Homeಮುಖಪುಟ100 ಕೋಟಿ ದಾಟಿದ ಬಿಜೆಪಿಯ ಗೂಗಲ್‌ ಜಾಹೀರಾತು ವೆಚ್ಚ!; ಕರ್ನಾಟಕವೇ ಪ್ರಮುಖ ಟಾರ್ಗೆಟ್‌

100 ಕೋಟಿ ದಾಟಿದ ಬಿಜೆಪಿಯ ಗೂಗಲ್‌ ಜಾಹೀರಾತು ವೆಚ್ಚ!; ಕರ್ನಾಟಕವೇ ಪ್ರಮುಖ ಟಾರ್ಗೆಟ್‌

- Advertisement -
- Advertisement -

ಬಿಜೆಪಿ ದೇಶದಲ್ಲಿ ಗೂಗಲ್‌ ಮತ್ತು ಯೂಟ್ಯೂಬ್‌ನಲ್ಲಿ ರಾಜಕೀಯ ಜಾಹೀರಾತಿಗೆ ಅತಿ ಹೆಚ್ಚು ವೆಚ್ಚಗೊಳಿಸಿರುವುದು ಬಹಿರಂಗವಾಗಿದೆ. ಸರ್ಚ್ ಇಂಜಿನ್‌ ಗೂಗಲ್ ಮತ್ತು ಅದರ ವಿಡಿಯೋ ಪ್ಲಾಟ್‌ಫಾರ್ಮ್ ಯೂಟ್ಯೂಬ್‌ನಲ್ಲಿ ಬಿಜೆಪಿಯ ರಾಜಕೀಯ ಜಾಹೀರಾತುಗಳ ವೆಚ್ಚ 100 ಕೋಟಿ ರೂಪಾಯಿಗಳನ್ನು ದಾಟಿದೆ. ಇಷ್ಟೊಂದು ವೆಚ್ಚದಲ್ಲಿ ಗೂಗಲ್‌ನಲ್ಲಿ ಭಾರತದ ಯಾವುದೇ ರಾಜಕೀಯ ಪಕ್ಷ ಜಾಹೀರಾತು ನೀಡಿಲ್ಲ ಎನ್ನುವುದು ಇದೀಗ ಬಹಿಂಗವಾಗಿದೆ.

ಬಿಜೆಪಿಯ ಡಿಜಿಟಲ್ ಪ್ರಚಾರಗಳ ಪ್ರಚಾರಕ್ಕಾಗಿ 101 ಕೋಟಿ ರೂ.ಗಿಂತ ಹೆಚ್ಚು ವೆಚ್ಚ ಮಾಡಿದ್ದು, ಇದು ಕಾಂಗ್ರೆಸ್, ದ್ರಾವಿಡ ಮುನ್ನೇತ್ರ ಕಳಗಂ (DMK), ಮತ್ತು ರಾಜಕೀಯ ಸಲಹಾ ಸಂಸ್ಥೆ ಇಂಡಿಯನ್ ಪೊಲಿಟಿಕಲ್ ಆಕ್ಷನ್ ಕಮಿಟಿ (I-PAC) ಮೇ 2018ರಿಂದ Google ಜಾಹೀರಾತುಗಳ ಪಾರದರ್ಶಕತೆ ವರದಿಯನ್ನು ಪ್ರಕಟಿಸಲು ಪ್ರಾರಂಭಿಸಿದಾಗಿನಿಂದ ಮಾಡಿದ ವೆಚ್ಚಕ್ಕೆ ಸಮಾನವಾಗಿದೆ.

ಇಂಡಿಯಾ ಟುಡೇ ವಿಶ್ಲೇಷಣೆಯ ಪ್ರಕಾರ, ಮೇ 31, 2018 ಮತ್ತು ಏಪ್ರಿಲ್ 25, 2024 ರ ನಡುವೆ ಪ್ರಕಟವಾದ Google ಜಾಹೀರಾತುಗಳಲ್ಲಿ ಬಿಜೆಪಿಯ ಪಾಲು ಒಟ್ಟು ಖರ್ಚಿನ ಶೇಕಡಾ 26 ರಷ್ಟಿದೆ, ಅಂದರೆ 390 ಕೋಟಿ ರೂ.ಆಗಿದೆ.

Googleನಿಂದ “ರಾಜಕೀಯ ಜಾಹೀರಾತು” ಎಂದು ವಿವರಿಸಲಾದ ಒಟ್ಟು 2,17,992 ವಿಷಯ ತುಣುಕುಗಳಲ್ಲಿ  1,61,000 ಕ್ಕಿಂತ ಹೆಚ್ಚು ಅಂದರೆ 73% ಈ ಅವಧಿಯಲ್ಲಿ ಬಿಜೆಪಿ ಪ್ರಕಟಿಸಿದೆ. ಬಿಜೆಪಿ ಪಕ್ಷದ ಬಹುಪಾಲು ಜಾಹೀರಾತುಗಳು ಕರ್ನಾಟಕದ ನಿವಾಸಿಗಳನ್ನು ಟಾರ್ಗೆಟ್‌ ಮಾಡಿಕೊಂಡು ನೀಡಲಾಗಿದ್ದು, ಇದಕ್ಕೆ 10.8 ಕೋಟಿ ರೂಪಾಯಿಗಳನ್ನು ವೆಚ್ಚ ಮಾಡಲಾಗಿದೆ, ನಂತರ ಉತ್ತರ ಪ್ರದೇಶದಲ್ಲಿ 10.3 ಕೋಟಿ, ರಾಜಸ್ಥಾನದಲ್ಲಿ 8.5 ಕೋಟಿ ರೂ, ಮತ್ತು ದೆಹಲಿಯಲ್ಲಿ 7.6 ಕೋಟಿ ರೂ. ವೆಚ್ಚ ಮಾಡಲಾಗಿದೆ.

ಒಟ್ಟಾರೆಯಾಗಿ, ತಮಿಳುನಾಡನ್ನು ಹೆಚ್ಚು ಟಾರ್ಗೆಟ್‌ ಮಾಡಿಕೊಂಡು ಗೂಗಲ್‌ನಲ್ಲಿ ಹೆಚ್ಚಾಗಿ ‘ರಾಜಕೀಯ ಜಾಹೀರಾತುಗಳನ್ನು’ ನೀಡಲಾಗಿದೆ. ನಂತರದ ಸಾಲಿನಲ್ಲಿ ತೆಲಂಗಾಣ, ಉತ್ತರ ಪ್ರದೇಶ, ಕರ್ನಾಟಕ ಮತ್ತು ಮಧ್ಯಪ್ರದೇಶ ರಾಜ್ಯಗಳಿವೆ ಎಂದು ವಿಶ್ಲೇಷಣೆಯು ತಿಳಿಸಿದೆ.

ಪಾರದರ್ಶಕತೆ ಕೇಂದ್ರದ ಮಾಹಿತಿಯ ಪ್ರಕಾರ, 45 ಕೋಟಿ ರೂಪಾಯಿಗಳೊಂದಿಗೆ, ಗೂಗಲ್ ಜಾಹೀರಾತುಗಳು ಮತ್ತು ವಿಡಿಯೋ ಜಾಹೀರಾತುಗಳೊಂದಿಗೆ ರಾಜಕೀಯ ವೆಚ್ಚದಲ್ಲಿ ಕಾಂಗ್ರೆಸ್ ಎರಡನೇ ಸ್ಥಾನದಲ್ಲಿದೆ. ಕಾಂಗ್ರೆಸ್‌ ಪಾರ್ಟಿ ಈ ಅವಧಿಯಲ್ಲಿ 5,992 ಆನ್‌ಲೈನ್ ಜಾಹೀರಾತುಗಳನ್ನು ಪ್ರಕಟಿಸಿದೆ, ಬಿಜೆಪಿಯ ಜಾಹೀರಾತುಗಳಿಗೆ ಹೋಲಿಕೆ ಮಾಡಿದರೆ ಇದು ಕೇವಲ 3.7 ಪ್ರತಿಶತದಷ್ಟು ಮಾತ್ರವಾಗಿದೆ. ಕಾಂಗ್ರೆಸ್‌ ಜಾಹೀರಾತು ಪ್ರಚಾರಗಳು ಪ್ರಾಥಮಿಕವಾಗಿ ಕರ್ನಾಟಕ ಮತ್ತು ತೆಲಂಗಾಣ ಮತ್ತು ಮಧ್ಯಪ್ರದೇಶದ ಮೇಲೆ ಕೇಂದ್ರೀಕೃತವಾಗಿತ್ತು.

ತಮಿಳುನಾಡಿನ ಆಡಳಿತ ಪಕ್ಷವಾದ ಡಿಎಂಕೆ, ಗೂಗಲ್ ಪ್ಲಾಟ್‌ಫಾರ್ಮ್‌ಗಳಲ್ಲಿ ಮೂರನೇ ಅತಿ ದೊಡ್ಡ ರಾಜಕೀಯ ಜಾಹೀರಾತುದಾರರಾಗಿದ್ದು, ಮೇ 2018 ರಿಂದ 42ಕೋಟಿ ರೂಪಾಯಿಗಳನ್ನು ಖರ್ಚು ಮಾಡಿದೆ. Googleನಲ್ಲಿ ಭಾರತ್ ರಾಷ್ಟ್ರ ಸಮಿತಿಯ (BRS) ನವೆಂಬರ್ 2023ರಲ್ಲಿ ವಿಧಾನ ಸಭೆ ಚುನಾವಣೆ ವೇಳೆ ಜಾಹೀರಾತುಗಳನ್ನು ಪ್ರಕಟಿಸಿರುವುದನ್ನು ವಿಶ್ಲೇಷಣೆಯು ಗಮನಿಸಿದೆ.

ಲೋಕಸಭೆ ಚುನಾವಣೆಯ ಎರಡನೇ ಹಂತದ ಪ್ರಚಾರದ ಸಮಯದಲ್ಲಿ, ರಾಜಕೀಯ ಪಕ್ಷಗಳು ತಮ್ಮ ಪ್ರಣಾಳಿಕೆ, ನೀತಿಗಳು ಮತ್ತು ಸಾಧನೆಗಳನ್ನು ಪ್ರಚಾರ ಮಾಡಲು ಕನಿಷ್ಠ 14.7 ಕೋಟಿ ರೂ.ವೆಚ್ಚ ಮಾಡಿದೆ. ಏಪ್ರಿಲ್ 18 ಮತ್ತು ಏಪ್ರಿಲ್ 24ರ ನಡುವೆ ಕಾಂಗ್ರೆಸ್‌ 5.7 ಕೋಟಿ ರೂಪಾಯಿ ವೆಚ್ಚದೊಂದಿಗೆ ಮೊದಲ ಸ್ಥಾನದಲ್ಲಿದೆ ಮತ್ತು ಬಿಜೆಪಿಯು 5.3 ಕೋಟಿ ರೂಪಾಯಿಗಳೊಂದಿಗೆ ಎರಡನೇ ಸ್ಥಾನದಲ್ಲಿದೆ.

ಇದನ್ನು ಓದಿ: ಚಿಕ್ಕಬಳ್ಳಾಪುರದಲ್ಲಿ 4.8 ಕೋಟಿ ನಗದು ವಶ: ಬಿಜೆಪಿ ಅಭ್ಯರ್ಥಿ ಡಾ. ಕೆ.ಸುಧಾಕರ್‌ ವಿರುದ್ಧ ಪ್ರಕರಣ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಏಷ್ಯಾ ಸಂಘರ್ಷ: ಪ್ರತ್ಯೇಕ ಘಟನೆಗಳಲ್ಲಿ ಈವರೆಗೆ ಆರು ಭಾರತೀಯರ ಸಾವು, ಒಬ್ಬರು ಕಾಣೆ; ವಿದೇಶಾಂಗ ಸಚಿವಾಲಯ ಮಾಹಿತಿ

ಪಶ್ಚಿಮ ಏಷ್ಯಾ ಸಂಘರ್ಷದ ಮಧ್ಯೆ ಗಲ್ಫ್ ಪ್ರದೇಶದಾದ್ಯಂತ ನಡೆದ ಪ್ರತ್ಯೇಕ ಘಟನೆಗಳಲ್ಲಿ ಆರು ಭಾರತೀಯ ಪ್ರಜೆಗಳು ಪ್ರಾಣ ಕಳೆದುಕೊಂಡಿದ್ದಾರೆ ಮತ್ತು ಒಬ್ಬರು ಕಾಣೆಯಾಗಿದ್ದಾರೆ ಎಂದು ವಿದೇಶಾಂಗ ಸಚಿವಾಲಯ (MEA) ಶುಕ್ರವಾರ ತಿಳಿಸಿದೆ.  ಭಾರತೀಯ ಕಾರ್ಯಾಚರಣೆಗಳು...

ಅಮೆರಿಕ-ಇಸ್ರೇಲ್ ದಾಳಿಯಲ್ಲಿ ಇರಾನ್‌ನ ಮತ್ತೊಬ್ಬ ನಾಯಕ, ಐಆರ್‌ಜಿಸಿ ವಕ್ತಾರ ಅಲಿ ಮೊಹಮ್ಮದ್ ನೈನಿ ಸಾವು

ಟೆಹ್ರಾನ್: ಇಸ್ರೇಲಿ-ಅಮೆರಿಕನ್ ಕ್ಷಿಪಣಿ ದಾಳಿಯಲ್ಲಿ ಇರಾನ್ ವಕ್ತಾರ ಜನರಲ್ ಅಲಿ ಮೊಹಮ್ಮದ್ ನೈನಿ ಸಾವನ್ನಪ್ಪಿದ್ದಾರೆ ಎಂದು ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಶುಕ್ರವಾರ ದೃಢಪಡಿಸಿದೆ. ಸರ್ಕಾರಿ ಸ್ವಾಮ್ಯದ ತಸ್ನಿಮ್ ಸುದ್ದಿ ಸಂಸ್ಥೆ...

ಶಿವಮೊಗ್ಗ: ಚಿಕಿತ್ಸೆ ನೀಡಲು ತೆರಳಿದ್ದ ವೇಳೆ ನೀರಾನೆ ದಾಳಿ; 26 ವರ್ಷದ ಪಶುವೈದ್ಯೆ ಸಾವು

ಶಿವಮೊಗ್ಗದ ತ್ಯಾವರೆಕೊಪ್ಪ ಸಿಂಹ ಮತ್ತು ಹುಲಿ ಸಫಾರಿ ಮೃಗಾಲಯದಲ್ಲಿ ಗುರುವಾರ ತಡರಾತ್ರಿ ನೀರಾನೆ ದಾಳಿಗೆ ಒಳಗಾಗಿದ್ದ 26 ವರ್ಷದ ತರಬೇತಿ ವನ್ಯಜೀವಿ ಪಶುವೈದ್ಯೆ ಸಮೀಕ್ಷಾ ರೆಡ್ಡಿ ಶುಕ್ರವಾರ ಬೆಳಿಗ್ಗೆ ಮೃತಪಟ್ಟಿದ್ದಾರೆ. ಬೆಂಗಳೂರಿನ ಬನ್ನೇರುಘಟ್ಟದವರಾದ ಸಮೀಕ್ಷಾ,...

ಸಾಮೂಹಿಕ ಮತಾಂತರಕ್ಕೆ ಕಾರಣವಾದವರಿಗೆ ಜೀವಾವಧಿ ಶಿಕ್ಷೆ; ಮಸೂದೆ ಅಂಗೀಕರಿಸಿದ ಛತ್ತೀಸ್‌ಗಢ ವಿಧಾನಸಭೆ

ಬಲವಂತ, ಪ್ರಚೋದನೆ, ವಂಚನೆ ಅಥವಾ ತಪ್ಪು ನಿರೂಪಣೆಯ ಮೂಲಕ ನಡೆಸಲಾಗುವ ಧಾರ್ಮಿಕ ಮತಾಂತರಗಳನ್ನು ತಡೆಗಟ್ಟುವ ಗುರಿಯನ್ನು ಹೊಂದಿರುವ ಮಸೂದೆಯನ್ನು ಛತ್ತೀಸ್‌ಗಢ ವಿಧಾನಸಭೆಯು ಗುರುವಾರ ಅಂಗೀಕರಿಸಿದೆ. ಸಾಮೂಹಿಕ ಮತಾಂತರ ಪ್ರಕರಣಗಳಲ್ಲಿ ಜೀವಾವಧಿ ಶಿಕ್ಷೆ ಸೇರಿದಂತೆ...

6 ವರ್ಷಗಳ ಜೈಲುವಾಸದ ನಂತರ ಮಧ್ಯಂತರ ಜಾಮೀನು; ಜೈಲಿನಿಂದ ಹೊರಬಂದ ಶಾರ್ಜೀಲ್ ಇಮಾಮ್‌

ಸಹೋದರನ ಮದುವೆಯಲ್ಲಿ ಭಾಗವಹಿಸಲು ಮತ್ತು ಅನಾರೋಗ್ಯ ಪೀಡಿತ ತಾಯಿಯನ್ನು ನೋಡಿಕೊಳ್ಳಲು ದೆಹಲಿ ನ್ಯಾಯಾಲಯವು 10 ದಿನಗಳ ಮಧ್ಯಂತರ ಜಾಮೀನು ನೀಡಿದ ನಂತರ ವಿದ್ಯಾರ್ಥಿ ಕಾರ್ಯಕರ್ತ ಶಾರ್ಜೀಲ್ ಇಮಾಮ್ ಶುಕ್ರವಾರ ಸುಮಾರು ಆರು ವರ್ಷಗಳ...

ಉತ್ತಮ್ ನಗರದಲ್ಲಿ ಗೌರವಯುತ-ಶಾಂತಿಯುತ ಈದ್ ಆಚರಿಸುವಂತೆ ನೋಡಿಕೊಳ್ಳಿ: ಅಧಿಕಾರಿಗಳಿಗೆ ಎಂದು ದೆಹಲಿ ಹೈಕೋರ್ಟ್ ನಿರ್ದೇಶನ

ರಾಷ್ಟ್ರ ರಾಜಧಾನಿಯ ದೆಹಲಿಯ ಉತ್ತಮ್ ನಗರ ಪ್ರದೇಶದಲ್ಲಿ ಹೆಚ್ಚುತ್ತಿರುವ ಕೋಮು ಉದ್ವಿಗ್ನತೆಯ ನಡುವೆ, ಸಮುದಾಯಗಳ ನಡುವೆ ಶಾಂತಿ ಕಾಪಾಡಿಕೊಳ್ಳುವ ಜೊತೆಗೆ ಶಾಂತಿಯುತ ಮತ್ತು ಘನತೆಯ ಈದ್ ಆಚರಣೆಯನ್ನು ಖಚಿತಪಡಿಸಿಕೊಳ್ಳಲು ಕಾನೂನಿನಡಿಯಲ್ಲಿ ಅನುಮತಿಸಬಹುದಾದ ಎಲ್ಲಾ...

ಕಥುವಾ ಪ್ರಕರಣ: ವೈಯಕ್ತಿಕ ಭದ್ರತೆ ಕಡಿತ; ‘ಮಗಳು ಶಾಲೆಗೆ ಹೋಗುತ್ತಿಲ್ಲ’ ಎಂದು ಕಳವಳ ವ್ಯಕ್ತಪಡಿಸಿದ ವಕೀಲೆ ದೀಪಿಕಾ ಪುಷ್ಕರ್ ನಾಥ್ 

2018 ರ ಕಥುವಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಎಂಟು ವರ್ಷದ ಬಾಲಕಿಯ ಕುಟುಂಬವನ್ನು ಪ್ರತಿನಿಧಿಸಿದ್ದ ಜಮ್ಮುವಿನ ಪ್ರಮುಖ ವಕೀಲೆ ಮತ್ತು ಮಾನವ ಹಕ್ಕುಗಳ ಕಾರ್ಯಕರ್ತೆ ದೀಪಿಕಾ ಪುಷ್ಕರ್ ನಾಥ್, ತಮ್ಮ ವೈಯಕ್ತಿಕ...

ಒಡಿಶಾ| ದಲಿತ ವ್ಯಕ್ತಿಗೆ ಭೂಮಿ ಮಾರಾಟ ಮಾಡಿದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ

ಸಾಮಾಜಿಕ ಬಹಿಷ್ಕಾರದ ಆತಂಕಕಾರಿ ಪ್ರಕರಣವೊಂದು ಒಡಿಶಾ ರಾಜ್ಯದ ಗಂಜಾಂ ಜಿಲ್ಲೆಯ ಕಬಿಸೂರ್ಯನಗರ ಪೊಲೀಸ್ ವ್ಯಾಪ್ತಿಯಲ್ಲಿರುವ ಅರ್ಜುನಪಲ್ಲಿ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಪರಿಶಿಷ್ಟ ಜಾತಿ (ಎಸ್‌ಸಿ) ಗೆ ಸೇರಿದ ವ್ಯಕ್ತಿಗೆ ಭೂಮಿ ಮಾರಾಟ ಮಾಡಿದ್ದಕ್ಕಾಗಿ...

‘ಕೇವಲ ಗಾಳಿಯಲ್ಲಿ ಕ್ರಾಂತಿ ಸಾಧ್ಯವಿಲ್ಲ, ನೆಲದ ಘಟಕವೂ ಬೇಕು’; ಇರಾನ್ ಮೇಲಿನ ಯುದ್ಧದಲ್ಲಿ ‘ಭೂ-ದಾಳಿ’ಯ ಸುಳಿವು ನೀಡಿದ ನೆತನ್ಯಾಹು

‘ನೀವು ಗಾಳಿಯಿಂದ ಕ್ರಾಂತಿಗಳನ್ನು ಮಾಡಲು ಸಾಧ್ಯವಿಲ್ಲ’ ಈ ಹೇಳಿಕೆಯ ಮೂಲಕ ಇರಾನ್ ವಿರುದ್ಧ ಅಮೆರಿಕ-ಇಸ್ರೇಲ್ ಯುದ್ಧಕ್ಕೆ 'ನೆಲದ ಅಂಶ'ದ ಸಾಧ್ಯತೆಯ ಬಗ್ಗೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಸುಳಿವು ನೀಡಿದ್ದಾರೆ ಎನ್ನುವ ಸುದ್ದಿ...

ನಕಲಿ ಆಪಲ್ ಪರಿಕರಗಳ ದಂಧೆ ಭೇದಿಸಿದ ಮುಂಬೈ ಪೊಲೀಸರು; ₹16.33 ಲಕ್ಷ ಮೌಲ್ಯದ ಸರಕುಗಳ ವಶ; ಆರು ಜನರ ವಿರುದ್ಧ ಪ್ರಕರಣ 

ಮುಂಬೈ: ನಕಲಿ ಬ್ರಾಂಡ್ ಸರಕುಗಳ ಮಾರಾಟದ ಮೇಲೆ ಪ್ರಮುಖ ದಾಳಿ ನಡೆಸಿರುವ ಮುಂಬೈ ಪೊಲೀಸರು, ಘಾಟ್ಕೋಪರ್ ಪೂರ್ವದಲ್ಲಿ ನಕಲಿ ಆಪಲ್ ಪರಿಕರಗಳನ್ನು ಮಾರಾಟ ಮಾಡುತ್ತಿದ್ದ ಸಂಘಟಿತ ದಂಧೆಯನ್ನು ಭೇದಿಸಿದ್ದಾರೆ. ಈ ಪ್ರಕರಣದಲ್ಲಿ 16.33...