Homeಕರ್ನಾಟಕಬಿಜೆಪಿಗೂ, ಪ್ರಧಾನಿ ಮೋದಿಗೂ ಒಂದಷ್ಟು ಮಾನಸಿಕ ಚಿಕಿತ್ಸೆಯ ಅಗತ್ಯವಿದೆ: ಕಾಂಗ್ರೆಸ್ ತೀವ್ರ ವಾಗ್ದಾಳಿ

ಬಿಜೆಪಿಗೂ, ಪ್ರಧಾನಿ ಮೋದಿಗೂ ಒಂದಷ್ಟು ಮಾನಸಿಕ ಚಿಕಿತ್ಸೆಯ ಅಗತ್ಯವಿದೆ: ಕಾಂಗ್ರೆಸ್ ತೀವ್ರ ವಾಗ್ದಾಳಿ

- Advertisement -
- Advertisement -

ಫೇಕ್ ಫ್ಯಾಕ್ಟರಿ ಎಂದೇ ಕುಖ್ಯಾತಿ ಗಳಿಸಿರುವ ಬಿಜೆಪಿಗೂ, ಪ್ರಧಾನಿ ಮೋದಿಗೂ ಒಂದಷ್ಟು ಮಾನಸಿಕ ಚಿಕಿತ್ಸೆಯ ಅಗತ್ಯವಿದೆ ಎಂದು ರಾಜ್ಯ ಕಾಂಗ್ರೆಸ್ ಶನಿವಾರದಂದು ಬಿಜೆಪಿ ವಿರುದ್ದ ತೀವ್ರ ವಾಗ್ದಾಳಿ ನಡೆಸಿದೆ.

ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳು ಕಳೆದ ಹಲವು ದಿನಗಳಿಂದ ಸಾಮಾಜಿಕ ಜಾಲತಾಣವಾದ ಟ್ವಿಟರ್‌ನಲ್ಲಿ ಪರಸ್ಪರ ವಾಗ್ದಾಳಿ ನಡೆಸುತ್ತಿವೆ. ಇಂದು ಬೆಳಿಗ್ಗೆ ಕಾಂಗ್ರೆಸ್ ಪಕ್ಷವು, “ನರೇಂದ್ರ ಮೋದಿಯವರೇ, ಗೊಬ್ಬರವಿಲ್ಲದೆ ಗಡ್ಡ ಬೆಳೆಸಬಹುದೇ ಹೊರತು ಬೆಳೆ ಬೆಳೆಸಲಾಗುವುದಿಲ್ಲ!! ಗೊಬ್ಬರದ ಬೆಲೆ ಇಳಿಸಿ, ರೈತರನ್ನು ಉಳಿಸಿ” ಎಂದು ಗೊಬ್ಬರ ಬೆಲೆ ಹೆಚ್ಚಳದ ಬಗ್ಗೆ ವ್ಯಂಗ್ಯವಾಗಿ ಪ್ರಧಾನಿಗೆ ತಿಳಿಸಿತ್ತು.

ಇದನ್ನೂ ಓದಿ: ದಿಲ್ಲಿಯಲ್ಲೊಬ್ಬ ಪಾಳೆಯಗಾರ, ಕರ್ನಾಟಕದಲ್ಲೊಬ್ಬ ಮಾಂಡಲಿಕ; ಭಲೇ ಜೋಡಿ: ಸಿದ್ದರಾಮಯ್ಯ

ಇದಕ್ಕೆ ಪ್ರತಿಕ್ರಿಯಿಸಿರುವ ಬಿಜೆಪಿಯು, “ಕಾಂಗ್ರೆಸ್ ಆಡಳಿತದಲ್ಲಿ A ಯಿಂದ Z ವರೆಗೂ ಭ್ರಷ್ಟಾಚಾರ ಹಗರಣ ನಡೆದಿದ್ದವು. ಮೋದಿ ಆಡಳಿತದಲ್ಲಿ ಗಡ್ಡ, ಬಿಸ್ಕೆಟ್, ಪೇಟ ಮೊದಲಾದವುಗಳ ಬಗ್ಗೆ ಮಾತನಾಡುತ್ತಿದ್ದಾರೆ. ಆಲೂಗಡ್ಡೆಯಿಂದ ಚಿಪ್ಸ್ ಮಾಡಬಹುದೇ ಹೊರತು ಚಿನ್ನದ ಬಿಸ್ಕೆಟ್ ತಯಾರಿಸಲಾಗುವುದಿಲ್ಲ ಎನ್ನುವುದನ್ನು ಯುವರಾಜನಿಗೆ ಅರ್ಥೈಸಿ. ಕಾಂಗ್ರೆಸ್‌ ಪಕ್ಷದ ಹತಾಶೆ ನಮಗೆ ಅರ್ಥವಾಗುತ್ತಿದೆ” ಎಂದು ಹೇಳಿತ್ತು.

ಇದನ್ನೂ ಓದಿ: ಬೀದಿಬದಿ ವಾಸಿಸುವ ಬಾಲಕಿಯರಿಗೆ ಸಿಎಎ, ಎನ್‌ಆರ್‌ಸಿ ಪಾಠ ಮಾಡಿದ್ದಕ್ಕೆ ದೇಶದ್ರೋಹ ಪ್ರಕರಣ ದಾಖಲು!

ಇದೀಗ ಟ್ವಿಟರ್‌ನಲ್ಲಿ ಬಿಜೆಪಿಯ ಹೇಳಿಕೆಗೆ ಆಕ್ರೋಶ ವ್ಯಕ್ತಪಡಿಸಿರುವ ಕಾಂಗ್ರೆಸ್, “ಬಿಜೆಪಿಯವರೇ
ಹತಾಶೆಗೊಂಡಿದ್ದು ಈ ದೇಶದ ಮತ್ತು ರಾಜ್ಯದ ಜನತೆಯಾಗಿದ್ದಾರೆ. ಫೇಕ್ ಫ್ಯಾಕ್ಟರಿ ಎಂದೇ ಕುಖ್ಯಾತಿ ಗಳಿಸಿದ ನಿಮಗೂ ನಿಮ್ಮ ಮೋದಿಗೂ ಒಂದಷ್ಟು ಮಾನಸಿಕ ಚಿಕಿತ್ಸೆಯ ಅಗತ್ಯವಿದೆ, ಮೊಡದಿಂದ ರಾಡರ್ ಕಣ್ತಪ್ಪಿಸಲು ಹೇಗೆ ಸಾಧ್ಯವಿಲ್ಲವೋ ಹಾಗೆಯೇ ರಫೆಲ್ ಖರೀದಿ ಹಗರಣವನ್ನೂ ಮುಚ್ಚಿಡಲಾಗುವುದಿಲ್ಲ ಎನ್ನುವುದು ಅರ್ಥವಾಗಬೇಕಿದೆ” ಎಂದು ತಿರುಗೇಟು ನೀಡಿದೆ.

ಈ ಹಿಂದೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಭೆಯೊಂದರಲ್ಲಿ, “ಒಂದು ಯಂತ್ರದಲ್ಲಿ ಒಂದು ಕಡೆಯಿಂದ ಆಲೂಗಡ್ಡೆ ಹಾಕಿದರೆ ಇನ್ನೊಂದು ಕಡೆಯಿಂದ ಚಿನ್ನ ಬರುತ್ತದೆ ಎಂದು ಪ್ರಧಾನಿ ಮೋದಿ ಹೇಳುತ್ತಿದ್ದಾರೆ” ಎಂದು ಪ್ರಧಾನಿಯನ್ನು ಉಲ್ಲೇಖಿಸಿ ಹೇಳಿದ್ದರು.

ಆದರೆ ಬಿಜೆಪಿ ಮತ್ತು ಅವರ ಬೆಂಬಲಿಗರು ಅದರಲ್ಲಿ ಪ್ರಧಾನಿಯ ಉಲ್ಲೇಖವನ್ನು ಕತ್ತರಿಸಿ, “ಒಂದು ಯಂತ್ರದಲ್ಲಿ ಒಂದು ಕಡೆಯಿಂದ ಆಲೂಗಡ್ಡೆ ಹಾಕಿದರೆ ಇನ್ನೊಂದು ಕಡೆಯಿಂದ ಚಿನ್ನ ಬರುತ್ತದೆ” ಎಂದು ರಾಹುಲ್ ಗಾಂಧಿ ಹೇಳುತ್ತಿರುವಂತೆ ವಿಡಿಯೋ ತಯಾರಿಸಿ ವೈರಲ್ ಮಾಡಿದ್ದರು. ಈ ಬಗ್ಗೆ ಹಲವಾರು ಫ್ಯಾಕ್ಟ್‌ಚೆಕ್‌ಗಳು ನಡೆದರೂ ಬಿಜೆಪಿಯು ಅದೇ ಸುಳ್ಳನ್ನು ಇನ್ನೂ ಹೇಳಿಕೊಳ್ಳುತ್ತಿದೆ.

ಇದನ್ನೂ ಓದಿ: ಲಾಕ್‌ಡೌ‌ನ್‌ನಲ್ಲಿ ಹೆಚ್ಚಾದ ಬಾಲ್ಯವಿವಾಹ: ವರದಿ ಮುಚ್ಚಿಡಲು ಪ್ರಯತ್ನಿಸುತ್ತಿರುವ ಕೇಂದ್ರ ಸರ್ಕಾರ

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...