Homeಮುಖಪುಟಬಿಜೆಪಿ-ಶಿವಸೇನೆ ಸಂಬಂಧ, ಅಮಿರ್ ಖಾನ್-ಕಿರಣ್ ರಾವ್ ಸಂಬಂಧದಂತೆ- ಸಂಜಯ್ ರಾವತ್

ಬಿಜೆಪಿ-ಶಿವಸೇನೆ ಸಂಬಂಧ, ಅಮಿರ್ ಖಾನ್-ಕಿರಣ್ ರಾವ್ ಸಂಬಂಧದಂತೆ- ಸಂಜಯ್ ರಾವತ್

- Advertisement -
- Advertisement -

ದೇಶದಲ್ಲಿ ಸುದ್ದಿಯಾಗುವ ಪ್ರಮುಖ ವಿಷಯಗಳು ಹೆಚ್ಚಿದ್ದರು ಕೂಡ ಹೆಚ್ಚಿಗೆ ಸುದ್ದಿಯಾಗುತ್ತಿರುವುದು ಮಾತ್ರ ಅಮಿರ್ ಖಾನ್ ಮತ್ತು ಕಿರಣ್ ರಾವ್ ಅವರ ವಿಚ್ಛೇದನದ ಸುದ್ದಿ. ಇದು ಈಗ ರಾಜಕೀಯ ಸಂಬಂಧಗಳನ್ನು ತಿಳಿಸಲು ಸಹ ಬಳಕೆಯಾಗುತ್ತಿದೆ. ಬಿಜೆಪಿ ಮತ್ತು ಶಿವಸೇನೆಯ ಸಂಬಂಧವನ್ನು ವಿವರಿಸುವಾಗ ನಮ್ಮ ಸಂಬಂಧ ಅಮಿರ್ ಖಾನ್ ಮತ್ತು ಕಿರಣ್ ರಾವ್ ಅವರ ಸಂಬಂಧದಂತೆ ಎಂದು ಶಿವಸೇನೆಯ ವಕ್ತಾರ ಸಂಜಯ್ ರಾವತ್ ಹೇಳಿದ್ದಾರೆ.

ಬಿಜೆಪಿಯೊಂದಿಗೆ ಶಿವಸೇನೆ ಮತ್ತೆ ಒಂದಾಗಲಿದೆ ಎಂಬ ಮಾತುಕತೆ ರಾಜಕೀಯದಲ್ಲಿ ಚರ್ಚೆಯಾಗುತ್ತಿದ್ದು, ರಾಜಕೀಯವಾಗಿ  ಎರಡು ಪಕ್ಷಗಳು ಭಿನ್ನವಾಗಿದ್ದರೂ, ಕ್ಷಗಳ ನಡುವಿನ ಬಾಂಧವ್ಯ ಉಳಿದಿದೆ ಎಂದು ಶಿವಸೇನೆ ನಾಯಕ ಸಂಜಯ್ ರಾವತ್ ಅವರ ಹೇಳಿದ್ದಾರೆ.

ಇತ್ತ ಮಾಜಿ ಮಿತ್ರಪಕ್ಷಗಳಾದ ಬಿಜೆಪಿ ಮತ್ತು ಶಿವಸೇನೆ ಮತ್ತೆ ಒಟ್ಟಿಗೆ ಸೇರಲಿದ್ದಾರೆಯೆ ಎಂಬ ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯಿಸಿರುವ ಬಿಜೆಪಿಯ ದೇವೇಂದ್ರ ಫಡ್ನವಿಸ್, “ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಸೂಕ್ತ ನಿರ್ಧಾರ ತೆಗೆದುಕೊಳ್ಳಲಾಗುವುದು” ಎಂದು ಹೇಳಿದ್ದಾರೆ.

ಇದನ್ನೂ ಓದಿ: ‘ಶಿವಸೇನೆ ಎಂದಿಗೂ ಬಿಜೆಪಿಯ ಶತ್ರುವಲ್ಲ’: ದೇವೇಂದ್ರ ಫಡ್ನವಿಸ್

 

“ನಾವು ಭಾರತ-ಪಾಕಿಸ್ತಾನವಲ್ಲ. ಅಮೀರ್ ಖಾನ್ ಮತ್ತು ಕಿರಣ್ ರಾವ್ ಅವರನ್ನು ನೋಡಿ, ಅವರ ಸಂಬಂಧದಂತೆ ನಮ್ಮ ಬಂಧ ಕೂಡ ಇದೆ. ಶಿವಸೇನೆ ಮತ್ತು ಬಿಜೆಪಿಯ ರಾಜಕೀಯ ಮಾರ್ಗಗಳು ವಿಭಿನ್ನವಾಗಿವೆ ಆದರೆ ಸ್ನೇಹ ಮಾತ್ರ ಹಾಗೇ ಉಳಿದಿರುತ್ತದೆ” ಎಂದು ಶಿವಸೇನೆ ಸಂಸದ ಸಂಜಯ್ ರಾವತ್ ತಿಳಿಸಿದ್ದಾರೆ.

‌ಇದರೊಂದಿಗೆ ಮಹಾರಾಷ್ಟ್ರದ ಶಿವಸೇನೆ, ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷ (ಎನ್‌ಸಿಪಿ) ಮತ್ತು ಕಾಂಗ್ರೆಸ್‌ನ ‘ಮಹಾ ವಿಕಾಸ್ ಅಘಾಡಿ’’ ಸಮ್ಮಿಶ್ರ ಸರ್ಕಾರದ ಮೈತ್ರಿ ಒಡೆಯುವ ಬಗ್ಗೆ ಯಾವುದೇ ಪ್ರಶ್ನೆಯಿಲ್ಲ ಎಂದು ಸಂಜಯ್ ರಾವತ್ ಸ್ಪಷ್ಟಪಡಿಸಿದ್ದಾರೆ. ‘ಮಹಾ ವಿಕಾಸ್ ಅಘಾಡಿ’’ ಸಮ್ಮಿಶ್ರ ಸರ್ಕಾರ ತನ್ನ ಸಂಪೂರ್ಣ ಅಧಿಕಾರವಧಿಯನ್ನು ಉಳಿಸಿಕೊಳ್ಳಲಿದೆ ಎಂದು ಹೇಳಿದ್ದಾರೆ.

ಅಮೀರ್ ಖಾನ್ ಮತ್ತು ಕಿರಣ್ ರಾವ್ ಅವರು 15 ವರ್ಷಗಳ ದಾಂಪತ್ಯದ ನಂತರ ಕಳೆದ ವಾರಾಂತ್ಯದಲ್ಲಿ ವಿಚ್ಛೇದನ ಘೋಷಿಸಿದರು. ನಂತರ ಭಾನುವಾರ ಇಬ್ಬರು ಒಟ್ಟಿಗೆ ಕುಳಿತು, ಅಭಿಮಾನಿಗಳೊಂದಿಗೆ ತಮ್ಮ ಭಾವನೆಯನ್ನು ಹಂಚಿಕೊಂಡಿದ್ದಾರೆ. “ನಿಮಗೆ ಬೇಸರವಾಗಿರಬಹುದು, ಸಿಟ್ಟೂ ಬಂದಿರಬಹುದು. ಆಘಾತವಾಗಿರಬಹುದು. ಆದರೆ ನಮ್ಮ ನಿರ್ಧಾರದಿಂದ ನಾವಿಬ್ಬರೂ ಖುಷಿಯಾಗಿದ್ದೇವೆ. ಒಂದು ಕುಟುಂಬವಾಗಿ ಮುಂದುವರೆಯುತ್ತೇವೆ. ನಮ್ಮ ಸಂಬಂಧ ಬದಲಾಗಿದೆ ಆದರೆ ನಾವು ಇನ್ನೂ ಒಟ್ಟಿಗೆ ಇದ್ದೇವೆ” ಎಂದು ಹೇಳಿದ್ದರು.

ಇನ್ನು ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರು ದೇವೇಂದ್ರ ಫಡ್ನವಿಸ್ ’ನಾವು ಮತ್ತು ಶಿವಸೇನೆ ಎಂದಿಗೂ ಶತ್ರುಗಳಲ್ಲ. ಅವರು ನಮ್ಮ ಸ್ನೇಹಿತರು’ ಎಂದಿದ್ದಾರೆ.

ಒಟ್ಟಾರೆ, ಶಿವಸೇನೆ ನೇತೃತ್ವದ ಮಹಾರಾಷ್ಟ್ರದ ‘ಮಹಾ ವಿಕಾಸ್ ಅಘಾಡಿ’ ಮೈತ್ರಿಯಲ್ಲಿ ಒತ್ತಡ ಉಂಟಾಗಿದೆ ಎಂಬ ವದಂತಿಗಳ ನಡುವೆಯೇ ಬಿಜೆಪಿ ಮತ್ತು ಶಿವಸೇನೆ ಪಕ್ಷಗಳು ಕೆಲವು ಸಮಯದಿಂದ ಮಾತುಕತೆ ನಡೆಸುತ್ತಿವೆ ಎಂದು ಮೂಲಗಳು ತಿಳಿಸಿವೆ.


ಇದನ್ನೂ ಓದಿ: ಮುಂದಿನ ಭಾರೀ ಕಾಂಗ್ರೆಸ್ ಮುಖ್ಯಮಂತ್ರಿ ಚರ್ಚೆ!: ಮಹಾರಾಷ್ಟ್ರ ಮೈತ್ರಿ ಗಟ್ಟಿಯೆಂದ ಶಿವಸೇನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್ ಜೊತೆಗಿನ ಮಾತುಕತೆಗಳು ಫಲಪ್ರದವಾಗಿವೆ, ಐದು ದಿನಗಳ ಕಾಲ ದಾಳಿ ಮಾಡದಂತೆ ಸೂಚಿಸಿದ್ದೇನೆ : ಟ್ರಂಪ್

ಕಳೆದ ಎರಡು ದಿನಗಳಲ್ಲಿ ಅಮೆರಿಕ ಮತ್ತು ಇರಾನ್ ನಡುವೆ ನಡೆದ ಮಾತುಕತೆಗಳು ಫಲಪ್ರದವಾಗಿವೆ. ಆದ್ದರಿಂದ ಇರಾನ್‌ನ ಇಂಧನ ಕೇಂದ್ರಗಳ ಮೇಲಿನ ಅಮೆರಿಕದ ದಾಳಿಯನ್ನು ಐದು ದಿನಗಳವರೆಗೆ ಮುಂದೂಡಲು ಸೂಚಿಸಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್...

ಎಸ್‌ಐಆರ್ ದೂರಾಲೋಚನೆ ಅಲ್ಲ, ಸಿಎಎ-ಎನ್‌ಆರ್‌ಸಿ ಜಾರಿಗೊಳಿಸುವ ದುರಾಲೋಚನೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು 'ದೂರಾಲೋಚನೆ'ಯಲ್ಲ, ಬದಲಿಗೆ ಅದು ಸಿಎಎ-ಎನ್‌ಅರ್‌ಸಿಯನ್ನು ಜಾರಿಗೊಳಿಸುವ 'ದುರಾಲೋಚನೆ'ಯನ್ನು ತನ್ನ ಒಡಲಲ್ಲಿಟ್ಟಿಕೊಂಡಿದೆ. ಮೊಕದ್ದಮೆಗಳ ವಿಚಾರಣೆಯು ಸುಪ್ರೀಂ ಕೋರ್ಟಿನಲ್ಲಿರುವಾಗ ಕರ್ನಾಟಕದಲ್ಲಿ ತರಾರುರಿಯಲ್ಲಿ ಎಸ್‌ಐಆರ್ ಪ್ರಕ್ರಿಯೆಯನ್ನು ನಡೆಸಬಾರದು...

ಸ್ವಘೋಷಿತ ದೇವಮಾನವನ ಖರಾತ್ ವಿರುದ್ಧ ಮತ್ತೆರಡು ಎಫ್‌ಐಆರ್ : ಗರ್ಭಿಣಿ ಮೇಲೆ ಅತ್ಯಾಚಾರವೆಸಗಿದ ಆರೋಪ

ಅತ್ಯಾಚಾರ ಸೇರಿದಂತೆ ಹಲವು ಕ್ರಿಮಿನಲ್ ಆರೋಪಗಳ ಮೇಲೆ ಈಗಾಗಲೇ ಬಂಧಿತನಾಗಿರುವ ಸ್ವಘೋಷಿತ ದೇವಮಾನವ ಹಾಗೂ ಜ್ಯೋತಿಷಿ ಅಶೋಕ್ ಖರಾತ್ ವಿರುದ್ಧ ಮಹಾರಾಷ್ಟ್ರದ ನಾಸಿಕ್‌ನ ಸರ್ಕಾರವಾಡಾ ಪೊಲೀಸರು ಶನಿವಾರ (ಮಾ.21) ಎರಡು ಹೊಸ ಅತ್ಯಾಚಾರ...

ದಲಿತ ಮಹಿಳೆ ಮೇಲೆ ಸಾರ್ವಜನಿಕವಾಗಿ ಹಲ್ಲೆ; ಹಾಡಗಲೇ ಕೂದಲಿಡಿದು ಎಳೆದಾಡಿದ ಪಂಜಾಬ್ ಪೊಲೀಸರು

ಪಂಜಾಬ್‌ನ ಜಲಂಧರ್‌ನಲ್ಲಿ ಕಳೆದ ಶುಕ್ರವಾರ (ಮಾ.20), ಪೊಲೀಸ್ ಅಧಿಕಾರಿಯೊಬ್ಬರು ದಲಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಹಲ್ಲೆ ನಡೆಸಿ ಕೂದಲು ಹಿಡಿದು ಎಳೆದಾಡಿದ್ದಾರೆ ಎಂದು 'ಸಿಯಾಸಾಟ್.ಕಾಮ್' ವರದಿ ಮಾಡಿದೆ. ಘಟನೆಯ ಸಿಸಿಟಿವಿ ದೃಶ್ಯಾವಳಿಗಳು ಸಾಮಾಜಿಕ ಮಾಧ್ಯಮದಲ್ಲಿ...

ನ್ಯೂಯಾರ್ಕ್‌ನ ಲಾಗಾರ್ಡಿಯಾ ವಿಮಾನ ನಿಲ್ದಾಣದಲ್ಲಿ ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಏರ್ ಕೆನಡಾ ಎಕ್ಸ್‌ಪ್ರೆಸ್ ವಿಮಾನ; ಇಬ್ಬರು ಸಾವು

ಭಾನುವಾರ ತಡರಾತ್ರಿ ನ್ಯೂಯಾರ್ಕ್‌ನ ಲಾಗಾರ್ಡಿಯಾ ವಿಮಾನ ನಿಲ್ದಾಣದಲ್ಲಿ ಸುಮಾರು 76 ಜನರನ್ನು ಹೊತ್ತೊಯ್ಯುತ್ತಿದ್ದ ಏರ್ ಕೆನಡಾ ಎಕ್ಸ್‌ಪ್ರೆಸ್ ವಿಮಾನವು ನೆಲದ ಮೇಲೆ ಚಲಿಸುತ್ತಿದ್ದ ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಪೈಲಟ್ ಮತ್ತು...

‘ತೀರ್ಮಾನಿಸಲು ಏನೂ ಉಳಿದಿಲ್ಲ’ : ಸೋನಮ್ ವಾಂಗ್ಚುಕ್ ಬಂಧನ ಪ್ರಶ್ನಿಸಿದ್ದ ಅರ್ಜಿ ವಿಲೇವಾರಿ ಮಾಡಿದ ಸುಪ್ರೀಂ ಕೋರ್ಟ್

ಲಡಾಖ್‌ನ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರನ್ನು ರಾಷ್ಟ್ರೀಯ ಭದ್ರತಾ ಕಾಯ್ದೆ (ಎನ್‌ಎಸ್‌ಎ) ಅಡಿಯಲ್ಲಿ ಬಂಧಿಸಿರುವುದನ್ನು ಪ್ರಶ್ನಿಸಿ ಅವರ ಪತ್ನಿ ಗೀತಾಂಜಲಿ ಅಂಗ್ಮೋ ಸಲ್ಲಿಸಿದ್ದ ಹೇಬಿಯಸ್ ಕಾರ್ಪಸ್ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಮಾ.23)...

ಡೋನಾಲ್ಡ್‌ ಟ್ರಂಪ್ ಕಠಿಣ ವೀಸಾ ನೀತಿಗಳಿಂದ ಸಂಕಷ್ಟಕ್ಕೆ ಸಿಲುಕಿದ ಭಾರತ-ಚೀನಾ

ಡೊನಾಲ್ಡ್‌ ಟ್ರಂಪ್ ಆಡಳಿತವು ಅನಾವರಣಗೊಳಿಸಿದ ಕಠಿಣ ವಲಸೆ ನೀತಿಯ ಗರಿಷ್ಠ ಹೊರೆಯು ಭಾರತ ಮತ್ತು ಚೀನಾ ದೇಶಗಳ ಮೇಲೆ ಬಿದ್ದಿದೆ. 2024 ರ ಅದೇ ಅವಧಿಗೆ ಹೋಲಿಸಿದರೆ 2025 ರ ಮೊದಲ ಎಂಟು...

ಉತ್ತರಾಖಂಡ| ಪೌರಿಯಲ್ಲಿ ಅಂಬೇಡ್ಕರ್ ಪ್ರತಿಮೆ ವಿರೂಪ; ದೂರು ದಾಖಲು

ಉತ್ತರಾಖಂಡದ ಪೌರಿ ಜಿಲ್ಲೆಯಲ್ಲಿ ಬಾಬಾಸಾಹೇಬ್ ಡಾ.ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆಯನ್ನು ವಿರೂಪಗೊಳಿಸಿದ ನಂತರ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು (ಮಾ.22) ತಿಳಿಸಿದ್ದಾರೆ. ಮಾರ್ಚ್ 21 ರ ಶನಿವಾರ ಸಂಜೆ 4 ಗಂಟೆ ಸುಮಾರಿಗೆ ಅಲಕನಂದಾ...

ಅಸ್ಸಾಂ : ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ ಸಚಿವೆ ನಂದಿತಾ ಗರ್ಲೋಸಾ

ಅಸ್ಸಾಂನ ಬಿಜೆಪಿ ಸರ್ಕಾರದಲ್ಲಿ ಸಚಿವೆಯಾಗಿದ್ದ ನಂದಿತಾ ಗರ್ಲೋಸಾ ಅವರು ಭಾನುವಾರ (ಮಾ.22) ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ವಿಧಾನಸಭೆ ಚುನಾವಣೆಗೆ ಟಿಕೆಟ್ ನಿರಾಕರಿಸಿದ ಹಿನ್ನೆಲೆ ನಂದಿತಾ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದಾರೆ. ನಂದಿತಾ ಅವರು ಪ್ರತಿನಿಧಿಸುತ್ತಿದ್ದ...

ಉತ್ತರ ಪ್ರದೇಶ| ವಾಲ್ಮೀಕಿ ಸಮುದಾಯದ ವಿರುದ್ಧ ಹೇಳಿಕೆ; ಸೋಶಿಯಲ್ ಮೀಡಿಯಾ ಇನ್‌ಫ್ಲುಯೆನ್ಸರ್ ಬಂಧನ

ವಾಲ್ಮೀಕಿ ಸಮುದಾಯದ ವಿರುದ್ಧ ಸೋಶಿಯಲ್ ಮೀಡಿಯಾ ಇನ್‌ಫ್ಲುಯೆನ್ಸರ್ ನೀಡಿದ ಆಕ್ಷೇಪಾರ್ಹ ಹೇಳಿಕೆ ಆಕ್ರೋಶ ವ್ಯಕ್ತವಾಗಿದ್ದು, ಸಮುದಾಯದಿಂದ ಪ್ರತಿಭಟನೆ ಮತ್ತು ರಸ್ತೆ ತಡೆಗೆ ಕಾರಣವಾದ ನಂತರ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ನೌಗವಾನ್ ಪಕ್ಡಿಯಾ...