Homeಕರ್ನಾಟಕಬಿಜೆಪಿಯ ಕೊಳಕು ಮನಸ್ಥಿತಿ | ಹಲಾಲ್ ಬಜೆಟ್ ಟೀಕೆಗೆ ಸಿದ್ದರಾಮಯ್ಯ ಕಿಡಿ

ಬಿಜೆಪಿಯ ಕೊಳಕು ಮನಸ್ಥಿತಿ | ಹಲಾಲ್ ಬಜೆಟ್ ಟೀಕೆಗೆ ಸಿದ್ದರಾಮಯ್ಯ ಕಿಡಿ

- Advertisement -
- Advertisement -

2025-26ನೇ ಸಾಲಿನ ಬಜೆಟ್ ಗಾತ್ರ 4,09,549 ಕೋಟಿಯಾಗಿದ್ದು, ಮೊದಲ ಬಾರಿಗೆ ರಾಜ್ಯದ ಆಯವ್ಯಯ ಗಾತ್ರ 4 ಲಕ್ಷ ಕೋಟಿ ರೂ.ಗಳ ಗಡಿ ದಾಟಿರುವುದು ಒಂದು ಹೊಸ ಮೈಲಿಗಲ್ಲು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್ ಮಂಡನೆ ನಂತರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಶುಕ್ರವಾರ ತಿಳಿಸಿದ್ದಾರೆ.

2025-26 ನೇ ಸಾಲಿನ ಮುಂಗಡ ಪತ್ರವನ್ನು ಮಂಡಿಸಲಾಗಿದ್ದು, ಕರ್ನಾಟಕ ಸರ್ಕಾರ ಕಳೆದ ಸಾಲಿನಲ್ಲಿ 3,71,121 ಕೋಟಿ ಬಜೆಟ್ ಮಂಡಿಸಿತ್ತು. ಈ ಬಾರಿಯ ಬಜೆಟ್ ಗಾತ್ರ 4,09,549 ಕೋಟಿಯಾಗಿದೆ. ಮೊದಲ ಬಾರಿಗೆ ನಮ್ಮ ರಾಜ್ಯದ ಆಯವ್ಯಯ ಗಾತ್ರ 4 ಲಕ್ಷ ಕೋಟಿ ರೂ.ಗಳ ಗಡಿ ದಾಟಿರುವುದು ಒಂದು ಹೊಸ ಮೈಲಿಗಲ್ಲು. ಕಳೆದ ಬಾರಿಗಿಂತ ಈ ಬಾರಿ 38166 ಕೋಟಿ ರೂ.ಗಳು ಹೆಚ್ಚಾಗಿದೆ. ಬಜೆಟ್ ನ ಬೆಳವಣಿಗಯ ದರ 10.3 ರಷ್ಟು ಹೆಚ್ಚಳವಾಗಿದೆ ಎಂದು ಅವರು ಹೇಳಿದ್ದಾರೆ..

ಕಳೆದ ವರ್ಷ ರಾಜಸ್ವ ಸ್ವೀಕೃತಿಗಳು, 263178 ಕೋಟಿ ಇದ್ದು ಈ ಬಾರಿ 2,92,477 ಕೋಟಿ ರೂ. ಇದೆ. 2024-25ರ ಆಯವ್ಯಯಕ್ಕೆ ಹೋಲಿಸಿದರೆ 29,299 ಕೋಟಿ ಹೆಚ್ಚಾಗಿದೆ –ಬೆಳವಣಿಗೆ ದರ 11.1 % ರಷ್ಟಿದೆ. 2024-25ರ ರಲ್ಲಿ ರಾಜಸ್ವ ವೆಚ್ಚ 2,90,531 ಕೋಟಿ ಇದ್ದದ್ದು, 2025-26ರಲ್ಲಿ 3,11,739 ಕೋಟಿ , 2024-25ರ ಆಯವ್ಯಯಕ್ಕೆ ಹೋಲಿಸಿದರೆ 21,207 ಕೋಟಿ ಹೆಚ್ಚಳ-ಬೆಳವಣಿಗೆ ದರ 7.3 % ರಷ್ಟಿದೆ ಎಂದಿದ್ದಾರೆ.

2024-25ರಲ್ಲಿ ಸಾಲ 1,05,246 ಕೋಟಿ , ಈ ವರ್ಷ ಸಾಲ 1,16,000 ಕೋಟಿ , 2024-25ರ ಆಯವ್ಯಯಕ್ಕೆ ಹೋಲಿಸಿದರೆ 10,754 ಕೋಟಿ ಹೆಚ್ಚಳವಾಗಿದೆ(10.2% ರಷ್ಟು ಹೆಚ್ಚಳ). ಇದಕ್ಕೆ ವಿರೋಧಪಕ್ದದವರು ಟೀಕಿಸುತ್ತಾರೆ . ನಮಗೆ ಸಾಲ ಮಾಡುವ ಅವಕಾಶವೆಷ್ಟಿದೆ. ಆರ್ಥಿಕ ಹೊಣಗಾರಿಕೆ ಅಧಿನಿಯಮದ ಮಾನದಂಡದಂತೆ, ಸಾಲದ ಮೊತ್ತ GSDP ಯ ಶೇ.25 ರಷ್ಟಿರಬೇಕು, ರಾಜ್ಯ ಶೇ.24.91 ರಷ್ಟರ ಮಿತಿಯಲ್ಲಿದೆ. ವಿತ್ತೀಯ ಕೊರತೆಯನ್ನು GSDPಯ ಶೇ.3 ರಷ್ಟುನ್ನು ಮೀರಬಾರದೆಂದಿದ್ದು, 2.95 % ರಷ್ಟಿದೆ ಎಂದು ಹೇಳಿದ್ದಾರೆ.

ರಾಜಸ್ವ ಕೊರತೆ 19262 ಕೋಟಿ ಇದೆ . ಈ ಬಾರಿ ರಾಜಸ್ವ ಕೊರತೆಯಿಂದ ರಾಜಸ್ವ ಹೆಚ್ಚುವರಿ ಸ್ಥಿತಿಗೆ ಬರಲಿದ್ದೆವೆ. 2024-25 ರಲ್ಲಿ ರಾಜಸ್ವ ಕೊರತೆ 0.95 ಇತ್ತು, 2025-26ರಲ್ಲಿ 0.63 ಆಗಿದೆ. ರಾಜ್ಯದ GSDP ಕಳೆದ ವರ್ಷ 28,61929 ಕೋಟಿಗಳಾಗಿತ್ತು, 2025-26 ರಲ್ಲಿ 30,70,103 ಕೋಟಿಯಾಗಿದೆ, ಇದರಲ್ಲಿ ಶೇ. 25 ರಷ್ಟು ಸಾಲ ಪಡೆಯಬಹುದಾಗಿದ್ದು, ಸರ್ಕಾರ ಆರ್ಥಿಕ ಶಿಸ್ತನ್ನು ಪಾಲನೆ ಮಾಡಿದೆ .ಆಯವ್ಯಯದಲ್ಲಿ ಬಡವರು, ಮಹಿಳೆಯರು, ಕಾರ್ಮಿಕರು, ದುರ್ಬಲರಿಗೆ, ಅಲ್ಪಸಂಖ್ಯಾತರು, ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದವರ ಆರ್ಥಿಕ ಬೆಳವಣಿಗೆಗೆ ಕಾರ್ಯಕ್ರಮಗಳನ್ನು ರೂಪಿಸಲಾಗಿದೆ ಎಂದು ಅವರು ವಿವರಿಸಿದ್ದಾರೆ.

ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಆರ್ಥಿಕ ಹೊಣಗಾರಿಕೆ ಅಧಿನಿಯಮದ ಬಗ್ಗೆ ತಿಳಿಯದೇ, ನಮ್ಮ ಆಯವ್ಯಯದ ಬಗ್ಗೆ ಟೀಕೆ ಮಾಡುತ್ತಿದ್ದಾರೆ. ಆದರೆ ಕೇಂದ್ರ ಸರ್ಕಾರದ ವಿತ್ತೀಯ ಕೊರತೆ ಶೇ. 4.61 ರಷ್ಟಿದೆ. ಆದರೆ ರಾಜ್ಯದ ವಿತ್ತೀಯ ಕೊರತೆ ಶೇ.2.95 ರಷ್ಟಿದೆ. ಕೇಂದ್ರಸರ್ಕಾರದ ಬಜೆಟ್ 50 ಲಕ್ಷ ಕೋಟಿಯಲ್ಲಿ 15.66 ಲಕ್ಷ ಕೋಟಿ ಸಾಲ ಪಡೆದಿದ್ದು( ಶೇ.56 ಸಾಲ), ರಾಜ್ಯ 2.95 ರಷ್ಟು ಸಾಲ ಪಡೆದಿದ್ದೇವೆ. ಅಶೋಕ್ ರವರು ರಾಜಕೀಯಕ್ಕಾಗಿ ರಾಜ್ಯ ಆರ್ಥಿಕವಾಗಿ ದಿವಾಳಿಯಾಗುತ್ತದೆ ಎಂದು ಟೀಕೆ ಮಾಡುತ್ತಿದ್ದಾರೆ. ಬಿಜೆಪಿಯವರಿಗೆ ದಿವಾಳಿ ಪದದ ಅರ್ಥ ಗೊತ್ತೇ? ರಾಜ್ಯಸರ್ಕಾರ ಆರ್ಥಿಕವಾಗಿ ಸದೃಢವಾಗಿದ್ದು, ಆರ್ಥಿಕ ಶಿಸ್ತನ್ನು ಪಾಲಿಸಲಾಗುತ್ತಿದೆ. ವಿತ್ತೀಯ ಹೊಣೆಗಾರಿಕೆ ಕಾಯ್ದೆಯ ಮಾನದಂಡಗಳನ್ನು ಪಾಲಿಸಲಾಗಿದೆ ಎಂದು ಹೇಳಿದ್ದಾರೆ.

ಹಿಂದಿನ ನಮ್ಮ ಭರವಸೆಗಳನ್ನು ಈಡೇರಿಸುವ ಮೂಲಕ ನುಡಿದಂತೆ ನಡೆದಿದ್ದೇವೆ. ಆಭಿವೃದ್ಧಿಗೂ ಹಣ ಖರ್ಚು ಮಾಡಿ, ಗ್ಯಾರಂಟಿಗಳಿಗೆ 52009 ಕೊಟಿ , ಎಲ್ಲ ಗ್ಯಾರಂಟಿಗಳು ಜಾರಿಯಾಗಿದೆ. ಮುಂದಿನ ವರ್ಷವೂ ಮುಂದುವರೆಸುತ್ತೆವೆ. ಈ ವರ್ಷ ಬಜೆಟ್ ನಲ್ಲಿ ಗ್ಯಾರಂಟಿಗಳಿಗೆ 51034 ಕೋಟಿ ಮೀಸಲಿರಿಸಿದ್ದೇವೆ. 2025-26ನೇ ಸಾಲಿಗೆ ಗೃಹಲಕ್ಷ್ಮಿ ಯೋಜನೆಗೆ 28608 ಕೋಟಿಗಳನ್ನು ಮೀಸಲಿರಿಸಿದೆ. ಗೃಹಜ್ಯೋತಿ ಯೋಜನೆ 10,100 ಕೋಟಿ , ಅನ್ನಭಾಗ್ಯ ಯೋಜನೆಗೆ 6426 ಕೋಟಿ , ಶಕ್ತಿ ಯೋಜನೆಗೆ 5,300 ಕೋಟಿ, ಯುವನಿಧಿ ಯೋಜನೆಗೆ 600 ಕೋಟಿ ರೂ.ಗಳನ್ನು ಮೀಸಲಿರಿಸಲಾಗಿದೆ. ಈ ಬಾರಿ ಆಯವ್ಯಯದಲ್ಲಿ ಎಲ್ಲಾ ಇಲಾಖೆಗಳಿಗೆ ಹೆಚ್ಚು ಅನುದಾನ ನೀಡಲಾಗಿದೆ. ಅಭಿವೃದ್ಧಿ ಕೆಲಸಗಳಿಗೆ ಅನುದಾನದ ಕೊರತೆ ಇಲ್ಲ. ಬಿಜೆಪಿಯವರ ಹೇಳಿಕೆಗಳು ಸತ್ಯಕ್ಕೆ ದೂರವಾದುದು. ದೆಹಲಿ, ಮದ್ಯಪ್ರದೇಶ, ಮಹಾರಾಷ್ಟ್ರ, ರಾಜಸ್ಥಾನ, ಹರಿಯಾಣಗಳಲ್ಲಿ ಬಿಜೆಪಿಯವರು ನಮ್ಮ ಗ್ಯಾರಂಟಿಗಳನ್ನು ನಕಲು ಮಾಡಿದ್ದಾರೆ ಎಂದು ತಿರುಗೇಟು ನೀಡಿದ್ದಾರೆ.

ಹಲಾಲ್ ಬಜೆಟ್ ಎಂಬ ಟೀಕೆ- ಬಿಜೆಪಿಯವರ ಕೊಳಕು ಮನಸ್ಥಿತಿ

ಗ್ಯಾರಂಟಿಗಳನ್ನು ಮದ್ಯವರ್ತಿಗಳ ಹಾವಳಿ ಇಲ್ಲದೇ ನೇರವಾಗಿ ಫಲಾನುಭವಿಗಳಿಗೆ ಡಿಬಿಟಿ ಮಾಡಲಾಗುತ್ತಿದ್ದು, ಸಾರ್ವತ್ರಿಕ ಮೂಲ ಆದಾಯ ತತ್ವದ ಆಧಾರದ ಮೇಲೆ ರೂಪಿಸಲಾಗಿದೆ. ಗ್ಯಾರಂಟಿ ಯೋಜನೆಗಳಿಂದ ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ಸುಮಾರು 232 ಕೋಟಿಗಳು ವೆಚ್ಚವಾಗುತ್ತಿದೆ. ಜನರಿಗೆ ಆರ್ಥಿಕ ಬಲ ತುಂಬಿದರೆ, ಅವರ ಖರೀದಿ ಶಕ್ತಿಯೂ ಹೆಚ್ಚಿ, ರಾಜ್ಯದ ಆರ್ಥಿಕತೆಯೂ ಬೆಳೆಯುತ್ತದೆ. ಅಲ್ಪಸಂಖ್ಯಾತರು, ಪ.ಜಾ, ಪ.ವರ್ಗ, ಹಿಂ.ವರ್ಗಗಳಿಗೆ ಹೆಚ್ಚಿನ ಅನುದಾನ ನೀಡಲಾಗಿದೆ. ಬೌದ್ಧರು, ಜೈನ್, ಕ್ರಿಶ್ಚಿಯನ್ ಸೇರಿದಂತೆ ಅಲ್ಪಸಂಖ್ಯಾತರ ಎಲ್ಲ ಸಮುದಾಯದವರಿಗೆ 4 ಸಾವಿರ ಕೋಟಿ ಕೊಟ್ಟರೂ , ಇದನ್ನು ಹಲಾಲ್ ಬಜೆಟ್ ಎಂದು ಟೀಕಿಸುತ್ತಾರೆ. ಇದು ಬಿಜೆಪಿಯವರ ಕೊಳಕು ಮನಸ್ಥಿತಿಯನ್ನು ಬಿಂಬಿಸುತ್ತದೆ ಎಂದು ಹೇಳಿದ್ದಾರೆ.

ಎಸ್ ಸಿ ಎಸ್ ಪಿ- ಟಿಎಸ್ ಪಿ ಯೋಜನೆಗಳಿಗೆ 42000 ಕೋಟಿ ನೀಡಲಾಗುತ್ತಿದೆ. ಅಲ್ಪಸಂಖ್ಯಾತರಿಗೆ 4500 ಕೋಟಿ, ಓಬಿಸಿಗೆ 4300 ಕೋಟಿ ನೀಡಲಾಗಿದೆ. ಬಿಜೆಪಿಯ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು SCP TSP ಕಾಯ್ದೆ ಮಾಡಿ ಜಾರಿಗೊಳಿಸಿದ್ದಾರೆಯೇ ? ಎಂದು ಪ್ರಶ್ನಿಸಿದ್ದಾರೆ.

ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿಯವರ ಟ್ವೀಟ್‌ಗೆ ಪ್ರತಿಕ್ರಿಯೆ ನೀಡಿ, ಕೇಂದ್ರ ಸರ್ಕಾರದವರು ಶೇ. 56 ರಷ್ಟು ಸಾಲ ಮಾಡಿದ್ದು, ಈ ಬಗ್ಗೆ ಪ್ರಧಾನಿ ಮೋದಿಯವರನ್ನು ಕೇಳಲಿ, ಯಾವ ನೈತಿಕತೆಯಿಂದ ಇಂಥ ಪ್ರಶ್ನೆ ಕೇಳುತ್ತಾರೆ ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...

ಪೋಕ್ಸೋ ಕೇಸ್ : ವಚನಾನಂದ ಸ್ವಾಮಿಯ ನಿರೀಕ್ಷಣಾ ಜಾಮೀನು ರದ್ದು

ಪೋಕ್ಸೋ ಪ್ರಕರಣದಲ್ಲಿ ವಚನಾನಂದ ಸ್ವಾಮಿಗೆ ಸೆಷನ್ಸ್ ಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನನ್ನು ಹೈಕೋರ್ಟ್ ಗುರುವಾರ (ಜೂನ್ 25) ರದ್ದುಗೊಳಿಸಿದೆ. ಅಲ್ಲದೆ, ಸೆಷನ್ಸ್ ಕೋರ್ಟ್ ಜಾಮೀನು ನೀಡಿದ ರೀತಿಯ ಬಗ್ಗೆ ತೀವ್ರ ಕಳವಳ ಮತ್ತು...

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...