Homeಮುಖಪುಟಉಬರ್‌ ಚಾಲಕನ ನೈತಿಕ ಪೊಲೀಸ್‌ಗಿರಿಯನ್ನು ಶ್ಲಾಘಿಸಿ ಅವಾರ್ಡ್‌ ನೀಡಿದ ಬಿಜೆಪಿ!

ಉಬರ್‌ ಚಾಲಕನ ನೈತಿಕ ಪೊಲೀಸ್‌ಗಿರಿಯನ್ನು ಶ್ಲಾಘಿಸಿ ಅವಾರ್ಡ್‌ ನೀಡಿದ ಬಿಜೆಪಿ!

- Advertisement -
- Advertisement -

ಮುಂಬೈ ಘಟಕದ ಬಿಜೆಪಿ ಅಧ್ಯಕ್ಷ ಮಂಗಲ್ ಪ್ರಭಾತ್ ಲೋಧಾ ಅವರು ಫೆಬ್ರವರಿ 5 ರ ಬುಧವಾರದಂದು  ಪ್ರಯಾಣಿಕ, ಕವಿ ಮತ್ತು ಸಿಎಎ ವಿರೋಧಿ ಪ್ರತಿಭಟನಾಕಾರರನ್ನು ಪೊಲೀಸ್ ಠಾಣೆಗೆ ಕರೆದೊಯ್ದ ಉಬರ್ ಚಾಲಕನನ್ನು ರೋಹಿತ್‌ ಸಿಂಗ್‌ನನ್ನು ಸನ್ಮಾನಿಸಿದ್ದಾರೆ ಎಂದು ಎಎನ್ಐ ವರದಿ ಮಾಡಿದೆ.

‘ಅಲರ್ಟ್‌ ಸಿಟಿಜನ್‌ ಅವಾರ್ಡ್‌’ ಎಂಬ ಭಿತ್ತಿಪತ್ರವನ್ನು ನೀಡಿರುವ ಬಿಜೆಪಿ ಅಧ್ಯಕ್ಷ ಈತನು ಒಳ್ಳೆಯ ಕೆಲಸ ಮಾಡಿದ್ದಾನೆ ಎಂದು ಹಾಡಿ ಹೊಗಳಿದ್ದಾರೆ.

ಎಎನ್‌ಐ ಜೊತೆ ಮಾತನಾಡಿದ ಚಾಲಕ ರೋಹಿತ್ ಸಿಂಗ್, “ತಾನು ಮಾಡಿದ ಕೆಲಸಕ್ಕೆ ಹೆಮ್ಮೆ ಇದೆ” ಎಂದು ಹೇಳಿದ್ದಾರೆ.

ನಾನು ಇಲ್ಲಿಯವರೆಗೆ 3,000 ಜನರನ್ನು ತಮ್ಮ ಸ್ಥಳಗಳಿಗೆ ತಲುಪಿಸಿದ್ದೇನೆ. ಆತಿನಿಂದ ನಮ್ಮ ದೇಶಕ್ಕೆ ಹಾನಿಯಾಗಲಿದೆ ಎಂದು ನಾನು ಭಾವಿಸಿದ್ದರಿಂದ ಹಾಗೆ ಮಾಡಿದೆ. ನಾನು ಯಾರನ್ನಾದರೂ ಪೊಲೀಸ್ ಠಾಣೆಗೆ ಕರೆದೊಯ್ಯುತ್ತಿರುವುದು ಇದೇ ಮೊದಲು” ಎಂದು ಅವರು ಹೇಳಿದ್ದಾರೆ.

ರೋಹಿತ್ ಸಿಂಗ್ ಅವರು ಈಗಾಗಲೇ ಉಬರ್‌ಗೆ ತಮ್ಮ ಹೇಳಿಕೆಯನ್ನು ನೀಡಿದ್ದಾರೆ. ಕ್ಯಾಬ್ ಅಗ್ರಿಗೇಟರ್ ಉಬರ್‌ ಅವರನ್ನು ಸುಮಾರು 48 ರಿಂದ 72 ಗಂಟೆಗಳ ಕಾಲ ತಾತ್ಕಾಲಿಕವಾಗಿ ಅಮಾನತುಗೊಳಿಸಿ ತನಿಖೆ ನಡೆಸುತ್ತಿದೆ ಎಂದು ಹೇಳಿಕೊಂಡಿದೆ. ಆದರೆ ಚಾಲಕ ರೋಹಿತ್‌ ಸಿಂಗ್‌ ತಾನು ಆನ್‌ಲೈನ್‌ಗೆ ಹಿಂತಿರುಗಲಿದ್ದೇನೆ ಎಂದು ಹೇಳಿದ್ದಾರೆ.

ಬುಧವಾರದಂದು ಸರ್ಕಾರ್‌ ಎಂಬ ಕವಿ ಮತ್ತು ಸಾಮಾಜಿಕ ಕಾರ್ಯಕರ್ತ ಬುಧವಾರ ರಾತ್ರಿ 10:30ರ ಸುಮಾರಿಗೆ ಜುಹುನಿಂದ ಕುರ್ಲಾಕ್ಕೆ ಉಬರ್ ಕ್ಯಾಬ್ ತೆಗೆದುಕೊಂಡಿದ್ದಾರೆ. ಪ್ರಯಾಣದ ಸಮಯದಲ್ಲಿ ಅವರು ತಮ್ಮ ಸ್ನೇಹಿತರೊಂದಿಗೆ (ಮೊಬೈಲ್ ಫೋನ್‌ನಲ್ಲಿ) ದೆಹಲಿಯ ಶಾಹೀನ್ ಬಾಗ್ ಪ್ರತಿಭಟನೆಯಲ್ಲಿ “ಲಾಲ್ ಸಲಾಮ್” ಘೋಷಣೆಯು ಜನರಿಗೆ ಹೆಚ್ಚು ಒಪ್ಪಿತವಾಗಿಲ್ಲ ಎಂಬ ವಿಷಯದ ಕುರಿತು ಚರ್ಚಿಸುತ್ತಿದ್ದರು.

ಇದನ್ನು ಕೇಳುತ್ತಿದ್ದ ಚಾಲಕ, ಸರ್ಕಾರ್‌ಗೆ ತಾನು ಎಟಿಎಂನಿಂದ ಹಣವನ್ನು ತೆಗೆದುಕೊಳ್ಳುತ್ತೇನೆ ಎಂದು ಕಾರು ನಿಲ್ಲಿಸಿದ್ದಾರೆ. ಆದರೆ ಚಾಲಕ ಇಬ್ಬರು ಪೊಲೀಸರೊಂದಿಗೆ ಹಿಂತಿರುಗಿದ್ದಾನೆ. ಪೊಲೀಸರು ಸರ್ಕಾರ್ ಅವರನ್ನು “ದಫ್ಲಿ” (ತಾಳವಾದ್ಯ) ಏಕೆ ಸಾಗಿಸುತ್ತಿದ್ದೀರಿ ಎಂದು ಕೇಳಿದರು ಮತ್ತು ಅವರ ವಿಳಾಸವನ್ನೂ ಕೇಳಿದ್ದಾರೆ.

ಸರ್ಕಾರ್ ಅವರು ಜೈಪುರದವರು ಮತ್ತು ಸಿಎಎ ವಿರೋಧಿ “ಮುಂಬೈ ಬಾಗ್” ಪ್ರತಿಭಟನೆಗೆ ಭೇಟಿ ನೀಡಿದ್ದರು ಎಂದು ಹೇಳಿದರು. ಅವರು ಪ್ರತಿಭಟನೆಯಲ್ಲಿ ಹಾಡು ಮತ್ತು ಘೋಷಣೆ ಕೂಗಲು ಅವರ ವಾದ್ಯವನ್ನು ಹೊತ್ತೊಯ್ಯುತ್ತಿದ್ದರು ಎಂದು ಅವರು ಹೇಳಿದ್ದಾರೆ..

ಇದನ್ನೂ ಓದಿ: ಉಬರ್‌ ಚಾಲಕನ ನೈತಿಕ ಪೊಲೀಸ್‌ಗಿರಿ : ಸಿಎಎ ಪ್ರತಿಭಟನಾಕಾರ ಮುಂಬೈ ಪೊಲೀಸ್‌ ವಶಕ್ಕೆ

ಹಲವು ಸುತ್ತಿನ ವಿಚಾರಣೆಯ ನಂತರ ಮುಂಜಾನೆ 1 ಗಂಟೆ ಸುಮಾರಿಗೆ ಮತ್ತೊಬ್ಬ ಕಾರ್ಯಕರ್ತ ಎಸ್ ಗೋಹಿಲ್ ಪೊಲೀಸ್ ಠಾಣೆಗೆ ಬಂದ ನಂತರ ಸರ್ಕಾರ್ ಅವರಿಗೆ ಅಲ್ಲಿಂದ ಹೋಗಲು ಅನುಮತಿ ನೀಡಲಾಯಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಅಕ್ರಮಗಳ ವಿರುದ್ಧ ಜನಪರ ಒಕ್ಕೂಟದ ಸಮರ: ಸೆ.22ರಿಂದ ‘ಪರಿಶೋಧನೆ ಹಾಗೂ ಪ್ರತಿರೋಧ ಪ್ರವಾಸ’

ಎಸ್‌ಐಆರ್ (ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ) ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ಬಯಲಿಗೆ ತರಲು, ಸಂತ್ರಸ್ತರನ್ನು ನೇರವಾಗಿ ಭೇಟಿಯಾಗಿ ಸಾಕ್ಷ್ಯಗಳನ್ನು ಒಟ್ಟುಗೂಡಿಸುವ ಉದ್ದೇಶದಿಂದ ಸೆಪ್ಟೆಂಬರ್ 22ರಿಂದ 30ರವರೆಗೆ ಎಸ್‌ಐಆರ್ ವಿರೋಧಿ ಜನಪರ ಸಂಘಟನೆಗಳು...

ಮುಂಬೈನಲ್ಲಿ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ತಡೆ ಆರೋಪ: ಪೊಲೀಸ್ ಕಣ್ಗಾವಲು, ಅಭಿವ್ಯಕ್ತಿ ಸ್ವಾತಂತ್ರ್ಯದ ಬಗ್ಗೆ ಕಳವಳ

ಮುಂಬೈ: ಜೈಲಿನಲ್ಲಿರುವ ವಿದ್ಯಾರ್ಥಿ ಹೋರಾಟಗಾರ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಸೇರಿದಂತೆ ರಾಜಕೀಯ ಕೈದಿಗಳೊಂದಿಗೆ ಒಗ್ಗಟ್ಟು ವ್ಯಕ್ತಪಡಿಸುವ ಉದ್ದೇಶದಿಂದ ಆಯೋಜಿಸಲಾಗಿದ್ದ ಖಾಸಗಿ ಸಾಕ್ಷ್ಯಚಿತ್ರ ಪ್ರದರ್ಶನವನ್ನು ರದ್ದುಗೊಳಿಸುವಂತೆ ಮುಂಬೈ ಪೊಲೀಸರು ಪ್ರದರ್ಶನಕ್ಕೆ ಸ್ಥಳ ನೀಡಿದ್ದ...

ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಮತ್ತು ಖಾಸಗಿ ಬಸ್ ನಡುವೆ ಢಿಕ್ಕಿ: ಆಸ್ಪತ್ರೆಗೆ ದಾಖಲು

ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಬಿ. ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತಕ್ಕೀಡಾಗಿದ್ದು, ಘಟನೆಯಲ್ಲಿ ಮಾಜಿ ಸಚಿವರು ಹಾಗೂ ಅವರ ಕಾರು ಚಾಲಕ ಗಾಯಗೊಂಡಿದ್ದಾರೆ. ಕಾರ್ಕಳ-ಮೂಡುಬಿದ್ರೆ ಹೆದ್ದಾರಿಯ ಸಾಣೂರು...

ಮೋದಿ ಅಣಕ: ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ವಿರುದ್ಧ ಬಿಜೆಪಿ ಕಿಡಿ

ಮಧ್ಯಪ್ರದೇಶದ ಇಂದೋರ್‌ನಲ್ಲಿ ನಡೆದ ‘ಛಾತ್ರೋಂ ಕಿ ಗೂಂಜ್’ ಕಾರ್ಯಕ್ರಮದಲ್ಲಿ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ವೇದಿಕೆ ಹಂಚಿಕೊಂಡ ಸ್ಟ್ಯಾಂಡಪ್ ಕಾಮೆಡಿಯನ್‌ ಒಬ್ಬರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಣಕಿಸಿರುವ ವಿಚಾರ...

ಪ.ಬಂಗಾಳ: ನಂದಿಗ್ರಾಮದಲ್ಲಿ ಕಾಂಗ್ರೆಸ್‌ಗೆ ಮಮತಾ ಬೆಂಬಲ: ಬಂಗಾಳದ ವಿರೋಧ ಪಕ್ಷಗಳ ರಾಜಕೀಯದಲ್ಲಿ ಮರುಹೊಂದಾಣಿಕೆಯ ಸುಳಿವು

ಕೋಲ್ಕತ್ತಾ: ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ದಿನದಿಂದ ದಿನಕ್ಕೆ ಹೊಸ ರಾಜಕೀಯ ತಿರುವುಗಳನ್ನು ಪಡೆದುಕೊಳ್ಳುತ್ತಿದ್ದು, ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಬಣ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ ಅವರಿಗೆ...

SIR ಎಂದರೆ ‘ಶಾ ಇನ್ಸ್ಟಿಗೇಟೆಡ್ ರಿಮೂವಲ್ʼ : ಕಾಂಗ್ರೆಸ್

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯಲ್ಲಿ (ಎಸ್‌ಐಆರ್) ದೊಡ್ಡ ಪ್ರಮಾಣದಲ್ಲಿ ಮತದಾರರ ಹೆಸರುಗಳನ್ನು ಕೈಬಿಡುತ್ತಿರುವ ವಿಷಯವನ್ನು ಪ್ರಸ್ತಾಪಿಸಿರುವ ಕಾಂಗ್ರೆಸ್, ಈ ಎಸ್‌ಐಆರ್ ಪ್ರಕ್ರಿಯೆಯು ವಾಸ್ತವವಾಗಿ ಮತದಾರರ ಬೃಹತ್ "ಶಾ...

ಟಿ. ನರಸೀಪುರ ಗಣೇಶೋತ್ಸವದಲ್ಲಿ ಪ್ರಚೋದನಕಾರಿ ಭಾಷಣ: ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್ ದಾಖಲು

ಗಣೇಶೋತ್ಸವ ಮೆರವಣಿಗೆಯ ವೇಳೆ ಪ್ರಚೋದನಕಾರಿ ಭಾಷಣ ಮಾಡಿದ ಮತ್ತು ಸ್ಥಳದಲ್ಲಿದ್ದ ಪೊಲೀಸ್ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ ಗಂಭೀರ ಆರೋಪದ ಮೇಲೆ ಬಿಜೆಪಿ ಮುಖಂಡ ಹಾಗೂ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್...

ದೆಹಲಿ ವಿವಿ ಚುನಾವಣಾ ಫಲಿತಾಂಶ: ABVPಯನ್ನು ಸೋಲಿಸಬಹುದಾಗಿದ್ದ ಚುನಾವಣೆಯಲ್ಲಿ ಕಾಂಗ್ರೆಸ್ ಮಾಡಿಕೊಂಡ ಎಡವಟ್ಟು

ಜಂತರ್ ಮಂತರ್‌ನಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಬೀದಿಗಿಳಿದು ನಡೆಸಿದ ಧರಣಿ ಹಾಗೂ ಇನ್‌ಸ್ಟಾಗ್ರಾಮ್‌ ನಂತಹ ಡಿಜಿಟಲ್ ವೇದಿಕೆಗಳಲ್ಲಿ ಹರಿದಾಡಿದ ರೀಲ್ಸ್‌ಗಳು ಬಿಜೆಪಿಯ ಜನಪ್ರಿಯತೆ ಕುಸಿದಿರುವುದನ್ನು ಬಿಂಬಿಸಿದ್ದವು. ಕ್ಯಾಂಪಸ್‌ಗಳಲ್ಲಿ ಬಿಜೆಪಿ ಮತ್ತು ಎಬಿವಿಪಿ ಕಾರ್ಯಕರ್ತರ ದಬ್ಬಾಳಿಕೆ,...

ಐಐಟಿ ಬಾಂಬೆ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಪ್ರಕರಣ: ಜಾತಿ ನಿಂದನೆ, ಬೆದರಿಕೆ ಆರೋಪ: ಪ್ರಾಧ್ಯಾಪಕರ ವಿರುದ್ಧವೂ ಎಫ್‌ಐಆರ್

ಮುಂಬೈ: ಐಐಟಿ ಬಾಂಬೆ ಕ್ಯಾಂಪಸ್‌ನಲ್ಲಿ ಎರಡನೇ ವರ್ಷದ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಇದೀಗ ಗಂಭೀರ ತಿರುವು ಪಡೆದುಕೊಂಡಿದ್ದು, ವಿದ್ಯಾರ್ಥಿಯ ಕುಟುಂಬ ಮಾಡಿರುವ ಜಾತಿ ಆಧಾರಿತ ನಿಂದನೆ, ಕಿರುಕುಳ ಮತ್ತು...

SIR : ಕೇಜ್ರಿವಾಲ್, ಧನಕರ್, ಅಡ್ವಾಣಿಗೂ ಬಂತು ಚುನಾವಣಾ ಆಯೋಗದ ನೋಟಿಸ್

ದೇಶದ ರಾಜಧಾನಿ ದೆಹಲಿಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಭಾರೀ ವಿವಾದಕ್ಕೆ ಹಾಗೂ ಸಾರ್ವಜನಿಕ ಆತಂಕಕ್ಕೆ ಕಾರಣವಾಗಿದೆ. ದೆಹಲಿಯ ಒಟ್ಟು ಮತದಾರರ ಪೈಕಿ ಬರೋಬ್ಬರಿ ಶೇಕಡಾ 50ರಷ್ಟು...