Homeರಾಷ್ಟ್ರೀಯಜಹಾಂಗೀರ್‌ಪುರಿ ಹಿಂಸಾಚಾರದಲ್ಲಿ ಬಿಜೆಪಿ ಬೆಂಬಲಿತ ಸಂಘಟನೆ ವಿಎಚ್‌ಪಿ, ಬಜರಂಗದಳ ಭಾಗಿ ಎಂದ ದೆಹಲಿ ಪೊಲೀಸರು; ಕೆಲವೇ...

ಜಹಾಂಗೀರ್‌ಪುರಿ ಹಿಂಸಾಚಾರದಲ್ಲಿ ಬಿಜೆಪಿ ಬೆಂಬಲಿತ ಸಂಘಟನೆ ವಿಎಚ್‌ಪಿ, ಬಜರಂಗದಳ ಭಾಗಿ ಎಂದ ದೆಹಲಿ ಪೊಲೀಸರು; ಕೆಲವೇ ಗಂಟೆಗಳಲ್ಲಿ ಹೇಳಿಕೆ ವಾಪಾಸ್!

- Advertisement -
- Advertisement -

ದೆಹಲಿಯ ಜಹಾಂಗೀರ್‌ಪುರಿಯಲ್ಲಿ ನಡೆದ ಹಿಂಸಾಚಾರದಲ್ಲಿ ಬಿಜೆಪಿ ಬೆಂಬಲಿತ ಸಂಘಟನೆಗಳಾದ ಬಜರಂಗದಳ ಮತ್ತು ವಿಎಚ್‌‌ಪಿ ಭಾಗಿಯಾಗಿದ್ದಾರೆ ಎಂದು ರಾಜ್ಯ ಪೊಲೀಸರು ಸೋಮವಾರ ಮಾಧ್ಯಮಗಳೊಂದಿಗೆ ಅಧೀಕೃತವಾಗಿ ಹೇಳಿಕೆ ನೀಡಿದ್ದರು. ಆದರೆ ಈ ಹೇಳಿಕೆಯನ್ನು ಕೆಲವೇ ಗಂಟೆಗಳಲ್ಲಿ ಅವರು ಹಿಂಪಡೆದಿದ್ದಾರೆ ಎಂದು DH ವರದಿ ಮಾಡಿದೆ.

ಹನುಮ ಜಯಂತಿ ಮೆರವಣಿಗೆಯ ನಂತರ ವಾಯುವ್ಯ ದೆಹಲಿಯ ಜಹಾಂಗೀರ್‌‌ಪುರಿಯಲ್ಲಿ ಶನಿವಾರ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಪೊಲೀಸರು ಎರಡು ಪ್ರಕರಣವನ್ನು ದಾಖಲಿಸಿದ್ದರು. ಜೊತೆಗೆ ಅನುಮತಿ ಪಡೆಯದೆ ಮೆರವಣಿಗೆ ನಡೆಸಿದ್ದಕ್ಕೆ ಮೂರನೇ ಪ್ರಕರಣವನ್ನು ದಾಖಲಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಆರಂಭದಲ್ಲಿ, ಅನುಮತಿಯನ್ನು ಪಡೆಯದೆ ಮೆರವಣಿಗೆ ಮಾಡಿದ್ದಕ್ಕಾಗಿ ಮೆರವಣಿಗೆಯ ‘ಆಯೋಜಕರ’ ವಿರುದ್ಧ ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 188 (ಸಾರ್ವಜನಿಕ ಸೇವಕನ ಆದೇಶಗಳನ್ನು ಉಲ್ಲಂಘಿಸುವುದು) ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಹೇಳಿಕೆಯಲ್ಲಿ ಸಂಘಟಕರನ್ನು ಬಿಜಪಿ ಬೆಂಬಲಿತ ಸಂಘಟನೆಗಳಾದ ವಿಎಚ್‌ಪಿ ಮತ್ತು ಬಜರಂಗದಳ ಎಂದು ಗುರುತಿಸಿತ್ತು.

ಇದನ್ನೂ ಓದಿ: ದೆಹಲಿ ಹನುಮ ಜಯಂತಿ ಘರ್ಷಣೆ: ಎರಡೂ ಸಮುದಾಯಗಳ 23 ಆರೋಪಿಗಳ ಬಂಧನ

ಪೊಲೀಸ್‌ ಹೇಳಿಕೆಯಲ್ಲಿ, “ದೆಹಲಿ ಪ್ರಾಂತ, ಮುಖರ್ಜಿ ನಗರ ಜಿಲ್ಲಾ, ಝಾಂಡೇವಾಲಾದ ವಿಎಚ್‌ಪಿ ಮತ್ತು ಬಜರಂಗದಳದವರು ಯಾವುದೇ ಅನುಮತಿಯಿಲ್ಲದೆ ಮೆರವಣಿಗೆ ಆಯೋಜಿಸಿದ್ದರು” ಎಂದು ಉಲ್ಲೇಖಿಸಿದ್ದಾರೆ. “ವಿಎಚ್‌ಪಿ ಜಿಲ್ಲಾ ಸೇವಾ ಪ್ರಮುಖ್‌‌ ಎಂಬ ಒಬ್ಬ ಆರೋಪಿಯನ್ನು ಬಂಧಿಸಲಾಗಿದೆ” ಎಂದೂ ಅದು ಹೇಳಿಕೆಯಲ್ಲಿ ತಿಳಿಸಿತ್ತು.

ಆದರೆ, ಕೆಲವೇ ಗಂಟೆಗಳಲ್ಲಿ, ಪೋಲೀಸರು ಹೇಳಿಕೆಯನ್ನು ಪರಿಷ್ಕರಿಸಿದ್ದು, ಸಂಘಟನೆಗಳು ಮತ್ತು ಬಂಧನದ ಬಗ್ಗೆಗಿನ ಉಲ್ಲೇಖವನ್ನು ಕೈಬಿಟ್ಟಿದ್ದಾರೆ. “ಯಾವುದೇ ಅನುಮತಿಯಿಲ್ಲದೆ (16/04/22 ರಂದು ಸಂಜೆ ಪಿಎಸ್ ಜಹಾಂಗೀರ್ಪುರಿ ಪ್ರದೇಶದಲ್ಲಿ) ಮೆರವಣಿಗೆಯನ್ನು ನಡೆಸಿದ್ದಕ್ಕಾಗಿ ಸಂಘಟಕರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ” ಎಂದು ಹೊಸ ಹೇಳಿಕೆ ತಿಳಿಸಿದೆ. “ಒಬ್ಬ ಆರೋಪಿ ತನಿಖೆಗೆ ಸೇರಿಕೊಂಡಿದ್ದಾನೆ” ಎಂದು ಅದು ಹೇಳಿದೆ.

ಹೆಚ್ಚಿನ ತನಿಖೆ ಪ್ರಗತಿಯಲ್ಲಿದೆ ಎಂದು ಪರಿಷ್ಕೃತ ಹೇಳಿಕೆ ತಿಳಿಸಿದೆ. ಏಪ್ರಿಲ್ 16 ರ ಬೆಳಿಗ್ಗೆ ಮತ್ತು ಮಧ್ಯಾಹ್ನ ಜಹಾಂಗೀರ್‌‌ಪುರಿಯಲ್ಲಿ ಸರಿಯಾದ ಅನುಮತಿಯೊಂದಿಗೆ ನಡೆಸಲಾದ ಇತರ ಎರಡು ಮೆರವಣಿಗೆಗಳನ್ನು ಸಹ ಇದು ಉಲ್ಲೇಖಿಸಿದೆ.

ಇದನ್ನೂ ಓದಿ: ಕೇಜ್ರಿವಾಲ್‌ ಅವರ ನಕಲಿ ವಿಡಿಯೋ ಪ್ರಸಾರ: ದೆಹಲಿ ಬಿಜೆಪಿ ನಾಯಕನ ಮನೆಯಲ್ಲಿ ಪಂಜಾಬ್ ಪೊಲೀಸರು!

ಶನಿವಾರದಂದು ಕಟ್ಟುನಿಟ್ಟಾದ ಸೆಕ್ಷನ್ 307 (ಕೊಲೆಗೆ ಯತ್ನ), 120 ಬಿ (ಕ್ರಿಮಿನಲ್ ಪಿತೂರಿ), 147 (ಗಲಭೆ) ಮತ್ತು ಇತರ ಸಂಬಂಧಿತ ಭಾರತೀಯ ದಂಡ ಸಂಹಿತೆ ಮತ್ತು ಶಸ್ತ್ರಾಸ್ತ್ರ ಕಾಯ್ದೆಯ ಸೆಕ್ಷನ್‌ಗಳ ಅಡಿಯಲ್ಲಿ ದಾಖಲಿಸಲಾದ ಮೊದಲ ಪ್ರಕರಣದಲ್ಲಿ 21 ಜನರನ್ನು ಬಂಧಿಸಲಾಗಿದೆ. ಹಿಂಸಾಚಾರದಲ್ಲಿ ಭಾಗಿಯಾಗಿದ್ದಕ್ಕಾಗಿ ಇಬ್ಬರು ಅಪ್ರಾಪ್ತರನ್ನು ಈ ಪ್ರಕರಣದಲ್ಲಿ ಬಂಧಿಸಲಾಗಿದೆ. ಘಟನೆಯಲ್ಲಿ ಒಂಬತ್ತು ಜನರು ಗಾಯಗೊಂಡಿದ್ದಾರೆ.

ಅನುಮತಿಯಿಲ್ಲದೆ ಈ ಪ್ರದೇಶದಲ್ಲಿ ಮೆರವಣಿಗೆ ಸಾಗಲು ಹೇಗೆ ಸಾಧ್ಯ ಎಂಬುದಕ್ಕೆ ಪೊಲೀಸರು ಈಗ ಉತ್ತರಿಸಬೇಕಾಗಿದೆ ಎಂದು ಸ್ಥಳೀಯರು ಪ್ರಶ್ನಿಸಿದ್ದಾರೆ. ಅದರಲ್ಲೂ ಕನಿಷ್ಠ ಎರಡು ಪೋಲೀಸ್ ಜೀಪ್‌ಗಳು ಮೆರವಣಿಗೆಯ ಜೊತೆಯಲ್ಲಿರುತ್ತವೆ, ಒಟ್ಟು ಮೂರು ಮೆರವಣಿಗೆಗಳು ನಡೆದವು, ಮೂರನೆಯದ್ದು, ವಿಎಚ್‌ಪಿ ಮತ್ತು ಬಜರಂಗ ದಳದ ಮೆರವಣಿಗೆಯಾಗಿದೆ ಎಂದು ಅವರು ಹೇಳಿದ್ದಾರೆ.

ಮೆರವಣಿಗೆಯಲ್ಲಿದ್ದವರು ಕತ್ತಿ ಮತ್ತು ಬೇಸ್‌ಬಾಲ್ ಬ್ಯಾಟ್‌ಗಳನ್ನು ಹಿಡಿದುಕೊಂಡಿರುವುದನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್ ಮಾಡಲಾಗುತ್ತಿರುವ ವೀಡಿಯೊಗಳಲ್ಲಿ ಬಹಿರಂಗವಾಗಿದೆ. ಕೆಲವರು ನಾಡ ಪಿಸ್ತೂಲ್‌ಗಳನ್ನು ಕೈಯ್ಯಲ್ಲಿ ಹಿಡಿದುಕೊಂಡಿದ್ದರು ಎಂದು ಸ್ಥಳೀಯರು ಹೇಳಿದ್ದಾರೆ ಎಂದು ಎಡಪಕ್ಷಗಳ ಸತ್ಯಶೋಧನಾ ತಂಡ ಸೋಮವಾರ ಹೇಳಿದೆ. “ಇದರ ನಂತರ ಅಲ್ಪಸಂಖ್ಯಾತ ಸಮುದಾಯದ ಕೆಲವು ವ್ಯಕ್ತಿಗಳು ಶಸ್ತ್ರಾಸ್ತ್ರಗಳನ್ನು ತಂದಿದ್ದಾರೆ” ಎಂದು ತಂಡವು ಹೇಳಿದೆ.

ಇದನ್ನೂ ಓದಿ: ಎಎಪಿ ದಿಗ್ವಿಜಯಕ್ಕೆ ಹೆದರಿ, ದೆಹಲಿ ಮುನ್ಸಿಪಾಲ್‌ ಚುನಾವಣೆ ಮುಂದೂಡಲು ಬಯಸುತ್ತಿದೆಯೇ ಬಿಜೆಪಿ?

ಮೂರನೇ ಮೆರವಣಿಗೆಯ ಸದಸ್ಯರು ಪ್ರಾರ್ಥನೆಯ ಸಮಯದಲ್ಲಿ ಮಸೀದಿಯ ಮುಂದೆ ಮೆರವಣಿಗೆಯನ್ನು ನಿಲ್ಲಿಸಿ, ಅವರು ನುಡಿಸುತ್ತಿದ್ದ ಸಂಗೀತದ ಪ್ರಮಾಣವನ್ನು ಹೆಚ್ಚಿಸಿದರು ಎಂದು ಸ್ಥಳೀಯರು ಹೇಳಿದ್ದಾರೆ. ಮಸೀದಿಯ ಗೋಡೆಯ ಮೇಲೆ ಧ್ವಜ ಹಾರಿಸುವ ಯತ್ನ ನಡೆದಿದೆ ಎಂದು ಸ್ಥಳೀಯರು ಹೇಳಿದರೆ, ಪೊಲೀಸರು ಇಂತಹ ಯಾವುದೇ ಘಟನೆ ನಡೆದಿಲ್ಲ ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...