Homeಮುಖಪುಟ100 ಕೋಟಿ ದಾಟಿದ ಬಿಜೆಪಿಯ ಗೂಗಲ್‌ ಜಾಹೀರಾತು ವೆಚ್ಚ!; ಕರ್ನಾಟಕವೇ ಪ್ರಮುಖ ಟಾರ್ಗೆಟ್‌

100 ಕೋಟಿ ದಾಟಿದ ಬಿಜೆಪಿಯ ಗೂಗಲ್‌ ಜಾಹೀರಾತು ವೆಚ್ಚ!; ಕರ್ನಾಟಕವೇ ಪ್ರಮುಖ ಟಾರ್ಗೆಟ್‌

- Advertisement -
- Advertisement -

ಬಿಜೆಪಿ ದೇಶದಲ್ಲಿ ಗೂಗಲ್‌ ಮತ್ತು ಯೂಟ್ಯೂಬ್‌ನಲ್ಲಿ ರಾಜಕೀಯ ಜಾಹೀರಾತಿಗೆ ಅತಿ ಹೆಚ್ಚು ವೆಚ್ಚಗೊಳಿಸಿರುವುದು ಬಹಿರಂಗವಾಗಿದೆ. ಸರ್ಚ್ ಇಂಜಿನ್‌ ಗೂಗಲ್ ಮತ್ತು ಅದರ ವಿಡಿಯೋ ಪ್ಲಾಟ್‌ಫಾರ್ಮ್ ಯೂಟ್ಯೂಬ್‌ನಲ್ಲಿ ಬಿಜೆಪಿಯ ರಾಜಕೀಯ ಜಾಹೀರಾತುಗಳ ವೆಚ್ಚ 100 ಕೋಟಿ ರೂಪಾಯಿಗಳನ್ನು ದಾಟಿದೆ. ಇಷ್ಟೊಂದು ವೆಚ್ಚದಲ್ಲಿ ಗೂಗಲ್‌ನಲ್ಲಿ ಭಾರತದ ಯಾವುದೇ ರಾಜಕೀಯ ಪಕ್ಷ ಜಾಹೀರಾತು ನೀಡಿಲ್ಲ ಎನ್ನುವುದು ಇದೀಗ ಬಹಿಂಗವಾಗಿದೆ.

ಬಿಜೆಪಿಯ ಡಿಜಿಟಲ್ ಪ್ರಚಾರಗಳ ಪ್ರಚಾರಕ್ಕಾಗಿ 101 ಕೋಟಿ ರೂ.ಗಿಂತ ಹೆಚ್ಚು ವೆಚ್ಚ ಮಾಡಿದ್ದು, ಇದು ಕಾಂಗ್ರೆಸ್, ದ್ರಾವಿಡ ಮುನ್ನೇತ್ರ ಕಳಗಂ (DMK), ಮತ್ತು ರಾಜಕೀಯ ಸಲಹಾ ಸಂಸ್ಥೆ ಇಂಡಿಯನ್ ಪೊಲಿಟಿಕಲ್ ಆಕ್ಷನ್ ಕಮಿಟಿ (I-PAC) ಮೇ 2018ರಿಂದ Google ಜಾಹೀರಾತುಗಳ ಪಾರದರ್ಶಕತೆ ವರದಿಯನ್ನು ಪ್ರಕಟಿಸಲು ಪ್ರಾರಂಭಿಸಿದಾಗಿನಿಂದ ಮಾಡಿದ ವೆಚ್ಚಕ್ಕೆ ಸಮಾನವಾಗಿದೆ.

ಇಂಡಿಯಾ ಟುಡೇ ವಿಶ್ಲೇಷಣೆಯ ಪ್ರಕಾರ, ಮೇ 31, 2018 ಮತ್ತು ಏಪ್ರಿಲ್ 25, 2024 ರ ನಡುವೆ ಪ್ರಕಟವಾದ Google ಜಾಹೀರಾತುಗಳಲ್ಲಿ ಬಿಜೆಪಿಯ ಪಾಲು ಒಟ್ಟು ಖರ್ಚಿನ ಶೇಕಡಾ 26 ರಷ್ಟಿದೆ, ಅಂದರೆ 390 ಕೋಟಿ ರೂ.ಆಗಿದೆ.

Googleನಿಂದ “ರಾಜಕೀಯ ಜಾಹೀರಾತು” ಎಂದು ವಿವರಿಸಲಾದ ಒಟ್ಟು 2,17,992 ವಿಷಯ ತುಣುಕುಗಳಲ್ಲಿ  1,61,000 ಕ್ಕಿಂತ ಹೆಚ್ಚು ಅಂದರೆ 73% ಈ ಅವಧಿಯಲ್ಲಿ ಬಿಜೆಪಿ ಪ್ರಕಟಿಸಿದೆ. ಬಿಜೆಪಿ ಪಕ್ಷದ ಬಹುಪಾಲು ಜಾಹೀರಾತುಗಳು ಕರ್ನಾಟಕದ ನಿವಾಸಿಗಳನ್ನು ಟಾರ್ಗೆಟ್‌ ಮಾಡಿಕೊಂಡು ನೀಡಲಾಗಿದ್ದು, ಇದಕ್ಕೆ 10.8 ಕೋಟಿ ರೂಪಾಯಿಗಳನ್ನು ವೆಚ್ಚ ಮಾಡಲಾಗಿದೆ, ನಂತರ ಉತ್ತರ ಪ್ರದೇಶದಲ್ಲಿ 10.3 ಕೋಟಿ, ರಾಜಸ್ಥಾನದಲ್ಲಿ 8.5 ಕೋಟಿ ರೂ, ಮತ್ತು ದೆಹಲಿಯಲ್ಲಿ 7.6 ಕೋಟಿ ರೂ. ವೆಚ್ಚ ಮಾಡಲಾಗಿದೆ.

ಒಟ್ಟಾರೆಯಾಗಿ, ತಮಿಳುನಾಡನ್ನು ಹೆಚ್ಚು ಟಾರ್ಗೆಟ್‌ ಮಾಡಿಕೊಂಡು ಗೂಗಲ್‌ನಲ್ಲಿ ಹೆಚ್ಚಾಗಿ ‘ರಾಜಕೀಯ ಜಾಹೀರಾತುಗಳನ್ನು’ ನೀಡಲಾಗಿದೆ. ನಂತರದ ಸಾಲಿನಲ್ಲಿ ತೆಲಂಗಾಣ, ಉತ್ತರ ಪ್ರದೇಶ, ಕರ್ನಾಟಕ ಮತ್ತು ಮಧ್ಯಪ್ರದೇಶ ರಾಜ್ಯಗಳಿವೆ ಎಂದು ವಿಶ್ಲೇಷಣೆಯು ತಿಳಿಸಿದೆ.

ಪಾರದರ್ಶಕತೆ ಕೇಂದ್ರದ ಮಾಹಿತಿಯ ಪ್ರಕಾರ, 45 ಕೋಟಿ ರೂಪಾಯಿಗಳೊಂದಿಗೆ, ಗೂಗಲ್ ಜಾಹೀರಾತುಗಳು ಮತ್ತು ವಿಡಿಯೋ ಜಾಹೀರಾತುಗಳೊಂದಿಗೆ ರಾಜಕೀಯ ವೆಚ್ಚದಲ್ಲಿ ಕಾಂಗ್ರೆಸ್ ಎರಡನೇ ಸ್ಥಾನದಲ್ಲಿದೆ. ಕಾಂಗ್ರೆಸ್‌ ಪಾರ್ಟಿ ಈ ಅವಧಿಯಲ್ಲಿ 5,992 ಆನ್‌ಲೈನ್ ಜಾಹೀರಾತುಗಳನ್ನು ಪ್ರಕಟಿಸಿದೆ, ಬಿಜೆಪಿಯ ಜಾಹೀರಾತುಗಳಿಗೆ ಹೋಲಿಕೆ ಮಾಡಿದರೆ ಇದು ಕೇವಲ 3.7 ಪ್ರತಿಶತದಷ್ಟು ಮಾತ್ರವಾಗಿದೆ. ಕಾಂಗ್ರೆಸ್‌ ಜಾಹೀರಾತು ಪ್ರಚಾರಗಳು ಪ್ರಾಥಮಿಕವಾಗಿ ಕರ್ನಾಟಕ ಮತ್ತು ತೆಲಂಗಾಣ ಮತ್ತು ಮಧ್ಯಪ್ರದೇಶದ ಮೇಲೆ ಕೇಂದ್ರೀಕೃತವಾಗಿತ್ತು.

ತಮಿಳುನಾಡಿನ ಆಡಳಿತ ಪಕ್ಷವಾದ ಡಿಎಂಕೆ, ಗೂಗಲ್ ಪ್ಲಾಟ್‌ಫಾರ್ಮ್‌ಗಳಲ್ಲಿ ಮೂರನೇ ಅತಿ ದೊಡ್ಡ ರಾಜಕೀಯ ಜಾಹೀರಾತುದಾರರಾಗಿದ್ದು, ಮೇ 2018 ರಿಂದ 42ಕೋಟಿ ರೂಪಾಯಿಗಳನ್ನು ಖರ್ಚು ಮಾಡಿದೆ. Googleನಲ್ಲಿ ಭಾರತ್ ರಾಷ್ಟ್ರ ಸಮಿತಿಯ (BRS) ನವೆಂಬರ್ 2023ರಲ್ಲಿ ವಿಧಾನ ಸಭೆ ಚುನಾವಣೆ ವೇಳೆ ಜಾಹೀರಾತುಗಳನ್ನು ಪ್ರಕಟಿಸಿರುವುದನ್ನು ವಿಶ್ಲೇಷಣೆಯು ಗಮನಿಸಿದೆ.

ಲೋಕಸಭೆ ಚುನಾವಣೆಯ ಎರಡನೇ ಹಂತದ ಪ್ರಚಾರದ ಸಮಯದಲ್ಲಿ, ರಾಜಕೀಯ ಪಕ್ಷಗಳು ತಮ್ಮ ಪ್ರಣಾಳಿಕೆ, ನೀತಿಗಳು ಮತ್ತು ಸಾಧನೆಗಳನ್ನು ಪ್ರಚಾರ ಮಾಡಲು ಕನಿಷ್ಠ 14.7 ಕೋಟಿ ರೂ.ವೆಚ್ಚ ಮಾಡಿದೆ. ಏಪ್ರಿಲ್ 18 ಮತ್ತು ಏಪ್ರಿಲ್ 24ರ ನಡುವೆ ಕಾಂಗ್ರೆಸ್‌ 5.7 ಕೋಟಿ ರೂಪಾಯಿ ವೆಚ್ಚದೊಂದಿಗೆ ಮೊದಲ ಸ್ಥಾನದಲ್ಲಿದೆ ಮತ್ತು ಬಿಜೆಪಿಯು 5.3 ಕೋಟಿ ರೂಪಾಯಿಗಳೊಂದಿಗೆ ಎರಡನೇ ಸ್ಥಾನದಲ್ಲಿದೆ.

ಇದನ್ನು ಓದಿ: ಚಿಕ್ಕಬಳ್ಳಾಪುರದಲ್ಲಿ 4.8 ಕೋಟಿ ನಗದು ವಶ: ಬಿಜೆಪಿ ಅಭ್ಯರ್ಥಿ ಡಾ. ಕೆ.ಸುಧಾಕರ್‌ ವಿರುದ್ಧ ಪ್ರಕರಣ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...