Homeಕರ್ನಾಟಕಬಿಜೆಪಿ ಕನ್ನಡವಿರೋಧಿ, ದಲಿತ ವಿರೋಧ ಪಕ್ಷ: ಸಿದ್ದರಾಮಯ್ಯ ಆರೋಪ

ಬಿಜೆಪಿ ಕನ್ನಡವಿರೋಧಿ, ದಲಿತ ವಿರೋಧ ಪಕ್ಷ: ಸಿದ್ದರಾಮಯ್ಯ ಆರೋಪ

- Advertisement -
- Advertisement -

ಐಬಿಪಿಎಸ್ ಪರೀಕ್ಷೆಯ ನಂತರ ಇದೀಗ ಎಲ್‌ಐಸಿ ಪರೀಕ್ಷೆಯಲ್ಲಿಯೂ ಹಿಂದಿ-ಇಂಗ್ಲೀಷ್‌ಗೆ ಮಣೆ ಹಾಕುತ್ತಿದ್ದು ಕನ್ನಡಕ್ಕೆ ಬರೆ ಎಳೆಯುತ್ತಿದ್ದಾರೆ. ಇನ್ನೆಷ್ಟು ದಿನ ಕನ್ನಡಿಗರು ಪರಭಾಷೆಯ ಹೇರಿಕೆಯನ್ನು ಸಹಿಸಿಕೊಳ್ಳಬೇಕು? ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಭಾರತ ಬಹುತ್ವದ ನೆಲ, ಇಲ್ಲಿನ ವಿವಿಧ ಭಾಷೆ, ಸಂಸ್ಕೃತಿಯನ್ನು ಗೌರವಿಸಿದಾಗ ಮಾತ್ರ ಒಕ್ಕೂಟ ವ್ಯವಸ್ಥೆ ಇನ್ನಷ್ಟು ಬಲಗೊಳ್ಳಲು ಸಾಧ್ಯ. ಈ ನೆಲದಲ್ಲಿ ಯಾವುದೇ ಒಂದು ಭಾಷೆ ಅಥವಾ ಸಮುದಾಯದ ಕಡಗಣನೆ ಸಲ್ಲದು ಎಂದಿದ್ದಾರೆ.

ರಾಜ್ಯ ಬಿಜೆಪಿ ಸರ್ಕಾರದ ಬಣ್ಣ ಬಹಳ ಬೇಗ ಬಯಲಾಗುತ್ತಿದೆ. ತನ್ನ ನಿಜಬಣ್ಣ ದಲಿತ ವಿರೋಧಿ ಎನ್ನುವುದು ಸಾಬೀತಾಗ್ತಿದೆ. ನಮ್ಮ ಕಾಲದ ಕ್ರಾಂತಿಕಾರಿ ಎಸ್‌ಸಿಪಿ-ಟಿಎಸ್‌ಪಿ ಕಾಯ್ದೆಯನ್ನು ದುರ್ಬಲಗೊಳಿಸಲು ಹೊರಟರೆ‌ ದಲಿತ ಸಮುದಾಯ ದಂಗೆ ಎದ್ದೀತು, ಅದರ ಮುಂಚೂಣಿಯಲ್ಲಿ ನಾನೇ ಇರುತ್ತೇನೆ ಎಂದು ಘೋಷಿಸಿದ್ದಾರೆ.

ಎಸ್‌ಸಿಪಿ/ಟಿಎಸ್‌ಪಿ ಯೋಜನೆಗೆ ತಿದ್ದುಪಡಿ ತಂದು ಅನುದಾನ ಕಡಿತಗೊಳಿಸುವ‌ ಯಡಿಯೂರಪ್ಪ ಸರ್ಕಾರದ ದುಷ್ಟ ಆಲೋಚನೆಯ ವಿರುದ್ಧ ಬಿಜೆಪಿಯ ಶಾಸಕರು ಕೂಡಾ ದನಿ ಎತ್ತಬೇಕು ಎಂದು ವಿನಂತಿಸುತ್ತೇನೆ. ಇಂತಹ ದ್ರೋಹ ಚಿಂತನೆಯನ್ನು ಪಕ್ಷದ ದಾಸ್ಯಕ್ಕೆ ಕಟ್ಟುಬಿದ್ದು ಸಹಿಸಿಕೊಂಡರೆ ಇತಿಹಾಸ ಕ್ಷಮಿಸದು ಎಂದಿದ್ದಾರೆ.

ಭ್ರಷ್ಟಾಚಾರ, ಅಸುರಕ್ಷಿತ ಗಡಿ, ಮಹಿಳಾ ದೌರ್ಜನ್ಯ… ಹೀಗೆ ಎಲ್ಲದ್ದಕ್ಕೂ ಬಹುಪಕ್ಷೀಯ ರಾಜಕೀಯ ವ್ಯವಸ್ಥೆಯನ್ನು ಹೊಣೆಮಾಡಿರುವ ಕೇಂದ್ರ ಗೃಹಸಚಿವ ಅಮಿತ್ ಶಾ ಅವರು 1998 ರಿಂದ 2004 ರ ವರೆಗೆ ಅಧಿಕಾರದಲ್ಲಿದ್ದ ವಾಜಪೇಯಿ ನೇತೃತ್ವದ ಎನ್‌ಡಿಎ ಆಡಳಿತವನ್ನು ದೂರಲು ಹೊರಟಿದ್ದಾರೆಯೇ? ಎಂದು ವ್ಯಂಗ್ಯವಾಡಿದ್ದಾರೆ.

2014ರಿಂದ ದೇಶದಲ್ಲಿರುವುದು ಏಕಚಕ್ರಾಧಿಪತ್ಯ.
ರಫೇಲ್ ಹಗರಣ, ಜಿಡಿಪಿ ಶೇ.5ಕ್ಕೆ ಇಳಿದಿದ್ದು, ನಿರುದ್ಯೋಗ 45 ವರ್ಷಗಳಲ್ಲಿಯೇ ಅತ್ಯಧಿಕವಾಗಿದ್ದು, ಬ್ಯಾಂಕ್ ಲೂಟಿ‌ ಮಾಡಿ ದೇಶ ಬಿಟ್ಟು ಓಡಿದ್ದು, ಕಾಶ್ಮೀರದಲ್ಲಿ ಉಗ್ರರ ದಾಳಿ 42% ಹೆಚ್ಚಿದ್ದು, ಮಹಿಳಾ ಅತ್ಯಾಚಾರ 22% ಹೆಚ್ಚಿದ್ದು… ಇದೇ ಅವಧಿಯಲ್ಲಿ ಅಲ್ಲವೇ? ಬಹುಪಕ್ಷೀಯ ರಾಜಕೀಯ ವ್ಯವಸ್ಥೆಯನ್ನು ವಿರೋಧಿಸುತ್ತಿರುವ ಅಮಿತ್ ಶಾ ಅವರು ಬಿಹಾರ, ಗೋವಾ, ಮಹಾರಾಷ್ಟ್ರ ಮತ್ತು ಈಶಾನ್ಯ ರಾಜ್ಯಗಳ ಮಿತ್ರಪಕ್ಷಗಳಿಗೆ ವಿಚ್ಛೇದನದ ಸಂದೇಶ ಕಳುಹಿಸುತ್ತಿದ್ದಾರೆಯೇ? ಅಲ್ಲಿರುವುದು ಬಹುಪಕ್ಷೀಯ ಸರ್ಕಾರವಲ್ಲವೇ? ಎಂದು ಸಿದ್ದು ಪ್ರಶ್ನಿಸಿದ್ದಾರೆ.

ಗೃಹಸಚಿವ ಅಮಿತ್ ಶಾ ಏಕತ್ವದ ವ್ಯಸನಗ್ರಸ್ತರಾಗಿದ್ದಾರೆ. ಬಹುಭಾಷೆಗಳನ್ನು ಮೂಲೆಗೆ ತಳ್ಳುವ ಪ್ರಯತ್ನದ ನಂತರ ಈಗ ಬಹುಪಕ್ಷೀಯ ರಾಜಕೀಯ ವ್ಯವಸ್ಥೆಯನ್ನು ಎಲ್ಲ ಅನಿಷ್ಠಗಳಿಗೆ ಹೊಣೆ ಮಾಡಿದ್ದಾರೆ. ಅವರಿಗೆ ಯಾರಾದರೂ ಈ ದೇಶದ ರಾಜಕೀಯ, ಸಾಮಾಜಿಕ ಮತ್ತು ಸಾಂಸ್ಕೃತಿಕ ಇತಿಹಾಸದ ಪಾಠ ಮಾಡಬೇಕಾಗಿದೆ ಎಂದಿದ್ದಾರೆ.

ಸಿದ್ದರಾಮಯ್ಯನವರು ತಮ್ಮೆಲ್ಲಾ ಅಭಿಪ್ರಾಯಗಳನ್ನು ಪರಿಣಾಮಕಾರಿ ಮಾಧ್ಯಮಗಳಾದ ಸಾಮಾಜಿಕ ಜಾಲತಾಣಗಳಲ್ಲಿ ವ್ಯಕ್ತಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

TMC ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿಯನ್ನು ಉಚ್ಚಾಟಿಸಿದ ತೃಣಮೂಲ ಬಂಡಾಯ ಶಾಸಕರು

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣಾ ಸೋಲಿನ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ಪಕ್ಷವು ಇತಿಹಾಸದಲ್ಲೇ ಕಾಣದ ಅತ್ಯಂತ ದೊಡ್ಡ ಬಂಡಾಯಕ್ಕೆ ಸಾಕ್ಷಿಯಾಗಿದೆ. ಬಂಡಾಯ ಶಾಸಕರ ನೇತೃತ್ವ ವಹಿಸಿರುವ ಋತಬ್ರತಾ ಬ್ಯಾನರ್ಜಿ ಸೋಮವಾರ ಮಮತಾ ಬ್ಯಾನರ್ಜಿ...

ಯುಪಿ: ಮೊಹರಂ ಮೆರವಣಿಗೆಯಲ್ಲಿ ಪಿತೂರಿ: ಪಾಕ್ ಪರ ಘೋಷಣೆಯ ಸುಳ್ಳು ವಿಡಿಯೋ ಹರಿಬಿಟ್ಟ ಇಬ್ಬರು ಹಿಂದುತ್ವವಾದಿಗಳ ಬಂಧನ 

ಬರೇಲಿ (ಉತ್ತರ ಪ್ರದೇಶ): ಮೊಹರಂ ಮೆರವಣಿಗೆಯೊಂದರಲ್ಲಿ "ಪಾಕಿಸ್ತಾನ್ ಜಿಂದಾಬಾದ್" ಎಂದು ದೇಶವಿರೋಧಿ ಘೋಷಣೆ ಕೂಗಲಾಗಿದೆ ಎಂಬ ನಕಲಿ ವೀಡಿಯೋ ಸೃಷ್ಟಿಸಿ, ಮುಸ್ಲಿಂ ಸಮುದಾಯದ ಮೇಲೆ ಸುಳ್ಳು ಆರೋಪ ಹೊರಿಸಲು ಯತ್ನಿಸಿದ ಇಬ್ಬರು ಹಿಂದುತ್ವವಾದಿ...

ಮಕ್ಕಳಿಗೆ ಆರ್‌ಎಸ್‌ಎಸ್‌ ತರಬೇತಿ ನೀಡುವುದನ್ನು ಟೀಕಿಸಿ ವಿಡಿಯೋ ಹಂಚಿಕೆ : ಯುವಕನನ್ನು ವಶಕ್ಕೆ ಪಡೆದ ಪೊಲೀಸರು!

ರಾಜಸ್ಥಾನದ ಜುಂಜುನು ಜಿಲ್ಲೆಯ ನವೀನ್ ಚೌಧರಿ ಎಂಬ 25 ವರ್ಷದ ಯುವಕ, ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್‌) ಕುರಿತು ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಮ್‌ನಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದರು. 'ಜುಂಜುನು ಎಕ್ಸ್‌ಪ್ರೆಸ್' ಎಂಬ ಇನ್‌ಸ್ಟಾಗ್ರಾಮ್ ಪೇಜ್‌ನಲ್ಲಿ...

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...