Homeಮುಖಪುಟಈಶಾನ್ಯ ಪ್ರವಾಹಕ್ಕೆ ಕುರುಡಾಗಿರುವ ಬಿಜೆಪಿಗೆ ಅಧಿಕಾರದಲ್ಲಿ ಮಾತ್ರ ಆಸಕ್ತಿ: ಕಾಂಗ್ರೆಸ್

ಈಶಾನ್ಯ ಪ್ರವಾಹಕ್ಕೆ ಕುರುಡಾಗಿರುವ ಬಿಜೆಪಿಗೆ ಅಧಿಕಾರದಲ್ಲಿ ಮಾತ್ರ ಆಸಕ್ತಿ: ಕಾಂಗ್ರೆಸ್

- Advertisement -
- Advertisement -

ಪ್ರವಾಹದಿಂದ ಬಳಲುತ್ತಿರುವ ಈಶಾನ್ಯ ಭಾಗದ ಜನರ ನೋವಿಗೆ ಕುರುಡಾಗಿರುವ ಬಿಜೆಪಿಗೆ ಮಹಾರಾಷ್ಟ್ರದಲ್ಲಿ ಸರ್ಕಾರವನ್ನು ಬೀಳಿಸಿ ಅಧಿಕಾರಕ್ಕೆ ಬರುವಲ್ಲಿ ಮಾತ್ರ ಆಸಕ್ತಿ ವಹಿಸುತ್ತಿದೆ ಎಂದು ಕಾಂಗ್ರೆಸ್ ಗುರುವಾರ ಆರೋಪಿಸಿದೆ.

ಪ್ರವಾಹದಿಂದ  ತತ್ತರಿಸಿರುವ ಪ್ರದೇಶಗಳಲ್ಲಿ ಪರಿಹಾರ ಕ್ರಮಗಳನ್ನು ನೀಡುವತ್ತ ಗಮನ ಹರಿಸುವ ಬದಲು ಮಹಾರಾಷ್ಟ್ರದಲ್ಲಿ ಸರ್ಕಾರವನ್ನು ಅಸ್ಥಿರಗೊಳಿಸಲು ಪ್ರಯತ್ನಿಸುತ್ತಿದೆ ಎಂದು ಹೇಳಿದೆ.

ಅಸ್ಸಾಂನಲ್ಲಿ ಪ್ರವಾಹ ಪರಿಸ್ಥಿತಿ ಗುರುವಾರ ಮತ್ತಷ್ಟು ಕಠಿಣವಾಗಿದ್ದು, ಈವರೆಗೆ 54.5 ಲಕ್ಷಕ್ಕೂ ಹೆಚ್ಚು ಜನರು ಸಂತ್ರಸ್ತರಾಗಿದ್ದಾರೆ. ಇಂದು ಹೊಸದಾಗಿ 12 ಸಾವುಗಳು ವರದಿಯಾಗಿವೆ. ಮೇ ಮಧ್ಯದಿಂದ ಉಂಟಾಗಿರುವ ಪ್ರವಾಹದಿಂದಾಗಿ ಈವರೆಗೆ ಸಾವನ್ನಪ್ಪಿರುವವರ ಸಂಖ್ಯೆ 101ಕ್ಕೆ ಏರಿದೆ.

ಇದನ್ನೂ ಓದಿ: ಮಹಾರಾಷ್ಟ್ರ: ಸಿಎಂ ಗೃಹ ಕಚೇರಿ ಬಿಟ್ಟು ಸ್ವಂತ ಮನೆಗೆ ತೆರಳಿದ ಮುಖ್ಯಮಂತ್ರಿ ಉದ್ಧವ್ ಠಾಕ್ರೆ

ಎಐಸಿಸಿ ಸುದ್ದಿಗೋಷ್ಠಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪಕ್ಷದ ಸಂಸದ ಗೌರವ್ ಗೊಗೊಯ್, “ಪ್ರಸ್ತುತ ಅಸ್ಸಾಂ, ಮೇಘಾಲಯದಲ್ಲಿ ಪ್ರವಾಹ ಉಂಟಾಗಿದೆ ಎಂದು ನಮಗೆಲ್ಲರಿಗೂ ತಿಳಿದಿದೆ, ಈ ಹಿಂದೆ ಪ್ರವಾಹ ಅಥವಾ ಯಾವುದೇ ನೈಸರ್ಗಿಕ ವಿಕೋಪ ಸಂಭವಿಸಿದಾಗ, ಜವಾಬ್ದಾರಿಯುತ ಕೇಂದ್ರ ಸರ್ಕಾರ ತಂಡವನ್ನು ಕಳುಹಿಸುತ್ತದೆ. ಮಂತ್ರಿಗಳು, ಪ್ರಧಾನ ಮಂತ್ರಿಗಳು ಸ್ವತಃ ಭೇಟಿ ನೀಡಿ, ಅಧ್ಯಯನ ಮತ್ತು ಪರಿಸ್ಥಿತಿಯನ್ನು ಅವಲೋಕಿಸಿ ನಂತರ ಪರಿಹಾರ ಮತ್ತು ತುರ್ತು ಸಹಾಯವನ್ನು ನೀಡುತ್ತಾರೆ. ಆದರೆ, ಬಿಜೆಪಿಯು ತನ್ನ ಅಧಿಕಾರದ ಲಾಲಸೆಯಲ್ಲಿ ಪ್ರವಾಹದಿಂದ ಬಳಲುತ್ತಿರುವ ಈಶಾನ್ಯ ಜನರ ನೋವಿಗೆ ಕುರುಡಾಗಿದೆ” ಎಂದು ಆರೋಪಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಗುಜರಾತ್ ಚುನಾವಣಾ ಪ್ರಚಾರದಲ್ಲಿ ನಿರತರಾಗಿದ್ದಾರೆ ಅಥವಾ ಮಹಾರಾಷ್ಟ್ರದಲ್ಲಿ ಸರ್ಕಾರವನ್ನು ಅಸ್ಥಿರಗೊಳಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಇದು ಜನರ ನೋವಿಗೆ ಕುರುಡಾಗಿರುವ ಸರ್ಕಾರ. ಜನರ ನೋವಿಗೆ ಸ್ಪಂದಿಸಬೇಕಾದ ಸರ್ಕಾರವು ತನ್ನ ಸಂಪನ್ಮೂಲಗಳನ್ನು ತನ್ನದೇ ಆದ ರಾಜಕೀಯ ಮಹತ್ವಾಕಾಂಕ್ಷೆಗಳಿಗೆ ಬಳಸುತ್ತಿರುವುದನ್ನು ನಾವು ಹಿಂದೆಂದೂ ನೋಡಿಲ್ಲ” ಎಂದು ಅಸ್ಸಾಂನಿಂದ ಬಂದ ಸಂಸದ ಗೌರವ್ ಗೊಗೊಯ್ ಕಿಡಿಕಾರಿದ್ದಾರೆ.

ಇನ್ನು ಮಹಾರಾಷ್ಟ್ರ ಸರ್ಕಾರದಲ್ಲಿ ಎದ್ದಿರುವ ಬಂಡಾಯಕ್ಕೆ ಗುರುವಾರ ಹೊಸ ತಿರುವು ಸಿಕ್ಕಿದೆ. ಸಚಿವ ಏಕನಾಥ್‌ ಶಿಂಧೆ ನೇತೃತ್ವದ ಬಂಡಾಯ ಪಾಳಯಕ್ಕೆ ಹೊಸದಾಗಿ ಸೇರ್ಪಡೆಯಾದ ಶಿವಸೇನೆ ಶಾಸಕ ದೀಪಕ್ ಕೇಸರ್ಕರ್ ಅವರು, ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವುದನ್ನು ತಮ್ಮ ಪಾಳಯ ಬಯಸುತ್ತಿಲ್ಲ ಎಂದು ಹೇಳಿದ್ದಾರೆ. ರಾಜೀನಾಮೆಗೆ ಬದಲಾಗಿದೆ, ಶಿವಸೇನೆಯು ಬಿಜೆಪಿಯೊಂದಿಗೆ ಮೈತ್ರಿ ಮಾಡಿ, ಹೊಸ ಸರ್ಕಾರವನ್ನು ರಚಿಸಬೇಕೆಂದು ನಾವು ಬಯಸುತ್ತೇವೆ ಎಂದು ಅವರು ಎನ್‌ಡಿಟಿವಿಗೆ ತಿಳಿಸಿದ್ದಾರೆ.


ಇದನ್ನೂ ಓದಿ: ‘ಉದ್ಧವ್ ಠಾಕ್ರೆ ರಾಜೀನಾಮೆ ಬೇಡ; ಬಿಜೆಪಿ ಜೊತೆಗೆ ಮೈತ್ರಿ ಮಾಡೋಣ’- ಶಿವಸೇನೆಯ ಬಂಡಾಯ ಶಾಸಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...