Homeಮುಖಪುಟಬಿಜೆಪಿ-ಶಿವಸೇನೆ ಸಂಬಂಧ, ಅಮಿರ್ ಖಾನ್-ಕಿರಣ್ ರಾವ್ ಸಂಬಂಧದಂತೆ- ಸಂಜಯ್ ರಾವತ್

ಬಿಜೆಪಿ-ಶಿವಸೇನೆ ಸಂಬಂಧ, ಅಮಿರ್ ಖಾನ್-ಕಿರಣ್ ರಾವ್ ಸಂಬಂಧದಂತೆ- ಸಂಜಯ್ ರಾವತ್

- Advertisement -
- Advertisement -

ದೇಶದಲ್ಲಿ ಸುದ್ದಿಯಾಗುವ ಪ್ರಮುಖ ವಿಷಯಗಳು ಹೆಚ್ಚಿದ್ದರು ಕೂಡ ಹೆಚ್ಚಿಗೆ ಸುದ್ದಿಯಾಗುತ್ತಿರುವುದು ಮಾತ್ರ ಅಮಿರ್ ಖಾನ್ ಮತ್ತು ಕಿರಣ್ ರಾವ್ ಅವರ ವಿಚ್ಛೇದನದ ಸುದ್ದಿ. ಇದು ಈಗ ರಾಜಕೀಯ ಸಂಬಂಧಗಳನ್ನು ತಿಳಿಸಲು ಸಹ ಬಳಕೆಯಾಗುತ್ತಿದೆ. ಬಿಜೆಪಿ ಮತ್ತು ಶಿವಸೇನೆಯ ಸಂಬಂಧವನ್ನು ವಿವರಿಸುವಾಗ ನಮ್ಮ ಸಂಬಂಧ ಅಮಿರ್ ಖಾನ್ ಮತ್ತು ಕಿರಣ್ ರಾವ್ ಅವರ ಸಂಬಂಧದಂತೆ ಎಂದು ಶಿವಸೇನೆಯ ವಕ್ತಾರ ಸಂಜಯ್ ರಾವತ್ ಹೇಳಿದ್ದಾರೆ.

ಬಿಜೆಪಿಯೊಂದಿಗೆ ಶಿವಸೇನೆ ಮತ್ತೆ ಒಂದಾಗಲಿದೆ ಎಂಬ ಮಾತುಕತೆ ರಾಜಕೀಯದಲ್ಲಿ ಚರ್ಚೆಯಾಗುತ್ತಿದ್ದು, ರಾಜಕೀಯವಾಗಿ  ಎರಡು ಪಕ್ಷಗಳು ಭಿನ್ನವಾಗಿದ್ದರೂ, ಕ್ಷಗಳ ನಡುವಿನ ಬಾಂಧವ್ಯ ಉಳಿದಿದೆ ಎಂದು ಶಿವಸೇನೆ ನಾಯಕ ಸಂಜಯ್ ರಾವತ್ ಅವರ ಹೇಳಿದ್ದಾರೆ.

ಇತ್ತ ಮಾಜಿ ಮಿತ್ರಪಕ್ಷಗಳಾದ ಬಿಜೆಪಿ ಮತ್ತು ಶಿವಸೇನೆ ಮತ್ತೆ ಒಟ್ಟಿಗೆ ಸೇರಲಿದ್ದಾರೆಯೆ ಎಂಬ ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯಿಸಿರುವ ಬಿಜೆಪಿಯ ದೇವೇಂದ್ರ ಫಡ್ನವಿಸ್, “ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಸೂಕ್ತ ನಿರ್ಧಾರ ತೆಗೆದುಕೊಳ್ಳಲಾಗುವುದು” ಎಂದು ಹೇಳಿದ್ದಾರೆ.

ಇದನ್ನೂ ಓದಿ: ‘ಶಿವಸೇನೆ ಎಂದಿಗೂ ಬಿಜೆಪಿಯ ಶತ್ರುವಲ್ಲ’: ದೇವೇಂದ್ರ ಫಡ್ನವಿಸ್

 

“ನಾವು ಭಾರತ-ಪಾಕಿಸ್ತಾನವಲ್ಲ. ಅಮೀರ್ ಖಾನ್ ಮತ್ತು ಕಿರಣ್ ರಾವ್ ಅವರನ್ನು ನೋಡಿ, ಅವರ ಸಂಬಂಧದಂತೆ ನಮ್ಮ ಬಂಧ ಕೂಡ ಇದೆ. ಶಿವಸೇನೆ ಮತ್ತು ಬಿಜೆಪಿಯ ರಾಜಕೀಯ ಮಾರ್ಗಗಳು ವಿಭಿನ್ನವಾಗಿವೆ ಆದರೆ ಸ್ನೇಹ ಮಾತ್ರ ಹಾಗೇ ಉಳಿದಿರುತ್ತದೆ” ಎಂದು ಶಿವಸೇನೆ ಸಂಸದ ಸಂಜಯ್ ರಾವತ್ ತಿಳಿಸಿದ್ದಾರೆ.

‌ಇದರೊಂದಿಗೆ ಮಹಾರಾಷ್ಟ್ರದ ಶಿವಸೇನೆ, ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷ (ಎನ್‌ಸಿಪಿ) ಮತ್ತು ಕಾಂಗ್ರೆಸ್‌ನ ‘ಮಹಾ ವಿಕಾಸ್ ಅಘಾಡಿ’’ ಸಮ್ಮಿಶ್ರ ಸರ್ಕಾರದ ಮೈತ್ರಿ ಒಡೆಯುವ ಬಗ್ಗೆ ಯಾವುದೇ ಪ್ರಶ್ನೆಯಿಲ್ಲ ಎಂದು ಸಂಜಯ್ ರಾವತ್ ಸ್ಪಷ್ಟಪಡಿಸಿದ್ದಾರೆ. ‘ಮಹಾ ವಿಕಾಸ್ ಅಘಾಡಿ’’ ಸಮ್ಮಿಶ್ರ ಸರ್ಕಾರ ತನ್ನ ಸಂಪೂರ್ಣ ಅಧಿಕಾರವಧಿಯನ್ನು ಉಳಿಸಿಕೊಳ್ಳಲಿದೆ ಎಂದು ಹೇಳಿದ್ದಾರೆ.

ಅಮೀರ್ ಖಾನ್ ಮತ್ತು ಕಿರಣ್ ರಾವ್ ಅವರು 15 ವರ್ಷಗಳ ದಾಂಪತ್ಯದ ನಂತರ ಕಳೆದ ವಾರಾಂತ್ಯದಲ್ಲಿ ವಿಚ್ಛೇದನ ಘೋಷಿಸಿದರು. ನಂತರ ಭಾನುವಾರ ಇಬ್ಬರು ಒಟ್ಟಿಗೆ ಕುಳಿತು, ಅಭಿಮಾನಿಗಳೊಂದಿಗೆ ತಮ್ಮ ಭಾವನೆಯನ್ನು ಹಂಚಿಕೊಂಡಿದ್ದಾರೆ. “ನಿಮಗೆ ಬೇಸರವಾಗಿರಬಹುದು, ಸಿಟ್ಟೂ ಬಂದಿರಬಹುದು. ಆಘಾತವಾಗಿರಬಹುದು. ಆದರೆ ನಮ್ಮ ನಿರ್ಧಾರದಿಂದ ನಾವಿಬ್ಬರೂ ಖುಷಿಯಾಗಿದ್ದೇವೆ. ಒಂದು ಕುಟುಂಬವಾಗಿ ಮುಂದುವರೆಯುತ್ತೇವೆ. ನಮ್ಮ ಸಂಬಂಧ ಬದಲಾಗಿದೆ ಆದರೆ ನಾವು ಇನ್ನೂ ಒಟ್ಟಿಗೆ ಇದ್ದೇವೆ” ಎಂದು ಹೇಳಿದ್ದರು.

ಇನ್ನು ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರು ದೇವೇಂದ್ರ ಫಡ್ನವಿಸ್ ’ನಾವು ಮತ್ತು ಶಿವಸೇನೆ ಎಂದಿಗೂ ಶತ್ರುಗಳಲ್ಲ. ಅವರು ನಮ್ಮ ಸ್ನೇಹಿತರು’ ಎಂದಿದ್ದಾರೆ.

ಒಟ್ಟಾರೆ, ಶಿವಸೇನೆ ನೇತೃತ್ವದ ಮಹಾರಾಷ್ಟ್ರದ ‘ಮಹಾ ವಿಕಾಸ್ ಅಘಾಡಿ’ ಮೈತ್ರಿಯಲ್ಲಿ ಒತ್ತಡ ಉಂಟಾಗಿದೆ ಎಂಬ ವದಂತಿಗಳ ನಡುವೆಯೇ ಬಿಜೆಪಿ ಮತ್ತು ಶಿವಸೇನೆ ಪಕ್ಷಗಳು ಕೆಲವು ಸಮಯದಿಂದ ಮಾತುಕತೆ ನಡೆಸುತ್ತಿವೆ ಎಂದು ಮೂಲಗಳು ತಿಳಿಸಿವೆ.


ಇದನ್ನೂ ಓದಿ: ಮುಂದಿನ ಭಾರೀ ಕಾಂಗ್ರೆಸ್ ಮುಖ್ಯಮಂತ್ರಿ ಚರ್ಚೆ!: ಮಹಾರಾಷ್ಟ್ರ ಮೈತ್ರಿ ಗಟ್ಟಿಯೆಂದ ಶಿವಸೇನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...