Homeರಾಷ್ಟ್ರೀಯಜಹಾಂಗೀರ್‌ಪುರಿ ಹಿಂಸಾಚಾರದಲ್ಲಿ ಬಿಜೆಪಿ ಬೆಂಬಲಿತ ಸಂಘಟನೆ ವಿಎಚ್‌ಪಿ, ಬಜರಂಗದಳ ಭಾಗಿ ಎಂದ ದೆಹಲಿ ಪೊಲೀಸರು; ಕೆಲವೇ...

ಜಹಾಂಗೀರ್‌ಪುರಿ ಹಿಂಸಾಚಾರದಲ್ಲಿ ಬಿಜೆಪಿ ಬೆಂಬಲಿತ ಸಂಘಟನೆ ವಿಎಚ್‌ಪಿ, ಬಜರಂಗದಳ ಭಾಗಿ ಎಂದ ದೆಹಲಿ ಪೊಲೀಸರು; ಕೆಲವೇ ಗಂಟೆಗಳಲ್ಲಿ ಹೇಳಿಕೆ ವಾಪಾಸ್!

- Advertisement -
- Advertisement -

ದೆಹಲಿಯ ಜಹಾಂಗೀರ್‌ಪುರಿಯಲ್ಲಿ ನಡೆದ ಹಿಂಸಾಚಾರದಲ್ಲಿ ಬಿಜೆಪಿ ಬೆಂಬಲಿತ ಸಂಘಟನೆಗಳಾದ ಬಜರಂಗದಳ ಮತ್ತು ವಿಎಚ್‌‌ಪಿ ಭಾಗಿಯಾಗಿದ್ದಾರೆ ಎಂದು ರಾಜ್ಯ ಪೊಲೀಸರು ಸೋಮವಾರ ಮಾಧ್ಯಮಗಳೊಂದಿಗೆ ಅಧೀಕೃತವಾಗಿ ಹೇಳಿಕೆ ನೀಡಿದ್ದರು. ಆದರೆ ಈ ಹೇಳಿಕೆಯನ್ನು ಕೆಲವೇ ಗಂಟೆಗಳಲ್ಲಿ ಅವರು ಹಿಂಪಡೆದಿದ್ದಾರೆ ಎಂದು DH ವರದಿ ಮಾಡಿದೆ.

ಹನುಮ ಜಯಂತಿ ಮೆರವಣಿಗೆಯ ನಂತರ ವಾಯುವ್ಯ ದೆಹಲಿಯ ಜಹಾಂಗೀರ್‌‌ಪುರಿಯಲ್ಲಿ ಶನಿವಾರ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಪೊಲೀಸರು ಎರಡು ಪ್ರಕರಣವನ್ನು ದಾಖಲಿಸಿದ್ದರು. ಜೊತೆಗೆ ಅನುಮತಿ ಪಡೆಯದೆ ಮೆರವಣಿಗೆ ನಡೆಸಿದ್ದಕ್ಕೆ ಮೂರನೇ ಪ್ರಕರಣವನ್ನು ದಾಖಲಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಆರಂಭದಲ್ಲಿ, ಅನುಮತಿಯನ್ನು ಪಡೆಯದೆ ಮೆರವಣಿಗೆ ಮಾಡಿದ್ದಕ್ಕಾಗಿ ಮೆರವಣಿಗೆಯ ‘ಆಯೋಜಕರ’ ವಿರುದ್ಧ ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 188 (ಸಾರ್ವಜನಿಕ ಸೇವಕನ ಆದೇಶಗಳನ್ನು ಉಲ್ಲಂಘಿಸುವುದು) ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಹೇಳಿಕೆಯಲ್ಲಿ ಸಂಘಟಕರನ್ನು ಬಿಜಪಿ ಬೆಂಬಲಿತ ಸಂಘಟನೆಗಳಾದ ವಿಎಚ್‌ಪಿ ಮತ್ತು ಬಜರಂಗದಳ ಎಂದು ಗುರುತಿಸಿತ್ತು.

ಇದನ್ನೂ ಓದಿ: ದೆಹಲಿ ಹನುಮ ಜಯಂತಿ ಘರ್ಷಣೆ: ಎರಡೂ ಸಮುದಾಯಗಳ 23 ಆರೋಪಿಗಳ ಬಂಧನ

ಪೊಲೀಸ್‌ ಹೇಳಿಕೆಯಲ್ಲಿ, “ದೆಹಲಿ ಪ್ರಾಂತ, ಮುಖರ್ಜಿ ನಗರ ಜಿಲ್ಲಾ, ಝಾಂಡೇವಾಲಾದ ವಿಎಚ್‌ಪಿ ಮತ್ತು ಬಜರಂಗದಳದವರು ಯಾವುದೇ ಅನುಮತಿಯಿಲ್ಲದೆ ಮೆರವಣಿಗೆ ಆಯೋಜಿಸಿದ್ದರು” ಎಂದು ಉಲ್ಲೇಖಿಸಿದ್ದಾರೆ. “ವಿಎಚ್‌ಪಿ ಜಿಲ್ಲಾ ಸೇವಾ ಪ್ರಮುಖ್‌‌ ಎಂಬ ಒಬ್ಬ ಆರೋಪಿಯನ್ನು ಬಂಧಿಸಲಾಗಿದೆ” ಎಂದೂ ಅದು ಹೇಳಿಕೆಯಲ್ಲಿ ತಿಳಿಸಿತ್ತು.

ಆದರೆ, ಕೆಲವೇ ಗಂಟೆಗಳಲ್ಲಿ, ಪೋಲೀಸರು ಹೇಳಿಕೆಯನ್ನು ಪರಿಷ್ಕರಿಸಿದ್ದು, ಸಂಘಟನೆಗಳು ಮತ್ತು ಬಂಧನದ ಬಗ್ಗೆಗಿನ ಉಲ್ಲೇಖವನ್ನು ಕೈಬಿಟ್ಟಿದ್ದಾರೆ. “ಯಾವುದೇ ಅನುಮತಿಯಿಲ್ಲದೆ (16/04/22 ರಂದು ಸಂಜೆ ಪಿಎಸ್ ಜಹಾಂಗೀರ್ಪುರಿ ಪ್ರದೇಶದಲ್ಲಿ) ಮೆರವಣಿಗೆಯನ್ನು ನಡೆಸಿದ್ದಕ್ಕಾಗಿ ಸಂಘಟಕರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ” ಎಂದು ಹೊಸ ಹೇಳಿಕೆ ತಿಳಿಸಿದೆ. “ಒಬ್ಬ ಆರೋಪಿ ತನಿಖೆಗೆ ಸೇರಿಕೊಂಡಿದ್ದಾನೆ” ಎಂದು ಅದು ಹೇಳಿದೆ.

ಹೆಚ್ಚಿನ ತನಿಖೆ ಪ್ರಗತಿಯಲ್ಲಿದೆ ಎಂದು ಪರಿಷ್ಕೃತ ಹೇಳಿಕೆ ತಿಳಿಸಿದೆ. ಏಪ್ರಿಲ್ 16 ರ ಬೆಳಿಗ್ಗೆ ಮತ್ತು ಮಧ್ಯಾಹ್ನ ಜಹಾಂಗೀರ್‌‌ಪುರಿಯಲ್ಲಿ ಸರಿಯಾದ ಅನುಮತಿಯೊಂದಿಗೆ ನಡೆಸಲಾದ ಇತರ ಎರಡು ಮೆರವಣಿಗೆಗಳನ್ನು ಸಹ ಇದು ಉಲ್ಲೇಖಿಸಿದೆ.

ಇದನ್ನೂ ಓದಿ: ಕೇಜ್ರಿವಾಲ್‌ ಅವರ ನಕಲಿ ವಿಡಿಯೋ ಪ್ರಸಾರ: ದೆಹಲಿ ಬಿಜೆಪಿ ನಾಯಕನ ಮನೆಯಲ್ಲಿ ಪಂಜಾಬ್ ಪೊಲೀಸರು!

ಶನಿವಾರದಂದು ಕಟ್ಟುನಿಟ್ಟಾದ ಸೆಕ್ಷನ್ 307 (ಕೊಲೆಗೆ ಯತ್ನ), 120 ಬಿ (ಕ್ರಿಮಿನಲ್ ಪಿತೂರಿ), 147 (ಗಲಭೆ) ಮತ್ತು ಇತರ ಸಂಬಂಧಿತ ಭಾರತೀಯ ದಂಡ ಸಂಹಿತೆ ಮತ್ತು ಶಸ್ತ್ರಾಸ್ತ್ರ ಕಾಯ್ದೆಯ ಸೆಕ್ಷನ್‌ಗಳ ಅಡಿಯಲ್ಲಿ ದಾಖಲಿಸಲಾದ ಮೊದಲ ಪ್ರಕರಣದಲ್ಲಿ 21 ಜನರನ್ನು ಬಂಧಿಸಲಾಗಿದೆ. ಹಿಂಸಾಚಾರದಲ್ಲಿ ಭಾಗಿಯಾಗಿದ್ದಕ್ಕಾಗಿ ಇಬ್ಬರು ಅಪ್ರಾಪ್ತರನ್ನು ಈ ಪ್ರಕರಣದಲ್ಲಿ ಬಂಧಿಸಲಾಗಿದೆ. ಘಟನೆಯಲ್ಲಿ ಒಂಬತ್ತು ಜನರು ಗಾಯಗೊಂಡಿದ್ದಾರೆ.

ಅನುಮತಿಯಿಲ್ಲದೆ ಈ ಪ್ರದೇಶದಲ್ಲಿ ಮೆರವಣಿಗೆ ಸಾಗಲು ಹೇಗೆ ಸಾಧ್ಯ ಎಂಬುದಕ್ಕೆ ಪೊಲೀಸರು ಈಗ ಉತ್ತರಿಸಬೇಕಾಗಿದೆ ಎಂದು ಸ್ಥಳೀಯರು ಪ್ರಶ್ನಿಸಿದ್ದಾರೆ. ಅದರಲ್ಲೂ ಕನಿಷ್ಠ ಎರಡು ಪೋಲೀಸ್ ಜೀಪ್‌ಗಳು ಮೆರವಣಿಗೆಯ ಜೊತೆಯಲ್ಲಿರುತ್ತವೆ, ಒಟ್ಟು ಮೂರು ಮೆರವಣಿಗೆಗಳು ನಡೆದವು, ಮೂರನೆಯದ್ದು, ವಿಎಚ್‌ಪಿ ಮತ್ತು ಬಜರಂಗ ದಳದ ಮೆರವಣಿಗೆಯಾಗಿದೆ ಎಂದು ಅವರು ಹೇಳಿದ್ದಾರೆ.

ಮೆರವಣಿಗೆಯಲ್ಲಿದ್ದವರು ಕತ್ತಿ ಮತ್ತು ಬೇಸ್‌ಬಾಲ್ ಬ್ಯಾಟ್‌ಗಳನ್ನು ಹಿಡಿದುಕೊಂಡಿರುವುದನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್ ಮಾಡಲಾಗುತ್ತಿರುವ ವೀಡಿಯೊಗಳಲ್ಲಿ ಬಹಿರಂಗವಾಗಿದೆ. ಕೆಲವರು ನಾಡ ಪಿಸ್ತೂಲ್‌ಗಳನ್ನು ಕೈಯ್ಯಲ್ಲಿ ಹಿಡಿದುಕೊಂಡಿದ್ದರು ಎಂದು ಸ್ಥಳೀಯರು ಹೇಳಿದ್ದಾರೆ ಎಂದು ಎಡಪಕ್ಷಗಳ ಸತ್ಯಶೋಧನಾ ತಂಡ ಸೋಮವಾರ ಹೇಳಿದೆ. “ಇದರ ನಂತರ ಅಲ್ಪಸಂಖ್ಯಾತ ಸಮುದಾಯದ ಕೆಲವು ವ್ಯಕ್ತಿಗಳು ಶಸ್ತ್ರಾಸ್ತ್ರಗಳನ್ನು ತಂದಿದ್ದಾರೆ” ಎಂದು ತಂಡವು ಹೇಳಿದೆ.

ಇದನ್ನೂ ಓದಿ: ಎಎಪಿ ದಿಗ್ವಿಜಯಕ್ಕೆ ಹೆದರಿ, ದೆಹಲಿ ಮುನ್ಸಿಪಾಲ್‌ ಚುನಾವಣೆ ಮುಂದೂಡಲು ಬಯಸುತ್ತಿದೆಯೇ ಬಿಜೆಪಿ?

ಮೂರನೇ ಮೆರವಣಿಗೆಯ ಸದಸ್ಯರು ಪ್ರಾರ್ಥನೆಯ ಸಮಯದಲ್ಲಿ ಮಸೀದಿಯ ಮುಂದೆ ಮೆರವಣಿಗೆಯನ್ನು ನಿಲ್ಲಿಸಿ, ಅವರು ನುಡಿಸುತ್ತಿದ್ದ ಸಂಗೀತದ ಪ್ರಮಾಣವನ್ನು ಹೆಚ್ಚಿಸಿದರು ಎಂದು ಸ್ಥಳೀಯರು ಹೇಳಿದ್ದಾರೆ. ಮಸೀದಿಯ ಗೋಡೆಯ ಮೇಲೆ ಧ್ವಜ ಹಾರಿಸುವ ಯತ್ನ ನಡೆದಿದೆ ಎಂದು ಸ್ಥಳೀಯರು ಹೇಳಿದರೆ, ಪೊಲೀಸರು ಇಂತಹ ಯಾವುದೇ ಘಟನೆ ನಡೆದಿಲ್ಲ ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...