Homeಮುಖಪುಟಬಿಜೆಪಿ-ಶಿವಸೇನೆ ಸಂಬಂಧ, ಅಮಿರ್ ಖಾನ್-ಕಿರಣ್ ರಾವ್ ಸಂಬಂಧದಂತೆ- ಸಂಜಯ್ ರಾವತ್

ಬಿಜೆಪಿ-ಶಿವಸೇನೆ ಸಂಬಂಧ, ಅಮಿರ್ ಖಾನ್-ಕಿರಣ್ ರಾವ್ ಸಂಬಂಧದಂತೆ- ಸಂಜಯ್ ರಾವತ್

- Advertisement -
- Advertisement -

ದೇಶದಲ್ಲಿ ಸುದ್ದಿಯಾಗುವ ಪ್ರಮುಖ ವಿಷಯಗಳು ಹೆಚ್ಚಿದ್ದರು ಕೂಡ ಹೆಚ್ಚಿಗೆ ಸುದ್ದಿಯಾಗುತ್ತಿರುವುದು ಮಾತ್ರ ಅಮಿರ್ ಖಾನ್ ಮತ್ತು ಕಿರಣ್ ರಾವ್ ಅವರ ವಿಚ್ಛೇದನದ ಸುದ್ದಿ. ಇದು ಈಗ ರಾಜಕೀಯ ಸಂಬಂಧಗಳನ್ನು ತಿಳಿಸಲು ಸಹ ಬಳಕೆಯಾಗುತ್ತಿದೆ. ಬಿಜೆಪಿ ಮತ್ತು ಶಿವಸೇನೆಯ ಸಂಬಂಧವನ್ನು ವಿವರಿಸುವಾಗ ನಮ್ಮ ಸಂಬಂಧ ಅಮಿರ್ ಖಾನ್ ಮತ್ತು ಕಿರಣ್ ರಾವ್ ಅವರ ಸಂಬಂಧದಂತೆ ಎಂದು ಶಿವಸೇನೆಯ ವಕ್ತಾರ ಸಂಜಯ್ ರಾವತ್ ಹೇಳಿದ್ದಾರೆ.

ಬಿಜೆಪಿಯೊಂದಿಗೆ ಶಿವಸೇನೆ ಮತ್ತೆ ಒಂದಾಗಲಿದೆ ಎಂಬ ಮಾತುಕತೆ ರಾಜಕೀಯದಲ್ಲಿ ಚರ್ಚೆಯಾಗುತ್ತಿದ್ದು, ರಾಜಕೀಯವಾಗಿ  ಎರಡು ಪಕ್ಷಗಳು ಭಿನ್ನವಾಗಿದ್ದರೂ, ಕ್ಷಗಳ ನಡುವಿನ ಬಾಂಧವ್ಯ ಉಳಿದಿದೆ ಎಂದು ಶಿವಸೇನೆ ನಾಯಕ ಸಂಜಯ್ ರಾವತ್ ಅವರ ಹೇಳಿದ್ದಾರೆ.

ಇತ್ತ ಮಾಜಿ ಮಿತ್ರಪಕ್ಷಗಳಾದ ಬಿಜೆಪಿ ಮತ್ತು ಶಿವಸೇನೆ ಮತ್ತೆ ಒಟ್ಟಿಗೆ ಸೇರಲಿದ್ದಾರೆಯೆ ಎಂಬ ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯಿಸಿರುವ ಬಿಜೆಪಿಯ ದೇವೇಂದ್ರ ಫಡ್ನವಿಸ್, “ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಸೂಕ್ತ ನಿರ್ಧಾರ ತೆಗೆದುಕೊಳ್ಳಲಾಗುವುದು” ಎಂದು ಹೇಳಿದ್ದಾರೆ.

ಇದನ್ನೂ ಓದಿ: ‘ಶಿವಸೇನೆ ಎಂದಿಗೂ ಬಿಜೆಪಿಯ ಶತ್ರುವಲ್ಲ’: ದೇವೇಂದ್ರ ಫಡ್ನವಿಸ್

 

“ನಾವು ಭಾರತ-ಪಾಕಿಸ್ತಾನವಲ್ಲ. ಅಮೀರ್ ಖಾನ್ ಮತ್ತು ಕಿರಣ್ ರಾವ್ ಅವರನ್ನು ನೋಡಿ, ಅವರ ಸಂಬಂಧದಂತೆ ನಮ್ಮ ಬಂಧ ಕೂಡ ಇದೆ. ಶಿವಸೇನೆ ಮತ್ತು ಬಿಜೆಪಿಯ ರಾಜಕೀಯ ಮಾರ್ಗಗಳು ವಿಭಿನ್ನವಾಗಿವೆ ಆದರೆ ಸ್ನೇಹ ಮಾತ್ರ ಹಾಗೇ ಉಳಿದಿರುತ್ತದೆ” ಎಂದು ಶಿವಸೇನೆ ಸಂಸದ ಸಂಜಯ್ ರಾವತ್ ತಿಳಿಸಿದ್ದಾರೆ.

‌ಇದರೊಂದಿಗೆ ಮಹಾರಾಷ್ಟ್ರದ ಶಿವಸೇನೆ, ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷ (ಎನ್‌ಸಿಪಿ) ಮತ್ತು ಕಾಂಗ್ರೆಸ್‌ನ ‘ಮಹಾ ವಿಕಾಸ್ ಅಘಾಡಿ’’ ಸಮ್ಮಿಶ್ರ ಸರ್ಕಾರದ ಮೈತ್ರಿ ಒಡೆಯುವ ಬಗ್ಗೆ ಯಾವುದೇ ಪ್ರಶ್ನೆಯಿಲ್ಲ ಎಂದು ಸಂಜಯ್ ರಾವತ್ ಸ್ಪಷ್ಟಪಡಿಸಿದ್ದಾರೆ. ‘ಮಹಾ ವಿಕಾಸ್ ಅಘಾಡಿ’’ ಸಮ್ಮಿಶ್ರ ಸರ್ಕಾರ ತನ್ನ ಸಂಪೂರ್ಣ ಅಧಿಕಾರವಧಿಯನ್ನು ಉಳಿಸಿಕೊಳ್ಳಲಿದೆ ಎಂದು ಹೇಳಿದ್ದಾರೆ.

ಅಮೀರ್ ಖಾನ್ ಮತ್ತು ಕಿರಣ್ ರಾವ್ ಅವರು 15 ವರ್ಷಗಳ ದಾಂಪತ್ಯದ ನಂತರ ಕಳೆದ ವಾರಾಂತ್ಯದಲ್ಲಿ ವಿಚ್ಛೇದನ ಘೋಷಿಸಿದರು. ನಂತರ ಭಾನುವಾರ ಇಬ್ಬರು ಒಟ್ಟಿಗೆ ಕುಳಿತು, ಅಭಿಮಾನಿಗಳೊಂದಿಗೆ ತಮ್ಮ ಭಾವನೆಯನ್ನು ಹಂಚಿಕೊಂಡಿದ್ದಾರೆ. “ನಿಮಗೆ ಬೇಸರವಾಗಿರಬಹುದು, ಸಿಟ್ಟೂ ಬಂದಿರಬಹುದು. ಆಘಾತವಾಗಿರಬಹುದು. ಆದರೆ ನಮ್ಮ ನಿರ್ಧಾರದಿಂದ ನಾವಿಬ್ಬರೂ ಖುಷಿಯಾಗಿದ್ದೇವೆ. ಒಂದು ಕುಟುಂಬವಾಗಿ ಮುಂದುವರೆಯುತ್ತೇವೆ. ನಮ್ಮ ಸಂಬಂಧ ಬದಲಾಗಿದೆ ಆದರೆ ನಾವು ಇನ್ನೂ ಒಟ್ಟಿಗೆ ಇದ್ದೇವೆ” ಎಂದು ಹೇಳಿದ್ದರು.

ಇನ್ನು ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರು ದೇವೇಂದ್ರ ಫಡ್ನವಿಸ್ ’ನಾವು ಮತ್ತು ಶಿವಸೇನೆ ಎಂದಿಗೂ ಶತ್ರುಗಳಲ್ಲ. ಅವರು ನಮ್ಮ ಸ್ನೇಹಿತರು’ ಎಂದಿದ್ದಾರೆ.

ಒಟ್ಟಾರೆ, ಶಿವಸೇನೆ ನೇತೃತ್ವದ ಮಹಾರಾಷ್ಟ್ರದ ‘ಮಹಾ ವಿಕಾಸ್ ಅಘಾಡಿ’ ಮೈತ್ರಿಯಲ್ಲಿ ಒತ್ತಡ ಉಂಟಾಗಿದೆ ಎಂಬ ವದಂತಿಗಳ ನಡುವೆಯೇ ಬಿಜೆಪಿ ಮತ್ತು ಶಿವಸೇನೆ ಪಕ್ಷಗಳು ಕೆಲವು ಸಮಯದಿಂದ ಮಾತುಕತೆ ನಡೆಸುತ್ತಿವೆ ಎಂದು ಮೂಲಗಳು ತಿಳಿಸಿವೆ.


ಇದನ್ನೂ ಓದಿ: ಮುಂದಿನ ಭಾರೀ ಕಾಂಗ್ರೆಸ್ ಮುಖ್ಯಮಂತ್ರಿ ಚರ್ಚೆ!: ಮಹಾರಾಷ್ಟ್ರ ಮೈತ್ರಿ ಗಟ್ಟಿಯೆಂದ ಶಿವಸೇನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...