Homeಕರ್ನಾಟಕಬಿಜೆಪಿ ಬಸವಣ್ಣನಿಗೂ ಹಿಂದೂ ವಿರೋಧಿ ಪಟ್ಟ ಕಟ್ಟಿಬಿಡುತ್ತಿತ್ತು - ಪ್ರಿಯಾಂಕ್ ಖರ್ಗೆ

ಬಿಜೆಪಿ ಬಸವಣ್ಣನಿಗೂ ಹಿಂದೂ ವಿರೋಧಿ ಪಟ್ಟ ಕಟ್ಟಿಬಿಡುತ್ತಿತ್ತು – ಪ್ರಿಯಾಂಕ್ ಖರ್ಗೆ

- Advertisement -
- Advertisement -

ಬಿಜೆಪಿ ಏನಾದರೂ 12ನೇ ಶತಮಾನದಲ್ಲಿ ಇದ್ದಿದ್ದರೆ ಮೌಢ್ಯದ ವಿರುದ್ಧ ವಚನ ಚಳವಳಿ ಕಟ್ಟಿದ್ದ ಶರಣರಿಗೂ ಹಿಂದೂ ವಿರೋಧಿ ಪಟ್ಟ ಕಟ್ಟಿಬಿಡುತ್ತಿದ್ದರೊ ಏನೋ ಎಂದು ಸಚಿವ ಪ್ರಿಯಾಂಕ್ ಖರ್ಗೆ ಬುಧವಾರ ಹೇಳಿದ್ದಾರೆ. “ಪ್ರಶ್ನೆಗಳನ್ನು ಎತ್ತಿದರೆ, ವಸ್ತು ಸ್ಥಿತಿಯನ್ನು ಹೇಳಿದರೆ ಹಿಂದೂ ವಿರೋಧಿ ಎಂದು ಹೇಳಿ ಉತ್ತರದಾಯಿತ್ವದಿಂದ ಜಾರಿಕೊಳ್ಳುವುದು ಬಿಜೆಪಿಯ ಹಳೆ ಚಾಳಿ” ಎಂದು ಅವರು ಹೇಳಿದ್ದಾರೆ. ಬಿಜೆಪಿ ಬಸವಣ್ಣನಿಗೂ

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಬಿಜೆಪಿ ಏನಾದರೂ 12ನೇ ಶತಮಾನದಲ್ಲಿ ಇದ್ದಿದ್ದರೆ ಮೌಢ್ಯದ ವಿರುದ್ಧ ವಚನ ಚಳವಳಿ ಕಟ್ಟಿದ್ದ ಶರಣರಿಗೂ ಹಿಂದೂ ವಿರೋಧಿ ಪಟ್ಟ ಕಟ್ಟಿಬಿಡುತ್ತಿದ್ದರೊ ಏನೋ. ಆದರೆ ಆಗಿನ ಮನುವಾದಿಗಳು ಶರಣರಿಗೆ ಪೀಡಿಸಿದ್ದರು ಎನ್ನುವುದು ಇತಿಹಾಸ.” ಎಂದು ಅವರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಉತ್ತರದ ಕಾಶಿಯಲಿ ಕತ್ತೆ ಮಿಂದೈ ತರಲು, ದಕ್ಷಿಣದ ದೇಶಕದು ಕುದುರೆಯಹುದೆ?“ ಎಂಬ ಕುವೆಂಪು ಅವರ ಹೇಳಿಕೆಯನ್ನು ಉಲ್ಲೇಖಿಸಿರುವ ಪ್ರಿಯಾಂಕ್ ಖರ್ಗೆ ಅವರು, ಕುವೆಂಪು ಅವರನ್ನು ಹಿಂದೂ ವಿರೋಧಿ ಎನ್ನುವ ದಮ್ಮು ತಾಕತ್ತು ಇದೆಯೇ? ಎಂದು ಪ್ರಶ್ನಿಸಿದ್ದಾರೆ. ಬಿಜೆಪಿ ಬಸವಣ್ಣನಿಗೂ

“ನೀರ ಕಂಡಲ್ಲಿ ಮುಳುಗುವರಯ್ಯ / ಮರ ಕಂಡಲ್ಲಿ ಸುತ್ತುವರಯ್ಯ / ಬತ್ತುವ ಜಲವ ಒಣಗುವ ಮರವ ಮೆಚ್ಚಿದವರು / ನಿನ್ನನೆತ್ತಬಲ್ಲರು ಕೂಡಲ ಸಂಗಮದೇವ. – ವೇದಕ್ಕೆ ಬರೆಯ ಕಟ್ಟುವೆ, ಶಾಸ್ತ್ರಕ್ಕೆ ನಿಗಳವನಿಕ್ಕುವೆ, ತರ್ಕದ ಬೆನ್ನ ಬಾರನೆತ್ತುವ ಆಗಮದ ಮೂಗ ಕೊಯ್ಯುವೆ ನೋಡಯ್ಯ ಎಂದ ಬಸವಣ್ಣರನ್ನು ಹಿಂದೂ ವಿರೋಧಿ ಎನ್ನುವಿರಾ?” ಎಂದು ಅವರು ಪ್ರಶ್ನಿಸಿದ್ದಾರೆ.

“ವೇದ ಶಾಸ್ತ್ರ ಪುರಾಣಗಳೆಂಬ ಕೊಟ್ಟಣ ಕುಟ್ಟುತ್ತಾ ನುಚ್ಚು ತೌಡು ಕಾಣಿರೋ ಎಂದ ಅಕ್ಕಮಹಾದೇವಿಯನ್ನು ಹಿಂದೂ ವಿರೋಧಿ ಎನ್ನುವಿರಾ? ಕಟ್ಟಿದ ಲಿಂಗವ ಬಿಟ್ಟು ಬೆಟ್ಟದ ಲಿಂಗಕ್ಕೆ ಹೋಗಿ ಹೊಟ್ಟೆಯಡಿಯಾಗಿ ಬೀಳುವ ಲೊಟ್ಟೆ ಮೂಗನ ಕಂಡರೆ ಮೆಟ್ಟಿದ ಎಡಪಾದರಕ್ಷೆಯ ತಕ್ಕೊಂಡು ಲಟಲಟನೆ ಹೊಡೆ’ ಎಂದ ಅಂಬಿಗರ ಚೌಡಯ್ಯರನ್ನು ಹಿಂದೂ ವಿರೋಧಿ ಎನ್ನುವಿರಾ?” ಎಂದು ಖರ್ಗೆ ಕೇಳಿದ್ದಾರೆ.

ಕಲ್ಲಮನೆಯಡಿ ಕಲ್ಲದೇವರ ಮಾಡಿ, ಆ ಕಲ್ಲು ಕಲ್ಲ ಮೇಲೆ ಕೆಡೆದರೆ ದೇವರೆತ್ತ ಹೋದರೋ? ಎಂದಿದ್ದ ಅಲ್ಲಮರನ್ನು ಹಿಂದೂ ವಿರೋಧಿ ಎನ್ನುವಿರಾ? ಎಂದು ಅವರು ಪ್ರಶ್ನಿಸಿದ್ದಾರೆ.

”ಸೌ ಚುಹೇ ಖಾಕೆ ಬಿಲ್ಲಿ ಹಜ್ ಕೊ ಚಲೀ” ಎಂಬ ನುಡಿಗಟ್ಟು ಉರ್ದುವಿನಲ್ಲೂ ಇದೆ. ಯಾವ ಧರ್ಮವೂ ಕೂಡ ಕೆಟ್ಟ ಕೆಲಸ ಮಾಡಿ ಪುಣ್ಯ ಕ್ಷೇತ್ರಕ್ಕೆ ಬಂದರೆ ಪಾಪ ಪರಿಹಾರವಾಗುತ್ತದೆ ಎಂದಿಲ್ಲ. ನಿಮ್ಮ ಒಳ್ಳೆಯ ಕೆಲಸಗಳೇ ನಿಮ್ಮ ಪುಣ್ಯಕ್ಕೆ ದಾರಿ ಎನ್ನುತ್ತವೆ ಎಂದು ಅವರು ಹೇಳಿದ್ದಾರೆ.

“ಬಿಜೆಪಿಯವರು ಮೊದಲು ಹಿಂದೂ ಧರ್ಮದ ಅಧ್ಯಯನ ಮಾಡಲಿ. ಪಾಪ, ಪುಣ್ಯಗಳು ನದಿಗಳಲ್ಲಿ ಮುಳುಗೇಳುವುದರಿಂದ ನಿರ್ಧಾರವಾಗುವುದಿಲ್ಲ. ನಾವು ಮಾಡಿದ ಕೆಟ್ಟ ಕೆಲಸಗಳಿಗೆ ಕುಂಭ ಸ್ನಾನದಿಂದ ಮಾಫಿಯೂ ದೊರಕುವುದಿಲ್ಲ. ಗಂಗಾ ಸ್ನಾನ ಮಾಡಿದರೆ ಕೆಟ್ಟವನು ಒಳ್ಳೆಯವನಾಗುವುದಿಲ್ಲ.
ಕರ್ಮ, ಕಾಯಕಗಳು ಮಾತ್ರ ನಮ್ಮನ್ನು ಉದ್ದರಿಸಬಲ್ಲವು ಎನ್ನುವುದನ್ನು ಹಲವು ಮಹನೀಯರು ಹೇಳಿದ್ದಾರೆ” ಎಂದು ಹೇಳಿರುವ ಅವರು, ಬಿಜೆಪಿಯವರು ಧರ್ಮದ ಹೆಸರು ಹೇಳಿಕೊಂಡು ರಾಜಕಾರಣ ಮಾಡುವುದನ್ನು ಬಿಟ್ಟು, ಸಾಧನೆ ಹೇಳಿಕೊಂಡು ರಾಜಕಾರಣ ಮಾಡಿ ತೋರಿಸಲಿ ಎಂದು ತಿಳಿಸಿದ್ದಾರೆ.

ಇದನ್ನೂಓದಿ:  ಮಾನನಷ್ಟ ಮೊಕದ್ದಮೆ | ಸಿಎಂ ಅತಿಶಿಗೆ ಜಾರಿಯಾಗಿದ್ದ ಸಮನ್ಸ್ ರದ್ದು

ಮಾನನಷ್ಟ ಮೊಕದ್ದಮೆ | ಸಿಎಂ ಅತಿಶಿಗೆ ಜಾರಿಯಾಗಿದ್ದ ಸಮನ್ಸ್ ರದ್ದು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಏಷ್ಯಾ ಸಂಘರ್ಷ: ಇರಾನ್ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ಹತ್ಯೆ ಮಾಡಿರುವುದಾಗಿ ಹೇಳಿಕೊಂಡ ಇಸ್ರೇಲ್ 

ಇರಾನ್‌ನ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ವೈಮಾನಿಕ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಇಸ್ರೇಲ್ ರಕ್ಷಣಾ ಸಚಿವ ಕಾಟ್ಜ್ ಮಂಗಳವಾರ ಹೇಳಿದ್ದಾರೆ. ಆದರೆ ಟೆಹ್ರಾನ್‌ನಿಂದ ಯಾವುದೇ ಅಧಿಕೃತ ದೃಢೀಕರಣವಿಲ್ಲ. ಕಾಟ್ಜ್ ಪ್ರಕಾರ, ಜನರಲ್ ಘೋಲಮ್...

ನಾಲ್ಕು ತಿಂಗಳಲ್ಲೇ ಗರಿಷ್ಠ ಮಟ್ಟಕ್ಕೆ ತಲುಪಿದ ಯುವಜನರ ನಿರುದ್ಯೋಗ ಪ್ರಮಾಣ

15–29 ವರ್ಷ ವಯಸ್ಸಿನ ಯುವಕರಲ್ಲಿ ನಿರುದ್ಯೋಗ ದರವು ಫೆಬ್ರವರಿಯಲ್ಲಿ ನಾಲ್ಕು ತಿಂಗಳಲ್ಲೇ ಗರಿಷ್ಠ ಶೇ. 14.8 ಕ್ಕೆ ಏರಿದೆ. ಇದು ಜನವರಿಯಲ್ಲಿ ಶೇ. 14.7 ರಷ್ಟು ಹೆಚ್ಚಾಗಿ, ಯುವಜನರಲ್ಲಿ ನಿರುದ್ಯೋಗ ಹೆಚ್ಚಳ ಉಂಟಾಗಿದೆ...

ಆರ್‌ಎಸ್‌ಎಸ್‌ ನಿಷೇಧಕ್ಕೆ ಒತ್ತಾಯಿಸಿದ ಅಮೆರಿಕದ ಧಾರ್ಮಿಕ ಸ್ವಾತಂತ್ರ್ಯ ಸಮಿತಿ; ಕಾಂಗ್ರೆಸ್ ಪ್ರತಿಕ್ರಿಯೆ

ಭಾರತದಲ್ಲಿ ಧಾರ್ಮಿಕ ಸ್ವಾತಂತ್ರ್ಯದ ಉಲ್ಲಂಘನೆಯಾಗಿದೆ ಎಂದು ಆರೋಪಿಸಿರುವ ಅಂತರರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯದ ಯುನೈಟೆಡ್ ಸ್ಟೇಟ್ಸ್ ಆಯೋಗವು, ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರೆಸ್ಸೆಸ್) ಮತ್ತು ಭಾರತದ ಬಾಹ್ಯ ಗುಪ್ತಚರ ಸಂಸ್ಥೆಯಾದ ಸಂಶೋಧನೆ, ವಿಶ್ಲೇಷಣಾ...

ಕಾಂಗ್ರೆಸ್ ವಿರುದ್ಧದ ‘ಟರ್ಕಿ ಕಚೇರಿ’ ಹೇಳಿಕೆ: ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ಸಮನ್ಸ್ ಜಾರಿ ಮಾಡಿದ ದೆಹಲಿ ಹೈಕೋರ್ಟ್

ಕಾಂಗ್ರೆಸ್ ವಿರುದ್ಧದ "ಟರ್ಕಿ ಕಚೇರಿ" ಆರೋಪಕ್ಕೆ ಸಂಬಂಧಿಸಿದಂತೆ ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ದೆಹಲಿ ಹೈಕೋರ್ಟ್ ಸಮನ್ಸ್ ಜಾರಿ ಮಾಡಿದೆ. ಟರ್ಕಿಯಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಂತರರಾಷ್ಟ್ರೀಯ ಕಚೇರಿಯನ್ನು ನಡೆಸುತ್ತಿದೆ...

ಚುನಾವಣಾ ಆಯೋಗ ಬಿಜೆಪಿ ಆಜ್ಞೆಯ ಮೇರೆಗೆ ಕೆಲಸ ಮಾಡುತ್ತಿದೆ: ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ

ವಿಧಾನಸಭಾ ಚುನಾವಣೆಗೂ ಮುನ್ನ, ಭಾರತದ ಚುನಾವಣಾ ಆಯೋಗ (ಇಸಿಐ) ಪ್ರಸ್ತುತ ಡಿಜಿಪಿ, ಕೋಲ್ಕತ್ತಾ ಪೊಲೀಸ್ ಆಯುಕ್ತರು, ಮುಖ್ಯ ಮತ್ತು ಗೃಹ ಕಾರ್ಯದರ್ಶಿಗಳನ್ನು ಬದಲಿಸುವ ಮೂಲಕ ಪ್ರಮುಖ ಪುನರ್ರಚನೆಯನ್ನು ಮಾಡಿದೆ. ಪಶ್ಚಿಮ ಬಂಗಾಳದ ಹೊಸ ಡಿಜಿ...

‘ಶಾಂತಿಗೆ ಇದು ಸಮಯವಲ್ಲ’: ‘ಕದನ ವಿರಾಮ’ ಪ್ರಸ್ತಾಪಗಳನ್ನು ತಿರಸ್ಕರಿಸಿದ ಇರಾನ್ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ 

ಇರಾನ್‌ನ ನೂತನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ ಅವರು ಉದ್ವಿಗ್ನತೆಯನ್ನು ಕಡಿಮೆ ಮಾಡುವ ಅಥವಾ ಎರಡು ಮಧ್ಯವರ್ತಿ ರಾಷ್ಟ್ರಗಳು ಟೆಹ್ರಾನ್‌ಗೆ ತಲುಪಿಸಿದ ಯುನೈಟೆಡ್ ಸ್ಟೇಟ್ಸ್‌ನೊಂದಿಗೆ ಕದನ ವಿರಾಮದ ಪ್ರಸ್ತಾಪಗಳನ್ನು ತಿರಸ್ಕರಿಸಿದರು ಎಂದು...

ಲೋಕಸಭೆ | 8 ವಿಪಕ್ಷ ಸಂಸದರ ಅಮಾನತು ರದ್ದು

ಲೋಕಸಭೆಯ ಎಂಟು ವಿಪಕ್ಷ ಸಂಸದರ ಅಮಾನತನ್ನು ತಕ್ಷಣಕ್ಕೆ ಜಾರಿಗೆ ಬರುವಂತೆ ಸ್ಪೀಕರ್ ಓಂ ಬಿರ್ಲಾ ಮಂಗಳವಾರ (ಮಾ.17) ವಾಪಸ್ ಪಡೆದಿದ್ದಾರೆ. ಅಶಿಸ್ತಿನ ಕಾರಣ ನೀಡಿ ಫೆಬ್ರವರಿ 8ರಂದು ಸಂಸದರನ್ನು ಅಮಾನತು ಮಾಡಲಾಗಿತ್ತು. ಅಮಾನತು...

ಪಿತೃತ್ವ ರಜೆಗೆ ಕಾನೂನು ತನ್ನಿ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಪಿತೃತ್ವ ರಜೆಯನ್ನು (paternity leave) ಸಾಮಾಜಿಕ ಭದ್ರತಾ ಸೌಲಭ್ಯವೆಂದು ಪರಿಗಣಿಸಿ ಕಾನೂನು ರೂಪಿಸುವಂತೆ ಸುಪ್ರೀಂ ಕೋರ್ಟ್ ಮಂಗಳವಾರ (ಮಾ.17) ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ. ಈ ರಜೆಯ ಅವಧಿಯು ಪೋಷಕರು ಮತ್ತು ಮಗು ಇಬ್ಬರ...

‘ಕಾಲ ಎಲ್ಲಕ್ಕೂ ಉತ್ತರಿಸುತ್ತದೆ’; ಟಿವಿಕೆ ನಾಯಕನ ‘ಡಿಎಂಕೆ ಬೆದರಿಕೆ’ ಆರೋಪ ‘ಸತ್ಯಕ್ಕೆ ದೂರವಾದ ಮಾತು’ ಎಂದ ರಜನಿಕಾಂತ್

ರಾಜಕೀಯ ಪ್ರವೇಶಕ್ಕೆ ಯತ್ನಿಸಿದಾಗ ಡಿಎಂಕೆಯಿಂದ ಬೆದರಿಕೆ ಇತ್ತು ಎಂಬ ಟಿವಿಕೆ ನಾಯಕ ಆಧವ್ ಅರ್ಜುನ ಅವರ ಆರೋಪವನ್ನು ಸೂಪರ್‌ಸ್ಟಾರ್ ರಜನಿಕಾಂತ್ ಮಂಗಳವಾರ ನಿರಾಕರಿಸಿದ್ದಾರೆ ಮತ್ತು "ಕಾಲವೇ ಉತ್ತರ ನೀಡುತ್ತದೆ" ಎಂದು ಹೇಳಿದ್ದಾರೆ. ತಮ್ಮ ಅಧಿಕೃತ...

ಕಾಂಗ್ರೆಸ್‌ ಮಾನನಷ್ಟ ಪ್ರಕರಣ : ಅರ್ನಾಬ್ ಗೋಸ್ವಾಮಿ, ರಿಪಬ್ಲಿಕ್ ಟಿವಿಗೆ ದೆಹಲಿ ಹೈಕೋರ್ಟ್ ಸಮನ್ಸ್

ಟರ್ಕಿ ದೇಶದಲ್ಲಿ ಕಾಂಗ್ರೆಸ್‌ ಪಕ್ಷವು ಅಂತಾರಾಷ್ಟ್ರೀಯ ಕಚೇರಿ ಹೊಂದಿದೆ ಎಂಬ ವರದಿಗೆ ಸಂಬಂಧಿಸಿದಂತೆ, ಅರ್ನಾಬ್ ಗೋಸ್ವಾಮಿ ಮತ್ತು ರಿಪಬ್ಲಿಕ್ ಟಿವಿ ವಿರುದ್ಧ ಕಾಂಗ್ರೆಸ್ ಹೂಡಿರುವ ಮಾನನಷ್ಟ ಮೊಕದ್ದಮೆಯಲ್ಲಿ ದೆಹಲಿ ಹೈಕೋರ್ಟ್ ಮಂಗಳವಾರ (ಮಾ.17)...