HomeಮುಖಪುಟBJP ಮತ್ತು RSS ಸಿಖ್ ಜನಾಂಗವನ್ನು ಮುಗಿಸಲು ಪ್ರಯತ್ನಿಸುತ್ತಿದೆ: ಸಿಖ್ ಧರ್ಮಗುರುವಿನ ಆತ್ಮಹತ್ಯಾ ಟಿಪ್ಪಣಿ

BJP ಮತ್ತು RSS ಸಿಖ್ ಜನಾಂಗವನ್ನು ಮುಗಿಸಲು ಪ್ರಯತ್ನಿಸುತ್ತಿದೆ: ಸಿಖ್ ಧರ್ಮಗುರುವಿನ ಆತ್ಮಹತ್ಯಾ ಟಿಪ್ಪಣಿ

"ರೈತರನ್ನು ಬೆಂಬಲಿಸಲು, ಕೆಲವರು ತಮ್ಮ ಪ್ರಶಸ್ತಿಗಳನ್ನು ಸರ್ಕಾರಕ್ಕೆ ಹಿಂದಿರುಗಿಸಿದ್ದಾರೆ. ನಾನು ನನ್ನ ಪ್ರಾಣವನ್ನು ತ್ಯಾಗ ಮಾಡಲು ನಿರ್ಧರಿಸಿದ್ದೇನೆ"

- Advertisement -
- Advertisement -

ದೆಹಲಿಯ ಸಿಂಘು ಗಡಿಯಲ್ಲಿ “ರೈತರಿಗಾಗಿ ನಾನು ನನ್ನ ಜೀವವನ್ನೇ ತ್ಯಾಗ ಮಾಡುತ್ತಿದ್ದೇನೆ” ಎಂದು ಬರೆದಿಟ್ಟು ಸಿಖ್ ಧರ್ಮಗುರು ಬಾಬಾ ರಾಮ್ ಸಿಂಗ್ ಆತ್ಮಹತ್ಯೆ ಮಾಡಿಕೊಂಡಿದ್ದರು. ಆತ್ಮಹತ್ಯೆಗೂ ಮುಂಚೆ ಅವರು ಬರೆದಿಟ್ಟಿದ್ದ ಪತ್ರವೊಂದು ದೊರಕಿದ್ದು, ಅದರಲ್ಲಿ, “ಬಿಜೆಪಿ ಮತ್ತು ಆರ್‌ಎಸ್‌ಎಸ್ ಸಿಖ್ ಜನಾಂಗವನ್ನೇ ಮುಗಿಸಲು ಪ್ರಯತ್ನಿಸುತ್ತಿದೆ” ಎಂದು ಬರೆದಿರುವುದು ಈಗ ಬಹಿರಂಗವಾಗಿದೆ.

ಈ ಕುರಿತು ವರದಿ ಮಾಡಿರುವ ದಿ ಪ್ರಿಂಟ್, “ಆರ್‌ಎಸ್‌ಎಸ್ ಮತ್ತು ಬಿಜೆಪಿ ಕೇವಲ ರೈತರಿಗೆ ಮಾತ್ರ ಅನ್ಯಾಯ ಮಾಡುತ್ತಿಲ್ಲ. ಸಂಪೂರ್ಣ ಸಿಖ್ ಜನಾಂಗವನ್ನೇ ಮುಗಿಸಲು ಹವಣಿಸುತ್ತಿದೆ. ಇವರಿಂದ ಸಿಖ್ ಸಮುದಾಯವು ಹಲವು ಬಾರಿ ಆಕ್ರಮಣಕ್ಕೊಳಗಾಗಿದೆ ಮತ್ತು ಈಗಲೂ ಅಗುತ್ತಲೆ ಇದೆ. ಕೆಲವು ಸಿಖ್‌ಗಳು ಆರ್‌ಎಸ್‌ಎಸ್‌ನ ಅಂದಾಭಿಮಾನಿಗಳಾಗಿದ್ದಾರೆ. ಆರ್‌ಎಸ್‌ಎಸ್‌ನೊಂದಿಗೆ ಸಿಖ್‌ಗಳು ಸೇರಿಕೊಂಡಿರುವುದು ನಿಜಕ್ಕೂ ನಾಚಿಗೇಡು. ಕೆಲವರು ಅಧಿಕಾರದಾಸೆಯಿಂದ, ಕೆಲವರು ಹಣದಾಸೆಗಾಗಿ ಇನ್ನು ಕೆಲವರು ಬಲಾತ್ಕಾರದಿಂದ ಆರ್‌ಎಸ್‌ಎಸ್ ಮತ್ತು ಬಿಜೆಪಿ ಜೊತೆಗಿದ್ದಾರೆ. ಹಾವಿನಂತೆ ಆರ್‌ಎಸ್‌ಎಸ್ ಸಿಖ್ ಸಮುದಾಯದ ಬಳಿ ಸುಳಿಯುತ್ತಲೇ ಇದೆ” ಎಂದು ಬರೆಯಲಾಗಿದೆ ಎಂಬುದನ್ನು ಬಹಿರಂಗಪಡಿಸಿದೆ.

ಇದನ್ನೂ ಓದಿ: ಸೈನಿಕರ ವೇತನ ಲೂಟಿ ಮಾಡಿ ಕೋಟ್ಯಾಂತರ ರೂ.ಗಳನ್ನು ಸಂಗ್ರಹಿಸಿದ PM-CARES?

ಬಾಬಾ ರಾಮ್ ಸಿಂಗ್ ಒಟ್ಟು 10 ಪುಟಗಳ ಪತ್ರವನ್ನು ಬರೆದಿದ್ದು, ಈ ಪತ್ರದಲ್ಲಿ ಹಲವಾರು ವಿಚಾರಗಳನ್ನು ಉಲ್ಲೇಖಿಸಲಾಗಿದೆ. “ಈ ಪತ್ರದಲ್ಲಿರುವ ಕೈಬರಹವು ಬಾಬಾ ರಾಮ್ ಸಿಂಗ್ ಅವರದ್ದೇ ಎಂದು ನಾನು ಸ್ಪಷ್ಟಪಡಿಸುತ್ತಿದ್ದೇನೆ. ಈ ಕುರಿತು ಯಾರಿಗಾದರೂ ಸಂಶಯಗಳಿದ್ದರೆ ಯಾವುದೇ ರೀತಿಯ ಪರೀಕ್ಷೆಯನ್ನೂ ನಡೆಸಬಹುದು” ಎಂದು ರಾಮ್ ಸಿಂಗ್ ಅವರ ಅನುಯಾಯಿ ಸಂತ್ ಭೋಲಾ ಹೇಳಿದ್ದಾರೆ.

“ರೈತರು ತಮ್ಮ ಹಕ್ಕುಗಳನ್ನು ಪಡೆದುಕೊಳ್ಳಲು ಹೋರಾಡುತ್ತಿದ್ದಾರೆ. ಆ ನೋವನ್ನು ನಾನೂ ಅನುಭವಿಸುತ್ತಿದ್ದೇನೆ… ಸರ್ಕಾರವು ಅವರಿಗೆ ನ್ಯಾಯ ಒದಗಿಸದ ಕಾರಣ ನಾನೂ ಅವರ ನೋವನ್ನು ಹಂಚಿಕೊಳ್ಳುತ್ತೇನೆ. ಅನ್ಯಾಯವನ್ನು ಮಾಡುವುದು ಪಾಪ, ಆದರೆ ಅನ್ಯಾಯವನ್ನು ಸಹಿಸುವುದು ಕೂಡಾ ಪಾಪವಾಗಿದೆ. ರೈತರನ್ನು ಬೆಂಬಲಿಸಲು, ಕೆಲವರು ತಮ್ಮ ಪ್ರಶಸ್ತಿಗಳನ್ನು ಸರ್ಕಾರಕ್ಕೆ ಹಿಂದಿರುಗಿಸಿದ್ದಾರೆ. ನಾನು ನನ್ನ ಪ್ರಾಣವನ್ನು ತ್ಯಾಗ ಮಾಡಲು ನಿರ್ಧರಿಸಿದ್ದೇನೆ” ಎಂದು ಬರೆದಿದ್ದರು.

ಇದನ್ನೂ ಓದಿ: ’ಮತಾಂತರ ನಿಷೇಧ ಕಾಯ್ದೆ ಸಂವಿಧಾನ ವಿರೋಧಿಯಾದುದು’: ಮಾಜಿ ಮುಖ್ಯ ನ್ಯಾಯಮೂರ್ತಿ ಎಪಿ ಶಾ

ಈ ಕುರಿತು ಟ್ವೀಟ್ ಮಾಡಿರುವ ಶಿರೋಮಣಿ ಅಕಾಲಿ ದಳದ ಮುಖಂಡ ಸುಖ್‌ಬೀರ್ ಸಿಂಗ್ “ಸಿಂಘು ಗಡಿಯಲ್ಲಿ ನಡೆಯುತ್ತಿರುವ ರೈತ ಹೋರಾಟದಲ್ಲಿನ ರೈತರ ಸಂಕಟವನ್ನು ನೋಡುತ್ತಿದ್ದ ಸಂತ ಬಾಬಾ ರಾಮ್ ಸಿಂಗ್ ಜಿ ನಾನಕ್ಸರ್ ಸಿಂಗ್ರಾ ವಾಲೆ, ಸ್ವತಃ ಗುಂಡು ಹಾರಿಸಿಕೊಂಡು ಪ್ರಾಣ ಕಳೆದುಕೊಂಡಿದ್ದಾರೆ. ಸಂತ ಜಿ ಅವರ ತ್ಯಾಗವನ್ನು ವ್ಯರ್ಥವಾಗಲು ಬಿಡುವುದಿಲ್ಲ. ಪರಿಸ್ಥಿತಿ ಹದಗೆಡುವ ಮುನ್ನ ಕೃಷಿ ಕಾನೂನುಗಳನ್ನು ರದ್ದುಗೊಳಿಸುವಂತೆ ಒತ್ತಾಯಿಸುತ್ತೇನೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದರು.


ಇದನ್ನೂ ಓದಿ: ಕೇರಳದಲ್ಲಿ ಮತ್ತೊಮ್ಮೆ LDF ?- ಸ್ಥಳೀಯ ಸಂಸ್ಥೆ ಚುನಾವಣಾ ಫಲಿತಾಂಶಗಳ ಸೂಚನೆಯೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...