Homeಮುಖಪುಟತಮಿಳುನಾಡು ಚುನಾವಣೆಯಲ್ಲಿ ಖಾತೆ ತೆರೆಯಲು ಬಿಜೆಪಿ ಶತಪ್ರಯತ್ನ!

ತಮಿಳುನಾಡು ಚುನಾವಣೆಯಲ್ಲಿ ಖಾತೆ ತೆರೆಯಲು ಬಿಜೆಪಿ ಶತಪ್ರಯತ್ನ!

2016ರ ಚುನಾವಣೆಯಲ್ಲಿ 243 ಸ್ಥಾನಗಳಲ್ಲಿ ಸ್ಪರ್ಧಿಸಿದ್ದರೂ ಒಂದೂ ಸ್ಥಾನ ಗೆಲ್ಲಲ್ಲು ವಿಫಲವಾಗಿದ್ದ ಬಿಜೆಪಿ ಈ ಬಾರಿ ಖಾತೆ ತೆರೆಯುವ ಉತ್ಸಾಹದಲ್ಲಿದೆ.

- Advertisement -
- Advertisement -

ಮುಂದಿನ ವರ್ಷ‌ ನಡೆಯಲಿರುವ ತಮಿಳುನಾಡು ವಿಧಾನಸಭಾ ಚುನಾವಣೆ ಹಿನ್ನೆಲೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು ತಮಿಳುನಾಡಿಗೆ ಭೇಟಿ ನೀಡಿದ್ದಾರೆ. ರಾಜ್ಯದಲ್ಲಿ ಹಲವು ಅಭಿವೃದಿ ಕಾರ್ಯಗಳಿಗೆ ಚಾಲನೆ ನೀಡುವುದರ ಜೊತೆಗೆ ಪಕ್ಷ ಸಂಘಟನೆಯ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದಾರೆ.

ಅಮಿತ್ ಶಾ ಭೇಟಿ ರಾಜ್ಯ ರಾಜಕಾರಣದಲ್ಲಿ ಹಲವು ಪ್ರಮುಖ ಘಟನೆಗಳಿಗೆ ಸಾಕ್ಷಿಯಾಗಲಿದೆ ಎಂದು ಅಂದಾಜಿಸಲಾಗಿದೆ. ತಮಿಳುನಾಡು ಡಿಎಂಕೆ ಪಕ್ಷದಿಂದ ಉಚ್ಚಾಟನೆಯಾಗಿದ್ದ ಮಾಜಿ ಸಂಸದ ಕೆ.ಪಿ. ರಾಮಲಿಂಗಂ ಅವರು ಇಂದು ಬಿಜೆಪಿಗೆ ಸೇರ್ಪಡೆಯಾದರು.

ಇನ್ನೂ ಹೊಸ ಪಕ್ಷ ಸ್ಥಾಪನೆ ಮಾಡಿ 2021ರಲ್ಲಿ ಚುನಾವಣೆಗೆ ಸ್ಪರ್ಧಿಸುತ್ತಾರೆ ಎಂಬ ವದಂತಿಯಿರುವ ಕರುಣಾನಿಧಿ ಅವರ ಹಿರಿಯ ಪುತ್ರ ಎಂ.ಕೆ.ಅಳಗಿರಿ ಅಮಿತ್ ಶಾ ಅವರನ್ನು ಭೇಟಿಯಾಗಲಿದ್ದಾರೆ ಎನ್ನಲಾಗಿದೆ. ಹೊಸ ಪಕ್ಷ ಸ್ಥಾಪನೆ ಮಾಡುವರೋ ಅಥವಾ ಮುಂದಿನ ಚುನಾವಣೆಯಲ್ಲಿ ಬಿಜೆಪಿಗೆ ಸಾಥ್ ನೀಡುವರೊ ಎಂಬುದು ಭೇಟಿಯ ನಂತರ ಬಳಕಿಗೆ ಬರಲಿದೆ.

ಇದನ್ನೂ ಓದಿ: ಅಮಿತ್ ಶಾ ತಮಿಳುನಾಡು ಭೇಟಿ: ಟ್ವಿಟ್ಟರ್‌‌ನಲ್ಲಿ #GoBackAmitShah ಟ್ರೆಂಡ್!

 

ಸ್ಟಾಲಿನ್ ಸಹೋದರ ಅಳಗಿರಿ ಹೊಸ ಪಕ್ಷ ಸ್ಥಾಪಿಸಿದರೆ ಡಿಎಂಕೆ ಮತಗಳನ್ನು ಅಳಗಿರಿ ಛಿದ್ರಗೊಳಿಸಲಿದ್ದಾರೆ. ಇದರಿಂದ ಮತಗಳು ಒಡೆದು ಬಿಜೆಪಿಗೆ ಲಾಭವಾಗುತ್ತದೆ. ಅವರು ಬಿಜೆಪಿ ಜೊತೆ ಕೈ ಜೊಡಿಸಿದರೂ ಬಿಜೆಪಿಗೆ ಲಾಭ. ಈ ಹಿನ್ನೆಲೆ  ಅಳಗಿರಿ-ಅಮಿತ್ ಶಾ ಭೇಟಿ ಕುತೂಹಲ ಮೂಡಿಸಿದೆ.

ಇತ್ತ ಬಿಜೆಪಿಗೆ ಸೇರ್ಪಡೆಯಾಗಿರುವ ಡಿಎಂಕೆ ಪಕ್ಷದಿಂದ ಉಚ್ಚಾಟನೆಯಾಗಿದ್ದ ಮಾಜಿ ಸಂಸದ ಕೆ.ಪಿ. ರಾಮಲಿಂಗಂ, ಡಿಎಂಕೆ ನಾಯಕ ಎಂ.ಕೆ. ಅಳಗಿರಿ ಅವರನ್ನೂ ಬಿಜೆಪಿಗೆ ಕರೆತರುವುದಾಗಿ ಹೇಳಿಕೊಂಡಿದ್ದಾರೆ. ’ನಾನು ಅವರಿಗೆ ಬಿಜೆಪಿ ಸೇರಲು ಮನವೊಲಿಸಲು ಪ್ರಯತ್ನಿಸುತ್ತೇನೆ. ಆದರೆ ನಿರ್ಧಾರ ಮಾತ್ರ ಅವರಿಗೆ ಬಿಟ್ಟಿದೆ’ ಎಂದು ಹೇಳಿದ್ದಾರೆ.

ತಮಿಳುನಾಡು ಚುನಾವಣೆ ಹಿನ್ನೆಲೆ ಈ ಬಾರಿ ಕಳೆದ ಹಲವು ತಿಂಗಳುಗಳಿಂದಲೇ ಬಿಜೆಪಿ ಕಾರ್ಯಪ್ರವೃತ್ತವಾಗಿದೆ. 2016ರ ಚುನಾವಣೆಯಲ್ಲಿ 243 ಸ್ಥಾನಗಳಲ್ಲಿ ಸ್ಪರ್ಧಿಸಿದ್ದರೂ ಒಂದೂ ಸ್ಥಾನ ಗೆಲ್ಲಲ್ಲು ವಿಫಲವಾಗಿದ್ದ ಬಿಜೆಪಿ ಈ ಬಾರಿ ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ, ನಟಿ, ರಾಜಕಾರಣಿ ಖುಷ್ಬೂ ತಮಿಳುನಾಡು ರಾಜಕಿಯದಲ್ಲಿ ಬಿಜೆಪಿಯ ಹೊಸ ಶಕೆ ಆರಂಭಕ್ಕೆ ಕಾರಣವಾಗಲಿದ್ದಾರೆ ಎಂಬ ವಿಶ್ವಾಸದಲ್ಲಿದೆ.

ಇತ್ತ ಧರ್ಮದ ಹೆಸರಲ್ಲಿ ಜನರನ್ನು ಸೆಳೆಯಲು ಬಿಜೆಪಿ ವೆಟ್ರಿವೇಲ್ ಯಾತ್ರೆಯನ್ನು ಸಹ ಆರಂಭಿಸಿದೆ. ಕೊರೊನಾ ಕಾರಣ ನೀಡಿ ಸರ್ಕಾರ ಅನುಮತಿ ನೀಡದೇ ಇದ್ದರೂ ಸಹ ಯಾತ್ರೆ ಆರಂಭಿಸಿ ಸರ್ಕಾರದ ವಿರುದ್ಧ ಟೊಂಕ ಕಟ್ಟಿ ನಿಂತಿದೆ.

ಒಟ್ಟಾರೆ ತಮಿಳುನಾಡಿನಲ್ಲಿ ಈ ಬಾರಿ ಹೇಗಾದರೂ ಅಧಿಕಾರದ ಸಮೀಪಕ್ಕಾದರೂ ಹೋಗಲೇ ಬೇಕು ಎಂದು ಪಣ ತೊಟ್ಟಿರುವ ಬಿಜೆಪಿ ತನ್ನ ಕಡೆಯಿಂದಾಗುವ ಎಲ್ಲಾ ಪ್ರಯತ್ನಗಳನ್ನು ಮಾಡುತ್ತಿದೆ. ಡಿಎಂಕೆ ಒಳಗಿನ ಒಳ ಮುನಿಸನ್ನು ಲಾಭ ಮಾಡಿಕೊಳ್ಳುವ ಯೋಜನೆಯಲ್ಲಿದೆ.

ಪಶ್ಚಿಮ ಬಂಗಾಳದಲ್ಲೂ ತೃಣಮೂಲ ಕಾಂಗ್ರೆಸ್ ಅನ್ನು ಕೆಳಗಿಳಿಸಿ ಅಧಿಕಾರಕ್ಕೆ ಬರಲು ಬಿಜೆಪಿ ಅಲ್ಲಿ ಸತತ ರ್‍ಯಾಲಿಗಳನ್ನು ಆಯೋಜಿಸುತ್ತಿದೆ. ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಮತ್ತು ಅಮಿತ್ ಶಾ ತಿಂಗಳಲ್ಲಿ 2 ಬಾರಿ ಬಂಗಾಳ ಭೇಟಿಗೆ ಯೋಜನೆ ರೂಪಿಸಿದ್ದಾರೆ.


ಇದನ್ನೂ ಓದಿ: ಬುಡಕಟ್ಟು ನಾಯಕ ಬಿರ್ಸಾ ಮುಂಡಾಗೆ ಅಮಿತ್ ಶಾ ಅವಮಾನ: ಟಿಎಂಸಿ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...