Homeಮುಖಪುಟ100 ಕೋಟಿ ದಾಟಿದ ಬಿಜೆಪಿಯ ಗೂಗಲ್‌ ಜಾಹೀರಾತು ವೆಚ್ಚ!; ಕರ್ನಾಟಕವೇ ಪ್ರಮುಖ ಟಾರ್ಗೆಟ್‌

100 ಕೋಟಿ ದಾಟಿದ ಬಿಜೆಪಿಯ ಗೂಗಲ್‌ ಜಾಹೀರಾತು ವೆಚ್ಚ!; ಕರ್ನಾಟಕವೇ ಪ್ರಮುಖ ಟಾರ್ಗೆಟ್‌

- Advertisement -
- Advertisement -

ಬಿಜೆಪಿ ದೇಶದಲ್ಲಿ ಗೂಗಲ್‌ ಮತ್ತು ಯೂಟ್ಯೂಬ್‌ನಲ್ಲಿ ರಾಜಕೀಯ ಜಾಹೀರಾತಿಗೆ ಅತಿ ಹೆಚ್ಚು ವೆಚ್ಚಗೊಳಿಸಿರುವುದು ಬಹಿರಂಗವಾಗಿದೆ. ಸರ್ಚ್ ಇಂಜಿನ್‌ ಗೂಗಲ್ ಮತ್ತು ಅದರ ವಿಡಿಯೋ ಪ್ಲಾಟ್‌ಫಾರ್ಮ್ ಯೂಟ್ಯೂಬ್‌ನಲ್ಲಿ ಬಿಜೆಪಿಯ ರಾಜಕೀಯ ಜಾಹೀರಾತುಗಳ ವೆಚ್ಚ 100 ಕೋಟಿ ರೂಪಾಯಿಗಳನ್ನು ದಾಟಿದೆ. ಇಷ್ಟೊಂದು ವೆಚ್ಚದಲ್ಲಿ ಗೂಗಲ್‌ನಲ್ಲಿ ಭಾರತದ ಯಾವುದೇ ರಾಜಕೀಯ ಪಕ್ಷ ಜಾಹೀರಾತು ನೀಡಿಲ್ಲ ಎನ್ನುವುದು ಇದೀಗ ಬಹಿಂಗವಾಗಿದೆ.

ಬಿಜೆಪಿಯ ಡಿಜಿಟಲ್ ಪ್ರಚಾರಗಳ ಪ್ರಚಾರಕ್ಕಾಗಿ 101 ಕೋಟಿ ರೂ.ಗಿಂತ ಹೆಚ್ಚು ವೆಚ್ಚ ಮಾಡಿದ್ದು, ಇದು ಕಾಂಗ್ರೆಸ್, ದ್ರಾವಿಡ ಮುನ್ನೇತ್ರ ಕಳಗಂ (DMK), ಮತ್ತು ರಾಜಕೀಯ ಸಲಹಾ ಸಂಸ್ಥೆ ಇಂಡಿಯನ್ ಪೊಲಿಟಿಕಲ್ ಆಕ್ಷನ್ ಕಮಿಟಿ (I-PAC) ಮೇ 2018ರಿಂದ Google ಜಾಹೀರಾತುಗಳ ಪಾರದರ್ಶಕತೆ ವರದಿಯನ್ನು ಪ್ರಕಟಿಸಲು ಪ್ರಾರಂಭಿಸಿದಾಗಿನಿಂದ ಮಾಡಿದ ವೆಚ್ಚಕ್ಕೆ ಸಮಾನವಾಗಿದೆ.

ಇಂಡಿಯಾ ಟುಡೇ ವಿಶ್ಲೇಷಣೆಯ ಪ್ರಕಾರ, ಮೇ 31, 2018 ಮತ್ತು ಏಪ್ರಿಲ್ 25, 2024 ರ ನಡುವೆ ಪ್ರಕಟವಾದ Google ಜಾಹೀರಾತುಗಳಲ್ಲಿ ಬಿಜೆಪಿಯ ಪಾಲು ಒಟ್ಟು ಖರ್ಚಿನ ಶೇಕಡಾ 26 ರಷ್ಟಿದೆ, ಅಂದರೆ 390 ಕೋಟಿ ರೂ.ಆಗಿದೆ.

Googleನಿಂದ “ರಾಜಕೀಯ ಜಾಹೀರಾತು” ಎಂದು ವಿವರಿಸಲಾದ ಒಟ್ಟು 2,17,992 ವಿಷಯ ತುಣುಕುಗಳಲ್ಲಿ  1,61,000 ಕ್ಕಿಂತ ಹೆಚ್ಚು ಅಂದರೆ 73% ಈ ಅವಧಿಯಲ್ಲಿ ಬಿಜೆಪಿ ಪ್ರಕಟಿಸಿದೆ. ಬಿಜೆಪಿ ಪಕ್ಷದ ಬಹುಪಾಲು ಜಾಹೀರಾತುಗಳು ಕರ್ನಾಟಕದ ನಿವಾಸಿಗಳನ್ನು ಟಾರ್ಗೆಟ್‌ ಮಾಡಿಕೊಂಡು ನೀಡಲಾಗಿದ್ದು, ಇದಕ್ಕೆ 10.8 ಕೋಟಿ ರೂಪಾಯಿಗಳನ್ನು ವೆಚ್ಚ ಮಾಡಲಾಗಿದೆ, ನಂತರ ಉತ್ತರ ಪ್ರದೇಶದಲ್ಲಿ 10.3 ಕೋಟಿ, ರಾಜಸ್ಥಾನದಲ್ಲಿ 8.5 ಕೋಟಿ ರೂ, ಮತ್ತು ದೆಹಲಿಯಲ್ಲಿ 7.6 ಕೋಟಿ ರೂ. ವೆಚ್ಚ ಮಾಡಲಾಗಿದೆ.

ಒಟ್ಟಾರೆಯಾಗಿ, ತಮಿಳುನಾಡನ್ನು ಹೆಚ್ಚು ಟಾರ್ಗೆಟ್‌ ಮಾಡಿಕೊಂಡು ಗೂಗಲ್‌ನಲ್ಲಿ ಹೆಚ್ಚಾಗಿ ‘ರಾಜಕೀಯ ಜಾಹೀರಾತುಗಳನ್ನು’ ನೀಡಲಾಗಿದೆ. ನಂತರದ ಸಾಲಿನಲ್ಲಿ ತೆಲಂಗಾಣ, ಉತ್ತರ ಪ್ರದೇಶ, ಕರ್ನಾಟಕ ಮತ್ತು ಮಧ್ಯಪ್ರದೇಶ ರಾಜ್ಯಗಳಿವೆ ಎಂದು ವಿಶ್ಲೇಷಣೆಯು ತಿಳಿಸಿದೆ.

ಪಾರದರ್ಶಕತೆ ಕೇಂದ್ರದ ಮಾಹಿತಿಯ ಪ್ರಕಾರ, 45 ಕೋಟಿ ರೂಪಾಯಿಗಳೊಂದಿಗೆ, ಗೂಗಲ್ ಜಾಹೀರಾತುಗಳು ಮತ್ತು ವಿಡಿಯೋ ಜಾಹೀರಾತುಗಳೊಂದಿಗೆ ರಾಜಕೀಯ ವೆಚ್ಚದಲ್ಲಿ ಕಾಂಗ್ರೆಸ್ ಎರಡನೇ ಸ್ಥಾನದಲ್ಲಿದೆ. ಕಾಂಗ್ರೆಸ್‌ ಪಾರ್ಟಿ ಈ ಅವಧಿಯಲ್ಲಿ 5,992 ಆನ್‌ಲೈನ್ ಜಾಹೀರಾತುಗಳನ್ನು ಪ್ರಕಟಿಸಿದೆ, ಬಿಜೆಪಿಯ ಜಾಹೀರಾತುಗಳಿಗೆ ಹೋಲಿಕೆ ಮಾಡಿದರೆ ಇದು ಕೇವಲ 3.7 ಪ್ರತಿಶತದಷ್ಟು ಮಾತ್ರವಾಗಿದೆ. ಕಾಂಗ್ರೆಸ್‌ ಜಾಹೀರಾತು ಪ್ರಚಾರಗಳು ಪ್ರಾಥಮಿಕವಾಗಿ ಕರ್ನಾಟಕ ಮತ್ತು ತೆಲಂಗಾಣ ಮತ್ತು ಮಧ್ಯಪ್ರದೇಶದ ಮೇಲೆ ಕೇಂದ್ರೀಕೃತವಾಗಿತ್ತು.

ತಮಿಳುನಾಡಿನ ಆಡಳಿತ ಪಕ್ಷವಾದ ಡಿಎಂಕೆ, ಗೂಗಲ್ ಪ್ಲಾಟ್‌ಫಾರ್ಮ್‌ಗಳಲ್ಲಿ ಮೂರನೇ ಅತಿ ದೊಡ್ಡ ರಾಜಕೀಯ ಜಾಹೀರಾತುದಾರರಾಗಿದ್ದು, ಮೇ 2018 ರಿಂದ 42ಕೋಟಿ ರೂಪಾಯಿಗಳನ್ನು ಖರ್ಚು ಮಾಡಿದೆ. Googleನಲ್ಲಿ ಭಾರತ್ ರಾಷ್ಟ್ರ ಸಮಿತಿಯ (BRS) ನವೆಂಬರ್ 2023ರಲ್ಲಿ ವಿಧಾನ ಸಭೆ ಚುನಾವಣೆ ವೇಳೆ ಜಾಹೀರಾತುಗಳನ್ನು ಪ್ರಕಟಿಸಿರುವುದನ್ನು ವಿಶ್ಲೇಷಣೆಯು ಗಮನಿಸಿದೆ.

ಲೋಕಸಭೆ ಚುನಾವಣೆಯ ಎರಡನೇ ಹಂತದ ಪ್ರಚಾರದ ಸಮಯದಲ್ಲಿ, ರಾಜಕೀಯ ಪಕ್ಷಗಳು ತಮ್ಮ ಪ್ರಣಾಳಿಕೆ, ನೀತಿಗಳು ಮತ್ತು ಸಾಧನೆಗಳನ್ನು ಪ್ರಚಾರ ಮಾಡಲು ಕನಿಷ್ಠ 14.7 ಕೋಟಿ ರೂ.ವೆಚ್ಚ ಮಾಡಿದೆ. ಏಪ್ರಿಲ್ 18 ಮತ್ತು ಏಪ್ರಿಲ್ 24ರ ನಡುವೆ ಕಾಂಗ್ರೆಸ್‌ 5.7 ಕೋಟಿ ರೂಪಾಯಿ ವೆಚ್ಚದೊಂದಿಗೆ ಮೊದಲ ಸ್ಥಾನದಲ್ಲಿದೆ ಮತ್ತು ಬಿಜೆಪಿಯು 5.3 ಕೋಟಿ ರೂಪಾಯಿಗಳೊಂದಿಗೆ ಎರಡನೇ ಸ್ಥಾನದಲ್ಲಿದೆ.

ಇದನ್ನು ಓದಿ: ಚಿಕ್ಕಬಳ್ಳಾಪುರದಲ್ಲಿ 4.8 ಕೋಟಿ ನಗದು ವಶ: ಬಿಜೆಪಿ ಅಭ್ಯರ್ಥಿ ಡಾ. ಕೆ.ಸುಧಾಕರ್‌ ವಿರುದ್ಧ ಪ್ರಕರಣ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...