Homeಮುಖಪುಟಉಬರ್‌ ಚಾಲಕನ ನೈತಿಕ ಪೊಲೀಸ್‌ಗಿರಿಯನ್ನು ಶ್ಲಾಘಿಸಿ ಅವಾರ್ಡ್‌ ನೀಡಿದ ಬಿಜೆಪಿ!

ಉಬರ್‌ ಚಾಲಕನ ನೈತಿಕ ಪೊಲೀಸ್‌ಗಿರಿಯನ್ನು ಶ್ಲಾಘಿಸಿ ಅವಾರ್ಡ್‌ ನೀಡಿದ ಬಿಜೆಪಿ!

- Advertisement -
- Advertisement -

ಮುಂಬೈ ಘಟಕದ ಬಿಜೆಪಿ ಅಧ್ಯಕ್ಷ ಮಂಗಲ್ ಪ್ರಭಾತ್ ಲೋಧಾ ಅವರು ಫೆಬ್ರವರಿ 5 ರ ಬುಧವಾರದಂದು  ಪ್ರಯಾಣಿಕ, ಕವಿ ಮತ್ತು ಸಿಎಎ ವಿರೋಧಿ ಪ್ರತಿಭಟನಾಕಾರರನ್ನು ಪೊಲೀಸ್ ಠಾಣೆಗೆ ಕರೆದೊಯ್ದ ಉಬರ್ ಚಾಲಕನನ್ನು ರೋಹಿತ್‌ ಸಿಂಗ್‌ನನ್ನು ಸನ್ಮಾನಿಸಿದ್ದಾರೆ ಎಂದು ಎಎನ್ಐ ವರದಿ ಮಾಡಿದೆ.

‘ಅಲರ್ಟ್‌ ಸಿಟಿಜನ್‌ ಅವಾರ್ಡ್‌’ ಎಂಬ ಭಿತ್ತಿಪತ್ರವನ್ನು ನೀಡಿರುವ ಬಿಜೆಪಿ ಅಧ್ಯಕ್ಷ ಈತನು ಒಳ್ಳೆಯ ಕೆಲಸ ಮಾಡಿದ್ದಾನೆ ಎಂದು ಹಾಡಿ ಹೊಗಳಿದ್ದಾರೆ.

ಎಎನ್‌ಐ ಜೊತೆ ಮಾತನಾಡಿದ ಚಾಲಕ ರೋಹಿತ್ ಸಿಂಗ್, “ತಾನು ಮಾಡಿದ ಕೆಲಸಕ್ಕೆ ಹೆಮ್ಮೆ ಇದೆ” ಎಂದು ಹೇಳಿದ್ದಾರೆ.

ನಾನು ಇಲ್ಲಿಯವರೆಗೆ 3,000 ಜನರನ್ನು ತಮ್ಮ ಸ್ಥಳಗಳಿಗೆ ತಲುಪಿಸಿದ್ದೇನೆ. ಆತಿನಿಂದ ನಮ್ಮ ದೇಶಕ್ಕೆ ಹಾನಿಯಾಗಲಿದೆ ಎಂದು ನಾನು ಭಾವಿಸಿದ್ದರಿಂದ ಹಾಗೆ ಮಾಡಿದೆ. ನಾನು ಯಾರನ್ನಾದರೂ ಪೊಲೀಸ್ ಠಾಣೆಗೆ ಕರೆದೊಯ್ಯುತ್ತಿರುವುದು ಇದೇ ಮೊದಲು” ಎಂದು ಅವರು ಹೇಳಿದ್ದಾರೆ.

ರೋಹಿತ್ ಸಿಂಗ್ ಅವರು ಈಗಾಗಲೇ ಉಬರ್‌ಗೆ ತಮ್ಮ ಹೇಳಿಕೆಯನ್ನು ನೀಡಿದ್ದಾರೆ. ಕ್ಯಾಬ್ ಅಗ್ರಿಗೇಟರ್ ಉಬರ್‌ ಅವರನ್ನು ಸುಮಾರು 48 ರಿಂದ 72 ಗಂಟೆಗಳ ಕಾಲ ತಾತ್ಕಾಲಿಕವಾಗಿ ಅಮಾನತುಗೊಳಿಸಿ ತನಿಖೆ ನಡೆಸುತ್ತಿದೆ ಎಂದು ಹೇಳಿಕೊಂಡಿದೆ. ಆದರೆ ಚಾಲಕ ರೋಹಿತ್‌ ಸಿಂಗ್‌ ತಾನು ಆನ್‌ಲೈನ್‌ಗೆ ಹಿಂತಿರುಗಲಿದ್ದೇನೆ ಎಂದು ಹೇಳಿದ್ದಾರೆ.

ಬುಧವಾರದಂದು ಸರ್ಕಾರ್‌ ಎಂಬ ಕವಿ ಮತ್ತು ಸಾಮಾಜಿಕ ಕಾರ್ಯಕರ್ತ ಬುಧವಾರ ರಾತ್ರಿ 10:30ರ ಸುಮಾರಿಗೆ ಜುಹುನಿಂದ ಕುರ್ಲಾಕ್ಕೆ ಉಬರ್ ಕ್ಯಾಬ್ ತೆಗೆದುಕೊಂಡಿದ್ದಾರೆ. ಪ್ರಯಾಣದ ಸಮಯದಲ್ಲಿ ಅವರು ತಮ್ಮ ಸ್ನೇಹಿತರೊಂದಿಗೆ (ಮೊಬೈಲ್ ಫೋನ್‌ನಲ್ಲಿ) ದೆಹಲಿಯ ಶಾಹೀನ್ ಬಾಗ್ ಪ್ರತಿಭಟನೆಯಲ್ಲಿ “ಲಾಲ್ ಸಲಾಮ್” ಘೋಷಣೆಯು ಜನರಿಗೆ ಹೆಚ್ಚು ಒಪ್ಪಿತವಾಗಿಲ್ಲ ಎಂಬ ವಿಷಯದ ಕುರಿತು ಚರ್ಚಿಸುತ್ತಿದ್ದರು.

ಇದನ್ನು ಕೇಳುತ್ತಿದ್ದ ಚಾಲಕ, ಸರ್ಕಾರ್‌ಗೆ ತಾನು ಎಟಿಎಂನಿಂದ ಹಣವನ್ನು ತೆಗೆದುಕೊಳ್ಳುತ್ತೇನೆ ಎಂದು ಕಾರು ನಿಲ್ಲಿಸಿದ್ದಾರೆ. ಆದರೆ ಚಾಲಕ ಇಬ್ಬರು ಪೊಲೀಸರೊಂದಿಗೆ ಹಿಂತಿರುಗಿದ್ದಾನೆ. ಪೊಲೀಸರು ಸರ್ಕಾರ್ ಅವರನ್ನು “ದಫ್ಲಿ” (ತಾಳವಾದ್ಯ) ಏಕೆ ಸಾಗಿಸುತ್ತಿದ್ದೀರಿ ಎಂದು ಕೇಳಿದರು ಮತ್ತು ಅವರ ವಿಳಾಸವನ್ನೂ ಕೇಳಿದ್ದಾರೆ.

ಸರ್ಕಾರ್ ಅವರು ಜೈಪುರದವರು ಮತ್ತು ಸಿಎಎ ವಿರೋಧಿ “ಮುಂಬೈ ಬಾಗ್” ಪ್ರತಿಭಟನೆಗೆ ಭೇಟಿ ನೀಡಿದ್ದರು ಎಂದು ಹೇಳಿದರು. ಅವರು ಪ್ರತಿಭಟನೆಯಲ್ಲಿ ಹಾಡು ಮತ್ತು ಘೋಷಣೆ ಕೂಗಲು ಅವರ ವಾದ್ಯವನ್ನು ಹೊತ್ತೊಯ್ಯುತ್ತಿದ್ದರು ಎಂದು ಅವರು ಹೇಳಿದ್ದಾರೆ..

ಇದನ್ನೂ ಓದಿ: ಉಬರ್‌ ಚಾಲಕನ ನೈತಿಕ ಪೊಲೀಸ್‌ಗಿರಿ : ಸಿಎಎ ಪ್ರತಿಭಟನಾಕಾರ ಮುಂಬೈ ಪೊಲೀಸ್‌ ವಶಕ್ಕೆ

ಹಲವು ಸುತ್ತಿನ ವಿಚಾರಣೆಯ ನಂತರ ಮುಂಜಾನೆ 1 ಗಂಟೆ ಸುಮಾರಿಗೆ ಮತ್ತೊಬ್ಬ ಕಾರ್ಯಕರ್ತ ಎಸ್ ಗೋಹಿಲ್ ಪೊಲೀಸ್ ಠಾಣೆಗೆ ಬಂದ ನಂತರ ಸರ್ಕಾರ್ ಅವರಿಗೆ ಅಲ್ಲಿಂದ ಹೋಗಲು ಅನುಮತಿ ನೀಡಲಾಯಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...