Homeಮುಖಪುಟ‘ಕಾಂಗ್ರೆಸ್ ಆಟ’ ಆಡುತ್ತಾ ಸೋಲುತ್ತಿರುವ ಬಿಜೆಪಿ...

‘ಕಾಂಗ್ರೆಸ್ ಆಟ’ ಆಡುತ್ತಾ ಸೋಲುತ್ತಿರುವ ಬಿಜೆಪಿ…

- Advertisement -
- Advertisement -

ಕಳೆದ ವಾರ ಮೋದಿಯವರು ಆಡಿದರೆನ್ನಲಾದ ಒಂದು ಮಾತು ಗಮನ ಸೆಳೆದಿತ್ತು. ಮಹಾರಾಷ್ಟ್ರದಲ್ಲಿ ಕಳೆದ ಬಾರಿಗಿಂತ ಕಡಿಮೆ ಸೀಟುಗಳನ್ನು ಪಡೆದರೂ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದ ಬಿಜೆಪಿಯು ಸರ್ಕಾರ ರಚಿಸಿರಲಿಲ್ಲ. ಏಕೆಂದರೆ ಶಿವಸೇನಾದ ಜೊತೆಗೆ ಡೀಲ್ ಕುದುರಲಿಲ್ಲ. ರಾಜ್ಯಪಾಲರ ಬಳಿ ಹೋದ ಬಿಜೆಪಿಯು ಅಧಿಕೃತವಾಗಿ ತಾನು ಸರ್ಕಾರ ರಚಿಸುವುದಿಲ್ಲ ಎಂದು ಹೇಳಿತ್ತು. ಸಂಸತ್ತಿನ ಅಧಿವೇಶನ ಆ ನಂತರ ಆರಂಭವಾಗುವುದರಲ್ಲಿತ್ತು. ಅದಕ್ಕೆ ಮುಂಚೆ ನಡೆದ ಬಿಜೆಪಿ ಸಂಸತ್‌ ಸದಸ್ಯರ ಸಭೆಯಲ್ಲಿ ಪ್ರಧಾನಿ ಮೋದಿಯವರು ಆ ಮಾತನ್ನು ಹೇಳಿದರು. ‘ಮಹಾರಾಷ್ಟ್ರದಲ್ಲಿ ನೋಡಿ, ಸರ್ಕಾರ ರಚಿಸದಿದ್ದರೂ ಪರವಾಗಿಲ್ಲ. ನಾವಾಗಲೇ ಗೆದ್ದಿದ್ದೇವೆ. ಏಕೆಂದರೆ ನಮ್ಮವರು ಯಾರೂ ಬೇಕಾದ್ದನ್ನು ಮಾತಾಡಲಿಲ್ಲ’.

ಅಂದರೆ, ಕಾಂಗ್ರೆಸ್ ಮತ್ತಿತರ ಬಿಜೆಪಿಯೇತರ ಪಕ್ಷಗಳು ಅಧಿಕಾರಕ್ಕಾಗಿ ಅನೈತಿಕ ಮೈತ್ರಿಯನ್ನು ಮಾಡಿಕೊಳ್ಳಲು ಹವಣಿಸಿವೆಯೆಂದೂ, ಬಿಜೆಪಿಯು ಶಿವಸೇನೆಯು ‘ನೀತಿಬದ್ಧವಾಗಿ ತನ್ನೊಂದಿಗೆ ಬರದೇ ಇದ್ದರೆ’ ತಾನು ಅಧಿಕಾರದಿಂದ ದೂರವುಳಿಯುವುದಾಗಿಯೂ ತೋರ್ಪಡಿಸಿದ್ದರ ಕುರಿತಾಗಿ ಪ್ರಧಾನಿ ಮಾತಾಡಿದ್ದು ಸ್ಪಷ್ಟವಾಗಿತ್ತು. ವಾಸ್ತವದಲ್ಲಿ ಅಂತಹ ಯಾವ ನೀತಿಗಳೂ ಇಲ್ಲದೇ ವಿರೋಧಪಕ್ಷಗಳನ್ನು ಬೆದರಿಸಿ, ಆಮಿಷವೊಡ್ಡಿ ಅಥವಾ ಯಾವುದಾದರೂ ಒಂದು ಮಾರ್ಗದ ಮೂಲಕ ಬಿಜೆಪಿಯು ವಿವಿಧ ರಾಜ್ಯಗಳಲ್ಲಿ ಅಧಿಕಾರ ಹಿಡಿಯುತ್ತಿರುವುದು ಸ್ಪಷ್ಟ. ಸೈದ್ಧಾಂತಿಕ ವಿರೋಧಿಗಳ ಜೊತೆಗೂ ಅದು ಕೈ ಜೋಡಿಸಿದೆ. ಕರ್ನಾಟಕದಿಂದ ಕಾಶ್ಮೀರದವರೆಗೆ, ಬಿಹಾರದಿಂದ ಈಶಾನ್ಯ ಭಾರತದ ರಾಜ್ಯಗಳವರೆಗೆ ಅದು ನಡೆದಿದೆ.

ಬಹುಕಾಲ ನಡೆಯುತ್ತಾ ಬರುತ್ತಿದ್ದ ಈ ‘ಕಾಂಗ್ರೆಸ್ ಆಟ’ದಲ್ಲಿ ಬಿಜೆಪಿ ಎಲ್ಲ ಸೀಮಾರೇಖೆಗಳನ್ನು ದಾಟಿರುವುದು ಸ್ಪಷ್ಟ. ಹೀಗಿರುವಾಗ ಮಹಾರಾಷ್ಟ್ರದಲ್ಲಿ ಮಾತ್ರ ಅಧಿಕೃತವಾಗಿ ರಾಜ್ಯಪಾಲರ ಬಳಿ ಹೋಗಿ ಸರ್ಕಾರ ರಚಿಸುವುದಿಲ್ಲವೆಂದು ಹೇಳಿದ್ದು ಮತ್ತು ಮೋದಿಯವರು ಅದನ್ನು ಉಲ್ಲೇಖಿಸಿ ಬಿಜೆಪಿಯ ಹಿರಿಮೆಯ ಕುರಿತಾಗಿ ಮಾತಾಡಿದ್ದು ವಿಶೇಷವಾಗಿತ್ತು. ‘ಬೇಕಾದಷ್ಟು ರಾಜ್ಯಗಳಲ್ಲಿ ಅಧಿಕಾರ ಹಿಡಿದಾಗಿದೆ. ಕೇಂದ್ರದಲ್ಲಂತೂ ನಮ್ಮನ್ನು ಸರಿಗಟ್ಟುವವರಾರೂ ಇಲ್ಲ. ಹಾಗಾಗಿ ಇನ್ನು ಸಾಕು’ ಎಂದೇನಾದರೂ ತೀರ್ಮಾನ ಮಾಡಿಕೊಂಡಿದ್ದರೆ ಅಷ್ಟರಮಟ್ಟಿಗಾದರೂ ಅದು ಒಳ್ಳೆಯದೇ ಆಗಿರುತ್ತಿತ್ತು.

ಹಾಗೆ ನೋಡಿದರೆ ಅಧಿಕಾರ ಹಂಚಿಕೊಳ್ಳಲು ಸಾಕಾಗಿದ್ದ ಮೈತ್ರಿಯನ್ನು ಇಟ್ಟುಕೊಂಡು ಸರ್ಕಾರ ರಚನೆಯ ಹಕ್ಕು ಮಂಡಿಸಲು ಶಿವಸೇನೆ, ಎನ್‌ಸಿಪಿ ಮತ್ತು ಕಾಂಗ್ರೆಸ್ ನಾಯಕರು ರಾಜ್ಯಪಾಲರಲ್ಲಿ ಹೋಗಲು ಆತುರ ತೋರಿರಲಿಲ್ಲ. ಮೈತ್ರಿ ಮಾಡಿಕೊಳ್ಳಲೂ ಮೀನಮೇಷ ಎಣಿಸಿದ್ದಲ್ಲದೇ, ಅಧಿಕಾರ ಹಂಚಿಕೆಯ ಸೂತ್ರ ಮತ್ತು ಸಾಮಾನ್ಯ ಕನಿಷ್ಠ ಕಾರ್ಯಕ್ರಮ ರೂಪಿಸಿಕೊಳ್ಳಲು ಸಾಕಷ್ಟು ಸಮಯ ತೆಗೆದುಕೊಂಡರು. ಅಂದರೆ ಕೂಡಲೇ ಅಧಿಕಾರ ಹಿಡಿದುಬಿಡುವ ಆತುರ ತಮಗೇನೂ ಇಲ್ಲ ಎಂಬಂತೆ ನಡೆದುಕೊಂಡರು.

ಶಿವಸೇನೆ ಜೊತೆ ಎಷ್ಟೇ ಭಿನ್ನಾಭಿಪ್ರಾಯಗಳಿದ್ದರೂ ಅಧಿಕಾರಕ್ಕಾಗಿಯೇ ಎನ್‌ಸಿಪಿ ಹಾಗೂ ಕಾಂಗ್ರೆಸ್‌ಗಳು ಮುಂದಾದವು ಎಂಬುದರಲ್ಲಿ ಯಾವುದೇ ಸಂಶಯವಿಲ್ಲ. ಹಾಗಾಗಿ ಆರಂಭದ ತೋರ್ಪಡಿಕೆಯ ಹಿಂಜರಿಕೆಯ ನಂತರ ಅವೂ ಪವರ್ ಷೇರಿಂಗ್ ಮಾತುಕತೆಗಳಿಗೆ ಕೂತರು. ಯಾರೂ ಸರ್ಕಾರ ರಚನೆ ಮಾಡಲಾಗದ ಅನಿವಾರ್ಯ ಸ್ಥಿತಿಯಲ್ಲಿ ಸಾಮಾನ್ಯ ಕನಿಷ್ಠ ಕಾರ್ಯಕ್ರಮದ ಆಧಾರದ ಮೇಲೆ ಸೇರುತ್ತಿದ್ದೇವಷ್ಟೇ ಎಂದು ಹೇಳಿಕೊಳ್ಳಬಲ್ಲ ಒಂದು ವಾತಾವರಣ ನಿರ್ಮಿಸಿಕೊಳ್ಳುವಷ್ಟಾದರೂ ತಾಳ್ಮೆಯನ್ನು ತೋರಿದರು ಎಂದು ಹೇಳಬಹುದು.

ಆದರೆ, ಮತ್ತೆ ಪ್ರಜಾಪ್ರಭುತ್ವದ ಕನಿಷ್ಠ ನೀತಿ ಸಂಹಿತೆಯ ಎಲ್ಲೆಗಳನ್ನು ಬಿಜೆಪಿ ಮತ್ತೊಮ್ಮೆ ಮೀರಿತು. ಯಾವ ಕಾರಣ ಹೇಳಿದರೂ ‘ಅಧಿಕಾರದಾಹದ ನಿರ್ಲಜ್ಜ ನಡವಳಿಕೆ’ ಎಂದಷ್ಟೇ ವ್ಯಾಖ್ಯಾನಿಸಬಹುದಾದ ಕ್ರಮಗಳಿಗೆ ಮುಂದಾಯಿತು. ರಾಜ್ಯಪಾಲರ ಕಚೇರಿ ಮತ್ತು ರಾಷ್ಟ್ರಪತಿಗಳ ಕಚೇರಿಯನ್ನು ಹಿಂದೆ ಕಾಂಗ್ರೆಸ್ ಬಳಸಿದ ರೀತಿಯಲ್ಲೇ ಅಥವಾ ಇನ್ನೂ ಕೆಟ್ಟದಾಗಿ ಬಳಸಿಕೊಳ್ಳಲಾಯಿತು. ಈ ರೀತಿ ಅಧಿಕಾರ ಹಿಡಿದರೆ ಬಹುಮತ ಗಳಿಸಿಕೊಳ್ಳುವುದು ಕಷ್ಟವೇನಲ್ಲ ಎಂಬುದೇ ಅವರ ಲೆಕ್ಕಾಚಾರವೆಂದು ಎಲ್ಲರಿಗೂ ಗೊತ್ತಿದ್ದ ಸಂಗತಿಯೇ ಆಗಿದೆ.

ಇದನ್ನೂ ಓದಿ: ನಾಳೆಯೇ ಬಹುಮತ ಸಾಬೀತುಮಾಡಿ: ಸುಪ್ರೀಂ ಕೋರ್ಟ್‌ ಆದೇಶ

ಹಾಗಿದ್ದ ಮೇಲೆ ಕೇವಲ ಒಂದು ವಾರದ ಕೆಳಗೆ ಆ ಪಕ್ಷದ ಅತ್ಯುನ್ನತ ನಾಯಕ ಸಾರ್ವಜನಿಕ ಮರ್ಯಾದೆಯ ರೀತಿ-ನೀತಿಗಳ ಕುರಿತು ಮಾತನಾಡಿದರೇಕೆ? ರಾಷ್ಟ್ರಪತಿ ಆಡಳಿತವನ್ನು ಹಿಂಪಡೆಯಲು ಕ್ಯಾಬಿನೆಟ್ ಸಭೆಯನ್ನು ಕರೆಯುವ ಅಗತ್ಯವೂ ಇಲ್ಲದ ವಿಶೇಷ ಅಧಿಕಾರವನ್ನು ಬಳಸಿದರೇಕೆ? ಇನ್ನೂ ಬೆಳಕು ಹರಿಯುವ ಮುನ್ನವೇ ಮಹಾರಾಷ್ಟ್ರದ ರಾಜಭವನದಲ್ಲಿ ಮುಖ್ಯಮಂತ್ರಿ, ಉಪಮುಖ್ಯಮಂತ್ರಿಗಳಿಗೆ ಗೌಪ್ಯ ರೀತಿಯಲ್ಲಿ ಪ್ರಮಾಣ ವಚನ ಬೋಧಿಸಲಾಗಿದೆ ಎಂದು ಹೆಚ್ಚಿನವರಿಗೆ ಗೊತ್ತಾಗಿದ್ದೇ ಪ್ರಧಾನಮಂತ್ರಿಗಳ ಟ್ವೀಟ್ ಮೂಲಕ. 70,000 ಕೋಟಿ ರೂ.ಗಳ ಹಗರಣದಲ್ಲಿ ಭಾಗಿಯಾಗಿದ್ದಾರೆ ಎಂದು ಒಂದು ತಿಂಗಳ ಹಿಂದಿನವರೆಗೂ ತಾವೇ ಆರೋಪಿಸುತ್ತಿದ್ದ ಅಜಿತ್ ಪವಾರ್‌ಜೀಯವರಿಗೂ ಅವರು ಅಭಿನಂದಿಸಿದ್ದರು.

ಅಂದರೆ, ರಾಜಕೀಯ ನೀತಿ ಸಂಹಿತೆಯ ಪ್ರತಿಪಾದನೆ ಮತ್ತು ಪ್ರದರ್ಶನವು ಮುಖ್ಯ ಎಂದು ಮೋದಿಯವರು ಭಾವಿಸುವುದಾದಲ್ಲಿ (ಅವರೇ ಬಿಜೆಪಿ ಸಂಸತ್ ಸದಸ್ಯರನ್ನುದ್ದೇಶಿಸಿ ಮಾಡಿದ ಭಾಷಣದಲ್ಲಿ ಹೇಳಿದಂತೆ), ಅದರಲ್ಲಿ ಅವರು ಸೋತಿದ್ದಾರೆ. ಆ ಭಾಷಣದಲ್ಲಿ ಅವರು ಸೂಚಿಸಿದಂತೆ ಜನರು ಇದನ್ನೆಲ್ಲಾ ಅರ್ಥ ಮಾಡಿಕೊಳ್ಳದಷ್ಟು ದಡ್ಡರಲ್ಲ. ಹಾಗಾಗಿ ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯ ಬಗ್ಗೆ ಅವಿಶ್ವಾಸವು ವ್ಯಕ್ತವಾಗಲು ಆರಂಭವಾಗಿ ಬಹಳ ಕಾಲವಾಯಿತು. ರಾಜ್ಯಗಳಲ್ಲಾಗಲೀ, ಕೇಂದ್ರದಲ್ಲಾಗಲೀ ಜನರು ವಿಶ್ವಾಸವಿಡಬಲ್ಲ ಪರ್ಯಾಯ ಇಲ್ಲದಿರುವುದರಿಂದ ಅವರ ಕೆಲಸ ಸುಲಭವಾಗಿದೆ ಎಂಬುದೂ ಸ್ಪಷ್ಟವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...