Homeರಾಷ್ಟ್ರೀಯಜಹಾಂಗೀರ್‌ಪುರಿ ಹಿಂಸಾಚಾರದಲ್ಲಿ ಬಿಜೆಪಿ ಬೆಂಬಲಿತ ಸಂಘಟನೆ ವಿಎಚ್‌ಪಿ, ಬಜರಂಗದಳ ಭಾಗಿ ಎಂದ ದೆಹಲಿ ಪೊಲೀಸರು; ಕೆಲವೇ...

ಜಹಾಂಗೀರ್‌ಪುರಿ ಹಿಂಸಾಚಾರದಲ್ಲಿ ಬಿಜೆಪಿ ಬೆಂಬಲಿತ ಸಂಘಟನೆ ವಿಎಚ್‌ಪಿ, ಬಜರಂಗದಳ ಭಾಗಿ ಎಂದ ದೆಹಲಿ ಪೊಲೀಸರು; ಕೆಲವೇ ಗಂಟೆಗಳಲ್ಲಿ ಹೇಳಿಕೆ ವಾಪಾಸ್!

- Advertisement -
- Advertisement -

ದೆಹಲಿಯ ಜಹಾಂಗೀರ್‌ಪುರಿಯಲ್ಲಿ ನಡೆದ ಹಿಂಸಾಚಾರದಲ್ಲಿ ಬಿಜೆಪಿ ಬೆಂಬಲಿತ ಸಂಘಟನೆಗಳಾದ ಬಜರಂಗದಳ ಮತ್ತು ವಿಎಚ್‌‌ಪಿ ಭಾಗಿಯಾಗಿದ್ದಾರೆ ಎಂದು ರಾಜ್ಯ ಪೊಲೀಸರು ಸೋಮವಾರ ಮಾಧ್ಯಮಗಳೊಂದಿಗೆ ಅಧೀಕೃತವಾಗಿ ಹೇಳಿಕೆ ನೀಡಿದ್ದರು. ಆದರೆ ಈ ಹೇಳಿಕೆಯನ್ನು ಕೆಲವೇ ಗಂಟೆಗಳಲ್ಲಿ ಅವರು ಹಿಂಪಡೆದಿದ್ದಾರೆ ಎಂದು DH ವರದಿ ಮಾಡಿದೆ.

ಹನುಮ ಜಯಂತಿ ಮೆರವಣಿಗೆಯ ನಂತರ ವಾಯುವ್ಯ ದೆಹಲಿಯ ಜಹಾಂಗೀರ್‌‌ಪುರಿಯಲ್ಲಿ ಶನಿವಾರ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಪೊಲೀಸರು ಎರಡು ಪ್ರಕರಣವನ್ನು ದಾಖಲಿಸಿದ್ದರು. ಜೊತೆಗೆ ಅನುಮತಿ ಪಡೆಯದೆ ಮೆರವಣಿಗೆ ನಡೆಸಿದ್ದಕ್ಕೆ ಮೂರನೇ ಪ್ರಕರಣವನ್ನು ದಾಖಲಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಆರಂಭದಲ್ಲಿ, ಅನುಮತಿಯನ್ನು ಪಡೆಯದೆ ಮೆರವಣಿಗೆ ಮಾಡಿದ್ದಕ್ಕಾಗಿ ಮೆರವಣಿಗೆಯ ‘ಆಯೋಜಕರ’ ವಿರುದ್ಧ ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 188 (ಸಾರ್ವಜನಿಕ ಸೇವಕನ ಆದೇಶಗಳನ್ನು ಉಲ್ಲಂಘಿಸುವುದು) ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಹೇಳಿಕೆಯಲ್ಲಿ ಸಂಘಟಕರನ್ನು ಬಿಜಪಿ ಬೆಂಬಲಿತ ಸಂಘಟನೆಗಳಾದ ವಿಎಚ್‌ಪಿ ಮತ್ತು ಬಜರಂಗದಳ ಎಂದು ಗುರುತಿಸಿತ್ತು.

ಇದನ್ನೂ ಓದಿ: ದೆಹಲಿ ಹನುಮ ಜಯಂತಿ ಘರ್ಷಣೆ: ಎರಡೂ ಸಮುದಾಯಗಳ 23 ಆರೋಪಿಗಳ ಬಂಧನ

ಪೊಲೀಸ್‌ ಹೇಳಿಕೆಯಲ್ಲಿ, “ದೆಹಲಿ ಪ್ರಾಂತ, ಮುಖರ್ಜಿ ನಗರ ಜಿಲ್ಲಾ, ಝಾಂಡೇವಾಲಾದ ವಿಎಚ್‌ಪಿ ಮತ್ತು ಬಜರಂಗದಳದವರು ಯಾವುದೇ ಅನುಮತಿಯಿಲ್ಲದೆ ಮೆರವಣಿಗೆ ಆಯೋಜಿಸಿದ್ದರು” ಎಂದು ಉಲ್ಲೇಖಿಸಿದ್ದಾರೆ. “ವಿಎಚ್‌ಪಿ ಜಿಲ್ಲಾ ಸೇವಾ ಪ್ರಮುಖ್‌‌ ಎಂಬ ಒಬ್ಬ ಆರೋಪಿಯನ್ನು ಬಂಧಿಸಲಾಗಿದೆ” ಎಂದೂ ಅದು ಹೇಳಿಕೆಯಲ್ಲಿ ತಿಳಿಸಿತ್ತು.

ಆದರೆ, ಕೆಲವೇ ಗಂಟೆಗಳಲ್ಲಿ, ಪೋಲೀಸರು ಹೇಳಿಕೆಯನ್ನು ಪರಿಷ್ಕರಿಸಿದ್ದು, ಸಂಘಟನೆಗಳು ಮತ್ತು ಬಂಧನದ ಬಗ್ಗೆಗಿನ ಉಲ್ಲೇಖವನ್ನು ಕೈಬಿಟ್ಟಿದ್ದಾರೆ. “ಯಾವುದೇ ಅನುಮತಿಯಿಲ್ಲದೆ (16/04/22 ರಂದು ಸಂಜೆ ಪಿಎಸ್ ಜಹಾಂಗೀರ್ಪುರಿ ಪ್ರದೇಶದಲ್ಲಿ) ಮೆರವಣಿಗೆಯನ್ನು ನಡೆಸಿದ್ದಕ್ಕಾಗಿ ಸಂಘಟಕರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ” ಎಂದು ಹೊಸ ಹೇಳಿಕೆ ತಿಳಿಸಿದೆ. “ಒಬ್ಬ ಆರೋಪಿ ತನಿಖೆಗೆ ಸೇರಿಕೊಂಡಿದ್ದಾನೆ” ಎಂದು ಅದು ಹೇಳಿದೆ.

ಹೆಚ್ಚಿನ ತನಿಖೆ ಪ್ರಗತಿಯಲ್ಲಿದೆ ಎಂದು ಪರಿಷ್ಕೃತ ಹೇಳಿಕೆ ತಿಳಿಸಿದೆ. ಏಪ್ರಿಲ್ 16 ರ ಬೆಳಿಗ್ಗೆ ಮತ್ತು ಮಧ್ಯಾಹ್ನ ಜಹಾಂಗೀರ್‌‌ಪುರಿಯಲ್ಲಿ ಸರಿಯಾದ ಅನುಮತಿಯೊಂದಿಗೆ ನಡೆಸಲಾದ ಇತರ ಎರಡು ಮೆರವಣಿಗೆಗಳನ್ನು ಸಹ ಇದು ಉಲ್ಲೇಖಿಸಿದೆ.

ಇದನ್ನೂ ಓದಿ: ಕೇಜ್ರಿವಾಲ್‌ ಅವರ ನಕಲಿ ವಿಡಿಯೋ ಪ್ರಸಾರ: ದೆಹಲಿ ಬಿಜೆಪಿ ನಾಯಕನ ಮನೆಯಲ್ಲಿ ಪಂಜಾಬ್ ಪೊಲೀಸರು!

ಶನಿವಾರದಂದು ಕಟ್ಟುನಿಟ್ಟಾದ ಸೆಕ್ಷನ್ 307 (ಕೊಲೆಗೆ ಯತ್ನ), 120 ಬಿ (ಕ್ರಿಮಿನಲ್ ಪಿತೂರಿ), 147 (ಗಲಭೆ) ಮತ್ತು ಇತರ ಸಂಬಂಧಿತ ಭಾರತೀಯ ದಂಡ ಸಂಹಿತೆ ಮತ್ತು ಶಸ್ತ್ರಾಸ್ತ್ರ ಕಾಯ್ದೆಯ ಸೆಕ್ಷನ್‌ಗಳ ಅಡಿಯಲ್ಲಿ ದಾಖಲಿಸಲಾದ ಮೊದಲ ಪ್ರಕರಣದಲ್ಲಿ 21 ಜನರನ್ನು ಬಂಧಿಸಲಾಗಿದೆ. ಹಿಂಸಾಚಾರದಲ್ಲಿ ಭಾಗಿಯಾಗಿದ್ದಕ್ಕಾಗಿ ಇಬ್ಬರು ಅಪ್ರಾಪ್ತರನ್ನು ಈ ಪ್ರಕರಣದಲ್ಲಿ ಬಂಧಿಸಲಾಗಿದೆ. ಘಟನೆಯಲ್ಲಿ ಒಂಬತ್ತು ಜನರು ಗಾಯಗೊಂಡಿದ್ದಾರೆ.

ಅನುಮತಿಯಿಲ್ಲದೆ ಈ ಪ್ರದೇಶದಲ್ಲಿ ಮೆರವಣಿಗೆ ಸಾಗಲು ಹೇಗೆ ಸಾಧ್ಯ ಎಂಬುದಕ್ಕೆ ಪೊಲೀಸರು ಈಗ ಉತ್ತರಿಸಬೇಕಾಗಿದೆ ಎಂದು ಸ್ಥಳೀಯರು ಪ್ರಶ್ನಿಸಿದ್ದಾರೆ. ಅದರಲ್ಲೂ ಕನಿಷ್ಠ ಎರಡು ಪೋಲೀಸ್ ಜೀಪ್‌ಗಳು ಮೆರವಣಿಗೆಯ ಜೊತೆಯಲ್ಲಿರುತ್ತವೆ, ಒಟ್ಟು ಮೂರು ಮೆರವಣಿಗೆಗಳು ನಡೆದವು, ಮೂರನೆಯದ್ದು, ವಿಎಚ್‌ಪಿ ಮತ್ತು ಬಜರಂಗ ದಳದ ಮೆರವಣಿಗೆಯಾಗಿದೆ ಎಂದು ಅವರು ಹೇಳಿದ್ದಾರೆ.

ಮೆರವಣಿಗೆಯಲ್ಲಿದ್ದವರು ಕತ್ತಿ ಮತ್ತು ಬೇಸ್‌ಬಾಲ್ ಬ್ಯಾಟ್‌ಗಳನ್ನು ಹಿಡಿದುಕೊಂಡಿರುವುದನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್ ಮಾಡಲಾಗುತ್ತಿರುವ ವೀಡಿಯೊಗಳಲ್ಲಿ ಬಹಿರಂಗವಾಗಿದೆ. ಕೆಲವರು ನಾಡ ಪಿಸ್ತೂಲ್‌ಗಳನ್ನು ಕೈಯ್ಯಲ್ಲಿ ಹಿಡಿದುಕೊಂಡಿದ್ದರು ಎಂದು ಸ್ಥಳೀಯರು ಹೇಳಿದ್ದಾರೆ ಎಂದು ಎಡಪಕ್ಷಗಳ ಸತ್ಯಶೋಧನಾ ತಂಡ ಸೋಮವಾರ ಹೇಳಿದೆ. “ಇದರ ನಂತರ ಅಲ್ಪಸಂಖ್ಯಾತ ಸಮುದಾಯದ ಕೆಲವು ವ್ಯಕ್ತಿಗಳು ಶಸ್ತ್ರಾಸ್ತ್ರಗಳನ್ನು ತಂದಿದ್ದಾರೆ” ಎಂದು ತಂಡವು ಹೇಳಿದೆ.

ಇದನ್ನೂ ಓದಿ: ಎಎಪಿ ದಿಗ್ವಿಜಯಕ್ಕೆ ಹೆದರಿ, ದೆಹಲಿ ಮುನ್ಸಿಪಾಲ್‌ ಚುನಾವಣೆ ಮುಂದೂಡಲು ಬಯಸುತ್ತಿದೆಯೇ ಬಿಜೆಪಿ?

ಮೂರನೇ ಮೆರವಣಿಗೆಯ ಸದಸ್ಯರು ಪ್ರಾರ್ಥನೆಯ ಸಮಯದಲ್ಲಿ ಮಸೀದಿಯ ಮುಂದೆ ಮೆರವಣಿಗೆಯನ್ನು ನಿಲ್ಲಿಸಿ, ಅವರು ನುಡಿಸುತ್ತಿದ್ದ ಸಂಗೀತದ ಪ್ರಮಾಣವನ್ನು ಹೆಚ್ಚಿಸಿದರು ಎಂದು ಸ್ಥಳೀಯರು ಹೇಳಿದ್ದಾರೆ. ಮಸೀದಿಯ ಗೋಡೆಯ ಮೇಲೆ ಧ್ವಜ ಹಾರಿಸುವ ಯತ್ನ ನಡೆದಿದೆ ಎಂದು ಸ್ಥಳೀಯರು ಹೇಳಿದರೆ, ಪೊಲೀಸರು ಇಂತಹ ಯಾವುದೇ ಘಟನೆ ನಡೆದಿಲ್ಲ ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...