Homeಕರ್ನಾಟಕಬಿಜೆಪಿ ಬಸವಣ್ಣನಿಗೂ ಹಿಂದೂ ವಿರೋಧಿ ಪಟ್ಟ ಕಟ್ಟಿಬಿಡುತ್ತಿತ್ತು - ಪ್ರಿಯಾಂಕ್ ಖರ್ಗೆ

ಬಿಜೆಪಿ ಬಸವಣ್ಣನಿಗೂ ಹಿಂದೂ ವಿರೋಧಿ ಪಟ್ಟ ಕಟ್ಟಿಬಿಡುತ್ತಿತ್ತು – ಪ್ರಿಯಾಂಕ್ ಖರ್ಗೆ

- Advertisement -
- Advertisement -

ಬಿಜೆಪಿ ಏನಾದರೂ 12ನೇ ಶತಮಾನದಲ್ಲಿ ಇದ್ದಿದ್ದರೆ ಮೌಢ್ಯದ ವಿರುದ್ಧ ವಚನ ಚಳವಳಿ ಕಟ್ಟಿದ್ದ ಶರಣರಿಗೂ ಹಿಂದೂ ವಿರೋಧಿ ಪಟ್ಟ ಕಟ್ಟಿಬಿಡುತ್ತಿದ್ದರೊ ಏನೋ ಎಂದು ಸಚಿವ ಪ್ರಿಯಾಂಕ್ ಖರ್ಗೆ ಬುಧವಾರ ಹೇಳಿದ್ದಾರೆ. “ಪ್ರಶ್ನೆಗಳನ್ನು ಎತ್ತಿದರೆ, ವಸ್ತು ಸ್ಥಿತಿಯನ್ನು ಹೇಳಿದರೆ ಹಿಂದೂ ವಿರೋಧಿ ಎಂದು ಹೇಳಿ ಉತ್ತರದಾಯಿತ್ವದಿಂದ ಜಾರಿಕೊಳ್ಳುವುದು ಬಿಜೆಪಿಯ ಹಳೆ ಚಾಳಿ” ಎಂದು ಅವರು ಹೇಳಿದ್ದಾರೆ. ಬಿಜೆಪಿ ಬಸವಣ್ಣನಿಗೂ

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಬಿಜೆಪಿ ಏನಾದರೂ 12ನೇ ಶತಮಾನದಲ್ಲಿ ಇದ್ದಿದ್ದರೆ ಮೌಢ್ಯದ ವಿರುದ್ಧ ವಚನ ಚಳವಳಿ ಕಟ್ಟಿದ್ದ ಶರಣರಿಗೂ ಹಿಂದೂ ವಿರೋಧಿ ಪಟ್ಟ ಕಟ್ಟಿಬಿಡುತ್ತಿದ್ದರೊ ಏನೋ. ಆದರೆ ಆಗಿನ ಮನುವಾದಿಗಳು ಶರಣರಿಗೆ ಪೀಡಿಸಿದ್ದರು ಎನ್ನುವುದು ಇತಿಹಾಸ.” ಎಂದು ಅವರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಉತ್ತರದ ಕಾಶಿಯಲಿ ಕತ್ತೆ ಮಿಂದೈ ತರಲು, ದಕ್ಷಿಣದ ದೇಶಕದು ಕುದುರೆಯಹುದೆ?“ ಎಂಬ ಕುವೆಂಪು ಅವರ ಹೇಳಿಕೆಯನ್ನು ಉಲ್ಲೇಖಿಸಿರುವ ಪ್ರಿಯಾಂಕ್ ಖರ್ಗೆ ಅವರು, ಕುವೆಂಪು ಅವರನ್ನು ಹಿಂದೂ ವಿರೋಧಿ ಎನ್ನುವ ದಮ್ಮು ತಾಕತ್ತು ಇದೆಯೇ? ಎಂದು ಪ್ರಶ್ನಿಸಿದ್ದಾರೆ. ಬಿಜೆಪಿ ಬಸವಣ್ಣನಿಗೂ

“ನೀರ ಕಂಡಲ್ಲಿ ಮುಳುಗುವರಯ್ಯ / ಮರ ಕಂಡಲ್ಲಿ ಸುತ್ತುವರಯ್ಯ / ಬತ್ತುವ ಜಲವ ಒಣಗುವ ಮರವ ಮೆಚ್ಚಿದವರು / ನಿನ್ನನೆತ್ತಬಲ್ಲರು ಕೂಡಲ ಸಂಗಮದೇವ. – ವೇದಕ್ಕೆ ಬರೆಯ ಕಟ್ಟುವೆ, ಶಾಸ್ತ್ರಕ್ಕೆ ನಿಗಳವನಿಕ್ಕುವೆ, ತರ್ಕದ ಬೆನ್ನ ಬಾರನೆತ್ತುವ ಆಗಮದ ಮೂಗ ಕೊಯ್ಯುವೆ ನೋಡಯ್ಯ ಎಂದ ಬಸವಣ್ಣರನ್ನು ಹಿಂದೂ ವಿರೋಧಿ ಎನ್ನುವಿರಾ?” ಎಂದು ಅವರು ಪ್ರಶ್ನಿಸಿದ್ದಾರೆ.

“ವೇದ ಶಾಸ್ತ್ರ ಪುರಾಣಗಳೆಂಬ ಕೊಟ್ಟಣ ಕುಟ್ಟುತ್ತಾ ನುಚ್ಚು ತೌಡು ಕಾಣಿರೋ ಎಂದ ಅಕ್ಕಮಹಾದೇವಿಯನ್ನು ಹಿಂದೂ ವಿರೋಧಿ ಎನ್ನುವಿರಾ? ಕಟ್ಟಿದ ಲಿಂಗವ ಬಿಟ್ಟು ಬೆಟ್ಟದ ಲಿಂಗಕ್ಕೆ ಹೋಗಿ ಹೊಟ್ಟೆಯಡಿಯಾಗಿ ಬೀಳುವ ಲೊಟ್ಟೆ ಮೂಗನ ಕಂಡರೆ ಮೆಟ್ಟಿದ ಎಡಪಾದರಕ್ಷೆಯ ತಕ್ಕೊಂಡು ಲಟಲಟನೆ ಹೊಡೆ’ ಎಂದ ಅಂಬಿಗರ ಚೌಡಯ್ಯರನ್ನು ಹಿಂದೂ ವಿರೋಧಿ ಎನ್ನುವಿರಾ?” ಎಂದು ಖರ್ಗೆ ಕೇಳಿದ್ದಾರೆ.

ಕಲ್ಲಮನೆಯಡಿ ಕಲ್ಲದೇವರ ಮಾಡಿ, ಆ ಕಲ್ಲು ಕಲ್ಲ ಮೇಲೆ ಕೆಡೆದರೆ ದೇವರೆತ್ತ ಹೋದರೋ? ಎಂದಿದ್ದ ಅಲ್ಲಮರನ್ನು ಹಿಂದೂ ವಿರೋಧಿ ಎನ್ನುವಿರಾ? ಎಂದು ಅವರು ಪ್ರಶ್ನಿಸಿದ್ದಾರೆ.

”ಸೌ ಚುಹೇ ಖಾಕೆ ಬಿಲ್ಲಿ ಹಜ್ ಕೊ ಚಲೀ” ಎಂಬ ನುಡಿಗಟ್ಟು ಉರ್ದುವಿನಲ್ಲೂ ಇದೆ. ಯಾವ ಧರ್ಮವೂ ಕೂಡ ಕೆಟ್ಟ ಕೆಲಸ ಮಾಡಿ ಪುಣ್ಯ ಕ್ಷೇತ್ರಕ್ಕೆ ಬಂದರೆ ಪಾಪ ಪರಿಹಾರವಾಗುತ್ತದೆ ಎಂದಿಲ್ಲ. ನಿಮ್ಮ ಒಳ್ಳೆಯ ಕೆಲಸಗಳೇ ನಿಮ್ಮ ಪುಣ್ಯಕ್ಕೆ ದಾರಿ ಎನ್ನುತ್ತವೆ ಎಂದು ಅವರು ಹೇಳಿದ್ದಾರೆ.

“ಬಿಜೆಪಿಯವರು ಮೊದಲು ಹಿಂದೂ ಧರ್ಮದ ಅಧ್ಯಯನ ಮಾಡಲಿ. ಪಾಪ, ಪುಣ್ಯಗಳು ನದಿಗಳಲ್ಲಿ ಮುಳುಗೇಳುವುದರಿಂದ ನಿರ್ಧಾರವಾಗುವುದಿಲ್ಲ. ನಾವು ಮಾಡಿದ ಕೆಟ್ಟ ಕೆಲಸಗಳಿಗೆ ಕುಂಭ ಸ್ನಾನದಿಂದ ಮಾಫಿಯೂ ದೊರಕುವುದಿಲ್ಲ. ಗಂಗಾ ಸ್ನಾನ ಮಾಡಿದರೆ ಕೆಟ್ಟವನು ಒಳ್ಳೆಯವನಾಗುವುದಿಲ್ಲ.
ಕರ್ಮ, ಕಾಯಕಗಳು ಮಾತ್ರ ನಮ್ಮನ್ನು ಉದ್ದರಿಸಬಲ್ಲವು ಎನ್ನುವುದನ್ನು ಹಲವು ಮಹನೀಯರು ಹೇಳಿದ್ದಾರೆ” ಎಂದು ಹೇಳಿರುವ ಅವರು, ಬಿಜೆಪಿಯವರು ಧರ್ಮದ ಹೆಸರು ಹೇಳಿಕೊಂಡು ರಾಜಕಾರಣ ಮಾಡುವುದನ್ನು ಬಿಟ್ಟು, ಸಾಧನೆ ಹೇಳಿಕೊಂಡು ರಾಜಕಾರಣ ಮಾಡಿ ತೋರಿಸಲಿ ಎಂದು ತಿಳಿಸಿದ್ದಾರೆ.

ಇದನ್ನೂಓದಿ:  ಮಾನನಷ್ಟ ಮೊಕದ್ದಮೆ | ಸಿಎಂ ಅತಿಶಿಗೆ ಜಾರಿಯಾಗಿದ್ದ ಸಮನ್ಸ್ ರದ್ದು

ಮಾನನಷ್ಟ ಮೊಕದ್ದಮೆ | ಸಿಎಂ ಅತಿಶಿಗೆ ಜಾರಿಯಾಗಿದ್ದ ಸಮನ್ಸ್ ರದ್ದು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....