Homeಕರ್ನಾಟಕನಾಲ್ಕು ರಾಜ್ಯಗಳ ಅಧ್ಯಕ್ಷರನ್ನು ನೇಮಕ ಮಾಡಿದ ಬಿಜೆಪಿ: ಕರ್ನಾಟಕದಿಂದ ಶೋಭಾ ಕರಂದ್ಲಾಜೆ ಸಾಧ್ಯತೆ

ನಾಲ್ಕು ರಾಜ್ಯಗಳ ಅಧ್ಯಕ್ಷರನ್ನು ನೇಮಕ ಮಾಡಿದ ಬಿಜೆಪಿ: ಕರ್ನಾಟಕದಿಂದ ಶೋಭಾ ಕರಂದ್ಲಾಜೆ ಸಾಧ್ಯತೆ

- Advertisement -
- Advertisement -

ಪ್ರಮುಖ ರಾಜ್ಯಗಳ ಚುನಾವಣೆಗಳು ಮತ್ತು 2024ರ ಲೋಕಸಭೆ ಚುನಾವಣೆ ಹಿನ್ನೆಲೆ ಬಿಜೆಪಿ ಮಂಗಳವಾರ ನಾಲ್ಕು ರಾಜ್ಯಗಳಲ್ಲಿ ತನ್ನ ಘಟಕಗಳಿಗೆ ಹೊಸ ಅಧ್ಯಕ್ಷರನ್ನು ನೇಮಕ ಮಾಡಿದೆ.

ತೆಲಂಗಾಣ ಬಿಜೆಪಿ ಅಧ್ಯಕ್ಷರಾಗಿ ಜಿ ಕಿಶನ್ ರೆಡ್ಡಿ, ಆಂಧ್ರಪ್ರದೇಶದ ರಾಜ್ಯಾಧ್ಯಕ್ಷರಾಗಿ ಡಿ ಪುರಂದೇಶ್ವರಿ, ಜಾರ್ಖಂಡ್‌ನ ನೂತನ ರಾಜ್ಯಾಧ್ಯಕ್ಷರಾಗಿ ಮಾಜಿ ಸಿಎಂ ಬಾಬುಲಾಲ್ ಮರಾಂಡಿ ಮತ್ತು ಪಂಜಾಬ್ ಪಕ್ಷದ ರಾಜ್ಯಾಧ್ಯಕ್ಷರಾಗಿ ಸುನೀಲ್ ಜಾಖರ್ ಅವರನ್ನು ನೇಮಕ ಮಾಡಲಾಗಿದೆ. ವಿಶೇಷವೆಂದರೆ ಜಾಖರ್ ಈ ಹಿಂದೆ ಪಂಜಾಬ್‌ನಲ್ಲಿ ಕಾಂಗ್ರೆಸ್‌ನ ರಾಜ್ಯ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದ್ದಾರೆ. ಇನ್ನು ಕರ್ನಾಟಕದಲ್ಲೂ ರಜಾfಯ ಬಿಜೆಪಿ ನಾಯಕರ ಬದಲಾವಣೆಯ ಮಾತುಗಳು ಕೇಳಿಬಂದಿದ್ದು, ಶೋಭಾ ಕರಂದ್ಲಾಜೆ ಅವರಿಗೆ ರಾಜ್ಯಾಧ್ಯಕ್ಷೆ ಪಟ್ಟ ಒಲಿದು ಬರೆಲಿದೆ ಎಂದು ಹೇಳಲಾಗುತ್ತಿದೆ.

ತೆಲಂಗಾಣದಲ್ಲಿ ಚುನಾವಣಾ ನಿರ್ವಹಣಾ ಸಮಿತಿಯ ಅಧ್ಯಕ್ಷರಾಗಿ ಈಟಾಲ ರಾಜೇಂದರ್ ಅವರನ್ನು ನೇಮಿಸುವುದಾಗಿ ಬಿಜೆಪಿ ಘೋಷಿಸಿತು. ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಪ್ರಧಾನ ಕಾರ್ಯದರ್ಶಿ (ಸಂಘಟನೆ) ಬಿ ಎಲ್ ಸಂತೋಷ್ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಪಕ್ಷದಲ್ಲಿ ಸಂಘಟನಾ ಪುನರ್ರಚನೆಯ ಬಗ್ಗೆ ಚರ್ಚೆ ನಡೆದಿದೆ.

ಪ್ರಧಾನಿ ನರೇಂದ್ರ ಮೋದಿ ಅವರು ರಾಷ್ಟ್ರ ರಾಜಧಾನಿಯಲ್ಲಿ ಸಚಿವರ ಮಂಡಳಿಯ ಸಭೆಯ ಅಧ್ಯಕ್ಷತೆ ವಹಿಸಿದ ಒಂದು ದಿನದ ನಂತರ ಈ ಘೋಷಣೆ ಬಂದಿದೆ.

ರಾಜ್ಯಾಧ್ಯಕ್ಷ ಸ್ಥಾನಕ್ಕೆ ಶೋಭಾ ಕರಂದ್ಲಾಜೆ ಹೆಸರು ಸೂಚಿಸಿದ ಬಿಎಸ್‌ವೈ

ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷರ ಪಟ್ಟಕ್ಕಾಗಿ ಸೂಕ್ತ ವ್ಯಕ್ತಿಯ ಹುಡುಕಾಟವನ್ನು ಬಿಜೆಪಿ ಹೈಕಮಾಂಡ್ ಮುಂದುವರಿಸಿರುವುದರ ನಡುವೆಯೇ ಮಾಜಿ ಸಿಎಂ ಯಡಿಯೂರಪ್ಪನವರು, ಶೋಭಾ ಕರಂದ್ಲಾಜೆಗೆ ರಾಜ್ಯ ಬಿಜೆಪಿ ಚುಕ್ಕಾಣಿ ಕೊಡುವಂತೆ ಸಲಹೆ ನೀಡಿರುವುದು ಬೆಳಕಿಗೆ ಬಂದಿದೆ. ಅತ್ತ, ಬಿಜೆಪಿ ಹೈಕಮಾಂಡ್ ಸಹ ಯಡಿಯೂರಪ್ಪನವರ ಸಲಹೆಯನ್ನು ತೆಗೆದುಹಾಕದ ಪರಿಸ್ಥಿತಿಯಲ್ಲಿದ್ದು, ಅವರ ಸಲಹೆಯನ್ನೇ ಒಪ್ಪಿಕೊಳ್ಳುವ ಸಾಧ್ಯತೆಗಳು ದಟ್ಟವಾಗಿವೆ ಎನ್ನಲಾಗಿದೆ.

ಹೈಕಮಾಂಡ್ ಜೊತೆಗೆ ಮಾತನಾಡಿರುವ ಯಡಿಯೂರಪ್ಪನವರು, ‘ರಾಜ್ಯ ಬಿಜೆಪಿ ಅಧ್ಯಕ್ಷರ ಗಾದಿಗೆ ಶೋಭಾ ಕರಂದ್ಲಾಜೆ ಅವರೇ ಸೂಕ್ತ ವ್ಯಕ್ತಿ. ಮಹಿಳೆಯರಿಗೆ ನಮ್ಮ ಪಕ್ಷದಲ್ಲಿ ಒಂದು ಮಹತ್ವದ ಪಟ್ಟ ಕೊಟ್ಟಹಾಗೆ ಆಗುತ್ತದೆ. ಜೊತೆಗೆ, ಶೋಭಾ ಅವರು ಹಿಂದೆ ರಾಜ್ಯದಲ್ಲಿ ಸಚಿವರಾಗಿ, ಕೇಂದ್ರದಲ್ಲಿ ಸಚಿವರಾಗಿ ದಕ್ಷತೆಯಿಂದ ಕೆಲಸ ಮಾಡಿದ್ದಾರೆ. ಹಾಗಾಗಿ, ಅವರಿಗೆ ರಾಜ್ಯಾಧ್ಯಕ್ಷರ ಪಟ್ಟವನ್ನು ಕೊಡಬೇಕು’ ಎಂದು ಮನವಿ ಮಾಡಿದ್ದಾರೆನ್ನಲಾಗಿದೆ.

ಇದನ್ನೂ ಓದಿ: ವಿಪಕ್ಷ ನಾಯಕನ ಆಯ್ಕೆ ವಿಳಂಬ: ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಬೇಕಾದ ಬಿಜೆಪಿಯೇ ಸಂಕಷ್ಟದಲ್ಲಿ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...

ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಜಾರಿಯ ಜೊತೆಯಲ್ಲೆ ಸುಪ್ರೀಂ ಕೋರ್ಟ್‌ಗೆ ಹೋಗಲು ಕರ್ನಾಟಕ ಸಜ್ಜು

ಕೇಂದ್ರ ಸರ್ಕಾರದ ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ‘ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ)’ (VB-G RAM G) ಕಾಯ್ದೆಯ ಹಲವು ನಿಯಮಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರೂ...

ಉತ್ತರ ಪ್ರದೇಶ: ಮದುವೆ ರಿಸೆಪ್ಷನ್‌ನಲ್ಲಿ ಗೋಮಾಂಸ ಬಡಿಸಿದ ಆರೋಪ; ವರನ ತಂದೆ ಸೇರಿ ಏಳು ಮಂದಿ ಬಂಧನ, ಮಂಟಪ ಸೀಲ್

ಶಾಮ್ಲಿ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ಕೈರಾನಾ ಪಟ್ಟಣದಲ್ಲಿ ನಡೆದ ಮದುವೆ ಆರತಕ್ಷತೆ (ವಲೀಮಾ) ಸಮಾರಂಭವೊಂದು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಸಮಾರಂಭದಲ್ಲಿ ಅತಿಥಿಗಳಿಗೆ ಗೋಮಾಂಸವನ್ನು ಬೇಯಿಸಿ ಬಡಿಸಲಾಗಿದೆ ಎಂಬ...

ರಾಮ ಮಂದಿರ ದೇಣಿಗೆ ವಿವಾದ: ಎಫ್‌ಐಆರ್ ದಾಖಲಿಸಿ ತ್ವರಿತ ನ್ಯಾಯಾಲಯದ ವಿಚಾರಣೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ

ರಾಮ ದೇಣಿಗೆ ವಿವಾದ ದುರುಪಯೋಗ ಕುರಿತು ಎಸ್‌ಐಟಿ ತನ್ನ ಪ್ರಾಥಮಿಕ ವರದಿಯನ್ನು ಸಲ್ಲಿಸಿದ ಕೂಡಲೇ, ಬಲಪಂಥೀಯ ಹಿಂದುತ್ವ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಬೇಕೆಂದು ಒತ್ತಾಯಿಸಿದೆ. ವಿಎಚ್‌ಪಿ ಅಂತರರಾಷ್ಟ್ರೀಯ...

ಪಾಸ್‌ಪೋರ್ಟ್ ಪೌರತ್ವದ ದಾಖಲೆಯಲ್ಲ: ವಿದೇಶಾಂಗ ಸಚಿವಾಲಯ

ಪಾಸ್‌ಪೋರ್ಟ್ ಒಂದು ಪ್ರಯಾಣದ ದಾಖಲೆಯಾಗಿದೆಯೇ ಹೊರತು, ಪೌರತ್ವದ ದಾಖಲೆಯಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ (ಎಂಇಎ) ಅಧಿಕಾರಿಗಳು ಬುಧವಾರ (ಜೂನ್ 24) ತಿಳಿಸಿದ್ದಾರೆ. ಈ ಮೂಲಕ ಅವರು ಭಾರತೀಯ ಪೌರತ್ವವನ್ನು ಖಚಿತವಾಗಿ ಸಾಬೀತುಪಡಿಸುವ...

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...