Homeಕರ್ನಾಟಕಬಿಜೆಪಿ ಕನ್ನಡವಿರೋಧಿ, ದಲಿತ ವಿರೋಧ ಪಕ್ಷ: ಸಿದ್ದರಾಮಯ್ಯ ಆರೋಪ

ಬಿಜೆಪಿ ಕನ್ನಡವಿರೋಧಿ, ದಲಿತ ವಿರೋಧ ಪಕ್ಷ: ಸಿದ್ದರಾಮಯ್ಯ ಆರೋಪ

- Advertisement -
- Advertisement -

ಐಬಿಪಿಎಸ್ ಪರೀಕ್ಷೆಯ ನಂತರ ಇದೀಗ ಎಲ್‌ಐಸಿ ಪರೀಕ್ಷೆಯಲ್ಲಿಯೂ ಹಿಂದಿ-ಇಂಗ್ಲೀಷ್‌ಗೆ ಮಣೆ ಹಾಕುತ್ತಿದ್ದು ಕನ್ನಡಕ್ಕೆ ಬರೆ ಎಳೆಯುತ್ತಿದ್ದಾರೆ. ಇನ್ನೆಷ್ಟು ದಿನ ಕನ್ನಡಿಗರು ಪರಭಾಷೆಯ ಹೇರಿಕೆಯನ್ನು ಸಹಿಸಿಕೊಳ್ಳಬೇಕು? ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಭಾರತ ಬಹುತ್ವದ ನೆಲ, ಇಲ್ಲಿನ ವಿವಿಧ ಭಾಷೆ, ಸಂಸ್ಕೃತಿಯನ್ನು ಗೌರವಿಸಿದಾಗ ಮಾತ್ರ ಒಕ್ಕೂಟ ವ್ಯವಸ್ಥೆ ಇನ್ನಷ್ಟು ಬಲಗೊಳ್ಳಲು ಸಾಧ್ಯ. ಈ ನೆಲದಲ್ಲಿ ಯಾವುದೇ ಒಂದು ಭಾಷೆ ಅಥವಾ ಸಮುದಾಯದ ಕಡಗಣನೆ ಸಲ್ಲದು ಎಂದಿದ್ದಾರೆ.

ರಾಜ್ಯ ಬಿಜೆಪಿ ಸರ್ಕಾರದ ಬಣ್ಣ ಬಹಳ ಬೇಗ ಬಯಲಾಗುತ್ತಿದೆ. ತನ್ನ ನಿಜಬಣ್ಣ ದಲಿತ ವಿರೋಧಿ ಎನ್ನುವುದು ಸಾಬೀತಾಗ್ತಿದೆ. ನಮ್ಮ ಕಾಲದ ಕ್ರಾಂತಿಕಾರಿ ಎಸ್‌ಸಿಪಿ-ಟಿಎಸ್‌ಪಿ ಕಾಯ್ದೆಯನ್ನು ದುರ್ಬಲಗೊಳಿಸಲು ಹೊರಟರೆ‌ ದಲಿತ ಸಮುದಾಯ ದಂಗೆ ಎದ್ದೀತು, ಅದರ ಮುಂಚೂಣಿಯಲ್ಲಿ ನಾನೇ ಇರುತ್ತೇನೆ ಎಂದು ಘೋಷಿಸಿದ್ದಾರೆ.

ಎಸ್‌ಸಿಪಿ/ಟಿಎಸ್‌ಪಿ ಯೋಜನೆಗೆ ತಿದ್ದುಪಡಿ ತಂದು ಅನುದಾನ ಕಡಿತಗೊಳಿಸುವ‌ ಯಡಿಯೂರಪ್ಪ ಸರ್ಕಾರದ ದುಷ್ಟ ಆಲೋಚನೆಯ ವಿರುದ್ಧ ಬಿಜೆಪಿಯ ಶಾಸಕರು ಕೂಡಾ ದನಿ ಎತ್ತಬೇಕು ಎಂದು ವಿನಂತಿಸುತ್ತೇನೆ. ಇಂತಹ ದ್ರೋಹ ಚಿಂತನೆಯನ್ನು ಪಕ್ಷದ ದಾಸ್ಯಕ್ಕೆ ಕಟ್ಟುಬಿದ್ದು ಸಹಿಸಿಕೊಂಡರೆ ಇತಿಹಾಸ ಕ್ಷಮಿಸದು ಎಂದಿದ್ದಾರೆ.

ಭ್ರಷ್ಟಾಚಾರ, ಅಸುರಕ್ಷಿತ ಗಡಿ, ಮಹಿಳಾ ದೌರ್ಜನ್ಯ… ಹೀಗೆ ಎಲ್ಲದ್ದಕ್ಕೂ ಬಹುಪಕ್ಷೀಯ ರಾಜಕೀಯ ವ್ಯವಸ್ಥೆಯನ್ನು ಹೊಣೆಮಾಡಿರುವ ಕೇಂದ್ರ ಗೃಹಸಚಿವ ಅಮಿತ್ ಶಾ ಅವರು 1998 ರಿಂದ 2004 ರ ವರೆಗೆ ಅಧಿಕಾರದಲ್ಲಿದ್ದ ವಾಜಪೇಯಿ ನೇತೃತ್ವದ ಎನ್‌ಡಿಎ ಆಡಳಿತವನ್ನು ದೂರಲು ಹೊರಟಿದ್ದಾರೆಯೇ? ಎಂದು ವ್ಯಂಗ್ಯವಾಡಿದ್ದಾರೆ.

2014ರಿಂದ ದೇಶದಲ್ಲಿರುವುದು ಏಕಚಕ್ರಾಧಿಪತ್ಯ.
ರಫೇಲ್ ಹಗರಣ, ಜಿಡಿಪಿ ಶೇ.5ಕ್ಕೆ ಇಳಿದಿದ್ದು, ನಿರುದ್ಯೋಗ 45 ವರ್ಷಗಳಲ್ಲಿಯೇ ಅತ್ಯಧಿಕವಾಗಿದ್ದು, ಬ್ಯಾಂಕ್ ಲೂಟಿ‌ ಮಾಡಿ ದೇಶ ಬಿಟ್ಟು ಓಡಿದ್ದು, ಕಾಶ್ಮೀರದಲ್ಲಿ ಉಗ್ರರ ದಾಳಿ 42% ಹೆಚ್ಚಿದ್ದು, ಮಹಿಳಾ ಅತ್ಯಾಚಾರ 22% ಹೆಚ್ಚಿದ್ದು… ಇದೇ ಅವಧಿಯಲ್ಲಿ ಅಲ್ಲವೇ? ಬಹುಪಕ್ಷೀಯ ರಾಜಕೀಯ ವ್ಯವಸ್ಥೆಯನ್ನು ವಿರೋಧಿಸುತ್ತಿರುವ ಅಮಿತ್ ಶಾ ಅವರು ಬಿಹಾರ, ಗೋವಾ, ಮಹಾರಾಷ್ಟ್ರ ಮತ್ತು ಈಶಾನ್ಯ ರಾಜ್ಯಗಳ ಮಿತ್ರಪಕ್ಷಗಳಿಗೆ ವಿಚ್ಛೇದನದ ಸಂದೇಶ ಕಳುಹಿಸುತ್ತಿದ್ದಾರೆಯೇ? ಅಲ್ಲಿರುವುದು ಬಹುಪಕ್ಷೀಯ ಸರ್ಕಾರವಲ್ಲವೇ? ಎಂದು ಸಿದ್ದು ಪ್ರಶ್ನಿಸಿದ್ದಾರೆ.

ಗೃಹಸಚಿವ ಅಮಿತ್ ಶಾ ಏಕತ್ವದ ವ್ಯಸನಗ್ರಸ್ತರಾಗಿದ್ದಾರೆ. ಬಹುಭಾಷೆಗಳನ್ನು ಮೂಲೆಗೆ ತಳ್ಳುವ ಪ್ರಯತ್ನದ ನಂತರ ಈಗ ಬಹುಪಕ್ಷೀಯ ರಾಜಕೀಯ ವ್ಯವಸ್ಥೆಯನ್ನು ಎಲ್ಲ ಅನಿಷ್ಠಗಳಿಗೆ ಹೊಣೆ ಮಾಡಿದ್ದಾರೆ. ಅವರಿಗೆ ಯಾರಾದರೂ ಈ ದೇಶದ ರಾಜಕೀಯ, ಸಾಮಾಜಿಕ ಮತ್ತು ಸಾಂಸ್ಕೃತಿಕ ಇತಿಹಾಸದ ಪಾಠ ಮಾಡಬೇಕಾಗಿದೆ ಎಂದಿದ್ದಾರೆ.

ಸಿದ್ದರಾಮಯ್ಯನವರು ತಮ್ಮೆಲ್ಲಾ ಅಭಿಪ್ರಾಯಗಳನ್ನು ಪರಿಣಾಮಕಾರಿ ಮಾಧ್ಯಮಗಳಾದ ಸಾಮಾಜಿಕ ಜಾಲತಾಣಗಳಲ್ಲಿ ವ್ಯಕ್ತಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...