತ್ರಿಯನ್ನು ಮಾಡಿಕೊಳ್ಳಲು ಹವಣಿಸಿವೆಯೆಂದೂ, ಬಿಜೆಪಿಯು ಶಿವಸೇನೆಯು ‘ನೀತಿಬದ್ಧವಾಗಿ ತನ್ನೊಂದಿಗೆ ಬರದೇ ಇದ್ದರೆ’ ತಾನು ಅಧಿಕಾರದಿಂದ ದೂರವುಳಿಯುವುದಾಗಿಯೂ ತೋರ್ಪಡಿಸಿದ್ದರ ಕುರಿತಾಗಿ ಪ್ರಧಾನಿ ಮಾತಾಡಿದ್ದು ಸ್ಪಷ್ಟವಾಗಿತ್ತು. ವಾಸ್ತವದಲ್ಲಿ ಅಂತಹ ಯಾವ ನೀತಿಗಳೂ ಇಲ್ಲದೇ ವಿರೋಧಪಕ್ಷಗಳನ್ನು ಬೆದರಿಸಿ, ಆಮಿಷವೊಡ್ಡಿ ಅಥವಾ ಯಾವುದಾದರೂ ಒಂದು ಮಾರ್ಗದ ಮೂಲಕ ಬಿಜೆಪಿಯು ವಿವಿಧ ರಾಜ್ಯಗಳಲ್ಲಿ ಅಧಿಕಾರ ಹಿಡಿಯುತ್ತಿರುವುದು ಸ್ಪಷ್ಟ. ಸೈದ್ಧಾಂತಿಕ ವಿರೋಧಿಗಳ ಜೊತೆಗೂ ಅದು ಕೈ ಜೋಡಿಸಿದೆ. ಕರ್ನಾಟಕದಿಂದ ಕಾಶ್ಮೀರದವರೆಗೆ, ಬಿಹಾರದಿಂದ ಈಶಾನ್ಯ ಭಾರತದ ರಾಜ್ಯಗಳವರೆಗೆ ಅದು ನಡೆದಿದೆ.

ಬಹುಕಾಲ ನಡೆಯುತ್ತಾ ಬರುತ್ತಿದ್ದ ಈ ‘ಕಾಂಗ್ರೆಸ್ ಆಟ’ದಲ್ಲಿ ಬಿಜೆಪಿ ಎಲ್ಲ ಸೀಮಾರೇಖೆಗಳನ್ನು ದಾಟಿರುವುದು ಸ್ಪಷ್ಟ. ಹೀಗಿರುವಾಗ ಮಹಾರಾಷ್ಟ್ರದಲ್ಲಿ ಮಾತ್ರ ಅಧಿಕೃತವಾಗಿ ರಾಜ್ಯಪಾಲರ ಬಳಿ ಹೋಗಿ ಸರ್ಕಾರ ರಚಿಸುವುದಿಲ್ಲವೆಂದು ಹೇಳಿದ್ದು ಮತ್ತು ಮೋದಿಯವರು ಅದನ್ನು ಉಲ್ಲೇಖಿಸಿ ಬಿಜೆಪಿಯ ಹಿರಿಮೆಯ ಕುರಿತಾಗಿ ಮಾತಾಡಿದ್ದು ವಿಶೇಷವಾಗಿತ್ತು. ‘ಬೇಕಾದಷ್ಟು ರಾಜ್ಯಗಳಲ್ಲಿ ಅಧಿಕಾರ ಹಿಡಿದಾಗಿದೆ. ಕೇಂದ್ರದಲ್ಲಂತೂ ನಮ್ಮನ್ನು ಸರಿಗಟ್ಟುವವರಾರೂ ಇಲ್ಲ. ಹಾಗಾಗಿ ಇನ್ನು ಸಾಕು’ ಎಂದೇನಾದರೂ ತೀರ್ಮಾನ ಮಾಡಿಕೊಂಡಿದ್ದರೆ ಅಷ್ಟರಮಟ್ಟಿಗಾದರೂ ಅದು ಒಳ್ಳೆಯದೇ ಆಗಿರುತ್ತಿತ್ತು.

ಹಾಗೆ ನೋಡಿದರೆ ಅಧಿಕಾರ ಹಂಚಿಕೊಳ್ಳಲು ಸಾಕಾಗಿದ್ದ ಮೈತ್ರಿಯನ್ನು ಇಟ್ಟುಕೊಂಡು ಸರ್ಕಾರ ರಚನೆಯ ಹಕ್ಕು ಮಂಡಿಸಲು ಶಿವಸೇನೆ, ಎನ್‌ಸಿಪಿ ಮತ್ತು ಕಾಂಗ್ರೆಸ್ ನಾಯಕರು ರಾಜ್ಯಪಾಲರಲ್ಲಿ ಹೋಗಲು ಆತುರ ತೋರಿರಲಿಲ್ಲ. ಮೈತ್ರಿ ಮಾಡಿಕೊಳ್ಳಲೂ ಮೀನಮೇಷ ಎಣಿಸಿದ್ದಲ್ಲದೇ, ಅಧಿಕಾರ ಹಂಚಿಕೆಯ ಸೂತ್ರ ಮತ್ತು ಸಾಮಾನ್ಯ ಕನಿಷ್ಠ ಕಾರ್ಯಕ್ರಮ ರೂಪಿಸಿಕೊಳ್ಳಲು ಸಾಕಷ್ಟು ಸಮಯ ತೆಗೆದುಕೊಂಡರು. ಅಂದರೆ ಕೂಡಲೇ ಅಧಿಕಾರ ಹಿಡಿದುಬಿಡುವ ಆತುರ ತಮಗೇನೂ ಇಲ್ಲ ಎಂಬಂತೆ ನಡೆದುಕೊಂಡರು.

ಶಿವಸೇನೆ ಜೊತೆ ಎಷ್ಟೇ ಭಿನ್ನಾಭಿಪ್ರಾಯಗಳಿದ್ದರೂ ಅಧಿಕಾರಕ್ಕಾಗಿಯೇ ಎನ್‌ಸಿಪಿ ಹಾಗೂ ಕಾಂಗ್ರೆಸ್‌ಗಳು ಮುಂದಾದವು ಎಂಬುದರಲ್ಲಿ ಯಾವುದೇ ಸಂಶಯವಿಲ್ಲ. ಹಾಗಾಗಿ ಆರಂಭದ ತೋರ್ಪಡಿಕೆಯ ಹಿಂಜರಿಕೆಯ ನಂತರ ಅವೂ ಪವರ್ ಷೇರಿಂಗ್ ಮಾತುಕತೆಗಳಿಗೆ ಕೂತರು. ಯಾರೂ ಸರ್ಕಾರ ರಚನೆ ಮಾಡಲಾಗದ ಅನಿವಾರ್ಯ ಸ್ಥಿತಿಯಲ್ಲಿ ಸಾಮಾನ್ಯ ಕನಿಷ್ಠ ಕಾರ್ಯಕ್ರಮದ ಆಧಾರದ ಮೇಲೆ ಸೇರುತ್ತಿದ್ದೇವಷ್ಟೇ ಎಂದು ಹೇಳಿಕೊಳ್ಳಬಲ್ಲ ಒಂದು ವಾತಾವರಣ ನಿರ್ಮಿಸಿಕೊಳ್ಳುವಷ್ಟಾದರೂ ತಾಳ್ಮೆಯನ್ನು ತೋರಿದರು ಎಂದು ಹೇಳಬಹುದು.

ಆದರೆ, ಮತ್ತೆ ಪ್ರಜಾಪ್ರಭುತ್ವದ ಕನಿಷ್ಠ ನೀತಿ ಸಂಹಿತೆಯ ಎಲ್ಲೆಗಳನ್ನು ಬಿಜೆಪಿ ಮತ್ತೊಮ್ಮೆ ಮೀರಿತು. ಯಾವ ಕಾರಣ ಹೇಳಿದರೂ ‘ಅಧಿಕಾರದಾಹದ ನಿರ್ಲಜ್ಜ ನಡವಳಿಕೆ’ ಎಂದಷ್ಟೇ ವ್ಯಾಖ್ಯಾನಿಸಬಹುದಾದ ಕ್ರಮಗಳಿಗೆ ಮುಂದಾಯಿತು. ರಾಜ್ಯಪಾಲರ ಕಚೇರಿ ಮತ್ತು ರಾಷ್ಟ್ರಪತಿಗಳ ಕಚೇರಿಯನ್ನು ಹಿಂದೆ ಕಾಂಗ್ರೆಸ್ ಬಳಸಿದ ರೀತಿಯಲ್ಲೇ ಅಥವಾ ಇನ್ನೂ ಕೆಟ್ಟದಾಗಿ ಬಳಸಿಕೊಳ್ಳಲಾಯಿತು. ಈ ರೀತಿ ಅಧಿಕಾರ ಹಿಡಿದರೆ ಬಹುಮತ ಗಳಿಸಿಕೊಳ್ಳುವುದು ಕಷ್ಟವೇನಲ್ಲ ಎಂಬುದೇ ಅವರ ಲೆಕ್ಕಾಚಾರವೆಂದು ಎಲ್ಲರಿಗೂ ಗೊತ್ತಿದ್ದ ಸಂಗತಿಯೇ ಆಗಿದೆ.

ಇದನ್ನೂ ಓದಿ: ನಾಳೆಯೇ ಬಹುಮತ ಸಾಬೀತುಮಾಡಿ: ಸುಪ್ರೀಂ ಕೋರ್ಟ್‌ ಆದೇಶ

ಹಾಗಿದ್ದ ಮೇಲೆ ಕೇವಲ ಒಂದು ವಾರದ ಕೆಳಗೆ ಆ ಪಕ್ಷದ ಅತ್ಯುನ್ನತ ನಾಯಕ ಸಾರ್ವಜನಿಕ ಮರ್ಯಾದೆಯ ರೀತಿ-ನೀತಿಗಳ ಕುರಿತು ಮಾತನಾಡಿದರೇಕೆ? ರಾಷ್ಟ್ರಪತಿ ಆಡಳಿತವನ್ನು ಹಿಂಪಡೆಯಲು ಕ್ಯಾಬಿನೆಟ್ ಸಭೆಯನ್ನು ಕರೆಯುವ ಅಗತ್ಯವೂ ಇಲ್ಲದ ವಿಶೇಷ ಅಧಿಕಾರವನ್ನು ಬಳಸಿದರೇಕೆ? ಇನ್ನೂ ಬೆಳಕು ಹರಿಯುವ ಮುನ್ನವೇ ಮಹಾರಾಷ್ಟ್ರದ ರಾಜಭವನದಲ್ಲಿ ಮುಖ್ಯಮಂತ್ರಿ, ಉಪಮುಖ್ಯಮಂತ್ರಿಗಳಿಗೆ ಗೌಪ್ಯ ರೀತಿಯಲ್ಲಿ ಪ್ರಮಾಣ ವಚನ ಬೋಧಿಸಲಾಗಿದೆ ಎಂದು ಹೆಚ್ಚಿನವರಿಗೆ ಗೊತ್ತಾಗಿದ್ದೇ ಪ್ರಧಾನಮಂತ್ರಿಗಳ ಟ್ವೀಟ್ ಮೂಲಕ. 70,000 ಕೋಟಿ ರೂ.ಗಳ ಹಗರಣದಲ್ಲಿ ಭಾಗಿಯಾಗಿದ್ದಾರೆ ಎಂದು ಒಂದು ತಿಂಗಳ ಹಿಂದಿನವರೆಗೂ ತಾವೇ ಆರೋಪಿಸುತ್ತಿದ್ದ ಅಜಿತ್ ಪವಾರ್‌ಜೀಯವರಿಗೂ ಅವರು ಅಭಿನಂದಿಸಿದ್ದರು.

ಅಂದರೆ, ರಾಜಕೀಯ ನೀತಿ ಸಂಹಿತೆಯ ಪ್ರತಿಪಾದನೆ ಮತ್ತು ಪ್ರದರ್ಶನವು ಮುಖ್ಯ ಎಂದು ಮೋದಿಯವರು ಭಾವಿಸುವುದಾದಲ್ಲಿ (ಅವರೇ ಬಿಜೆಪಿ ಸಂಸತ್ ಸದಸ್ಯರನ್ನುದ್ದೇಶಿಸಿ ಮಾಡಿದ ಭಾಷಣದಲ್ಲಿ ಹೇಳಿದಂತೆ), ಅದರಲ್ಲಿ ಅವರು ಸೋತಿದ್ದಾರೆ. ಆ ಭಾಷಣದಲ್ಲಿ ಅವರು ಸೂಚಿಸಿದಂತೆ ಜನರು ಇದನ್ನೆಲ್ಲಾ ಅರ್ಥ ಮಾಡಿಕೊಳ್ಳದಷ್ಟು ದಡ್ಡರಲ್ಲ. ಹಾಗಾಗಿ ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯ ಬಗ್ಗೆ ಅವಿಶ್ವಾಸವು ವ್ಯಕ್ತವಾಗಲು ಆರಂಭವಾಗಿ ಬಹಳ ಕಾಲವಾಯಿತು. ರಾಜ್ಯಗಳಲ್ಲಾಗಲೀ, ಕೇಂದ್ರದಲ್ಲಾಗಲೀ ಜನರು ವಿಶ್ವಾಸವಿಡಬಲ್ಲ ಪರ್ಯಾಯ ಇಲ್ಲದಿರುವುದರಿಂದ ಅವರ ಕೆಲಸ ಸುಲಭವಾಗಿದೆ ಎಂಬುದೂ ಸ್ಪಷ್ಟವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೆಂಗ್ವಿನ್ ಇಂಡಿಯಾ ಹಿಂದೆ ಸರಿದ ನಂತರ ಸೋನಿಯಾ ಗಾಂಧಿ ಅವರ ಆತ್ಮಚರಿತ್ರೆ ‘ಬಿಲಾಂಗಿಂಗ್’ ಅನ್ನು ಪ್ರಕಟಿಸಲಿರುವ ‘ಹಾರ್ಪರ್‌ಕಾಲಿನ್ಸ್’ 

ನವದೆಹಲಿ: ಕಾಂಗ್ರೆಸ್‌ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ ‘ಬಿಲಾಂಗಿಂಗ್: ಎ ಜರ್ನಿ ಆಫ್ ಲವ್’ ಇದೀಗ ಭಾರತದಲ್ಲಿ ಹಾರ್ಪರ್‌ಕಾಲಿನ್ಸ್ ಇಂಡಿಯಾ ಮೂಲಕ ಪ್ರಕಟವಾಗಲಿದೆ. ಪೆಂಗ್ವಿನ್ ರ‍್ಯಾಂಡಮ್ ಹೌಸ್ ಇಂಡಿಯಾ...

ಜೈಲಿನಲ್ಲಿ ಕಂಬಿ ಎಣಿಸುತ್ತಿರುವ 25 ಕ್ರಿಮಿನಲ್‌ಗಳು, ದೆಹಲಿಯ ಜಂತರ್-ಮಂತರ್‌ಗೆ ಬರುಲು ಹೇಗೆ ಸಾಧ? ತನಿಖಾ ವರದಿಯಲ್ಲಿ ಬಯಲಾಯ್ತು ಪೊಲೀಸರ ಕುತಂತ್ರ

ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ವಿರೋಧಿ ಪ್ರತಿಭಟನೆ ವೇಳೆ ದೆಹಲಿ ಪೊಲೀಸರು ಬಳಸಿದ್ದ ‘ಅಟೋಮೇಟೆಡ್ ಫೇಶಿಯಲ್ ರೆಕಗ್ನಿಷನ್ ಸಿಸ್ಟಮ್’ (AFRS - ಮುಖಚರ್ಯೆ ಗುರುತಿಸುವ ತಂತ್ರಜ್ಞಾನ) ಗಂಭೀರ...

ಪಶ್ಚಿಮ ಬಂಗಾಳ: ವರ್ಷದಲ್ಲಿ 1,000 ಆರ್‌ಎಸ್‌ಎಸ್‌ ಶಾಲೆ: ಶಿಕ್ಷಣ ವ್ಯವಸ್ಥೆಯನ್ನೇ ‘ರಾಷ್ಟ್ರೀಯತಾವಾದಿ’ಗೊಳಿಸುವುದಾಗಿ ಘೋಷಿಸಿದ ಸುವೇಂದು ಅಧಿಕಾರಿ

ಕೋಲ್ಕತ್ತಾ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶೈಕ್ಷಣಿಕ ವಿಭಾಗವಾಗಿರುವ ವಿದ್ಯಾ ಭಾರತಿಯ ಶಾಲೆಗಳ ಸಂಖ್ಯೆಯನ್ನು ಪಶ್ಚಿಮ ಬಂಗಾಳದಲ್ಲಿ ಭಾರಿ ಪ್ರಮಾಣದಲ್ಲಿ ಹೆಚ್ಚಿಸುವುದಾಗಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಘೋಷಿಸಿದ್ದಾರೆ. ರಾಜ್ಯದ ಪ್ರತಿಯೊಂದು ಜಿಲ್ಲೆ, ಪುರಸಭೆ...

SIR ನ್ಯಾಯಸಮ್ಮತವಾಗಿಲ್ಲ ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ಆತಂಕ

ಭಾರತೀಯ ಚುನಾವಣಾ ಆಯೋಗವು (ಇಸಿಐ) ದೇಶಾದ್ಯಂತ ಕೈಗೊಂಡಿರುವ ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯು ಶಾಸನಾತ್ಮಕವಾಗಿ ಕಾನೂನುಬದ್ಧವಾಗಿದ್ದರೂ, ನೈತಿಕವಾಗಿ ನ್ಯಾಯಸಮ್ಮತವಾಗಿಲ್ಲ ಎಂದು ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ತೀವ್ರ...

ಜಂತರ್ ಮಂತರ್ ಹಲ್ಲೆ: ‘ತಲೆಬುರುಡೆ ಒಡೆದೆ, ಜೈಲಿಗೆ ಹೋಗಲಿಲ್ಲ; ಕಪಿಲ್ ಮಿಶ್ರಾ ನನ್ನ ಅಣ್ಣ’: ಬಿಜೆಪಿ ಬೆಂಬಲದ ಬಗ್ಗೆ ದಾಳಿ ಆರೋಪಿ ಬಹಿರಂಗ ಹೇಳಿಕೆ

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಯ ವೇಳೆ ಪ್ರತಿಭಟನಾಕಾರಿಯ ತಂದೆಯ ಮೇಲೆ ನಡೆದ ಹಲ್ಲೆ ಪ್ರಕರಣ ಇದೀಗ ರಾಜಕೀಯ ವಿವಾದದ ಕೇಂದ್ರವಾಗಿದೆ. ಪ್ರಕರಣದ ಆರೋಪಿಯಾಗಿರುವ ಸ್ವತಃ ಬಲಪಂಥೀಯ ಹಾಗೂ ಹಿಂದೂತ್ವ ಕಾರ್ಯಕರ್ತ...

ದೆಹಲಿ: ‘ಖಾನ್’ ಎಂಬ ಹೆಸರಿನ ಕಾರಣಕ್ಕೆ ಪತ್ರಕರ್ತೆಯರ ಮೇಲೆ ಹಲ್ಲೆ ಆರೋಪ, FIR ದಾಖಲಿಸುವಂತೆ ಸಾಕೇತ್ ಠಾಣೆಯಲ್ಲಿ ಧರಣಿ

ದೆಹಲಿಯ ಸಾಕೇತ್ ಮ್ಯಾಕ್ಸ್ ಆಸ್ಪತ್ರೆಯ ಹೊಸ ವಿಭಾಗದ ಉದ್ಘಾಟನಾ ಕಾರ್ಯಕ್ರಮದ ವರದಿಗೆ ತೆರಳಿದ್ದ '4PM ನ್ಯೂಸ್ ನೆಟ್‌ವರ್ಕ್'ನ ಮುಸ್ಲಿಂ ಮಹಿಳಾ ಪತ್ರಕರ್ತೆಯರಾದ ಶಾಹೀನ್ ಖಾನ್ ಮತ್ತು ನಫೀಸಾ ಖಾನ್ ಅವರ ಮೇಲೆ ದಿಲ್ಲಿ...

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...

ಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಬಂಧನದ ಬೆನ್ನಲ್ಲೇ, ತನಿಖಾ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿವಿಯ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಅವರಿಂದ...