Homeಮುಖಪುಟಮೊಘಲರಂತೆ ಬಿಜೆಪಿ ನಮ್ಮ ಮೇಲೆ ಆಕ್ರಮಣ ಮಾಡುತ್ತಿದೆ: ಶಿವಸೇನೆ ಆಕ್ಷೇಪ

ಮೊಘಲರಂತೆ ಬಿಜೆಪಿ ನಮ್ಮ ಮೇಲೆ ಆಕ್ರಮಣ ಮಾಡುತ್ತಿದೆ: ಶಿವಸೇನೆ ಆಕ್ಷೇಪ

- Advertisement -
- Advertisement -

ಮಹಾರಾಷ್ಟ್ರದಲ್ಲಿ ಅಧಿಕಾರ ಹಂಚಿಕೆಗಾಗಿ ಬಿಜೆಪಿ ಮತ್ತು ಶಿವಸೇನೆಯ ನಡುವಿನ ಹಗ್ಗ ಜಗ್ಗಾಟ ಮುಂದುವರೆದಿದೆ. ಈ ನಡುವೆ ಮೊಘಲರು ಮಾಡಿದಂತೆ ಬಿಜೆಪಿ ನಮ್ಮ ಮೇಲೆ ಆಕ್ರಮಣ ಮಾಡುತ್ತಿದೆ ಎಂದು ಬಿಜೆಪಿಯ ಮಿತ್ರಪಕ್ಷ ಶಿವಸೇನೆ ಆರೋಪಿಸಿದೆ. ಮಹಾರಾಷ್ಟ್ರದಲ್ಲಿ ಅಧಿಕಾರ ಹಂಚಿಕೆಯ ಕುರಿತು ಉಂಟಾಗಿರುವ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಬಿಜೆಪಿಯು ರಾಷ್ಟ್ರಪತಿ ಆಡಳಿತಕ್ಕೆ ಒಲವು ವ್ಯಕ್ತಪಡಿಸಿದ್ದಕ್ಕೆ ಶಿವಸೇನೆ ಈ ರೀತಿಯಾಗಿ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದೆ.

ಮಹಾರಾಷ್ಟ್ರದಲ್ಲಿ ರಾಷ್ಟ್ರಪತಿ ಆಡಳಿತವನ್ನು ತರುವುದು ಉತ್ತಮ ಎಂದು ರಾಜ್ಯ ಹಣಕಾಸು ಸಚಿವ ಮತ್ತು ಬಿಜೆಪಿ ನಾಯಕ ಸುಧೀರ್ ಮುಂಗಾಟಿವಾರ್ ಹೇಳುತ್ತಿದ್ದಂತೆಯೇ ಶಿವಸೇನೆಯು ಬಿಜೆಪಿಯ ಮೇಲೆ ಹರಿಹಾಯ್ದಿದೆ. ಮೊಘಲರ ರೀತಿಯಲ್ಲಿ ಬಿಜೆಪಿ ನಮ್ಮ ಮೇಲೆ ದಬ್ಬಾಳಿಕೆ ನಡೆಸುತ್ತಿದೆ ಎಂದು ಶಿವಸೇನೆ ತನ್ನ ಮುಖವಾಣಿ ಪತ್ರಿಕೆಯಾದ ಸಾಮ್ನಾದ ಸಂಪಾದಕೀಯದಲ್ಲಿ ಬರೆದುಕೊಂಡಿದೆ.

ವಿಧಾನಸಭಾ ಚುನಾವಣೆಯ ಫಲಿತಾಂಶಗಳು ಬಂದು ಎಂಟು ದಿನಗಳು ಕಳೆದರೂ ಮಹಾರಾಷ್ಟ್ರದಲ್ಲಿ ಹೊಸ ಸರ್ಕಾರ ರಚನೆಯಾಗದ ಹಿನ್ನೆಲೆಯಲ್ಲಿ ನವೆಂಬರ್ 7 ರೊಳಗೆ ರಾಜ್ಯದಲ್ಲಿ ಹೊಸ ಸರ್ಕಾರ ಜಾರಿಗೆ ಬರದಿದ್ದರೆ ಮಹಾರಾಷ್ಟ್ರ ರಾಷ್ಟ್ರಪತಿ ಆಡಳಿತಕ್ಕೆ ಹೋಗಬಹುದು ಎಂದು ಬಿಜೆಪಿಯ ಸುಧೀರ್ ಮುಂಗಾಟಿವಾರ್ ಶುಕ್ರವಾರ ಘೋಷಿಸಿದ್ದರು.

ಇದಕ್ಕೆ ಪ್ರತಿಕ್ರಿಯಿಸಿದ ಶಿವಸೇನೆಯು, ಸುಧೀರ್ ಮುಂಗಂತಿವಾರ್ ಅವರ “ಬೆದರಿಕೆಯ ಹೇಳಿಕೆ” ಅಸಂವಿಧಾನಿಕ ಮತ್ತು “ಪ್ರಜಾಪ್ರಭುತ್ವಕ್ಕೆ ವಿರುದ್ಧವಾಗಿದೆ” ಎಂದಿದೆ.

“ಇದು ಮೊಘಲ್ ಅವರ ಆಜ್ಞೆಯಂತಿದೆ. ಕಾನೂನು ಮತ್ತು ಸಂವಿಧಾನವು ಯಾರ ಗುಲಾಮರಲ್ಲ. ಮಹಾರಾಷ್ಟ್ರ ರಾಜಕಾರಣದ ಪ್ರಸ್ತುತ ಸ್ಥಿತಿಗೆ ನಾವು ಜವಾಬ್ದಾರರಲ್ಲ ಎಂಬುದು ಮಹಾರಾಷ್ಟ್ರದ ಜನರಿಗೆ ಇದು ತಿಳಿದಿದೆ. ಕಾನೂನು ಮತ್ತು ಸಂವಿಧಾನ ಎಂದರೇನು ಎಂದು ನಮಗೆ ತಿಳಿದಿದೆ” ಎಂದು ಶಿವಸೇನೆ ಹೇಳಿದೆ.

ಪ್ರಸ್ತುತ ಮಹಾರಾಷ್ಟ್ರ ಸರ್ಕಾರದ ಅವಧಿ ನವೆಂಬರ್ 8 ಕ್ಕೆ ಕೊನೆಗೊಳ್ಳುತ್ತಿದ್ದಂತೆ, ಬಿಜೆಪಿ ಮತ್ತು ಶಿವಸೇನೆ ನಡುವಿನ ಅಧಿಕಾರ ಹಂಚಿಕೆಯಲ್ಲಿ ಗೊಂದಲ ಮುಂದುವರೆದಿದೆ. ಮಹಾರಾಷ್ಟ್ರದ ಜನರು ಶಿವಸೇನೆಯವರನ್ನು ಸಿಎಂ ಆಗಿ ಬಯಸುತ್ತಾರೆ ಎಂದು ಶಿವಸೇನೆ ಹೇಳಿದರೆ, ಮಹಾರಾಷ್ಟ್ರದ ಮುಖ್ಯಮಂತ್ರಿ ತಮ್ಮ ಪಕ್ಷದವರಾಗಿರುತ್ತಾರೆ ಎಂದು ಬಿಜೆಪಿ ಸಮರ್ಥಿಸಿಕೊಂಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...