Homeಕರ್ನಾಟಕಬಿಜೆಪಿ ಕನ್ನಡವಿರೋಧಿ, ದಲಿತ ವಿರೋಧ ಪಕ್ಷ: ಸಿದ್ದರಾಮಯ್ಯ ಆರೋಪ

ಬಿಜೆಪಿ ಕನ್ನಡವಿರೋಧಿ, ದಲಿತ ವಿರೋಧ ಪಕ್ಷ: ಸಿದ್ದರಾಮಯ್ಯ ಆರೋಪ

- Advertisement -
- Advertisement -

ಐಬಿಪಿಎಸ್ ಪರೀಕ್ಷೆಯ ನಂತರ ಇದೀಗ ಎಲ್‌ಐಸಿ ಪರೀಕ್ಷೆಯಲ್ಲಿಯೂ ಹಿಂದಿ-ಇಂಗ್ಲೀಷ್‌ಗೆ ಮಣೆ ಹಾಕುತ್ತಿದ್ದು ಕನ್ನಡಕ್ಕೆ ಬರೆ ಎಳೆಯುತ್ತಿದ್ದಾರೆ. ಇನ್ನೆಷ್ಟು ದಿನ ಕನ್ನಡಿಗರು ಪರಭಾಷೆಯ ಹೇರಿಕೆಯನ್ನು ಸಹಿಸಿಕೊಳ್ಳಬೇಕು? ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಭಾರತ ಬಹುತ್ವದ ನೆಲ, ಇಲ್ಲಿನ ವಿವಿಧ ಭಾಷೆ, ಸಂಸ್ಕೃತಿಯನ್ನು ಗೌರವಿಸಿದಾಗ ಮಾತ್ರ ಒಕ್ಕೂಟ ವ್ಯವಸ್ಥೆ ಇನ್ನಷ್ಟು ಬಲಗೊಳ್ಳಲು ಸಾಧ್ಯ. ಈ ನೆಲದಲ್ಲಿ ಯಾವುದೇ ಒಂದು ಭಾಷೆ ಅಥವಾ ಸಮುದಾಯದ ಕಡಗಣನೆ ಸಲ್ಲದು ಎಂದಿದ್ದಾರೆ.

ರಾಜ್ಯ ಬಿಜೆಪಿ ಸರ್ಕಾರದ ಬಣ್ಣ ಬಹಳ ಬೇಗ ಬಯಲಾಗುತ್ತಿದೆ. ತನ್ನ ನಿಜಬಣ್ಣ ದಲಿತ ವಿರೋಧಿ ಎನ್ನುವುದು ಸಾಬೀತಾಗ್ತಿದೆ. ನಮ್ಮ ಕಾಲದ ಕ್ರಾಂತಿಕಾರಿ ಎಸ್‌ಸಿಪಿ-ಟಿಎಸ್‌ಪಿ ಕಾಯ್ದೆಯನ್ನು ದುರ್ಬಲಗೊಳಿಸಲು ಹೊರಟರೆ‌ ದಲಿತ ಸಮುದಾಯ ದಂಗೆ ಎದ್ದೀತು, ಅದರ ಮುಂಚೂಣಿಯಲ್ಲಿ ನಾನೇ ಇರುತ್ತೇನೆ ಎಂದು ಘೋಷಿಸಿದ್ದಾರೆ.

ಎಸ್‌ಸಿಪಿ/ಟಿಎಸ್‌ಪಿ ಯೋಜನೆಗೆ ತಿದ್ದುಪಡಿ ತಂದು ಅನುದಾನ ಕಡಿತಗೊಳಿಸುವ‌ ಯಡಿಯೂರಪ್ಪ ಸರ್ಕಾರದ ದುಷ್ಟ ಆಲೋಚನೆಯ ವಿರುದ್ಧ ಬಿಜೆಪಿಯ ಶಾಸಕರು ಕೂಡಾ ದನಿ ಎತ್ತಬೇಕು ಎಂದು ವಿನಂತಿಸುತ್ತೇನೆ. ಇಂತಹ ದ್ರೋಹ ಚಿಂತನೆಯನ್ನು ಪಕ್ಷದ ದಾಸ್ಯಕ್ಕೆ ಕಟ್ಟುಬಿದ್ದು ಸಹಿಸಿಕೊಂಡರೆ ಇತಿಹಾಸ ಕ್ಷಮಿಸದು ಎಂದಿದ್ದಾರೆ.

ಭ್ರಷ್ಟಾಚಾರ, ಅಸುರಕ್ಷಿತ ಗಡಿ, ಮಹಿಳಾ ದೌರ್ಜನ್ಯ… ಹೀಗೆ ಎಲ್ಲದ್ದಕ್ಕೂ ಬಹುಪಕ್ಷೀಯ ರಾಜಕೀಯ ವ್ಯವಸ್ಥೆಯನ್ನು ಹೊಣೆಮಾಡಿರುವ ಕೇಂದ್ರ ಗೃಹಸಚಿವ ಅಮಿತ್ ಶಾ ಅವರು 1998 ರಿಂದ 2004 ರ ವರೆಗೆ ಅಧಿಕಾರದಲ್ಲಿದ್ದ ವಾಜಪೇಯಿ ನೇತೃತ್ವದ ಎನ್‌ಡಿಎ ಆಡಳಿತವನ್ನು ದೂರಲು ಹೊರಟಿದ್ದಾರೆಯೇ? ಎಂದು ವ್ಯಂಗ್ಯವಾಡಿದ್ದಾರೆ.

2014ರಿಂದ ದೇಶದಲ್ಲಿರುವುದು ಏಕಚಕ್ರಾಧಿಪತ್ಯ.
ರಫೇಲ್ ಹಗರಣ, ಜಿಡಿಪಿ ಶೇ.5ಕ್ಕೆ ಇಳಿದಿದ್ದು, ನಿರುದ್ಯೋಗ 45 ವರ್ಷಗಳಲ್ಲಿಯೇ ಅತ್ಯಧಿಕವಾಗಿದ್ದು, ಬ್ಯಾಂಕ್ ಲೂಟಿ‌ ಮಾಡಿ ದೇಶ ಬಿಟ್ಟು ಓಡಿದ್ದು, ಕಾಶ್ಮೀರದಲ್ಲಿ ಉಗ್ರರ ದಾಳಿ 42% ಹೆಚ್ಚಿದ್ದು, ಮಹಿಳಾ ಅತ್ಯಾಚಾರ 22% ಹೆಚ್ಚಿದ್ದು… ಇದೇ ಅವಧಿಯಲ್ಲಿ ಅಲ್ಲವೇ? ಬಹುಪಕ್ಷೀಯ ರಾಜಕೀಯ ವ್ಯವಸ್ಥೆಯನ್ನು ವಿರೋಧಿಸುತ್ತಿರುವ ಅಮಿತ್ ಶಾ ಅವರು ಬಿಹಾರ, ಗೋವಾ, ಮಹಾರಾಷ್ಟ್ರ ಮತ್ತು ಈಶಾನ್ಯ ರಾಜ್ಯಗಳ ಮಿತ್ರಪಕ್ಷಗಳಿಗೆ ವಿಚ್ಛೇದನದ ಸಂದೇಶ ಕಳುಹಿಸುತ್ತಿದ್ದಾರೆಯೇ? ಅಲ್ಲಿರುವುದು ಬಹುಪಕ್ಷೀಯ ಸರ್ಕಾರವಲ್ಲವೇ? ಎಂದು ಸಿದ್ದು ಪ್ರಶ್ನಿಸಿದ್ದಾರೆ.

ಗೃಹಸಚಿವ ಅಮಿತ್ ಶಾ ಏಕತ್ವದ ವ್ಯಸನಗ್ರಸ್ತರಾಗಿದ್ದಾರೆ. ಬಹುಭಾಷೆಗಳನ್ನು ಮೂಲೆಗೆ ತಳ್ಳುವ ಪ್ರಯತ್ನದ ನಂತರ ಈಗ ಬಹುಪಕ್ಷೀಯ ರಾಜಕೀಯ ವ್ಯವಸ್ಥೆಯನ್ನು ಎಲ್ಲ ಅನಿಷ್ಠಗಳಿಗೆ ಹೊಣೆ ಮಾಡಿದ್ದಾರೆ. ಅವರಿಗೆ ಯಾರಾದರೂ ಈ ದೇಶದ ರಾಜಕೀಯ, ಸಾಮಾಜಿಕ ಮತ್ತು ಸಾಂಸ್ಕೃತಿಕ ಇತಿಹಾಸದ ಪಾಠ ಮಾಡಬೇಕಾಗಿದೆ ಎಂದಿದ್ದಾರೆ.

ಸಿದ್ದರಾಮಯ್ಯನವರು ತಮ್ಮೆಲ್ಲಾ ಅಭಿಪ್ರಾಯಗಳನ್ನು ಪರಿಣಾಮಕಾರಿ ಮಾಧ್ಯಮಗಳಾದ ಸಾಮಾಜಿಕ ಜಾಲತಾಣಗಳಲ್ಲಿ ವ್ಯಕ್ತಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...

ತುಳು ನುಡಿಗೆ ಹೆಚ್ಚುವರಿ ಅಧಿಕೃತ ಭಾಷೆಯ ಮಾನ್ಯತೆ ನೀಡಿ: ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ

"ಮಂಗಳೂರಿನಲ್ಲಿ ಶುಕ್ರವಾರ ಕರ್ನಾಟಕ ಸರ್ಕಾರದ ಸಚಿವ ಸಂಪುಟ ಸಭೆ ನಡೆಯಲಿದೆ; ಇದೊಂದು ಐತಿಹಾಸಿಕ ಸಂದರ್ಭ. ರಾಜ್ಯ ಸರ್ಕಾರ ತುಳು ನುಡಿಯನ್ನು ತುಳು ಮಾತನಾಡುವ ಪ್ರದೇಶಗಳಲ್ಲಿ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ ನೀಡುವ ನಿರ್ಧಾರವನ್ನು...

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...