Homeಮುಖಪುಟ‘ಕಾಂಗ್ರೆಸ್ ಆಟ’ ಆಡುತ್ತಾ ಸೋಲುತ್ತಿರುವ ಬಿಜೆಪಿ...

‘ಕಾಂಗ್ರೆಸ್ ಆಟ’ ಆಡುತ್ತಾ ಸೋಲುತ್ತಿರುವ ಬಿಜೆಪಿ…

- Advertisement -
- Advertisement -

ಕಳೆದ ವಾರ ಮೋದಿಯವರು ಆಡಿದರೆನ್ನಲಾದ ಒಂದು ಮಾತು ಗಮನ ಸೆಳೆದಿತ್ತು. ಮಹಾರಾಷ್ಟ್ರದಲ್ಲಿ ಕಳೆದ ಬಾರಿಗಿಂತ ಕಡಿಮೆ ಸೀಟುಗಳನ್ನು ಪಡೆದರೂ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದ ಬಿಜೆಪಿಯು ಸರ್ಕಾರ ರಚಿಸಿರಲಿಲ್ಲ. ಏಕೆಂದರೆ ಶಿವಸೇನಾದ ಜೊತೆಗೆ ಡೀಲ್ ಕುದುರಲಿಲ್ಲ. ರಾಜ್ಯಪಾಲರ ಬಳಿ ಹೋದ ಬಿಜೆಪಿಯು ಅಧಿಕೃತವಾಗಿ ತಾನು ಸರ್ಕಾರ ರಚಿಸುವುದಿಲ್ಲ ಎಂದು ಹೇಳಿತ್ತು. ಸಂಸತ್ತಿನ ಅಧಿವೇಶನ ಆ ನಂತರ ಆರಂಭವಾಗುವುದರಲ್ಲಿತ್ತು. ಅದಕ್ಕೆ ಮುಂಚೆ ನಡೆದ ಬಿಜೆಪಿ ಸಂಸತ್‌ ಸದಸ್ಯರ ಸಭೆಯಲ್ಲಿ ಪ್ರಧಾನಿ ಮೋದಿಯವರು ಆ ಮಾತನ್ನು ಹೇಳಿದರು. ‘ಮಹಾರಾಷ್ಟ್ರದಲ್ಲಿ ನೋಡಿ, ಸರ್ಕಾರ ರಚಿಸದಿದ್ದರೂ ಪರವಾಗಿಲ್ಲ. ನಾವಾಗಲೇ ಗೆದ್ದಿದ್ದೇವೆ. ಏಕೆಂದರೆ ನಮ್ಮವರು ಯಾರೂ ಬೇಕಾದ್ದನ್ನು ಮಾತಾಡಲಿಲ್ಲ’.

ಅಂದರೆ, ಕಾಂಗ್ರೆಸ್ ಮತ್ತಿತರ ಬಿಜೆಪಿಯೇತರ ಪಕ್ಷಗಳು ಅಧಿಕಾರಕ್ಕಾಗಿ ಅನೈತಿಕ ಮೈತ್ರಿಯನ್ನು ಮಾಡಿಕೊಳ್ಳಲು ಹವಣಿಸಿವೆಯೆಂದೂ, ಬಿಜೆಪಿಯು ಶಿವಸೇನೆಯು ‘ನೀತಿಬದ್ಧವಾಗಿ ತನ್ನೊಂದಿಗೆ ಬರದೇ ಇದ್ದರೆ’ ತಾನು ಅಧಿಕಾರದಿಂದ ದೂರವುಳಿಯುವುದಾಗಿಯೂ ತೋರ್ಪಡಿಸಿದ್ದರ ಕುರಿತಾಗಿ ಪ್ರಧಾನಿ ಮಾತಾಡಿದ್ದು ಸ್ಪಷ್ಟವಾಗಿತ್ತು. ವಾಸ್ತವದಲ್ಲಿ ಅಂತಹ ಯಾವ ನೀತಿಗಳೂ ಇಲ್ಲದೇ ವಿರೋಧಪಕ್ಷಗಳನ್ನು ಬೆದರಿಸಿ, ಆಮಿಷವೊಡ್ಡಿ ಅಥವಾ ಯಾವುದಾದರೂ ಒಂದು ಮಾರ್ಗದ ಮೂಲಕ ಬಿಜೆಪಿಯು ವಿವಿಧ ರಾಜ್ಯಗಳಲ್ಲಿ ಅಧಿಕಾರ ಹಿಡಿಯುತ್ತಿರುವುದು ಸ್ಪಷ್ಟ. ಸೈದ್ಧಾಂತಿಕ ವಿರೋಧಿಗಳ ಜೊತೆಗೂ ಅದು ಕೈ ಜೋಡಿಸಿದೆ. ಕರ್ನಾಟಕದಿಂದ ಕಾಶ್ಮೀರದವರೆಗೆ, ಬಿಹಾರದಿಂದ ಈಶಾನ್ಯ ಭಾರತದ ರಾಜ್ಯಗಳವರೆಗೆ ಅದು ನಡೆದಿದೆ.

ಬಹುಕಾಲ ನಡೆಯುತ್ತಾ ಬರುತ್ತಿದ್ದ ಈ ‘ಕಾಂಗ್ರೆಸ್ ಆಟ’ದಲ್ಲಿ ಬಿಜೆಪಿ ಎಲ್ಲ ಸೀಮಾರೇಖೆಗಳನ್ನು ದಾಟಿರುವುದು ಸ್ಪಷ್ಟ. ಹೀಗಿರುವಾಗ ಮಹಾರಾಷ್ಟ್ರದಲ್ಲಿ ಮಾತ್ರ ಅಧಿಕೃತವಾಗಿ ರಾಜ್ಯಪಾಲರ ಬಳಿ ಹೋಗಿ ಸರ್ಕಾರ ರಚಿಸುವುದಿಲ್ಲವೆಂದು ಹೇಳಿದ್ದು ಮತ್ತು ಮೋದಿಯವರು ಅದನ್ನು ಉಲ್ಲೇಖಿಸಿ ಬಿಜೆಪಿಯ ಹಿರಿಮೆಯ ಕುರಿತಾಗಿ ಮಾತಾಡಿದ್ದು ವಿಶೇಷವಾಗಿತ್ತು. ‘ಬೇಕಾದಷ್ಟು ರಾಜ್ಯಗಳಲ್ಲಿ ಅಧಿಕಾರ ಹಿಡಿದಾಗಿದೆ. ಕೇಂದ್ರದಲ್ಲಂತೂ ನಮ್ಮನ್ನು ಸರಿಗಟ್ಟುವವರಾರೂ ಇಲ್ಲ. ಹಾಗಾಗಿ ಇನ್ನು ಸಾಕು’ ಎಂದೇನಾದರೂ ತೀರ್ಮಾನ ಮಾಡಿಕೊಂಡಿದ್ದರೆ ಅಷ್ಟರಮಟ್ಟಿಗಾದರೂ ಅದು ಒಳ್ಳೆಯದೇ ಆಗಿರುತ್ತಿತ್ತು.

ಹಾಗೆ ನೋಡಿದರೆ ಅಧಿಕಾರ ಹಂಚಿಕೊಳ್ಳಲು ಸಾಕಾಗಿದ್ದ ಮೈತ್ರಿಯನ್ನು ಇಟ್ಟುಕೊಂಡು ಸರ್ಕಾರ ರಚನೆಯ ಹಕ್ಕು ಮಂಡಿಸಲು ಶಿವಸೇನೆ, ಎನ್‌ಸಿಪಿ ಮತ್ತು ಕಾಂಗ್ರೆಸ್ ನಾಯಕರು ರಾಜ್ಯಪಾಲರಲ್ಲಿ ಹೋಗಲು ಆತುರ ತೋರಿರಲಿಲ್ಲ. ಮೈತ್ರಿ ಮಾಡಿಕೊಳ್ಳಲೂ ಮೀನಮೇಷ ಎಣಿಸಿದ್ದಲ್ಲದೇ, ಅಧಿಕಾರ ಹಂಚಿಕೆಯ ಸೂತ್ರ ಮತ್ತು ಸಾಮಾನ್ಯ ಕನಿಷ್ಠ ಕಾರ್ಯಕ್ರಮ ರೂಪಿಸಿಕೊಳ್ಳಲು ಸಾಕಷ್ಟು ಸಮಯ ತೆಗೆದುಕೊಂಡರು. ಅಂದರೆ ಕೂಡಲೇ ಅಧಿಕಾರ ಹಿಡಿದುಬಿಡುವ ಆತುರ ತಮಗೇನೂ ಇಲ್ಲ ಎಂಬಂತೆ ನಡೆದುಕೊಂಡರು.

ಶಿವಸೇನೆ ಜೊತೆ ಎಷ್ಟೇ ಭಿನ್ನಾಭಿಪ್ರಾಯಗಳಿದ್ದರೂ ಅಧಿಕಾರಕ್ಕಾಗಿಯೇ ಎನ್‌ಸಿಪಿ ಹಾಗೂ ಕಾಂಗ್ರೆಸ್‌ಗಳು ಮುಂದಾದವು ಎಂಬುದರಲ್ಲಿ ಯಾವುದೇ ಸಂಶಯವಿಲ್ಲ. ಹಾಗಾಗಿ ಆರಂಭದ ತೋರ್ಪಡಿಕೆಯ ಹಿಂಜರಿಕೆಯ ನಂತರ ಅವೂ ಪವರ್ ಷೇರಿಂಗ್ ಮಾತುಕತೆಗಳಿಗೆ ಕೂತರು. ಯಾರೂ ಸರ್ಕಾರ ರಚನೆ ಮಾಡಲಾಗದ ಅನಿವಾರ್ಯ ಸ್ಥಿತಿಯಲ್ಲಿ ಸಾಮಾನ್ಯ ಕನಿಷ್ಠ ಕಾರ್ಯಕ್ರಮದ ಆಧಾರದ ಮೇಲೆ ಸೇರುತ್ತಿದ್ದೇವಷ್ಟೇ ಎಂದು ಹೇಳಿಕೊಳ್ಳಬಲ್ಲ ಒಂದು ವಾತಾವರಣ ನಿರ್ಮಿಸಿಕೊಳ್ಳುವಷ್ಟಾದರೂ ತಾಳ್ಮೆಯನ್ನು ತೋರಿದರು ಎಂದು ಹೇಳಬಹುದು.

ಆದರೆ, ಮತ್ತೆ ಪ್ರಜಾಪ್ರಭುತ್ವದ ಕನಿಷ್ಠ ನೀತಿ ಸಂಹಿತೆಯ ಎಲ್ಲೆಗಳನ್ನು ಬಿಜೆಪಿ ಮತ್ತೊಮ್ಮೆ ಮೀರಿತು. ಯಾವ ಕಾರಣ ಹೇಳಿದರೂ ‘ಅಧಿಕಾರದಾಹದ ನಿರ್ಲಜ್ಜ ನಡವಳಿಕೆ’ ಎಂದಷ್ಟೇ ವ್ಯಾಖ್ಯಾನಿಸಬಹುದಾದ ಕ್ರಮಗಳಿಗೆ ಮುಂದಾಯಿತು. ರಾಜ್ಯಪಾಲರ ಕಚೇರಿ ಮತ್ತು ರಾಷ್ಟ್ರಪತಿಗಳ ಕಚೇರಿಯನ್ನು ಹಿಂದೆ ಕಾಂಗ್ರೆಸ್ ಬಳಸಿದ ರೀತಿಯಲ್ಲೇ ಅಥವಾ ಇನ್ನೂ ಕೆಟ್ಟದಾಗಿ ಬಳಸಿಕೊಳ್ಳಲಾಯಿತು. ಈ ರೀತಿ ಅಧಿಕಾರ ಹಿಡಿದರೆ ಬಹುಮತ ಗಳಿಸಿಕೊಳ್ಳುವುದು ಕಷ್ಟವೇನಲ್ಲ ಎಂಬುದೇ ಅವರ ಲೆಕ್ಕಾಚಾರವೆಂದು ಎಲ್ಲರಿಗೂ ಗೊತ್ತಿದ್ದ ಸಂಗತಿಯೇ ಆಗಿದೆ.

ಇದನ್ನೂ ಓದಿ: ನಾಳೆಯೇ ಬಹುಮತ ಸಾಬೀತುಮಾಡಿ: ಸುಪ್ರೀಂ ಕೋರ್ಟ್‌ ಆದೇಶ

ಹಾಗಿದ್ದ ಮೇಲೆ ಕೇವಲ ಒಂದು ವಾರದ ಕೆಳಗೆ ಆ ಪಕ್ಷದ ಅತ್ಯುನ್ನತ ನಾಯಕ ಸಾರ್ವಜನಿಕ ಮರ್ಯಾದೆಯ ರೀತಿ-ನೀತಿಗಳ ಕುರಿತು ಮಾತನಾಡಿದರೇಕೆ? ರಾಷ್ಟ್ರಪತಿ ಆಡಳಿತವನ್ನು ಹಿಂಪಡೆಯಲು ಕ್ಯಾಬಿನೆಟ್ ಸಭೆಯನ್ನು ಕರೆಯುವ ಅಗತ್ಯವೂ ಇಲ್ಲದ ವಿಶೇಷ ಅಧಿಕಾರವನ್ನು ಬಳಸಿದರೇಕೆ? ಇನ್ನೂ ಬೆಳಕು ಹರಿಯುವ ಮುನ್ನವೇ ಮಹಾರಾಷ್ಟ್ರದ ರಾಜಭವನದಲ್ಲಿ ಮುಖ್ಯಮಂತ್ರಿ, ಉಪಮುಖ್ಯಮಂತ್ರಿಗಳಿಗೆ ಗೌಪ್ಯ ರೀತಿಯಲ್ಲಿ ಪ್ರಮಾಣ ವಚನ ಬೋಧಿಸಲಾಗಿದೆ ಎಂದು ಹೆಚ್ಚಿನವರಿಗೆ ಗೊತ್ತಾಗಿದ್ದೇ ಪ್ರಧಾನಮಂತ್ರಿಗಳ ಟ್ವೀಟ್ ಮೂಲಕ. 70,000 ಕೋಟಿ ರೂ.ಗಳ ಹಗರಣದಲ್ಲಿ ಭಾಗಿಯಾಗಿದ್ದಾರೆ ಎಂದು ಒಂದು ತಿಂಗಳ ಹಿಂದಿನವರೆಗೂ ತಾವೇ ಆರೋಪಿಸುತ್ತಿದ್ದ ಅಜಿತ್ ಪವಾರ್‌ಜೀಯವರಿಗೂ ಅವರು ಅಭಿನಂದಿಸಿದ್ದರು.

ಅಂದರೆ, ರಾಜಕೀಯ ನೀತಿ ಸಂಹಿತೆಯ ಪ್ರತಿಪಾದನೆ ಮತ್ತು ಪ್ರದರ್ಶನವು ಮುಖ್ಯ ಎಂದು ಮೋದಿಯವರು ಭಾವಿಸುವುದಾದಲ್ಲಿ (ಅವರೇ ಬಿಜೆಪಿ ಸಂಸತ್ ಸದಸ್ಯರನ್ನುದ್ದೇಶಿಸಿ ಮಾಡಿದ ಭಾಷಣದಲ್ಲಿ ಹೇಳಿದಂತೆ), ಅದರಲ್ಲಿ ಅವರು ಸೋತಿದ್ದಾರೆ. ಆ ಭಾಷಣದಲ್ಲಿ ಅವರು ಸೂಚಿಸಿದಂತೆ ಜನರು ಇದನ್ನೆಲ್ಲಾ ಅರ್ಥ ಮಾಡಿಕೊಳ್ಳದಷ್ಟು ದಡ್ಡರಲ್ಲ. ಹಾಗಾಗಿ ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯ ಬಗ್ಗೆ ಅವಿಶ್ವಾಸವು ವ್ಯಕ್ತವಾಗಲು ಆರಂಭವಾಗಿ ಬಹಳ ಕಾಲವಾಯಿತು. ರಾಜ್ಯಗಳಲ್ಲಾಗಲೀ, ಕೇಂದ್ರದಲ್ಲಾಗಲೀ ಜನರು ವಿಶ್ವಾಸವಿಡಬಲ್ಲ ಪರ್ಯಾಯ ಇಲ್ಲದಿರುವುದರಿಂದ ಅವರ ಕೆಲಸ ಸುಲಭವಾಗಿದೆ ಎಂಬುದೂ ಸ್ಪಷ್ಟವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧರ್ಮದ ಕಾರಣಕ್ಕೆ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಗೆ ಹಲವು ಬಾರಿ ಇರಿತ: ಅಮೆರಿಕದ ಮಾಲ್‌ನಲ್ಲಿ ಕೃತ್ಯ

ಅಮೆರಿಕದ ಉತಾಹ್‌ನಲ್ಲಿರುವ ಶಾಪಿಂಗ್ ಮಾಲ್‌ನಲ್ಲಿ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಯೊಬ್ಬನಿಗೆ ಹಲವು ಬಾರಿ ಇರಿತದ ಆರೋಪ ಹೊರಿಸಲಾಗಿದೆ. ಹೈದರಾಬಾದ್‌ ನಗರದ ಟೋಲಿಚೌಕಿಯ ನಿವಾಸಿ ಸೈಯದ್ ಸೊಹೈಲ್ ಉದ್ದೀನ್, ಉತಾಹ್‌ನ ಸಾಲ್ಟ್ ಲೇಕ್ ಕೌಂಟಿಯ...

47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ...

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ ಸಾವು

ಮುರ್ಷಿದಾಬಾದ್: ದೇಶದಲ್ಲಿ ರೈಲ್ವೆ ಸುರಕ್ಷತೆಯ ಕುರಿತು ಸರ್ಕಾರಗಳು ದೊಡ್ಡ ದೊಡ್ಡ ಭರವಸೆ ಹಾಗೂ ಯೋಜನೆಗಳನ್ನು ಮಂಡಿಸುತ್ತಿದ್ದರೂ, ತಳಮಟ್ಟದ ವಾಸ್ತವ ಮಾತ್ರ ಇಂದಿಗೂ ಅತ್ಯಂತ ಭೀಕರವಾಗಿದೆ ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘೋರ...

ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ‘ಪ್ರಾಜೆಕ್ಟ್ ಮೇಘಾಲಯ’ ಸಂಚು ಆರೋಪ : ಪತ್ರಕರ್ತನ ವಿಚಾರಣೆ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಎನ್. ಇಲೈಯರಾಜ ಅವರಿಗೆ ಹಣದ ಆಮಿಷವೊಡ್ಡಲು ಯತ್ನಿಸಿದ ಆರೋಪ ಪ್ರಕರಣ ಸಂಬಂಧ ಚೆನ್ನೈ ಪೊಲೀಸರು 'ಪುದಿಯಾ ತಲೈಮುರೈ' ವಾಹಿನಿಯ ಪತ್ರಕರ್ತ ವಿಜಯನ್...

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...