Homeಮುಖಪುಟತಮಿಳುನಾಡು ಚುನಾವಣೆಯಲ್ಲಿ ಖಾತೆ ತೆರೆಯಲು ಬಿಜೆಪಿ ಶತಪ್ರಯತ್ನ!

ತಮಿಳುನಾಡು ಚುನಾವಣೆಯಲ್ಲಿ ಖಾತೆ ತೆರೆಯಲು ಬಿಜೆಪಿ ಶತಪ್ರಯತ್ನ!

2016ರ ಚುನಾವಣೆಯಲ್ಲಿ 243 ಸ್ಥಾನಗಳಲ್ಲಿ ಸ್ಪರ್ಧಿಸಿದ್ದರೂ ಒಂದೂ ಸ್ಥಾನ ಗೆಲ್ಲಲ್ಲು ವಿಫಲವಾಗಿದ್ದ ಬಿಜೆಪಿ ಈ ಬಾರಿ ಖಾತೆ ತೆರೆಯುವ ಉತ್ಸಾಹದಲ್ಲಿದೆ.

- Advertisement -
- Advertisement -

ಮುಂದಿನ ವರ್ಷ‌ ನಡೆಯಲಿರುವ ತಮಿಳುನಾಡು ವಿಧಾನಸಭಾ ಚುನಾವಣೆ ಹಿನ್ನೆಲೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು ತಮಿಳುನಾಡಿಗೆ ಭೇಟಿ ನೀಡಿದ್ದಾರೆ. ರಾಜ್ಯದಲ್ಲಿ ಹಲವು ಅಭಿವೃದಿ ಕಾರ್ಯಗಳಿಗೆ ಚಾಲನೆ ನೀಡುವುದರ ಜೊತೆಗೆ ಪಕ್ಷ ಸಂಘಟನೆಯ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದಾರೆ.

ಅಮಿತ್ ಶಾ ಭೇಟಿ ರಾಜ್ಯ ರಾಜಕಾರಣದಲ್ಲಿ ಹಲವು ಪ್ರಮುಖ ಘಟನೆಗಳಿಗೆ ಸಾಕ್ಷಿಯಾಗಲಿದೆ ಎಂದು ಅಂದಾಜಿಸಲಾಗಿದೆ. ತಮಿಳುನಾಡು ಡಿಎಂಕೆ ಪಕ್ಷದಿಂದ ಉಚ್ಚಾಟನೆಯಾಗಿದ್ದ ಮಾಜಿ ಸಂಸದ ಕೆ.ಪಿ. ರಾಮಲಿಂಗಂ ಅವರು ಇಂದು ಬಿಜೆಪಿಗೆ ಸೇರ್ಪಡೆಯಾದರು.

ಇನ್ನೂ ಹೊಸ ಪಕ್ಷ ಸ್ಥಾಪನೆ ಮಾಡಿ 2021ರಲ್ಲಿ ಚುನಾವಣೆಗೆ ಸ್ಪರ್ಧಿಸುತ್ತಾರೆ ಎಂಬ ವದಂತಿಯಿರುವ ಕರುಣಾನಿಧಿ ಅವರ ಹಿರಿಯ ಪುತ್ರ ಎಂ.ಕೆ.ಅಳಗಿರಿ ಅಮಿತ್ ಶಾ ಅವರನ್ನು ಭೇಟಿಯಾಗಲಿದ್ದಾರೆ ಎನ್ನಲಾಗಿದೆ. ಹೊಸ ಪಕ್ಷ ಸ್ಥಾಪನೆ ಮಾಡುವರೋ ಅಥವಾ ಮುಂದಿನ ಚುನಾವಣೆಯಲ್ಲಿ ಬಿಜೆಪಿಗೆ ಸಾಥ್ ನೀಡುವರೊ ಎಂಬುದು ಭೇಟಿಯ ನಂತರ ಬಳಕಿಗೆ ಬರಲಿದೆ.

ಇದನ್ನೂ ಓದಿ: ಅಮಿತ್ ಶಾ ತಮಿಳುನಾಡು ಭೇಟಿ: ಟ್ವಿಟ್ಟರ್‌‌ನಲ್ಲಿ #GoBackAmitShah ಟ್ರೆಂಡ್!

 

ಸ್ಟಾಲಿನ್ ಸಹೋದರ ಅಳಗಿರಿ ಹೊಸ ಪಕ್ಷ ಸ್ಥಾಪಿಸಿದರೆ ಡಿಎಂಕೆ ಮತಗಳನ್ನು ಅಳಗಿರಿ ಛಿದ್ರಗೊಳಿಸಲಿದ್ದಾರೆ. ಇದರಿಂದ ಮತಗಳು ಒಡೆದು ಬಿಜೆಪಿಗೆ ಲಾಭವಾಗುತ್ತದೆ. ಅವರು ಬಿಜೆಪಿ ಜೊತೆ ಕೈ ಜೊಡಿಸಿದರೂ ಬಿಜೆಪಿಗೆ ಲಾಭ. ಈ ಹಿನ್ನೆಲೆ  ಅಳಗಿರಿ-ಅಮಿತ್ ಶಾ ಭೇಟಿ ಕುತೂಹಲ ಮೂಡಿಸಿದೆ.

ಇತ್ತ ಬಿಜೆಪಿಗೆ ಸೇರ್ಪಡೆಯಾಗಿರುವ ಡಿಎಂಕೆ ಪಕ್ಷದಿಂದ ಉಚ್ಚಾಟನೆಯಾಗಿದ್ದ ಮಾಜಿ ಸಂಸದ ಕೆ.ಪಿ. ರಾಮಲಿಂಗಂ, ಡಿಎಂಕೆ ನಾಯಕ ಎಂ.ಕೆ. ಅಳಗಿರಿ ಅವರನ್ನೂ ಬಿಜೆಪಿಗೆ ಕರೆತರುವುದಾಗಿ ಹೇಳಿಕೊಂಡಿದ್ದಾರೆ. ’ನಾನು ಅವರಿಗೆ ಬಿಜೆಪಿ ಸೇರಲು ಮನವೊಲಿಸಲು ಪ್ರಯತ್ನಿಸುತ್ತೇನೆ. ಆದರೆ ನಿರ್ಧಾರ ಮಾತ್ರ ಅವರಿಗೆ ಬಿಟ್ಟಿದೆ’ ಎಂದು ಹೇಳಿದ್ದಾರೆ.

ತಮಿಳುನಾಡು ಚುನಾವಣೆ ಹಿನ್ನೆಲೆ ಈ ಬಾರಿ ಕಳೆದ ಹಲವು ತಿಂಗಳುಗಳಿಂದಲೇ ಬಿಜೆಪಿ ಕಾರ್ಯಪ್ರವೃತ್ತವಾಗಿದೆ. 2016ರ ಚುನಾವಣೆಯಲ್ಲಿ 243 ಸ್ಥಾನಗಳಲ್ಲಿ ಸ್ಪರ್ಧಿಸಿದ್ದರೂ ಒಂದೂ ಸ್ಥಾನ ಗೆಲ್ಲಲ್ಲು ವಿಫಲವಾಗಿದ್ದ ಬಿಜೆಪಿ ಈ ಬಾರಿ ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ, ನಟಿ, ರಾಜಕಾರಣಿ ಖುಷ್ಬೂ ತಮಿಳುನಾಡು ರಾಜಕಿಯದಲ್ಲಿ ಬಿಜೆಪಿಯ ಹೊಸ ಶಕೆ ಆರಂಭಕ್ಕೆ ಕಾರಣವಾಗಲಿದ್ದಾರೆ ಎಂಬ ವಿಶ್ವಾಸದಲ್ಲಿದೆ.

ಇತ್ತ ಧರ್ಮದ ಹೆಸರಲ್ಲಿ ಜನರನ್ನು ಸೆಳೆಯಲು ಬಿಜೆಪಿ ವೆಟ್ರಿವೇಲ್ ಯಾತ್ರೆಯನ್ನು ಸಹ ಆರಂಭಿಸಿದೆ. ಕೊರೊನಾ ಕಾರಣ ನೀಡಿ ಸರ್ಕಾರ ಅನುಮತಿ ನೀಡದೇ ಇದ್ದರೂ ಸಹ ಯಾತ್ರೆ ಆರಂಭಿಸಿ ಸರ್ಕಾರದ ವಿರುದ್ಧ ಟೊಂಕ ಕಟ್ಟಿ ನಿಂತಿದೆ.

ಒಟ್ಟಾರೆ ತಮಿಳುನಾಡಿನಲ್ಲಿ ಈ ಬಾರಿ ಹೇಗಾದರೂ ಅಧಿಕಾರದ ಸಮೀಪಕ್ಕಾದರೂ ಹೋಗಲೇ ಬೇಕು ಎಂದು ಪಣ ತೊಟ್ಟಿರುವ ಬಿಜೆಪಿ ತನ್ನ ಕಡೆಯಿಂದಾಗುವ ಎಲ್ಲಾ ಪ್ರಯತ್ನಗಳನ್ನು ಮಾಡುತ್ತಿದೆ. ಡಿಎಂಕೆ ಒಳಗಿನ ಒಳ ಮುನಿಸನ್ನು ಲಾಭ ಮಾಡಿಕೊಳ್ಳುವ ಯೋಜನೆಯಲ್ಲಿದೆ.

ಪಶ್ಚಿಮ ಬಂಗಾಳದಲ್ಲೂ ತೃಣಮೂಲ ಕಾಂಗ್ರೆಸ್ ಅನ್ನು ಕೆಳಗಿಳಿಸಿ ಅಧಿಕಾರಕ್ಕೆ ಬರಲು ಬಿಜೆಪಿ ಅಲ್ಲಿ ಸತತ ರ್‍ಯಾಲಿಗಳನ್ನು ಆಯೋಜಿಸುತ್ತಿದೆ. ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಮತ್ತು ಅಮಿತ್ ಶಾ ತಿಂಗಳಲ್ಲಿ 2 ಬಾರಿ ಬಂಗಾಳ ಭೇಟಿಗೆ ಯೋಜನೆ ರೂಪಿಸಿದ್ದಾರೆ.


ಇದನ್ನೂ ಓದಿ: ಬುಡಕಟ್ಟು ನಾಯಕ ಬಿರ್ಸಾ ಮುಂಡಾಗೆ ಅಮಿತ್ ಶಾ ಅವಮಾನ: ಟಿಎಂಸಿ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...