Homeಮುಖಪುಟಬಿಜೆಪಿ-ಶಿವಸೇನೆ ಸಂಬಂಧ, ಅಮಿರ್ ಖಾನ್-ಕಿರಣ್ ರಾವ್ ಸಂಬಂಧದಂತೆ- ಸಂಜಯ್ ರಾವತ್

ಬಿಜೆಪಿ-ಶಿವಸೇನೆ ಸಂಬಂಧ, ಅಮಿರ್ ಖಾನ್-ಕಿರಣ್ ರಾವ್ ಸಂಬಂಧದಂತೆ- ಸಂಜಯ್ ರಾವತ್

- Advertisement -
- Advertisement -

ದೇಶದಲ್ಲಿ ಸುದ್ದಿಯಾಗುವ ಪ್ರಮುಖ ವಿಷಯಗಳು ಹೆಚ್ಚಿದ್ದರು ಕೂಡ ಹೆಚ್ಚಿಗೆ ಸುದ್ದಿಯಾಗುತ್ತಿರುವುದು ಮಾತ್ರ ಅಮಿರ್ ಖಾನ್ ಮತ್ತು ಕಿರಣ್ ರಾವ್ ಅವರ ವಿಚ್ಛೇದನದ ಸುದ್ದಿ. ಇದು ಈಗ ರಾಜಕೀಯ ಸಂಬಂಧಗಳನ್ನು ತಿಳಿಸಲು ಸಹ ಬಳಕೆಯಾಗುತ್ತಿದೆ. ಬಿಜೆಪಿ ಮತ್ತು ಶಿವಸೇನೆಯ ಸಂಬಂಧವನ್ನು ವಿವರಿಸುವಾಗ ನಮ್ಮ ಸಂಬಂಧ ಅಮಿರ್ ಖಾನ್ ಮತ್ತು ಕಿರಣ್ ರಾವ್ ಅವರ ಸಂಬಂಧದಂತೆ ಎಂದು ಶಿವಸೇನೆಯ ವಕ್ತಾರ ಸಂಜಯ್ ರಾವತ್ ಹೇಳಿದ್ದಾರೆ.

ಬಿಜೆಪಿಯೊಂದಿಗೆ ಶಿವಸೇನೆ ಮತ್ತೆ ಒಂದಾಗಲಿದೆ ಎಂಬ ಮಾತುಕತೆ ರಾಜಕೀಯದಲ್ಲಿ ಚರ್ಚೆಯಾಗುತ್ತಿದ್ದು, ರಾಜಕೀಯವಾಗಿ  ಎರಡು ಪಕ್ಷಗಳು ಭಿನ್ನವಾಗಿದ್ದರೂ, ಕ್ಷಗಳ ನಡುವಿನ ಬಾಂಧವ್ಯ ಉಳಿದಿದೆ ಎಂದು ಶಿವಸೇನೆ ನಾಯಕ ಸಂಜಯ್ ರಾವತ್ ಅವರ ಹೇಳಿದ್ದಾರೆ.

ಇತ್ತ ಮಾಜಿ ಮಿತ್ರಪಕ್ಷಗಳಾದ ಬಿಜೆಪಿ ಮತ್ತು ಶಿವಸೇನೆ ಮತ್ತೆ ಒಟ್ಟಿಗೆ ಸೇರಲಿದ್ದಾರೆಯೆ ಎಂಬ ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯಿಸಿರುವ ಬಿಜೆಪಿಯ ದೇವೇಂದ್ರ ಫಡ್ನವಿಸ್, “ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಸೂಕ್ತ ನಿರ್ಧಾರ ತೆಗೆದುಕೊಳ್ಳಲಾಗುವುದು” ಎಂದು ಹೇಳಿದ್ದಾರೆ.

ಇದನ್ನೂ ಓದಿ: ‘ಶಿವಸೇನೆ ಎಂದಿಗೂ ಬಿಜೆಪಿಯ ಶತ್ರುವಲ್ಲ’: ದೇವೇಂದ್ರ ಫಡ್ನವಿಸ್

 

“ನಾವು ಭಾರತ-ಪಾಕಿಸ್ತಾನವಲ್ಲ. ಅಮೀರ್ ಖಾನ್ ಮತ್ತು ಕಿರಣ್ ರಾವ್ ಅವರನ್ನು ನೋಡಿ, ಅವರ ಸಂಬಂಧದಂತೆ ನಮ್ಮ ಬಂಧ ಕೂಡ ಇದೆ. ಶಿವಸೇನೆ ಮತ್ತು ಬಿಜೆಪಿಯ ರಾಜಕೀಯ ಮಾರ್ಗಗಳು ವಿಭಿನ್ನವಾಗಿವೆ ಆದರೆ ಸ್ನೇಹ ಮಾತ್ರ ಹಾಗೇ ಉಳಿದಿರುತ್ತದೆ” ಎಂದು ಶಿವಸೇನೆ ಸಂಸದ ಸಂಜಯ್ ರಾವತ್ ತಿಳಿಸಿದ್ದಾರೆ.

‌ಇದರೊಂದಿಗೆ ಮಹಾರಾಷ್ಟ್ರದ ಶಿವಸೇನೆ, ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷ (ಎನ್‌ಸಿಪಿ) ಮತ್ತು ಕಾಂಗ್ರೆಸ್‌ನ ‘ಮಹಾ ವಿಕಾಸ್ ಅಘಾಡಿ’’ ಸಮ್ಮಿಶ್ರ ಸರ್ಕಾರದ ಮೈತ್ರಿ ಒಡೆಯುವ ಬಗ್ಗೆ ಯಾವುದೇ ಪ್ರಶ್ನೆಯಿಲ್ಲ ಎಂದು ಸಂಜಯ್ ರಾವತ್ ಸ್ಪಷ್ಟಪಡಿಸಿದ್ದಾರೆ. ‘ಮಹಾ ವಿಕಾಸ್ ಅಘಾಡಿ’’ ಸಮ್ಮಿಶ್ರ ಸರ್ಕಾರ ತನ್ನ ಸಂಪೂರ್ಣ ಅಧಿಕಾರವಧಿಯನ್ನು ಉಳಿಸಿಕೊಳ್ಳಲಿದೆ ಎಂದು ಹೇಳಿದ್ದಾರೆ.

ಅಮೀರ್ ಖಾನ್ ಮತ್ತು ಕಿರಣ್ ರಾವ್ ಅವರು 15 ವರ್ಷಗಳ ದಾಂಪತ್ಯದ ನಂತರ ಕಳೆದ ವಾರಾಂತ್ಯದಲ್ಲಿ ವಿಚ್ಛೇದನ ಘೋಷಿಸಿದರು. ನಂತರ ಭಾನುವಾರ ಇಬ್ಬರು ಒಟ್ಟಿಗೆ ಕುಳಿತು, ಅಭಿಮಾನಿಗಳೊಂದಿಗೆ ತಮ್ಮ ಭಾವನೆಯನ್ನು ಹಂಚಿಕೊಂಡಿದ್ದಾರೆ. “ನಿಮಗೆ ಬೇಸರವಾಗಿರಬಹುದು, ಸಿಟ್ಟೂ ಬಂದಿರಬಹುದು. ಆಘಾತವಾಗಿರಬಹುದು. ಆದರೆ ನಮ್ಮ ನಿರ್ಧಾರದಿಂದ ನಾವಿಬ್ಬರೂ ಖುಷಿಯಾಗಿದ್ದೇವೆ. ಒಂದು ಕುಟುಂಬವಾಗಿ ಮುಂದುವರೆಯುತ್ತೇವೆ. ನಮ್ಮ ಸಂಬಂಧ ಬದಲಾಗಿದೆ ಆದರೆ ನಾವು ಇನ್ನೂ ಒಟ್ಟಿಗೆ ಇದ್ದೇವೆ” ಎಂದು ಹೇಳಿದ್ದರು.

ಇನ್ನು ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರು ದೇವೇಂದ್ರ ಫಡ್ನವಿಸ್ ’ನಾವು ಮತ್ತು ಶಿವಸೇನೆ ಎಂದಿಗೂ ಶತ್ರುಗಳಲ್ಲ. ಅವರು ನಮ್ಮ ಸ್ನೇಹಿತರು’ ಎಂದಿದ್ದಾರೆ.

ಒಟ್ಟಾರೆ, ಶಿವಸೇನೆ ನೇತೃತ್ವದ ಮಹಾರಾಷ್ಟ್ರದ ‘ಮಹಾ ವಿಕಾಸ್ ಅಘಾಡಿ’ ಮೈತ್ರಿಯಲ್ಲಿ ಒತ್ತಡ ಉಂಟಾಗಿದೆ ಎಂಬ ವದಂತಿಗಳ ನಡುವೆಯೇ ಬಿಜೆಪಿ ಮತ್ತು ಶಿವಸೇನೆ ಪಕ್ಷಗಳು ಕೆಲವು ಸಮಯದಿಂದ ಮಾತುಕತೆ ನಡೆಸುತ್ತಿವೆ ಎಂದು ಮೂಲಗಳು ತಿಳಿಸಿವೆ.


ಇದನ್ನೂ ಓದಿ: ಮುಂದಿನ ಭಾರೀ ಕಾಂಗ್ರೆಸ್ ಮುಖ್ಯಮಂತ್ರಿ ಚರ್ಚೆ!: ಮಹಾರಾಷ್ಟ್ರ ಮೈತ್ರಿ ಗಟ್ಟಿಯೆಂದ ಶಿವಸೇನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...