Homeಕರ್ನಾಟಕಬಿಜೆಪಿ ಲಜ್ಜೆಗೆಟ್ಟ, ಕರೆಪ್ಟ್ ಪೊಲಿಟಿಕಲ್ ಪಾರ್ಟಿ: ಸಿದ್ದರಾಮಯ್ಯ ಟೀಕೆ

ಬಿಜೆಪಿ ಲಜ್ಜೆಗೆಟ್ಟ, ಕರೆಪ್ಟ್ ಪೊಲಿಟಿಕಲ್ ಪಾರ್ಟಿ: ಸಿದ್ದರಾಮಯ್ಯ ಟೀಕೆ

ರಾಜ್ಯದಲ್ಲಿ ಮತ್ತೆ ಸರ್ಕಾರ ರಚನೆ ಮಾಡುತ್ತೇವೆ. ನಮ್ಮ ಸರ್ಕಾರ ಬಂದರೆ ಭೂಸುಧಾರಣಾ ತಿದ್ದುಪಡಿ ಕಾಯ್ದೆಯನ್ನು ಹಿಂದಿನಂತೆಯೇ ಬಲಾಯಿಸುತ್ತೇವೆ.

- Advertisement -
- Advertisement -

ಭಾರತೀಯ ಜನತಾ ಪಕ್ಷ ಕರೆಪ್ಟ್ ಪೊಲಿಟಿಕಲ್ ಮತ್ತು ಲಜ್ಜೆಗಟ್ಟ ಪಕ್ಷ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.

ಮಂಡ್ಯದಲ್ಲಿ ಏರ್ಪಡಿಸಿದ್ದ ರೈತರ ಸಮಾವೇಶದಲ್ಲಿ ಮಾತನಾಡಿದ ಅವರು ಬಿಜೆಪಿ ಸರ್ಕಾರ ಅಮಿತ್ ಶಾ, ನರೇಂದ್ರ ಮೋದಿ ಮತ್ತು ಬಂಡವಾಳಗಾರರಿಗೆ ಮಣಿದು ಭೂಸುದಾರಣೆ ಕಾಯ್ದೆಯನ್ನು ತಿದ್ದುಪಡಿ ಮಾಡಿದೆ. ಕಾರ್ಪೊರೇಟ್ ಕುಳಗಳ ಒತ್ತಡಕ್ಕೆ ಮಣಿದಿದೆ ಎಂದು ಆರೋಪಿಸಿದರು.

ಇದನ್ನೂ ಓದಿ: ರಾಜ್ಯ ಸರ್ಕಾರಕ್ಕೆ ಮನುಷ್ಯತ್ವ ಇದೆಯಾ?; ಕುಮಾರಸ್ವಾಮಿ ಆಕ್ರೋಶ

ನಾನು ರಾಜಕೀಯಕ್ಕಾಗಿ ಹೇಳುತ್ತಿಲ್ಲ. ಸತ್ಯವನ್ನು ಹೇಳುತ್ತಿದ್ದೇನೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಅಶೋಕ ಲಂಚ ತೆಗೆದುಕೊಂಡು ತಿದ್ದುಪಡಿ ಮಾಡಿದ್ದಾರೆ. ರಿಯಲ್ ಎಸ್ಟೇಟ್ ಕುಳಗಳು ಒತ್ತಡದಿಂದ ಬಿಜೆಪಿ ಸರ್ಕಾರ ಈ ಕೆಲಸ ಮಾಡಿದೆ ಎಂದು ದೂರಿದರು.

ಶ್ರೀಮಂತರು, ಬಂಡವಾಳಗಾರರು ಭೂಮಿ ಖರೀದಿಸಲು ಇದ್ದ ಅಡೆತಡೆಗಳನ್ನು ಈ ಸರ್ಕಾರ ಸಡಿಲಗೊಳಿಸಿದೆ. ಗೇಣಿದಾರರು, ರೈತರಿಂದ ಯಾರು ಬೇಕಾದರೂ ಭೂಮಿ ಖರೀದಿಸಲು ಅವಕಾಶ ಕಲ್ಪಿಸಲಾಗಿದೆ. ಭೂಮಿ ಖರೀದಿ ಸಂಬಂಧ 13,814 ಪ್ರಕರಣಗಳು ಬಾಕಿ ಇದ್ದವು. ಇವುಗಳನ್ನು ಮುಚ್ಚಿ ಹಾಕಲು ಬಿಜೆಪಿ ಹೊರಟಿದೆ ಎಂದು ಟೀಕಾಪ್ರಹಾರ ನಡೆಸಿದರು.

ರಾಜ್ಯದಲ್ಲಿ ನಮ್ಮ ಸರ್ಕಾರ ಮತ್ತೆ ಸರ್ಕಾರ ರಚನೆ ಮಾಡಿಯೇ ತೀರುತ್ತದೆ. ಇದು ನೂರರಷ್ಟು ಖಚಿತ. ಇದರಲ್ಲಿ ಅನುಮಾನವೇ ಇಲ್ಲ. ನಮ್ಮ ಸರ್ಕಾರ ಬಂದರೆ ಭೂಸುಧಾರಣಾ ತಿದ್ದುಪಡಿ ಕಾಯ್ದೆಯನ್ನು ಹಿಂದಿನಂತೆಯೇ ಬಲಾಯಿಸುತ್ತೇವೆ. ಅಗತ್ಯವಸ್ತುಗಳ ತಿದ್ದುಪಡಿ ಮತ್ತು ಎಪಿಎಂಸಿ ತಿದ್ದುಪಡಿ ಕಾಯ್ದೆಯನ್ನು ರೈತರಿಗೆ ಅನುಕೂಲವಾಗುವಂತೆ ಮಾಡುತ್ತೇವೆ ಎಂದು ಭರವಸೆ ನೀಡಿದರು.

ಇದನ್ನೂ ಓದಿ: ‘ರೈತರ ಆದಾಯ ಡಬಲ್ ಆಗಲಿಲ್ಲ. ಬದಲಿಗೆ ರೈತರ ಉತ್ಪಾದನಾ ವೆಚ್ಚ ಮಾತ್ರ ಡಬಲ್ ಆಗಿದೆ’

ಕೊರೊನದಿಂದ ಜನ ಸಾಯುತ್ತಿದ್ದಾರೆ. ಈ ಬಿಜೆಪಿ ಸರ್ಕಾರ ಹೆಣಗಳಲ್ಲಿ ಹಣ ಮಾಡುತ್ತಿದೆ. ಕೊರೊನಕ್ಕಾಗಿ 4800 ಕೋಟಿ ವೆಚ್ಚ ಮಾಡಿದ್ದೇನೆ ಎಂದು ಮುಖ್ಯಮಂತ್ರಿ ಹೇಳುತ್ತಾರೆ. 2 ಸಾವಿರ ಕೋಟ ಲೂಟಿ ಮಾಡಿದ್ದಾರೆ. ಪಿಪಿಇ ಕಿಟ್, ವೆಂಟಿಲೇಟರ್ ಖರೀದಿಯಲ್ಲಿ ಹಣವನ್ನು ಕೊಳ್ಳೆಹೊಡೆದಿದ್ದಾರೆ. 10 ಪರ್ಸೆಂಟ್, 20 ಪರ್ಷೆಂಟ್ ಲಂಚ ಪಡೆದಿದ್ದಾರೆಯೇ ಎಂದು ಪ್ರಶ್ನಿಸಿದರು.

ಮುಖ್ಯಮಂತ್ರಿ ಯಡಿಯೂರಪ್ಪ ಚೆಕ್ ಮೂಲಕ ಹಣ ಪಡೆದರು. ಮಗ ಆರ್‌ಟಿಜಿಎಸ್ ಮೂಲಕ ಹಣ ಪಡೆದಿದ್ದಾರೆ. ಇಂತಹ ಕೆಟ್ಟ ಸರ್ಕಾರವನ್ನು ಹಿಂದೆಂದೂ ಕಂಡಿಲ್ಲ. ಇದೊಂದು ರೈತ ವಿರೋಧಿ ಸರ್ಕಾರ. ಎಂದು ಟೀಕಿಸಿದರು.

ನಮ್ಮ ಪಕ್ಷ ಮತ್ತು ಸರ್ಕಾರ ರೈತಪರವಾಗಿ ಇರುತ್ತದೆ. ಹಿಂದೆಯೂ ಇದೆ. ಮುಂದೆಯೂ ಇರುತ್ತದೆ. ರೈತರ ಸಮಸ್ಯೆಗಳನ್ನು ಆಲಿಸಿದ್ದೇನೆ. ಈ ಬಗ್ಗೆ ಕ್ರಮ ಕೈಗೊಳ್ಳುತ್ತೇನೆ ಎಂದು ತಿಳಿಸಿದರು.

ಇದನ್ನೂ ಓದಿ: ಭಾರತದ ರೈತರಿಗೆ ತಿಳಿದಿರುವ ಸತ್ಯ ಅರ್ಥಶಾಸ್ತ್ರಜ್ಞರಿಗೆ ಗೊತ್ತಾಗುತ್ತಿಲ್ಲ: ಯೋಗೇಂದ್ರ ಯಾದವ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...