Homeಮುಖಪುಟ‘ಕಾಂಗ್ರೆಸ್ ಆಟ’ ಆಡುತ್ತಾ ಸೋಲುತ್ತಿರುವ ಬಿಜೆಪಿ...

‘ಕಾಂಗ್ರೆಸ್ ಆಟ’ ಆಡುತ್ತಾ ಸೋಲುತ್ತಿರುವ ಬಿಜೆಪಿ…

- Advertisement -
- Advertisement -

ಕಳೆದ ವಾರ ಮೋದಿಯವರು ಆಡಿದರೆನ್ನಲಾದ ಒಂದು ಮಾತು ಗಮನ ಸೆಳೆದಿತ್ತು. ಮಹಾರಾಷ್ಟ್ರದಲ್ಲಿ ಕಳೆದ ಬಾರಿಗಿಂತ ಕಡಿಮೆ ಸೀಟುಗಳನ್ನು ಪಡೆದರೂ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದ ಬಿಜೆಪಿಯು ಸರ್ಕಾರ ರಚಿಸಿರಲಿಲ್ಲ. ಏಕೆಂದರೆ ಶಿವಸೇನಾದ ಜೊತೆಗೆ ಡೀಲ್ ಕುದುರಲಿಲ್ಲ. ರಾಜ್ಯಪಾಲರ ಬಳಿ ಹೋದ ಬಿಜೆಪಿಯು ಅಧಿಕೃತವಾಗಿ ತಾನು ಸರ್ಕಾರ ರಚಿಸುವುದಿಲ್ಲ ಎಂದು ಹೇಳಿತ್ತು. ಸಂಸತ್ತಿನ ಅಧಿವೇಶನ ಆ ನಂತರ ಆರಂಭವಾಗುವುದರಲ್ಲಿತ್ತು. ಅದಕ್ಕೆ ಮುಂಚೆ ನಡೆದ ಬಿಜೆಪಿ ಸಂಸತ್‌ ಸದಸ್ಯರ ಸಭೆಯಲ್ಲಿ ಪ್ರಧಾನಿ ಮೋದಿಯವರು ಆ ಮಾತನ್ನು ಹೇಳಿದರು. ‘ಮಹಾರಾಷ್ಟ್ರದಲ್ಲಿ ನೋಡಿ, ಸರ್ಕಾರ ರಚಿಸದಿದ್ದರೂ ಪರವಾಗಿಲ್ಲ. ನಾವಾಗಲೇ ಗೆದ್ದಿದ್ದೇವೆ. ಏಕೆಂದರೆ ನಮ್ಮವರು ಯಾರೂ ಬೇಕಾದ್ದನ್ನು ಮಾತಾಡಲಿಲ್ಲ’.

ಅಂದರೆ, ಕಾಂಗ್ರೆಸ್ ಮತ್ತಿತರ ಬಿಜೆಪಿಯೇತರ ಪಕ್ಷಗಳು ಅಧಿಕಾರಕ್ಕಾಗಿ ಅನೈತಿಕ ಮೈತ್ರಿಯನ್ನು ಮಾಡಿಕೊಳ್ಳಲು ಹವಣಿಸಿವೆಯೆಂದೂ, ಬಿಜೆಪಿಯು ಶಿವಸೇನೆಯು ‘ನೀತಿಬದ್ಧವಾಗಿ ತನ್ನೊಂದಿಗೆ ಬರದೇ ಇದ್ದರೆ’ ತಾನು ಅಧಿಕಾರದಿಂದ ದೂರವುಳಿಯುವುದಾಗಿಯೂ ತೋರ್ಪಡಿಸಿದ್ದರ ಕುರಿತಾಗಿ ಪ್ರಧಾನಿ ಮಾತಾಡಿದ್ದು ಸ್ಪಷ್ಟವಾಗಿತ್ತು. ವಾಸ್ತವದಲ್ಲಿ ಅಂತಹ ಯಾವ ನೀತಿಗಳೂ ಇಲ್ಲದೇ ವಿರೋಧಪಕ್ಷಗಳನ್ನು ಬೆದರಿಸಿ, ಆಮಿಷವೊಡ್ಡಿ ಅಥವಾ ಯಾವುದಾದರೂ ಒಂದು ಮಾರ್ಗದ ಮೂಲಕ ಬಿಜೆಪಿಯು ವಿವಿಧ ರಾಜ್ಯಗಳಲ್ಲಿ ಅಧಿಕಾರ ಹಿಡಿಯುತ್ತಿರುವುದು ಸ್ಪಷ್ಟ. ಸೈದ್ಧಾಂತಿಕ ವಿರೋಧಿಗಳ ಜೊತೆಗೂ ಅದು ಕೈ ಜೋಡಿಸಿದೆ. ಕರ್ನಾಟಕದಿಂದ ಕಾಶ್ಮೀರದವರೆಗೆ, ಬಿಹಾರದಿಂದ ಈಶಾನ್ಯ ಭಾರತದ ರಾಜ್ಯಗಳವರೆಗೆ ಅದು ನಡೆದಿದೆ.

ಬಹುಕಾಲ ನಡೆಯುತ್ತಾ ಬರುತ್ತಿದ್ದ ಈ ‘ಕಾಂಗ್ರೆಸ್ ಆಟ’ದಲ್ಲಿ ಬಿಜೆಪಿ ಎಲ್ಲ ಸೀಮಾರೇಖೆಗಳನ್ನು ದಾಟಿರುವುದು ಸ್ಪಷ್ಟ. ಹೀಗಿರುವಾಗ ಮಹಾರಾಷ್ಟ್ರದಲ್ಲಿ ಮಾತ್ರ ಅಧಿಕೃತವಾಗಿ ರಾಜ್ಯಪಾಲರ ಬಳಿ ಹೋಗಿ ಸರ್ಕಾರ ರಚಿಸುವುದಿಲ್ಲವೆಂದು ಹೇಳಿದ್ದು ಮತ್ತು ಮೋದಿಯವರು ಅದನ್ನು ಉಲ್ಲೇಖಿಸಿ ಬಿಜೆಪಿಯ ಹಿರಿಮೆಯ ಕುರಿತಾಗಿ ಮಾತಾಡಿದ್ದು ವಿಶೇಷವಾಗಿತ್ತು. ‘ಬೇಕಾದಷ್ಟು ರಾಜ್ಯಗಳಲ್ಲಿ ಅಧಿಕಾರ ಹಿಡಿದಾಗಿದೆ. ಕೇಂದ್ರದಲ್ಲಂತೂ ನಮ್ಮನ್ನು ಸರಿಗಟ್ಟುವವರಾರೂ ಇಲ್ಲ. ಹಾಗಾಗಿ ಇನ್ನು ಸಾಕು’ ಎಂದೇನಾದರೂ ತೀರ್ಮಾನ ಮಾಡಿಕೊಂಡಿದ್ದರೆ ಅಷ್ಟರಮಟ್ಟಿಗಾದರೂ ಅದು ಒಳ್ಳೆಯದೇ ಆಗಿರುತ್ತಿತ್ತು.

ಹಾಗೆ ನೋಡಿದರೆ ಅಧಿಕಾರ ಹಂಚಿಕೊಳ್ಳಲು ಸಾಕಾಗಿದ್ದ ಮೈತ್ರಿಯನ್ನು ಇಟ್ಟುಕೊಂಡು ಸರ್ಕಾರ ರಚನೆಯ ಹಕ್ಕು ಮಂಡಿಸಲು ಶಿವಸೇನೆ, ಎನ್‌ಸಿಪಿ ಮತ್ತು ಕಾಂಗ್ರೆಸ್ ನಾಯಕರು ರಾಜ್ಯಪಾಲರಲ್ಲಿ ಹೋಗಲು ಆತುರ ತೋರಿರಲಿಲ್ಲ. ಮೈತ್ರಿ ಮಾಡಿಕೊಳ್ಳಲೂ ಮೀನಮೇಷ ಎಣಿಸಿದ್ದಲ್ಲದೇ, ಅಧಿಕಾರ ಹಂಚಿಕೆಯ ಸೂತ್ರ ಮತ್ತು ಸಾಮಾನ್ಯ ಕನಿಷ್ಠ ಕಾರ್ಯಕ್ರಮ ರೂಪಿಸಿಕೊಳ್ಳಲು ಸಾಕಷ್ಟು ಸಮಯ ತೆಗೆದುಕೊಂಡರು. ಅಂದರೆ ಕೂಡಲೇ ಅಧಿಕಾರ ಹಿಡಿದುಬಿಡುವ ಆತುರ ತಮಗೇನೂ ಇಲ್ಲ ಎಂಬಂತೆ ನಡೆದುಕೊಂಡರು.

ಶಿವಸೇನೆ ಜೊತೆ ಎಷ್ಟೇ ಭಿನ್ನಾಭಿಪ್ರಾಯಗಳಿದ್ದರೂ ಅಧಿಕಾರಕ್ಕಾಗಿಯೇ ಎನ್‌ಸಿಪಿ ಹಾಗೂ ಕಾಂಗ್ರೆಸ್‌ಗಳು ಮುಂದಾದವು ಎಂಬುದರಲ್ಲಿ ಯಾವುದೇ ಸಂಶಯವಿಲ್ಲ. ಹಾಗಾಗಿ ಆರಂಭದ ತೋರ್ಪಡಿಕೆಯ ಹಿಂಜರಿಕೆಯ ನಂತರ ಅವೂ ಪವರ್ ಷೇರಿಂಗ್ ಮಾತುಕತೆಗಳಿಗೆ ಕೂತರು. ಯಾರೂ ಸರ್ಕಾರ ರಚನೆ ಮಾಡಲಾಗದ ಅನಿವಾರ್ಯ ಸ್ಥಿತಿಯಲ್ಲಿ ಸಾಮಾನ್ಯ ಕನಿಷ್ಠ ಕಾರ್ಯಕ್ರಮದ ಆಧಾರದ ಮೇಲೆ ಸೇರುತ್ತಿದ್ದೇವಷ್ಟೇ ಎಂದು ಹೇಳಿಕೊಳ್ಳಬಲ್ಲ ಒಂದು ವಾತಾವರಣ ನಿರ್ಮಿಸಿಕೊಳ್ಳುವಷ್ಟಾದರೂ ತಾಳ್ಮೆಯನ್ನು ತೋರಿದರು ಎಂದು ಹೇಳಬಹುದು.

ಆದರೆ, ಮತ್ತೆ ಪ್ರಜಾಪ್ರಭುತ್ವದ ಕನಿಷ್ಠ ನೀತಿ ಸಂಹಿತೆಯ ಎಲ್ಲೆಗಳನ್ನು ಬಿಜೆಪಿ ಮತ್ತೊಮ್ಮೆ ಮೀರಿತು. ಯಾವ ಕಾರಣ ಹೇಳಿದರೂ ‘ಅಧಿಕಾರದಾಹದ ನಿರ್ಲಜ್ಜ ನಡವಳಿಕೆ’ ಎಂದಷ್ಟೇ ವ್ಯಾಖ್ಯಾನಿಸಬಹುದಾದ ಕ್ರಮಗಳಿಗೆ ಮುಂದಾಯಿತು. ರಾಜ್ಯಪಾಲರ ಕಚೇರಿ ಮತ್ತು ರಾಷ್ಟ್ರಪತಿಗಳ ಕಚೇರಿಯನ್ನು ಹಿಂದೆ ಕಾಂಗ್ರೆಸ್ ಬಳಸಿದ ರೀತಿಯಲ್ಲೇ ಅಥವಾ ಇನ್ನೂ ಕೆಟ್ಟದಾಗಿ ಬಳಸಿಕೊಳ್ಳಲಾಯಿತು. ಈ ರೀತಿ ಅಧಿಕಾರ ಹಿಡಿದರೆ ಬಹುಮತ ಗಳಿಸಿಕೊಳ್ಳುವುದು ಕಷ್ಟವೇನಲ್ಲ ಎಂಬುದೇ ಅವರ ಲೆಕ್ಕಾಚಾರವೆಂದು ಎಲ್ಲರಿಗೂ ಗೊತ್ತಿದ್ದ ಸಂಗತಿಯೇ ಆಗಿದೆ.

ಇದನ್ನೂ ಓದಿ: ನಾಳೆಯೇ ಬಹುಮತ ಸಾಬೀತುಮಾಡಿ: ಸುಪ್ರೀಂ ಕೋರ್ಟ್‌ ಆದೇಶ

ಹಾಗಿದ್ದ ಮೇಲೆ ಕೇವಲ ಒಂದು ವಾರದ ಕೆಳಗೆ ಆ ಪಕ್ಷದ ಅತ್ಯುನ್ನತ ನಾಯಕ ಸಾರ್ವಜನಿಕ ಮರ್ಯಾದೆಯ ರೀತಿ-ನೀತಿಗಳ ಕುರಿತು ಮಾತನಾಡಿದರೇಕೆ? ರಾಷ್ಟ್ರಪತಿ ಆಡಳಿತವನ್ನು ಹಿಂಪಡೆಯಲು ಕ್ಯಾಬಿನೆಟ್ ಸಭೆಯನ್ನು ಕರೆಯುವ ಅಗತ್ಯವೂ ಇಲ್ಲದ ವಿಶೇಷ ಅಧಿಕಾರವನ್ನು ಬಳಸಿದರೇಕೆ? ಇನ್ನೂ ಬೆಳಕು ಹರಿಯುವ ಮುನ್ನವೇ ಮಹಾರಾಷ್ಟ್ರದ ರಾಜಭವನದಲ್ಲಿ ಮುಖ್ಯಮಂತ್ರಿ, ಉಪಮುಖ್ಯಮಂತ್ರಿಗಳಿಗೆ ಗೌಪ್ಯ ರೀತಿಯಲ್ಲಿ ಪ್ರಮಾಣ ವಚನ ಬೋಧಿಸಲಾಗಿದೆ ಎಂದು ಹೆಚ್ಚಿನವರಿಗೆ ಗೊತ್ತಾಗಿದ್ದೇ ಪ್ರಧಾನಮಂತ್ರಿಗಳ ಟ್ವೀಟ್ ಮೂಲಕ. 70,000 ಕೋಟಿ ರೂ.ಗಳ ಹಗರಣದಲ್ಲಿ ಭಾಗಿಯಾಗಿದ್ದಾರೆ ಎಂದು ಒಂದು ತಿಂಗಳ ಹಿಂದಿನವರೆಗೂ ತಾವೇ ಆರೋಪಿಸುತ್ತಿದ್ದ ಅಜಿತ್ ಪವಾರ್‌ಜೀಯವರಿಗೂ ಅವರು ಅಭಿನಂದಿಸಿದ್ದರು.

ಅಂದರೆ, ರಾಜಕೀಯ ನೀತಿ ಸಂಹಿತೆಯ ಪ್ರತಿಪಾದನೆ ಮತ್ತು ಪ್ರದರ್ಶನವು ಮುಖ್ಯ ಎಂದು ಮೋದಿಯವರು ಭಾವಿಸುವುದಾದಲ್ಲಿ (ಅವರೇ ಬಿಜೆಪಿ ಸಂಸತ್ ಸದಸ್ಯರನ್ನುದ್ದೇಶಿಸಿ ಮಾಡಿದ ಭಾಷಣದಲ್ಲಿ ಹೇಳಿದಂತೆ), ಅದರಲ್ಲಿ ಅವರು ಸೋತಿದ್ದಾರೆ. ಆ ಭಾಷಣದಲ್ಲಿ ಅವರು ಸೂಚಿಸಿದಂತೆ ಜನರು ಇದನ್ನೆಲ್ಲಾ ಅರ್ಥ ಮಾಡಿಕೊಳ್ಳದಷ್ಟು ದಡ್ಡರಲ್ಲ. ಹಾಗಾಗಿ ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯ ಬಗ್ಗೆ ಅವಿಶ್ವಾಸವು ವ್ಯಕ್ತವಾಗಲು ಆರಂಭವಾಗಿ ಬಹಳ ಕಾಲವಾಯಿತು. ರಾಜ್ಯಗಳಲ್ಲಾಗಲೀ, ಕೇಂದ್ರದಲ್ಲಾಗಲೀ ಜನರು ವಿಶ್ವಾಸವಿಡಬಲ್ಲ ಪರ್ಯಾಯ ಇಲ್ಲದಿರುವುದರಿಂದ ಅವರ ಕೆಲಸ ಸುಲಭವಾಗಿದೆ ಎಂಬುದೂ ಸ್ಪಷ್ಟವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...