Homeಮುಖಪುಟ100 ಕೋಟಿ ದಾಟಿದ ಬಿಜೆಪಿಯ ಗೂಗಲ್‌ ಜಾಹೀರಾತು ವೆಚ್ಚ!; ಕರ್ನಾಟಕವೇ ಪ್ರಮುಖ ಟಾರ್ಗೆಟ್‌

100 ಕೋಟಿ ದಾಟಿದ ಬಿಜೆಪಿಯ ಗೂಗಲ್‌ ಜಾಹೀರಾತು ವೆಚ್ಚ!; ಕರ್ನಾಟಕವೇ ಪ್ರಮುಖ ಟಾರ್ಗೆಟ್‌

- Advertisement -
- Advertisement -

ಬಿಜೆಪಿ ದೇಶದಲ್ಲಿ ಗೂಗಲ್‌ ಮತ್ತು ಯೂಟ್ಯೂಬ್‌ನಲ್ಲಿ ರಾಜಕೀಯ ಜಾಹೀರಾತಿಗೆ ಅತಿ ಹೆಚ್ಚು ವೆಚ್ಚಗೊಳಿಸಿರುವುದು ಬಹಿರಂಗವಾಗಿದೆ. ಸರ್ಚ್ ಇಂಜಿನ್‌ ಗೂಗಲ್ ಮತ್ತು ಅದರ ವಿಡಿಯೋ ಪ್ಲಾಟ್‌ಫಾರ್ಮ್ ಯೂಟ್ಯೂಬ್‌ನಲ್ಲಿ ಬಿಜೆಪಿಯ ರಾಜಕೀಯ ಜಾಹೀರಾತುಗಳ ವೆಚ್ಚ 100 ಕೋಟಿ ರೂಪಾಯಿಗಳನ್ನು ದಾಟಿದೆ. ಇಷ್ಟೊಂದು ವೆಚ್ಚದಲ್ಲಿ ಗೂಗಲ್‌ನಲ್ಲಿ ಭಾರತದ ಯಾವುದೇ ರಾಜಕೀಯ ಪಕ್ಷ ಜಾಹೀರಾತು ನೀಡಿಲ್ಲ ಎನ್ನುವುದು ಇದೀಗ ಬಹಿಂಗವಾಗಿದೆ.

ಬಿಜೆಪಿಯ ಡಿಜಿಟಲ್ ಪ್ರಚಾರಗಳ ಪ್ರಚಾರಕ್ಕಾಗಿ 101 ಕೋಟಿ ರೂ.ಗಿಂತ ಹೆಚ್ಚು ವೆಚ್ಚ ಮಾಡಿದ್ದು, ಇದು ಕಾಂಗ್ರೆಸ್, ದ್ರಾವಿಡ ಮುನ್ನೇತ್ರ ಕಳಗಂ (DMK), ಮತ್ತು ರಾಜಕೀಯ ಸಲಹಾ ಸಂಸ್ಥೆ ಇಂಡಿಯನ್ ಪೊಲಿಟಿಕಲ್ ಆಕ್ಷನ್ ಕಮಿಟಿ (I-PAC) ಮೇ 2018ರಿಂದ Google ಜಾಹೀರಾತುಗಳ ಪಾರದರ್ಶಕತೆ ವರದಿಯನ್ನು ಪ್ರಕಟಿಸಲು ಪ್ರಾರಂಭಿಸಿದಾಗಿನಿಂದ ಮಾಡಿದ ವೆಚ್ಚಕ್ಕೆ ಸಮಾನವಾಗಿದೆ.

ಇಂಡಿಯಾ ಟುಡೇ ವಿಶ್ಲೇಷಣೆಯ ಪ್ರಕಾರ, ಮೇ 31, 2018 ಮತ್ತು ಏಪ್ರಿಲ್ 25, 2024 ರ ನಡುವೆ ಪ್ರಕಟವಾದ Google ಜಾಹೀರಾತುಗಳಲ್ಲಿ ಬಿಜೆಪಿಯ ಪಾಲು ಒಟ್ಟು ಖರ್ಚಿನ ಶೇಕಡಾ 26 ರಷ್ಟಿದೆ, ಅಂದರೆ 390 ಕೋಟಿ ರೂ.ಆಗಿದೆ.

Googleನಿಂದ “ರಾಜಕೀಯ ಜಾಹೀರಾತು” ಎಂದು ವಿವರಿಸಲಾದ ಒಟ್ಟು 2,17,992 ವಿಷಯ ತುಣುಕುಗಳಲ್ಲಿ  1,61,000 ಕ್ಕಿಂತ ಹೆಚ್ಚು ಅಂದರೆ 73% ಈ ಅವಧಿಯಲ್ಲಿ ಬಿಜೆಪಿ ಪ್ರಕಟಿಸಿದೆ. ಬಿಜೆಪಿ ಪಕ್ಷದ ಬಹುಪಾಲು ಜಾಹೀರಾತುಗಳು ಕರ್ನಾಟಕದ ನಿವಾಸಿಗಳನ್ನು ಟಾರ್ಗೆಟ್‌ ಮಾಡಿಕೊಂಡು ನೀಡಲಾಗಿದ್ದು, ಇದಕ್ಕೆ 10.8 ಕೋಟಿ ರೂಪಾಯಿಗಳನ್ನು ವೆಚ್ಚ ಮಾಡಲಾಗಿದೆ, ನಂತರ ಉತ್ತರ ಪ್ರದೇಶದಲ್ಲಿ 10.3 ಕೋಟಿ, ರಾಜಸ್ಥಾನದಲ್ಲಿ 8.5 ಕೋಟಿ ರೂ, ಮತ್ತು ದೆಹಲಿಯಲ್ಲಿ 7.6 ಕೋಟಿ ರೂ. ವೆಚ್ಚ ಮಾಡಲಾಗಿದೆ.

ಒಟ್ಟಾರೆಯಾಗಿ, ತಮಿಳುನಾಡನ್ನು ಹೆಚ್ಚು ಟಾರ್ಗೆಟ್‌ ಮಾಡಿಕೊಂಡು ಗೂಗಲ್‌ನಲ್ಲಿ ಹೆಚ್ಚಾಗಿ ‘ರಾಜಕೀಯ ಜಾಹೀರಾತುಗಳನ್ನು’ ನೀಡಲಾಗಿದೆ. ನಂತರದ ಸಾಲಿನಲ್ಲಿ ತೆಲಂಗಾಣ, ಉತ್ತರ ಪ್ರದೇಶ, ಕರ್ನಾಟಕ ಮತ್ತು ಮಧ್ಯಪ್ರದೇಶ ರಾಜ್ಯಗಳಿವೆ ಎಂದು ವಿಶ್ಲೇಷಣೆಯು ತಿಳಿಸಿದೆ.

ಪಾರದರ್ಶಕತೆ ಕೇಂದ್ರದ ಮಾಹಿತಿಯ ಪ್ರಕಾರ, 45 ಕೋಟಿ ರೂಪಾಯಿಗಳೊಂದಿಗೆ, ಗೂಗಲ್ ಜಾಹೀರಾತುಗಳು ಮತ್ತು ವಿಡಿಯೋ ಜಾಹೀರಾತುಗಳೊಂದಿಗೆ ರಾಜಕೀಯ ವೆಚ್ಚದಲ್ಲಿ ಕಾಂಗ್ರೆಸ್ ಎರಡನೇ ಸ್ಥಾನದಲ್ಲಿದೆ. ಕಾಂಗ್ರೆಸ್‌ ಪಾರ್ಟಿ ಈ ಅವಧಿಯಲ್ಲಿ 5,992 ಆನ್‌ಲೈನ್ ಜಾಹೀರಾತುಗಳನ್ನು ಪ್ರಕಟಿಸಿದೆ, ಬಿಜೆಪಿಯ ಜಾಹೀರಾತುಗಳಿಗೆ ಹೋಲಿಕೆ ಮಾಡಿದರೆ ಇದು ಕೇವಲ 3.7 ಪ್ರತಿಶತದಷ್ಟು ಮಾತ್ರವಾಗಿದೆ. ಕಾಂಗ್ರೆಸ್‌ ಜಾಹೀರಾತು ಪ್ರಚಾರಗಳು ಪ್ರಾಥಮಿಕವಾಗಿ ಕರ್ನಾಟಕ ಮತ್ತು ತೆಲಂಗಾಣ ಮತ್ತು ಮಧ್ಯಪ್ರದೇಶದ ಮೇಲೆ ಕೇಂದ್ರೀಕೃತವಾಗಿತ್ತು.

ತಮಿಳುನಾಡಿನ ಆಡಳಿತ ಪಕ್ಷವಾದ ಡಿಎಂಕೆ, ಗೂಗಲ್ ಪ್ಲಾಟ್‌ಫಾರ್ಮ್‌ಗಳಲ್ಲಿ ಮೂರನೇ ಅತಿ ದೊಡ್ಡ ರಾಜಕೀಯ ಜಾಹೀರಾತುದಾರರಾಗಿದ್ದು, ಮೇ 2018 ರಿಂದ 42ಕೋಟಿ ರೂಪಾಯಿಗಳನ್ನು ಖರ್ಚು ಮಾಡಿದೆ. Googleನಲ್ಲಿ ಭಾರತ್ ರಾಷ್ಟ್ರ ಸಮಿತಿಯ (BRS) ನವೆಂಬರ್ 2023ರಲ್ಲಿ ವಿಧಾನ ಸಭೆ ಚುನಾವಣೆ ವೇಳೆ ಜಾಹೀರಾತುಗಳನ್ನು ಪ್ರಕಟಿಸಿರುವುದನ್ನು ವಿಶ್ಲೇಷಣೆಯು ಗಮನಿಸಿದೆ.

ಲೋಕಸಭೆ ಚುನಾವಣೆಯ ಎರಡನೇ ಹಂತದ ಪ್ರಚಾರದ ಸಮಯದಲ್ಲಿ, ರಾಜಕೀಯ ಪಕ್ಷಗಳು ತಮ್ಮ ಪ್ರಣಾಳಿಕೆ, ನೀತಿಗಳು ಮತ್ತು ಸಾಧನೆಗಳನ್ನು ಪ್ರಚಾರ ಮಾಡಲು ಕನಿಷ್ಠ 14.7 ಕೋಟಿ ರೂ.ವೆಚ್ಚ ಮಾಡಿದೆ. ಏಪ್ರಿಲ್ 18 ಮತ್ತು ಏಪ್ರಿಲ್ 24ರ ನಡುವೆ ಕಾಂಗ್ರೆಸ್‌ 5.7 ಕೋಟಿ ರೂಪಾಯಿ ವೆಚ್ಚದೊಂದಿಗೆ ಮೊದಲ ಸ್ಥಾನದಲ್ಲಿದೆ ಮತ್ತು ಬಿಜೆಪಿಯು 5.3 ಕೋಟಿ ರೂಪಾಯಿಗಳೊಂದಿಗೆ ಎರಡನೇ ಸ್ಥಾನದಲ್ಲಿದೆ.

ಇದನ್ನು ಓದಿ: ಚಿಕ್ಕಬಳ್ಳಾಪುರದಲ್ಲಿ 4.8 ಕೋಟಿ ನಗದು ವಶ: ಬಿಜೆಪಿ ಅಭ್ಯರ್ಥಿ ಡಾ. ಕೆ.ಸುಧಾಕರ್‌ ವಿರುದ್ಧ ಪ್ರಕರಣ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...

ಗಾಜಿಯಾಬಾದ್‌| ಗೋಮಾಂಸ ಸಾಗಾಣಿಕೆ ಆರೋಪ; ವ್ಯಕ್ತಿ ಮೇಲೆ ಗುಂಪಿನಿಂದ ಹಲ್ಲೆ

ಉತ್ತರ ಪ್ರದೇಶದ ಗಾಜಿಯಾಬಾದ್‌ ನಗರದ ಶಾಸ್ತ್ರಿ ನಗರದಲ್ಲಿ ಗೋಮಾಂಸ ಸಾಗಿಸುತ್ತಿದ್ದಾರೆ ಎಂಬ ಅನುಮಾನದ ಮೇಲೆ ಸಲೀಂ ಎಂದು ಗುರುತಿಸಲಾದ ವ್ಯಕ್ತಿಯ ಮೇಲೆ ನಕಲಿ ಗೋರಕ್ಷಕರ ಗುಂಪೊಂದು ಹಲ್ಲೆ ನಡೆಸಿದೆ. ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ...

ಬಾಂಗ್ಲಾ ಗಡಿಯಾಚೆಗೆ ತಳ್ಳಿದ್ದ ನಾಲ್ವರು ಭಾರತೀಯರನ್ನು ವಾಪಸ್ ಕರೆತಂದ ಕೇಂದ್ರ ಸರ್ಕಾರ

ವರ್ಷದ ಹಿಂದೆ, ಅಂದರೆ 2025ರ ಜೂನ್ ತಿಂಗಳಲ್ಲಿ ಬಾಂಗ್ಲಾದೇಶದ ಗಡಿಯಾಚೆಗೆ ತಳ್ಳಿದ್ದ ನಾಲ್ವರು ಭಾರತೀಯರು ಬುಧವಾರ (ಜು.8) ಪಶ್ಚಿಮ ಬಂಗಾಳದ ಬೀರ್‌ಭೂಮ್ ಜಿಲ್ಲೆಯ ತಮ್ಮ ಗ್ರಾಮಕ್ಕೆ ಹಿಂದಿರುಗಿದ್ದಾರೆ ಎಂದು ವರದಿಯಾಗಿದೆ. ಸುನಾಲಿ...

ಬೆಂಗಳೂರಿನ ಜ್ವಲಂತ ನಾಗರಿಕ ಸಮಸ್ಯೆಗಳ ವಿರುದ್ಧ ಜುಲೈ 12ಕ್ಕೆ ಬೃಹತ್ ‘ಜನಾಕ್ರೋಶ ಸಮಾವೇಶ

ಸಿಲಿಕಾನ್ ಸಿಟಿ ಬೆಂಗಳೂರಿನ ನಾಗರಿಕರು ಪ್ರತಿನಿತ್ಯ ಎದುರಿಸುತ್ತಿರುವ ನರಕಸದೃಶ ಸಮಸ್ಯೆಗಳ ವಿರುದ್ಧ ಮತ್ತು ಆಡಳಿತ ವ್ಯವಸ್ಥೆಯ ಭ್ರಷ್ಟಾಚಾರವನ್ನು ಖಂಡಿಸಿ ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ಬೃಹತ್ ‘ಜನಾಕ್ರೋಶ ಸಮಾವೇಶ’ವನ್ನು ಹಮ್ಮಿಕೊಂಡಿದೆ. ಈ ‘ಜನಾಕ್ರೋಶ...

ಭೀಕರ ಪ್ರವಾಹಕ್ಕೆ ಕೊಚ್ಚಿಹೋದ 3 ಸಾವಿರ LPG ಸಿಲಿಂಡರ್

ಮಹಾರಾಷ್ಟ್ರದಲ್ಲಿ ವಾರದಿಂದ ಸುರಿಯುತ್ತಿರುವ ಮಳೆ ಇಡೀ ಜನಜೀವನವನ್ನು ಅಸ್ತವ್ಯಸ್ತಗೊಳಿಸಿದ್ದು, ಪ್ರಕೃತಿಯ ವಿಕೋಪದ ನಡುವೆ ರಾಯಗಢ ಜಿಲ್ಲೆಯಿಂದ ಅತ್ಯಂತ ಆಘಾತಕಾರಿ ವಿಡಿಯೋವೊಂದು ವೈರಲ್ ಆಗಿದೆ. ಇಲ್ಲಿನ ಎಚ್‌ಪಿಸಿಎಲ್ (HPCL) ಪಾತಾಳಗಂಗಾ ಎಲ್‌ಪಿಜಿ ಬಾಟ್ಲಿಂಗ್...

ಹೈದರಾಬಾದ್‌| ಪವನ್‌ ಕಲ್ಯಾಣ್‌ ಟೀಕಿಸಿದ ಯೂಟ್ಯೂಬರ್ ರಾವಣ್ ಮೇಲೆ ಯುಎಪಿಎ ಕೇಸ್; ನಿವಾಸದಲ್ಲಿ ಪೊಲೀಸರ ಶೋಧ

ತೆಲುಗು ಯೂಟ್ಯೂಬರ್, ಸಾಮಾಜಿಕ ಕಾರ್ಯಕರ್ತ ರಾವಣ್‌ (ಬಚಲಕೂರಿ ಜೋಸೆಫ್) ಅವರನ್ನು ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪೊಲೀಸರು ಬಂಧಿಸಿದ್ದು, ಆಂಧ್ರಪ್ರದೇಶ ಪೊಲೀಸರು ಹೈದರಾಬಾದ್‌ನಲ್ಲಿರುವ ಯೂಟ್ಯೂಬರ್ ರಾವಣ್ ನಿವಾಸದಲ್ಲಿ...

ಬೀದಿಬದಿ ವ್ಯಾಪಾರಿಗಳ ಒಕ್ಕಲೆಬ್ಬಿಸುವಿಕೆ ಖಂಡಿಸಿ ಸರ್ಕಾರದ ವಿರುದ್ದ ಬೃಹತ್ ಪ್ರತಿಭಟನೆ

ಬೆಂಗಳೂರು ನಗರದಲ್ಲಿ ಫುಟ್‌ಪಾತ್ ಒತ್ತುವರಿ ತೆರವಿನ ಹೆಸರಿನಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ನಡೆಸುತ್ತಿರುವ ಏಕಪಕ್ಷೀಯ ಕಾರ್ಯಾಚರಣೆ ಬಡ ಬೀದಿಬದಿ ವ್ಯಾಪಾರಿಗಳ ಬದುಕನ್ನು ಬೀದಿಗೆ ತಳ್ಳಿದೆ. ಪ್ರಾಧಿಕಾರದ ಈ ಜನವಿರೋಧಿ ‘ಆಪರೇಷನ್’ ಖಂಡಿಸಿ,...

ಬಿಹಾರ| ಹಿಜಾಬ್ ತೆಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಮುಸ್ಲಿಂ ಮಹಿಳೆಗೆ ಒತ್ತಾಯಿಸಿದ ಗುಂಪು

ಪುರುಷರ ಗುಂಪೊಂದು ದಾರಿಯಲ್ಲಿ ಹೋಗುತ್ತಿದ್ದ ಮುಸ್ಲಿಂ ಮಹಿಳೆಯನ್ನು ತಡೆದು ದೌರ್ಜನ್ಯ ಎಸಗಿದ್ದು, ಆಕೆ ಧರಿಸಿದ್ದ ಹಿಜಾಬ್ ತಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಹಿಂದುತ್ವ ಕಿಡಿಗೇಡಿಗಳು ಒತ್ತಾಯಿಸಿರುವ ವಿಡಿಯೊ ವೈರಲ್ ಆಗಿದೆ. ಜುಲೈ 8 ರ...

ಕೃಷಿ ಭೂಮಿ ಉಳಿಸಲು ರೈತ ಸಂಘಟನೆಗಳಿಂದ ಜುಲೈ 11ಕ್ಕೆ ‘ಬಿಡದಿ ಚಲೋ’

ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಗಾಗಿ ರೈತರ ಫಲವತ್ತಾದ ಕೃಷಿ ಭೂಮಿಯನ್ನು ವಶಪಡಿಸಿಕೊಳ್ಳಲು ಮುಂದಾಗಿರುವ ರಾಜ್ಯ ಸರ್ಕಾರದ ಜನವಿರೋಧಿ ಧೋರಣೆಯನ್ನು ಖಂಡಿಸಿ, ಜುಲೈ 11 ರಂದು ಬೃಹತ್ ‘ಬಿಡದಿ ಚಲೋ’ ಹಸಿರು ಹೆದ್ದಾರಿ ಪ್ರತಿಭಟನೆಯನ್ನು...

ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ : ಕದನ ವಿರಾಮ ಮುಕ್ತಾಯಗೊಂಡಿದೆ ಎಂದ ಟ್ರಂಪ್

ಮಂಗಳವಾರ ರಾತ್ರಿಯಿಂದ (ಭಾರತೀಯ ಕಾಲಮಾನ) ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ ಶುರುವಾಗಿದ್ದು, ಕದನ ವಿರಾಮ ಮುಕ್ತಾಯಗೊಂಡಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಟರ್ಕಿಯಲ್ಲಿ ನಡೆದ ನ್ಯಾಟೋ ಶೃಂಗಸಭೆಯಲ್ಲಿ ಮಾತನಾಡಿದ ಟ್ರಂಪ್...