Homeಕರ್ನಾಟಕಬಿಜೆಪಿಗೂ, ಪ್ರಧಾನಿ ಮೋದಿಗೂ ಒಂದಷ್ಟು ಮಾನಸಿಕ ಚಿಕಿತ್ಸೆಯ ಅಗತ್ಯವಿದೆ: ಕಾಂಗ್ರೆಸ್ ತೀವ್ರ ವಾಗ್ದಾಳಿ

ಬಿಜೆಪಿಗೂ, ಪ್ರಧಾನಿ ಮೋದಿಗೂ ಒಂದಷ್ಟು ಮಾನಸಿಕ ಚಿಕಿತ್ಸೆಯ ಅಗತ್ಯವಿದೆ: ಕಾಂಗ್ರೆಸ್ ತೀವ್ರ ವಾಗ್ದಾಳಿ

- Advertisement -
- Advertisement -

ಫೇಕ್ ಫ್ಯಾಕ್ಟರಿ ಎಂದೇ ಕುಖ್ಯಾತಿ ಗಳಿಸಿರುವ ಬಿಜೆಪಿಗೂ, ಪ್ರಧಾನಿ ಮೋದಿಗೂ ಒಂದಷ್ಟು ಮಾನಸಿಕ ಚಿಕಿತ್ಸೆಯ ಅಗತ್ಯವಿದೆ ಎಂದು ರಾಜ್ಯ ಕಾಂಗ್ರೆಸ್ ಶನಿವಾರದಂದು ಬಿಜೆಪಿ ವಿರುದ್ದ ತೀವ್ರ ವಾಗ್ದಾಳಿ ನಡೆಸಿದೆ.

ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳು ಕಳೆದ ಹಲವು ದಿನಗಳಿಂದ ಸಾಮಾಜಿಕ ಜಾಲತಾಣವಾದ ಟ್ವಿಟರ್‌ನಲ್ಲಿ ಪರಸ್ಪರ ವಾಗ್ದಾಳಿ ನಡೆಸುತ್ತಿವೆ. ಇಂದು ಬೆಳಿಗ್ಗೆ ಕಾಂಗ್ರೆಸ್ ಪಕ್ಷವು, “ನರೇಂದ್ರ ಮೋದಿಯವರೇ, ಗೊಬ್ಬರವಿಲ್ಲದೆ ಗಡ್ಡ ಬೆಳೆಸಬಹುದೇ ಹೊರತು ಬೆಳೆ ಬೆಳೆಸಲಾಗುವುದಿಲ್ಲ!! ಗೊಬ್ಬರದ ಬೆಲೆ ಇಳಿಸಿ, ರೈತರನ್ನು ಉಳಿಸಿ” ಎಂದು ಗೊಬ್ಬರ ಬೆಲೆ ಹೆಚ್ಚಳದ ಬಗ್ಗೆ ವ್ಯಂಗ್ಯವಾಗಿ ಪ್ರಧಾನಿಗೆ ತಿಳಿಸಿತ್ತು.

ಇದನ್ನೂ ಓದಿ: ದಿಲ್ಲಿಯಲ್ಲೊಬ್ಬ ಪಾಳೆಯಗಾರ, ಕರ್ನಾಟಕದಲ್ಲೊಬ್ಬ ಮಾಂಡಲಿಕ; ಭಲೇ ಜೋಡಿ: ಸಿದ್ದರಾಮಯ್ಯ

ಇದಕ್ಕೆ ಪ್ರತಿಕ್ರಿಯಿಸಿರುವ ಬಿಜೆಪಿಯು, “ಕಾಂಗ್ರೆಸ್ ಆಡಳಿತದಲ್ಲಿ A ಯಿಂದ Z ವರೆಗೂ ಭ್ರಷ್ಟಾಚಾರ ಹಗರಣ ನಡೆದಿದ್ದವು. ಮೋದಿ ಆಡಳಿತದಲ್ಲಿ ಗಡ್ಡ, ಬಿಸ್ಕೆಟ್, ಪೇಟ ಮೊದಲಾದವುಗಳ ಬಗ್ಗೆ ಮಾತನಾಡುತ್ತಿದ್ದಾರೆ. ಆಲೂಗಡ್ಡೆಯಿಂದ ಚಿಪ್ಸ್ ಮಾಡಬಹುದೇ ಹೊರತು ಚಿನ್ನದ ಬಿಸ್ಕೆಟ್ ತಯಾರಿಸಲಾಗುವುದಿಲ್ಲ ಎನ್ನುವುದನ್ನು ಯುವರಾಜನಿಗೆ ಅರ್ಥೈಸಿ. ಕಾಂಗ್ರೆಸ್‌ ಪಕ್ಷದ ಹತಾಶೆ ನಮಗೆ ಅರ್ಥವಾಗುತ್ತಿದೆ” ಎಂದು ಹೇಳಿತ್ತು.

ಇದನ್ನೂ ಓದಿ: ಬೀದಿಬದಿ ವಾಸಿಸುವ ಬಾಲಕಿಯರಿಗೆ ಸಿಎಎ, ಎನ್‌ಆರ್‌ಸಿ ಪಾಠ ಮಾಡಿದ್ದಕ್ಕೆ ದೇಶದ್ರೋಹ ಪ್ರಕರಣ ದಾಖಲು!

ಇದೀಗ ಟ್ವಿಟರ್‌ನಲ್ಲಿ ಬಿಜೆಪಿಯ ಹೇಳಿಕೆಗೆ ಆಕ್ರೋಶ ವ್ಯಕ್ತಪಡಿಸಿರುವ ಕಾಂಗ್ರೆಸ್, “ಬಿಜೆಪಿಯವರೇ
ಹತಾಶೆಗೊಂಡಿದ್ದು ಈ ದೇಶದ ಮತ್ತು ರಾಜ್ಯದ ಜನತೆಯಾಗಿದ್ದಾರೆ. ಫೇಕ್ ಫ್ಯಾಕ್ಟರಿ ಎಂದೇ ಕುಖ್ಯಾತಿ ಗಳಿಸಿದ ನಿಮಗೂ ನಿಮ್ಮ ಮೋದಿಗೂ ಒಂದಷ್ಟು ಮಾನಸಿಕ ಚಿಕಿತ್ಸೆಯ ಅಗತ್ಯವಿದೆ, ಮೊಡದಿಂದ ರಾಡರ್ ಕಣ್ತಪ್ಪಿಸಲು ಹೇಗೆ ಸಾಧ್ಯವಿಲ್ಲವೋ ಹಾಗೆಯೇ ರಫೆಲ್ ಖರೀದಿ ಹಗರಣವನ್ನೂ ಮುಚ್ಚಿಡಲಾಗುವುದಿಲ್ಲ ಎನ್ನುವುದು ಅರ್ಥವಾಗಬೇಕಿದೆ” ಎಂದು ತಿರುಗೇಟು ನೀಡಿದೆ.

ಈ ಹಿಂದೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಭೆಯೊಂದರಲ್ಲಿ, “ಒಂದು ಯಂತ್ರದಲ್ಲಿ ಒಂದು ಕಡೆಯಿಂದ ಆಲೂಗಡ್ಡೆ ಹಾಕಿದರೆ ಇನ್ನೊಂದು ಕಡೆಯಿಂದ ಚಿನ್ನ ಬರುತ್ತದೆ ಎಂದು ಪ್ರಧಾನಿ ಮೋದಿ ಹೇಳುತ್ತಿದ್ದಾರೆ” ಎಂದು ಪ್ರಧಾನಿಯನ್ನು ಉಲ್ಲೇಖಿಸಿ ಹೇಳಿದ್ದರು.

ಆದರೆ ಬಿಜೆಪಿ ಮತ್ತು ಅವರ ಬೆಂಬಲಿಗರು ಅದರಲ್ಲಿ ಪ್ರಧಾನಿಯ ಉಲ್ಲೇಖವನ್ನು ಕತ್ತರಿಸಿ, “ಒಂದು ಯಂತ್ರದಲ್ಲಿ ಒಂದು ಕಡೆಯಿಂದ ಆಲೂಗಡ್ಡೆ ಹಾಕಿದರೆ ಇನ್ನೊಂದು ಕಡೆಯಿಂದ ಚಿನ್ನ ಬರುತ್ತದೆ” ಎಂದು ರಾಹುಲ್ ಗಾಂಧಿ ಹೇಳುತ್ತಿರುವಂತೆ ವಿಡಿಯೋ ತಯಾರಿಸಿ ವೈರಲ್ ಮಾಡಿದ್ದರು. ಈ ಬಗ್ಗೆ ಹಲವಾರು ಫ್ಯಾಕ್ಟ್‌ಚೆಕ್‌ಗಳು ನಡೆದರೂ ಬಿಜೆಪಿಯು ಅದೇ ಸುಳ್ಳನ್ನು ಇನ್ನೂ ಹೇಳಿಕೊಳ್ಳುತ್ತಿದೆ.

ಇದನ್ನೂ ಓದಿ: ಲಾಕ್‌ಡೌ‌ನ್‌ನಲ್ಲಿ ಹೆಚ್ಚಾದ ಬಾಲ್ಯವಿವಾಹ: ವರದಿ ಮುಚ್ಚಿಡಲು ಪ್ರಯತ್ನಿಸುತ್ತಿರುವ ಕೇಂದ್ರ ಸರ್ಕಾರ

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...