Homeಮುಖಪುಟತಮಿಳುನಾಡು ಚುನಾವಣೆಯಲ್ಲಿ ಖಾತೆ ತೆರೆಯಲು ಬಿಜೆಪಿ ಶತಪ್ರಯತ್ನ!

ತಮಿಳುನಾಡು ಚುನಾವಣೆಯಲ್ಲಿ ಖಾತೆ ತೆರೆಯಲು ಬಿಜೆಪಿ ಶತಪ್ರಯತ್ನ!

2016ರ ಚುನಾವಣೆಯಲ್ಲಿ 243 ಸ್ಥಾನಗಳಲ್ಲಿ ಸ್ಪರ್ಧಿಸಿದ್ದರೂ ಒಂದೂ ಸ್ಥಾನ ಗೆಲ್ಲಲ್ಲು ವಿಫಲವಾಗಿದ್ದ ಬಿಜೆಪಿ ಈ ಬಾರಿ ಖಾತೆ ತೆರೆಯುವ ಉತ್ಸಾಹದಲ್ಲಿದೆ.

- Advertisement -
- Advertisement -

ಮುಂದಿನ ವರ್ಷ‌ ನಡೆಯಲಿರುವ ತಮಿಳುನಾಡು ವಿಧಾನಸಭಾ ಚುನಾವಣೆ ಹಿನ್ನೆಲೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು ತಮಿಳುನಾಡಿಗೆ ಭೇಟಿ ನೀಡಿದ್ದಾರೆ. ರಾಜ್ಯದಲ್ಲಿ ಹಲವು ಅಭಿವೃದಿ ಕಾರ್ಯಗಳಿಗೆ ಚಾಲನೆ ನೀಡುವುದರ ಜೊತೆಗೆ ಪಕ್ಷ ಸಂಘಟನೆಯ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದಾರೆ.

ಅಮಿತ್ ಶಾ ಭೇಟಿ ರಾಜ್ಯ ರಾಜಕಾರಣದಲ್ಲಿ ಹಲವು ಪ್ರಮುಖ ಘಟನೆಗಳಿಗೆ ಸಾಕ್ಷಿಯಾಗಲಿದೆ ಎಂದು ಅಂದಾಜಿಸಲಾಗಿದೆ. ತಮಿಳುನಾಡು ಡಿಎಂಕೆ ಪಕ್ಷದಿಂದ ಉಚ್ಚಾಟನೆಯಾಗಿದ್ದ ಮಾಜಿ ಸಂಸದ ಕೆ.ಪಿ. ರಾಮಲಿಂಗಂ ಅವರು ಇಂದು ಬಿಜೆಪಿಗೆ ಸೇರ್ಪಡೆಯಾದರು.

ಇನ್ನೂ ಹೊಸ ಪಕ್ಷ ಸ್ಥಾಪನೆ ಮಾಡಿ 2021ರಲ್ಲಿ ಚುನಾವಣೆಗೆ ಸ್ಪರ್ಧಿಸುತ್ತಾರೆ ಎಂಬ ವದಂತಿಯಿರುವ ಕರುಣಾನಿಧಿ ಅವರ ಹಿರಿಯ ಪುತ್ರ ಎಂ.ಕೆ.ಅಳಗಿರಿ ಅಮಿತ್ ಶಾ ಅವರನ್ನು ಭೇಟಿಯಾಗಲಿದ್ದಾರೆ ಎನ್ನಲಾಗಿದೆ. ಹೊಸ ಪಕ್ಷ ಸ್ಥಾಪನೆ ಮಾಡುವರೋ ಅಥವಾ ಮುಂದಿನ ಚುನಾವಣೆಯಲ್ಲಿ ಬಿಜೆಪಿಗೆ ಸಾಥ್ ನೀಡುವರೊ ಎಂಬುದು ಭೇಟಿಯ ನಂತರ ಬಳಕಿಗೆ ಬರಲಿದೆ.

ಇದನ್ನೂ ಓದಿ: ಅಮಿತ್ ಶಾ ತಮಿಳುನಾಡು ಭೇಟಿ: ಟ್ವಿಟ್ಟರ್‌‌ನಲ್ಲಿ #GoBackAmitShah ಟ್ರೆಂಡ್!

 

ಸ್ಟಾಲಿನ್ ಸಹೋದರ ಅಳಗಿರಿ ಹೊಸ ಪಕ್ಷ ಸ್ಥಾಪಿಸಿದರೆ ಡಿಎಂಕೆ ಮತಗಳನ್ನು ಅಳಗಿರಿ ಛಿದ್ರಗೊಳಿಸಲಿದ್ದಾರೆ. ಇದರಿಂದ ಮತಗಳು ಒಡೆದು ಬಿಜೆಪಿಗೆ ಲಾಭವಾಗುತ್ತದೆ. ಅವರು ಬಿಜೆಪಿ ಜೊತೆ ಕೈ ಜೊಡಿಸಿದರೂ ಬಿಜೆಪಿಗೆ ಲಾಭ. ಈ ಹಿನ್ನೆಲೆ  ಅಳಗಿರಿ-ಅಮಿತ್ ಶಾ ಭೇಟಿ ಕುತೂಹಲ ಮೂಡಿಸಿದೆ.

ಇತ್ತ ಬಿಜೆಪಿಗೆ ಸೇರ್ಪಡೆಯಾಗಿರುವ ಡಿಎಂಕೆ ಪಕ್ಷದಿಂದ ಉಚ್ಚಾಟನೆಯಾಗಿದ್ದ ಮಾಜಿ ಸಂಸದ ಕೆ.ಪಿ. ರಾಮಲಿಂಗಂ, ಡಿಎಂಕೆ ನಾಯಕ ಎಂ.ಕೆ. ಅಳಗಿರಿ ಅವರನ್ನೂ ಬಿಜೆಪಿಗೆ ಕರೆತರುವುದಾಗಿ ಹೇಳಿಕೊಂಡಿದ್ದಾರೆ. ’ನಾನು ಅವರಿಗೆ ಬಿಜೆಪಿ ಸೇರಲು ಮನವೊಲಿಸಲು ಪ್ರಯತ್ನಿಸುತ್ತೇನೆ. ಆದರೆ ನಿರ್ಧಾರ ಮಾತ್ರ ಅವರಿಗೆ ಬಿಟ್ಟಿದೆ’ ಎಂದು ಹೇಳಿದ್ದಾರೆ.

ತಮಿಳುನಾಡು ಚುನಾವಣೆ ಹಿನ್ನೆಲೆ ಈ ಬಾರಿ ಕಳೆದ ಹಲವು ತಿಂಗಳುಗಳಿಂದಲೇ ಬಿಜೆಪಿ ಕಾರ್ಯಪ್ರವೃತ್ತವಾಗಿದೆ. 2016ರ ಚುನಾವಣೆಯಲ್ಲಿ 243 ಸ್ಥಾನಗಳಲ್ಲಿ ಸ್ಪರ್ಧಿಸಿದ್ದರೂ ಒಂದೂ ಸ್ಥಾನ ಗೆಲ್ಲಲ್ಲು ವಿಫಲವಾಗಿದ್ದ ಬಿಜೆಪಿ ಈ ಬಾರಿ ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ, ನಟಿ, ರಾಜಕಾರಣಿ ಖುಷ್ಬೂ ತಮಿಳುನಾಡು ರಾಜಕಿಯದಲ್ಲಿ ಬಿಜೆಪಿಯ ಹೊಸ ಶಕೆ ಆರಂಭಕ್ಕೆ ಕಾರಣವಾಗಲಿದ್ದಾರೆ ಎಂಬ ವಿಶ್ವಾಸದಲ್ಲಿದೆ.

ಇತ್ತ ಧರ್ಮದ ಹೆಸರಲ್ಲಿ ಜನರನ್ನು ಸೆಳೆಯಲು ಬಿಜೆಪಿ ವೆಟ್ರಿವೇಲ್ ಯಾತ್ರೆಯನ್ನು ಸಹ ಆರಂಭಿಸಿದೆ. ಕೊರೊನಾ ಕಾರಣ ನೀಡಿ ಸರ್ಕಾರ ಅನುಮತಿ ನೀಡದೇ ಇದ್ದರೂ ಸಹ ಯಾತ್ರೆ ಆರಂಭಿಸಿ ಸರ್ಕಾರದ ವಿರುದ್ಧ ಟೊಂಕ ಕಟ್ಟಿ ನಿಂತಿದೆ.

ಒಟ್ಟಾರೆ ತಮಿಳುನಾಡಿನಲ್ಲಿ ಈ ಬಾರಿ ಹೇಗಾದರೂ ಅಧಿಕಾರದ ಸಮೀಪಕ್ಕಾದರೂ ಹೋಗಲೇ ಬೇಕು ಎಂದು ಪಣ ತೊಟ್ಟಿರುವ ಬಿಜೆಪಿ ತನ್ನ ಕಡೆಯಿಂದಾಗುವ ಎಲ್ಲಾ ಪ್ರಯತ್ನಗಳನ್ನು ಮಾಡುತ್ತಿದೆ. ಡಿಎಂಕೆ ಒಳಗಿನ ಒಳ ಮುನಿಸನ್ನು ಲಾಭ ಮಾಡಿಕೊಳ್ಳುವ ಯೋಜನೆಯಲ್ಲಿದೆ.

ಪಶ್ಚಿಮ ಬಂಗಾಳದಲ್ಲೂ ತೃಣಮೂಲ ಕಾಂಗ್ರೆಸ್ ಅನ್ನು ಕೆಳಗಿಳಿಸಿ ಅಧಿಕಾರಕ್ಕೆ ಬರಲು ಬಿಜೆಪಿ ಅಲ್ಲಿ ಸತತ ರ್‍ಯಾಲಿಗಳನ್ನು ಆಯೋಜಿಸುತ್ತಿದೆ. ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಮತ್ತು ಅಮಿತ್ ಶಾ ತಿಂಗಳಲ್ಲಿ 2 ಬಾರಿ ಬಂಗಾಳ ಭೇಟಿಗೆ ಯೋಜನೆ ರೂಪಿಸಿದ್ದಾರೆ.


ಇದನ್ನೂ ಓದಿ: ಬುಡಕಟ್ಟು ನಾಯಕ ಬಿರ್ಸಾ ಮುಂಡಾಗೆ ಅಮಿತ್ ಶಾ ಅವಮಾನ: ಟಿಎಂಸಿ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...