Homeಕರ್ನಾಟಕಬಿಜೆಪಿಯ ಕೊಳಕು ಮನಸ್ಥಿತಿ | ಹಲಾಲ್ ಬಜೆಟ್ ಟೀಕೆಗೆ ಸಿದ್ದರಾಮಯ್ಯ ಕಿಡಿ

ಬಿಜೆಪಿಯ ಕೊಳಕು ಮನಸ್ಥಿತಿ | ಹಲಾಲ್ ಬಜೆಟ್ ಟೀಕೆಗೆ ಸಿದ್ದರಾಮಯ್ಯ ಕಿಡಿ

- Advertisement -
- Advertisement -

2025-26ನೇ ಸಾಲಿನ ಬಜೆಟ್ ಗಾತ್ರ 4,09,549 ಕೋಟಿಯಾಗಿದ್ದು, ಮೊದಲ ಬಾರಿಗೆ ರಾಜ್ಯದ ಆಯವ್ಯಯ ಗಾತ್ರ 4 ಲಕ್ಷ ಕೋಟಿ ರೂ.ಗಳ ಗಡಿ ದಾಟಿರುವುದು ಒಂದು ಹೊಸ ಮೈಲಿಗಲ್ಲು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್ ಮಂಡನೆ ನಂತರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಶುಕ್ರವಾರ ತಿಳಿಸಿದ್ದಾರೆ.

2025-26 ನೇ ಸಾಲಿನ ಮುಂಗಡ ಪತ್ರವನ್ನು ಮಂಡಿಸಲಾಗಿದ್ದು, ಕರ್ನಾಟಕ ಸರ್ಕಾರ ಕಳೆದ ಸಾಲಿನಲ್ಲಿ 3,71,121 ಕೋಟಿ ಬಜೆಟ್ ಮಂಡಿಸಿತ್ತು. ಈ ಬಾರಿಯ ಬಜೆಟ್ ಗಾತ್ರ 4,09,549 ಕೋಟಿಯಾಗಿದೆ. ಮೊದಲ ಬಾರಿಗೆ ನಮ್ಮ ರಾಜ್ಯದ ಆಯವ್ಯಯ ಗಾತ್ರ 4 ಲಕ್ಷ ಕೋಟಿ ರೂ.ಗಳ ಗಡಿ ದಾಟಿರುವುದು ಒಂದು ಹೊಸ ಮೈಲಿಗಲ್ಲು. ಕಳೆದ ಬಾರಿಗಿಂತ ಈ ಬಾರಿ 38166 ಕೋಟಿ ರೂ.ಗಳು ಹೆಚ್ಚಾಗಿದೆ. ಬಜೆಟ್ ನ ಬೆಳವಣಿಗಯ ದರ 10.3 ರಷ್ಟು ಹೆಚ್ಚಳವಾಗಿದೆ ಎಂದು ಅವರು ಹೇಳಿದ್ದಾರೆ..

ಕಳೆದ ವರ್ಷ ರಾಜಸ್ವ ಸ್ವೀಕೃತಿಗಳು, 263178 ಕೋಟಿ ಇದ್ದು ಈ ಬಾರಿ 2,92,477 ಕೋಟಿ ರೂ. ಇದೆ. 2024-25ರ ಆಯವ್ಯಯಕ್ಕೆ ಹೋಲಿಸಿದರೆ 29,299 ಕೋಟಿ ಹೆಚ್ಚಾಗಿದೆ –ಬೆಳವಣಿಗೆ ದರ 11.1 % ರಷ್ಟಿದೆ. 2024-25ರ ರಲ್ಲಿ ರಾಜಸ್ವ ವೆಚ್ಚ 2,90,531 ಕೋಟಿ ಇದ್ದದ್ದು, 2025-26ರಲ್ಲಿ 3,11,739 ಕೋಟಿ , 2024-25ರ ಆಯವ್ಯಯಕ್ಕೆ ಹೋಲಿಸಿದರೆ 21,207 ಕೋಟಿ ಹೆಚ್ಚಳ-ಬೆಳವಣಿಗೆ ದರ 7.3 % ರಷ್ಟಿದೆ ಎಂದಿದ್ದಾರೆ.

2024-25ರಲ್ಲಿ ಸಾಲ 1,05,246 ಕೋಟಿ , ಈ ವರ್ಷ ಸಾಲ 1,16,000 ಕೋಟಿ , 2024-25ರ ಆಯವ್ಯಯಕ್ಕೆ ಹೋಲಿಸಿದರೆ 10,754 ಕೋಟಿ ಹೆಚ್ಚಳವಾಗಿದೆ(10.2% ರಷ್ಟು ಹೆಚ್ಚಳ). ಇದಕ್ಕೆ ವಿರೋಧಪಕ್ದದವರು ಟೀಕಿಸುತ್ತಾರೆ . ನಮಗೆ ಸಾಲ ಮಾಡುವ ಅವಕಾಶವೆಷ್ಟಿದೆ. ಆರ್ಥಿಕ ಹೊಣಗಾರಿಕೆ ಅಧಿನಿಯಮದ ಮಾನದಂಡದಂತೆ, ಸಾಲದ ಮೊತ್ತ GSDP ಯ ಶೇ.25 ರಷ್ಟಿರಬೇಕು, ರಾಜ್ಯ ಶೇ.24.91 ರಷ್ಟರ ಮಿತಿಯಲ್ಲಿದೆ. ವಿತ್ತೀಯ ಕೊರತೆಯನ್ನು GSDPಯ ಶೇ.3 ರಷ್ಟುನ್ನು ಮೀರಬಾರದೆಂದಿದ್ದು, 2.95 % ರಷ್ಟಿದೆ ಎಂದು ಹೇಳಿದ್ದಾರೆ.

ರಾಜಸ್ವ ಕೊರತೆ 19262 ಕೋಟಿ ಇದೆ . ಈ ಬಾರಿ ರಾಜಸ್ವ ಕೊರತೆಯಿಂದ ರಾಜಸ್ವ ಹೆಚ್ಚುವರಿ ಸ್ಥಿತಿಗೆ ಬರಲಿದ್ದೆವೆ. 2024-25 ರಲ್ಲಿ ರಾಜಸ್ವ ಕೊರತೆ 0.95 ಇತ್ತು, 2025-26ರಲ್ಲಿ 0.63 ಆಗಿದೆ. ರಾಜ್ಯದ GSDP ಕಳೆದ ವರ್ಷ 28,61929 ಕೋಟಿಗಳಾಗಿತ್ತು, 2025-26 ರಲ್ಲಿ 30,70,103 ಕೋಟಿಯಾಗಿದೆ, ಇದರಲ್ಲಿ ಶೇ. 25 ರಷ್ಟು ಸಾಲ ಪಡೆಯಬಹುದಾಗಿದ್ದು, ಸರ್ಕಾರ ಆರ್ಥಿಕ ಶಿಸ್ತನ್ನು ಪಾಲನೆ ಮಾಡಿದೆ .ಆಯವ್ಯಯದಲ್ಲಿ ಬಡವರು, ಮಹಿಳೆಯರು, ಕಾರ್ಮಿಕರು, ದುರ್ಬಲರಿಗೆ, ಅಲ್ಪಸಂಖ್ಯಾತರು, ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದವರ ಆರ್ಥಿಕ ಬೆಳವಣಿಗೆಗೆ ಕಾರ್ಯಕ್ರಮಗಳನ್ನು ರೂಪಿಸಲಾಗಿದೆ ಎಂದು ಅವರು ವಿವರಿಸಿದ್ದಾರೆ.

ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಆರ್ಥಿಕ ಹೊಣಗಾರಿಕೆ ಅಧಿನಿಯಮದ ಬಗ್ಗೆ ತಿಳಿಯದೇ, ನಮ್ಮ ಆಯವ್ಯಯದ ಬಗ್ಗೆ ಟೀಕೆ ಮಾಡುತ್ತಿದ್ದಾರೆ. ಆದರೆ ಕೇಂದ್ರ ಸರ್ಕಾರದ ವಿತ್ತೀಯ ಕೊರತೆ ಶೇ. 4.61 ರಷ್ಟಿದೆ. ಆದರೆ ರಾಜ್ಯದ ವಿತ್ತೀಯ ಕೊರತೆ ಶೇ.2.95 ರಷ್ಟಿದೆ. ಕೇಂದ್ರಸರ್ಕಾರದ ಬಜೆಟ್ 50 ಲಕ್ಷ ಕೋಟಿಯಲ್ಲಿ 15.66 ಲಕ್ಷ ಕೋಟಿ ಸಾಲ ಪಡೆದಿದ್ದು( ಶೇ.56 ಸಾಲ), ರಾಜ್ಯ 2.95 ರಷ್ಟು ಸಾಲ ಪಡೆದಿದ್ದೇವೆ. ಅಶೋಕ್ ರವರು ರಾಜಕೀಯಕ್ಕಾಗಿ ರಾಜ್ಯ ಆರ್ಥಿಕವಾಗಿ ದಿವಾಳಿಯಾಗುತ್ತದೆ ಎಂದು ಟೀಕೆ ಮಾಡುತ್ತಿದ್ದಾರೆ. ಬಿಜೆಪಿಯವರಿಗೆ ದಿವಾಳಿ ಪದದ ಅರ್ಥ ಗೊತ್ತೇ? ರಾಜ್ಯಸರ್ಕಾರ ಆರ್ಥಿಕವಾಗಿ ಸದೃಢವಾಗಿದ್ದು, ಆರ್ಥಿಕ ಶಿಸ್ತನ್ನು ಪಾಲಿಸಲಾಗುತ್ತಿದೆ. ವಿತ್ತೀಯ ಹೊಣೆಗಾರಿಕೆ ಕಾಯ್ದೆಯ ಮಾನದಂಡಗಳನ್ನು ಪಾಲಿಸಲಾಗಿದೆ ಎಂದು ಹೇಳಿದ್ದಾರೆ.

ಹಿಂದಿನ ನಮ್ಮ ಭರವಸೆಗಳನ್ನು ಈಡೇರಿಸುವ ಮೂಲಕ ನುಡಿದಂತೆ ನಡೆದಿದ್ದೇವೆ. ಆಭಿವೃದ್ಧಿಗೂ ಹಣ ಖರ್ಚು ಮಾಡಿ, ಗ್ಯಾರಂಟಿಗಳಿಗೆ 52009 ಕೊಟಿ , ಎಲ್ಲ ಗ್ಯಾರಂಟಿಗಳು ಜಾರಿಯಾಗಿದೆ. ಮುಂದಿನ ವರ್ಷವೂ ಮುಂದುವರೆಸುತ್ತೆವೆ. ಈ ವರ್ಷ ಬಜೆಟ್ ನಲ್ಲಿ ಗ್ಯಾರಂಟಿಗಳಿಗೆ 51034 ಕೋಟಿ ಮೀಸಲಿರಿಸಿದ್ದೇವೆ. 2025-26ನೇ ಸಾಲಿಗೆ ಗೃಹಲಕ್ಷ್ಮಿ ಯೋಜನೆಗೆ 28608 ಕೋಟಿಗಳನ್ನು ಮೀಸಲಿರಿಸಿದೆ. ಗೃಹಜ್ಯೋತಿ ಯೋಜನೆ 10,100 ಕೋಟಿ , ಅನ್ನಭಾಗ್ಯ ಯೋಜನೆಗೆ 6426 ಕೋಟಿ , ಶಕ್ತಿ ಯೋಜನೆಗೆ 5,300 ಕೋಟಿ, ಯುವನಿಧಿ ಯೋಜನೆಗೆ 600 ಕೋಟಿ ರೂ.ಗಳನ್ನು ಮೀಸಲಿರಿಸಲಾಗಿದೆ. ಈ ಬಾರಿ ಆಯವ್ಯಯದಲ್ಲಿ ಎಲ್ಲಾ ಇಲಾಖೆಗಳಿಗೆ ಹೆಚ್ಚು ಅನುದಾನ ನೀಡಲಾಗಿದೆ. ಅಭಿವೃದ್ಧಿ ಕೆಲಸಗಳಿಗೆ ಅನುದಾನದ ಕೊರತೆ ಇಲ್ಲ. ಬಿಜೆಪಿಯವರ ಹೇಳಿಕೆಗಳು ಸತ್ಯಕ್ಕೆ ದೂರವಾದುದು. ದೆಹಲಿ, ಮದ್ಯಪ್ರದೇಶ, ಮಹಾರಾಷ್ಟ್ರ, ರಾಜಸ್ಥಾನ, ಹರಿಯಾಣಗಳಲ್ಲಿ ಬಿಜೆಪಿಯವರು ನಮ್ಮ ಗ್ಯಾರಂಟಿಗಳನ್ನು ನಕಲು ಮಾಡಿದ್ದಾರೆ ಎಂದು ತಿರುಗೇಟು ನೀಡಿದ್ದಾರೆ.

ಹಲಾಲ್ ಬಜೆಟ್ ಎಂಬ ಟೀಕೆ- ಬಿಜೆಪಿಯವರ ಕೊಳಕು ಮನಸ್ಥಿತಿ

ಗ್ಯಾರಂಟಿಗಳನ್ನು ಮದ್ಯವರ್ತಿಗಳ ಹಾವಳಿ ಇಲ್ಲದೇ ನೇರವಾಗಿ ಫಲಾನುಭವಿಗಳಿಗೆ ಡಿಬಿಟಿ ಮಾಡಲಾಗುತ್ತಿದ್ದು, ಸಾರ್ವತ್ರಿಕ ಮೂಲ ಆದಾಯ ತತ್ವದ ಆಧಾರದ ಮೇಲೆ ರೂಪಿಸಲಾಗಿದೆ. ಗ್ಯಾರಂಟಿ ಯೋಜನೆಗಳಿಂದ ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ಸುಮಾರು 232 ಕೋಟಿಗಳು ವೆಚ್ಚವಾಗುತ್ತಿದೆ. ಜನರಿಗೆ ಆರ್ಥಿಕ ಬಲ ತುಂಬಿದರೆ, ಅವರ ಖರೀದಿ ಶಕ್ತಿಯೂ ಹೆಚ್ಚಿ, ರಾಜ್ಯದ ಆರ್ಥಿಕತೆಯೂ ಬೆಳೆಯುತ್ತದೆ. ಅಲ್ಪಸಂಖ್ಯಾತರು, ಪ.ಜಾ, ಪ.ವರ್ಗ, ಹಿಂ.ವರ್ಗಗಳಿಗೆ ಹೆಚ್ಚಿನ ಅನುದಾನ ನೀಡಲಾಗಿದೆ. ಬೌದ್ಧರು, ಜೈನ್, ಕ್ರಿಶ್ಚಿಯನ್ ಸೇರಿದಂತೆ ಅಲ್ಪಸಂಖ್ಯಾತರ ಎಲ್ಲ ಸಮುದಾಯದವರಿಗೆ 4 ಸಾವಿರ ಕೋಟಿ ಕೊಟ್ಟರೂ , ಇದನ್ನು ಹಲಾಲ್ ಬಜೆಟ್ ಎಂದು ಟೀಕಿಸುತ್ತಾರೆ. ಇದು ಬಿಜೆಪಿಯವರ ಕೊಳಕು ಮನಸ್ಥಿತಿಯನ್ನು ಬಿಂಬಿಸುತ್ತದೆ ಎಂದು ಹೇಳಿದ್ದಾರೆ.

ಎಸ್ ಸಿ ಎಸ್ ಪಿ- ಟಿಎಸ್ ಪಿ ಯೋಜನೆಗಳಿಗೆ 42000 ಕೋಟಿ ನೀಡಲಾಗುತ್ತಿದೆ. ಅಲ್ಪಸಂಖ್ಯಾತರಿಗೆ 4500 ಕೋಟಿ, ಓಬಿಸಿಗೆ 4300 ಕೋಟಿ ನೀಡಲಾಗಿದೆ. ಬಿಜೆಪಿಯ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು SCP TSP ಕಾಯ್ದೆ ಮಾಡಿ ಜಾರಿಗೊಳಿಸಿದ್ದಾರೆಯೇ ? ಎಂದು ಪ್ರಶ್ನಿಸಿದ್ದಾರೆ.

ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿಯವರ ಟ್ವೀಟ್‌ಗೆ ಪ್ರತಿಕ್ರಿಯೆ ನೀಡಿ, ಕೇಂದ್ರ ಸರ್ಕಾರದವರು ಶೇ. 56 ರಷ್ಟು ಸಾಲ ಮಾಡಿದ್ದು, ಈ ಬಗ್ಗೆ ಪ್ರಧಾನಿ ಮೋದಿಯವರನ್ನು ಕೇಳಲಿ, ಯಾವ ನೈತಿಕತೆಯಿಂದ ಇಂಥ ಪ್ರಶ್ನೆ ಕೇಳುತ್ತಾರೆ ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...