Homeಮುಖಪುಟ‘ಕಾಂಗ್ರೆಸ್ ಆಟ’ ಆಡುತ್ತಾ ಸೋಲುತ್ತಿರುವ ಬಿಜೆಪಿ...

‘ಕಾಂಗ್ರೆಸ್ ಆಟ’ ಆಡುತ್ತಾ ಸೋಲುತ್ತಿರುವ ಬಿಜೆಪಿ…

- Advertisement -
- Advertisement -

ಕಳೆದ ವಾರ ಮೋದಿಯವರು ಆಡಿದರೆನ್ನಲಾದ ಒಂದು ಮಾತು ಗಮನ ಸೆಳೆದಿತ್ತು. ಮಹಾರಾಷ್ಟ್ರದಲ್ಲಿ ಕಳೆದ ಬಾರಿಗಿಂತ ಕಡಿಮೆ ಸೀಟುಗಳನ್ನು ಪಡೆದರೂ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದ ಬಿಜೆಪಿಯು ಸರ್ಕಾರ ರಚಿಸಿರಲಿಲ್ಲ. ಏಕೆಂದರೆ ಶಿವಸೇನಾದ ಜೊತೆಗೆ ಡೀಲ್ ಕುದುರಲಿಲ್ಲ. ರಾಜ್ಯಪಾಲರ ಬಳಿ ಹೋದ ಬಿಜೆಪಿಯು ಅಧಿಕೃತವಾಗಿ ತಾನು ಸರ್ಕಾರ ರಚಿಸುವುದಿಲ್ಲ ಎಂದು ಹೇಳಿತ್ತು. ಸಂಸತ್ತಿನ ಅಧಿವೇಶನ ಆ ನಂತರ ಆರಂಭವಾಗುವುದರಲ್ಲಿತ್ತು. ಅದಕ್ಕೆ ಮುಂಚೆ ನಡೆದ ಬಿಜೆಪಿ ಸಂಸತ್‌ ಸದಸ್ಯರ ಸಭೆಯಲ್ಲಿ ಪ್ರಧಾನಿ ಮೋದಿಯವರು ಆ ಮಾತನ್ನು ಹೇಳಿದರು. ‘ಮಹಾರಾಷ್ಟ್ರದಲ್ಲಿ ನೋಡಿ, ಸರ್ಕಾರ ರಚಿಸದಿದ್ದರೂ ಪರವಾಗಿಲ್ಲ. ನಾವಾಗಲೇ ಗೆದ್ದಿದ್ದೇವೆ. ಏಕೆಂದರೆ ನಮ್ಮವರು ಯಾರೂ ಬೇಕಾದ್ದನ್ನು ಮಾತಾಡಲಿಲ್ಲ’.

ಅಂದರೆ, ಕಾಂಗ್ರೆಸ್ ಮತ್ತಿತರ ಬಿಜೆಪಿಯೇತರ ಪಕ್ಷಗಳು ಅಧಿಕಾರಕ್ಕಾಗಿ ಅನೈತಿಕ ಮೈತ್ರಿಯನ್ನು ಮಾಡಿಕೊಳ್ಳಲು ಹವಣಿಸಿವೆಯೆಂದೂ, ಬಿಜೆಪಿಯು ಶಿವಸೇನೆಯು ‘ನೀತಿಬದ್ಧವಾಗಿ ತನ್ನೊಂದಿಗೆ ಬರದೇ ಇದ್ದರೆ’ ತಾನು ಅಧಿಕಾರದಿಂದ ದೂರವುಳಿಯುವುದಾಗಿಯೂ ತೋರ್ಪಡಿಸಿದ್ದರ ಕುರಿತಾಗಿ ಪ್ರಧಾನಿ ಮಾತಾಡಿದ್ದು ಸ್ಪಷ್ಟವಾಗಿತ್ತು. ವಾಸ್ತವದಲ್ಲಿ ಅಂತಹ ಯಾವ ನೀತಿಗಳೂ ಇಲ್ಲದೇ ವಿರೋಧಪಕ್ಷಗಳನ್ನು ಬೆದರಿಸಿ, ಆಮಿಷವೊಡ್ಡಿ ಅಥವಾ ಯಾವುದಾದರೂ ಒಂದು ಮಾರ್ಗದ ಮೂಲಕ ಬಿಜೆಪಿಯು ವಿವಿಧ ರಾಜ್ಯಗಳಲ್ಲಿ ಅಧಿಕಾರ ಹಿಡಿಯುತ್ತಿರುವುದು ಸ್ಪಷ್ಟ. ಸೈದ್ಧಾಂತಿಕ ವಿರೋಧಿಗಳ ಜೊತೆಗೂ ಅದು ಕೈ ಜೋಡಿಸಿದೆ. ಕರ್ನಾಟಕದಿಂದ ಕಾಶ್ಮೀರದವರೆಗೆ, ಬಿಹಾರದಿಂದ ಈಶಾನ್ಯ ಭಾರತದ ರಾಜ್ಯಗಳವರೆಗೆ ಅದು ನಡೆದಿದೆ.

ಬಹುಕಾಲ ನಡೆಯುತ್ತಾ ಬರುತ್ತಿದ್ದ ಈ ‘ಕಾಂಗ್ರೆಸ್ ಆಟ’ದಲ್ಲಿ ಬಿಜೆಪಿ ಎಲ್ಲ ಸೀಮಾರೇಖೆಗಳನ್ನು ದಾಟಿರುವುದು ಸ್ಪಷ್ಟ. ಹೀಗಿರುವಾಗ ಮಹಾರಾಷ್ಟ್ರದಲ್ಲಿ ಮಾತ್ರ ಅಧಿಕೃತವಾಗಿ ರಾಜ್ಯಪಾಲರ ಬಳಿ ಹೋಗಿ ಸರ್ಕಾರ ರಚಿಸುವುದಿಲ್ಲವೆಂದು ಹೇಳಿದ್ದು ಮತ್ತು ಮೋದಿಯವರು ಅದನ್ನು ಉಲ್ಲೇಖಿಸಿ ಬಿಜೆಪಿಯ ಹಿರಿಮೆಯ ಕುರಿತಾಗಿ ಮಾತಾಡಿದ್ದು ವಿಶೇಷವಾಗಿತ್ತು. ‘ಬೇಕಾದಷ್ಟು ರಾಜ್ಯಗಳಲ್ಲಿ ಅಧಿಕಾರ ಹಿಡಿದಾಗಿದೆ. ಕೇಂದ್ರದಲ್ಲಂತೂ ನಮ್ಮನ್ನು ಸರಿಗಟ್ಟುವವರಾರೂ ಇಲ್ಲ. ಹಾಗಾಗಿ ಇನ್ನು ಸಾಕು’ ಎಂದೇನಾದರೂ ತೀರ್ಮಾನ ಮಾಡಿಕೊಂಡಿದ್ದರೆ ಅಷ್ಟರಮಟ್ಟಿಗಾದರೂ ಅದು ಒಳ್ಳೆಯದೇ ಆಗಿರುತ್ತಿತ್ತು.

ಹಾಗೆ ನೋಡಿದರೆ ಅಧಿಕಾರ ಹಂಚಿಕೊಳ್ಳಲು ಸಾಕಾಗಿದ್ದ ಮೈತ್ರಿಯನ್ನು ಇಟ್ಟುಕೊಂಡು ಸರ್ಕಾರ ರಚನೆಯ ಹಕ್ಕು ಮಂಡಿಸಲು ಶಿವಸೇನೆ, ಎನ್‌ಸಿಪಿ ಮತ್ತು ಕಾಂಗ್ರೆಸ್ ನಾಯಕರು ರಾಜ್ಯಪಾಲರಲ್ಲಿ ಹೋಗಲು ಆತುರ ತೋರಿರಲಿಲ್ಲ. ಮೈತ್ರಿ ಮಾಡಿಕೊಳ್ಳಲೂ ಮೀನಮೇಷ ಎಣಿಸಿದ್ದಲ್ಲದೇ, ಅಧಿಕಾರ ಹಂಚಿಕೆಯ ಸೂತ್ರ ಮತ್ತು ಸಾಮಾನ್ಯ ಕನಿಷ್ಠ ಕಾರ್ಯಕ್ರಮ ರೂಪಿಸಿಕೊಳ್ಳಲು ಸಾಕಷ್ಟು ಸಮಯ ತೆಗೆದುಕೊಂಡರು. ಅಂದರೆ ಕೂಡಲೇ ಅಧಿಕಾರ ಹಿಡಿದುಬಿಡುವ ಆತುರ ತಮಗೇನೂ ಇಲ್ಲ ಎಂಬಂತೆ ನಡೆದುಕೊಂಡರು.

ಶಿವಸೇನೆ ಜೊತೆ ಎಷ್ಟೇ ಭಿನ್ನಾಭಿಪ್ರಾಯಗಳಿದ್ದರೂ ಅಧಿಕಾರಕ್ಕಾಗಿಯೇ ಎನ್‌ಸಿಪಿ ಹಾಗೂ ಕಾಂಗ್ರೆಸ್‌ಗಳು ಮುಂದಾದವು ಎಂಬುದರಲ್ಲಿ ಯಾವುದೇ ಸಂಶಯವಿಲ್ಲ. ಹಾಗಾಗಿ ಆರಂಭದ ತೋರ್ಪಡಿಕೆಯ ಹಿಂಜರಿಕೆಯ ನಂತರ ಅವೂ ಪವರ್ ಷೇರಿಂಗ್ ಮಾತುಕತೆಗಳಿಗೆ ಕೂತರು. ಯಾರೂ ಸರ್ಕಾರ ರಚನೆ ಮಾಡಲಾಗದ ಅನಿವಾರ್ಯ ಸ್ಥಿತಿಯಲ್ಲಿ ಸಾಮಾನ್ಯ ಕನಿಷ್ಠ ಕಾರ್ಯಕ್ರಮದ ಆಧಾರದ ಮೇಲೆ ಸೇರುತ್ತಿದ್ದೇವಷ್ಟೇ ಎಂದು ಹೇಳಿಕೊಳ್ಳಬಲ್ಲ ಒಂದು ವಾತಾವರಣ ನಿರ್ಮಿಸಿಕೊಳ್ಳುವಷ್ಟಾದರೂ ತಾಳ್ಮೆಯನ್ನು ತೋರಿದರು ಎಂದು ಹೇಳಬಹುದು.

ಆದರೆ, ಮತ್ತೆ ಪ್ರಜಾಪ್ರಭುತ್ವದ ಕನಿಷ್ಠ ನೀತಿ ಸಂಹಿತೆಯ ಎಲ್ಲೆಗಳನ್ನು ಬಿಜೆಪಿ ಮತ್ತೊಮ್ಮೆ ಮೀರಿತು. ಯಾವ ಕಾರಣ ಹೇಳಿದರೂ ‘ಅಧಿಕಾರದಾಹದ ನಿರ್ಲಜ್ಜ ನಡವಳಿಕೆ’ ಎಂದಷ್ಟೇ ವ್ಯಾಖ್ಯಾನಿಸಬಹುದಾದ ಕ್ರಮಗಳಿಗೆ ಮುಂದಾಯಿತು. ರಾಜ್ಯಪಾಲರ ಕಚೇರಿ ಮತ್ತು ರಾಷ್ಟ್ರಪತಿಗಳ ಕಚೇರಿಯನ್ನು ಹಿಂದೆ ಕಾಂಗ್ರೆಸ್ ಬಳಸಿದ ರೀತಿಯಲ್ಲೇ ಅಥವಾ ಇನ್ನೂ ಕೆಟ್ಟದಾಗಿ ಬಳಸಿಕೊಳ್ಳಲಾಯಿತು. ಈ ರೀತಿ ಅಧಿಕಾರ ಹಿಡಿದರೆ ಬಹುಮತ ಗಳಿಸಿಕೊಳ್ಳುವುದು ಕಷ್ಟವೇನಲ್ಲ ಎಂಬುದೇ ಅವರ ಲೆಕ್ಕಾಚಾರವೆಂದು ಎಲ್ಲರಿಗೂ ಗೊತ್ತಿದ್ದ ಸಂಗತಿಯೇ ಆಗಿದೆ.

ಇದನ್ನೂ ಓದಿ: ನಾಳೆಯೇ ಬಹುಮತ ಸಾಬೀತುಮಾಡಿ: ಸುಪ್ರೀಂ ಕೋರ್ಟ್‌ ಆದೇಶ

ಹಾಗಿದ್ದ ಮೇಲೆ ಕೇವಲ ಒಂದು ವಾರದ ಕೆಳಗೆ ಆ ಪಕ್ಷದ ಅತ್ಯುನ್ನತ ನಾಯಕ ಸಾರ್ವಜನಿಕ ಮರ್ಯಾದೆಯ ರೀತಿ-ನೀತಿಗಳ ಕುರಿತು ಮಾತನಾಡಿದರೇಕೆ? ರಾಷ್ಟ್ರಪತಿ ಆಡಳಿತವನ್ನು ಹಿಂಪಡೆಯಲು ಕ್ಯಾಬಿನೆಟ್ ಸಭೆಯನ್ನು ಕರೆಯುವ ಅಗತ್ಯವೂ ಇಲ್ಲದ ವಿಶೇಷ ಅಧಿಕಾರವನ್ನು ಬಳಸಿದರೇಕೆ? ಇನ್ನೂ ಬೆಳಕು ಹರಿಯುವ ಮುನ್ನವೇ ಮಹಾರಾಷ್ಟ್ರದ ರಾಜಭವನದಲ್ಲಿ ಮುಖ್ಯಮಂತ್ರಿ, ಉಪಮುಖ್ಯಮಂತ್ರಿಗಳಿಗೆ ಗೌಪ್ಯ ರೀತಿಯಲ್ಲಿ ಪ್ರಮಾಣ ವಚನ ಬೋಧಿಸಲಾಗಿದೆ ಎಂದು ಹೆಚ್ಚಿನವರಿಗೆ ಗೊತ್ತಾಗಿದ್ದೇ ಪ್ರಧಾನಮಂತ್ರಿಗಳ ಟ್ವೀಟ್ ಮೂಲಕ. 70,000 ಕೋಟಿ ರೂ.ಗಳ ಹಗರಣದಲ್ಲಿ ಭಾಗಿಯಾಗಿದ್ದಾರೆ ಎಂದು ಒಂದು ತಿಂಗಳ ಹಿಂದಿನವರೆಗೂ ತಾವೇ ಆರೋಪಿಸುತ್ತಿದ್ದ ಅಜಿತ್ ಪವಾರ್‌ಜೀಯವರಿಗೂ ಅವರು ಅಭಿನಂದಿಸಿದ್ದರು.

ಅಂದರೆ, ರಾಜಕೀಯ ನೀತಿ ಸಂಹಿತೆಯ ಪ್ರತಿಪಾದನೆ ಮತ್ತು ಪ್ರದರ್ಶನವು ಮುಖ್ಯ ಎಂದು ಮೋದಿಯವರು ಭಾವಿಸುವುದಾದಲ್ಲಿ (ಅವರೇ ಬಿಜೆಪಿ ಸಂಸತ್ ಸದಸ್ಯರನ್ನುದ್ದೇಶಿಸಿ ಮಾಡಿದ ಭಾಷಣದಲ್ಲಿ ಹೇಳಿದಂತೆ), ಅದರಲ್ಲಿ ಅವರು ಸೋತಿದ್ದಾರೆ. ಆ ಭಾಷಣದಲ್ಲಿ ಅವರು ಸೂಚಿಸಿದಂತೆ ಜನರು ಇದನ್ನೆಲ್ಲಾ ಅರ್ಥ ಮಾಡಿಕೊಳ್ಳದಷ್ಟು ದಡ್ಡರಲ್ಲ. ಹಾಗಾಗಿ ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯ ಬಗ್ಗೆ ಅವಿಶ್ವಾಸವು ವ್ಯಕ್ತವಾಗಲು ಆರಂಭವಾಗಿ ಬಹಳ ಕಾಲವಾಯಿತು. ರಾಜ್ಯಗಳಲ್ಲಾಗಲೀ, ಕೇಂದ್ರದಲ್ಲಾಗಲೀ ಜನರು ವಿಶ್ವಾಸವಿಡಬಲ್ಲ ಪರ್ಯಾಯ ಇಲ್ಲದಿರುವುದರಿಂದ ಅವರ ಕೆಲಸ ಸುಲಭವಾಗಿದೆ ಎಂಬುದೂ ಸ್ಪಷ್ಟವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...

ದಾವಣಗೆರೆ ಉಪ ಚುನಾವಣೆ ಅಡ್ಡ ಪರಿಣಾಮ: ಮುಸ್ಲಿಮ್ ಮುಖಂಡರ ಮೇಲೆ ಖರ್ಗೆ-ಡಿಕೆಶಿ ಶಿಸ್ತು ಪ್ರಹಾರ ಕಾಂಗ್ರೆಸ್‌ನ ಆತ್ಮಹತ್ಯಾತ್ಮಕ ರಾಜಕಾರಣ!!

ದಾವಣಗೆರೆ ದಕ್ಷಿಣ ಉಪ ಚುನಾವಣೆ ರಾಜ್ಯದ ಆಡಳಿತಾರೂಢ ಕಾಂಗ್ರೆಸ್‌ನ ಗದ್ದುಗೆ ಗುದ್ದಾಟಕ್ಕೆ ರೋಚಕ ಆಯಾಮ ನೀಡಿಬಿಟ್ಟಿದೆ. ಅಹಿಂದ ಸಮುದಾಯವೇ ಬಹುಜನರಾಗಿರುವ ದಾವಣಗೆರೆ ದಕ್ಷಿಣ ಅಸೆಂಬ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ನ್ಯಾಯವಾಗಿ ಆ ವರ್ಗದ ಅರ್ಹರೊಬ್ಬರಿಗೆ...

ನೀಟ್ ವಿವಾದ: ಪ್ರಶ್ನೆ ಪತ್ರಿಕೆ ಸೋರಿಕೆ ಜೊತೆಗೆ ಹೆಚ್ಚುತ್ತಿರುವ ವಿದ್ಯಾರ್ಥಿಗಳ ಆತ್ಮಹತ್ಯೆ

ರಾಜಸ್ಥಾನದಲ್ಲಿ ನಡೆದ ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ (ಸಿಬಿಐ) ತನಿಖೆ ವೇಗ ಪಡೆದುಕೊಂಡಿದೆ. ದೇಶದಾದ್ಯಂತ ಹಲವು ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ...

ಎಸ್‌ಐಆರ್‌ನಲ್ಲಿ ಮತದಾನದ ಹಕ್ಕು ಹೋಯ್ತು..ಈಗ ಸರ್ಕಾರಿ ಸೌಲಭ್ಯದ ಸರದಿ..ಮುಂದೆ ನಾಗರಿಕತ್ವ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು ಚುನಾವಣಾ ಆಯೋಗ ಭಾರತದ ಕೋಟ್ಯಾಂತರ ನಾಗರಿಕ ಅಮೂಲ್ಯವಾದ ಮತದಾನದ ಹಕ್ಕನ್ನು ಕಿತ್ತುಕೊಂಡ ಒಂದು ವ್ಯವಸ್ಥಿತ ಸಂಚು ಎನ್ನಬಹುದು. ಬಿಹಾರ, ಪಶ್ಚಿಮ ಬಂಗಾಳ, ತಮಿಳುನಾಡು,...

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...